Homeಮುಖಪುಟಮೋದಿ ಅವಧಿಯಲ್ಲಿ ಮಾಧ್ಯಮ ಸಂಸ್ಥೆಗಳ ಮೇಲೆ ಇ.ಡಿ., ಐ.ಟಿ. ಅಸ್ತ್ರ; ಇಲ್ಲಿದೆ ವಿವರ

ಮೋದಿ ಅವಧಿಯಲ್ಲಿ ಮಾಧ್ಯಮ ಸಂಸ್ಥೆಗಳ ಮೇಲೆ ಇ.ಡಿ., ಐ.ಟಿ. ಅಸ್ತ್ರ; ಇಲ್ಲಿದೆ ವಿವರ

- Advertisement -
- Advertisement -

ಸರ್ಕಾರದ ತಪ್ಪುಗಳನ್ನು ಪ್ರಶ್ನಿಸುವ ಮಾಧ್ಯಮಗಳ ಮೇಲೆ ತರಹೇವಾರಿ ದಾಳಿಗಳನ್ನು ಸರ್ಕಾರ ನಡೆಸುತ್ತಿರುವುದಕ್ಕೆ ಬಹುದೊಡ್ಡ ಇತಿಹಾಸವೇ ಇದೆ. ತುರ್ತು ಪರಿಸ್ಥಿತಿ ಹೇರಿದ್ದ ಕಾಲದಲ್ಲಿ ನೇರವಾಗಿ ಮಾಧ್ಯಮಗಳನ್ನು ನಿಯಂತ್ರಿಸಲಾಗುತ್ತಿತ್ತು. ಆದರೆ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ ಸೃಷ್ಟಿಯಾಗಿರುವ ಈ ಕಾಲಘಟ್ಟದಲ್ಲಿ ಮಾಧ್ಯಮಗಳ ಬಾಯಿ ಮುಚ್ಚಿಸಲು ನಾನಾ ಮಾರ್ಗಗಳನ್ನು ಪ್ರಭುತ್ವ ಕಂಡುಕೊಂಡಿದೆ.

ಪತ್ರಿಕೆಗಳಿಗೆ ಸರ್ಕಾರಿ ಜಾಹೀರಾತುಗಳನ್ನು ತಡೆದು ತೊಂದರೆ ಕೊಡುವುದು, ಟ್ರೋಲ್‌ ಪಡೆಯ ಮೂಲಕ ದಾಳಿ ನಡೆಸುವುದು ಒಂದು ಕಡೆಯಾದರೆ ಆದಾಯ ತೆರಿಗೆ (ಐ.ಟಿ.), ಜಾರಿ ನಿರ್ದೇಶನಾಲಯ (ಇ.ಡಿ.) ಥರದ ಸಂಸ್ಥೆಗಳ ಮೂಲಕ ದಾಳಿ, ಸರ್ಚ್, ಪರಿಶೀಲನೆ ನಡೆಸುವ ಕೆಲಸವೂ ನಡೆಯುತ್ತಿದೆ. ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಬಳಿಕ ಈ ವಿದ್ಯಮಾನಗಳು ಆಗಾಗ್ಗೆ ವರದಿಯಾಗುತ್ತಿವೆ.

2002ರ ಗುಜರಾತ್ ಗಲಭೆ ಮತ್ತು ಮೋದಿ ಸರ್ಕಾರದ ಬಹುಸಂಖ್ಯಾತವಾದದ ಕುರಿತು ಎರಡು ಭಾಗಗಳಲ್ಲಿ ಬಿಬಿಸಿ ಸುದ್ದಿಸಂಸ್ಥೆಯು ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಿತ್ತು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಜೊತೆಗೆ ಈ ಸಾಕ್ಷ್ಯಚಿತ್ರಗಳನ್ನು ಭಾರತದಲ್ಲಿ ನಿರ್ಬಂಧಿಸಲಾಯಿತು. ಅದರ ಬೆನ್ನಲ್ಲೇ ಆದಾಯ ತೆರಿಗೆ ಅಧಿಕಾರಿಗಳು ದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ರೈಡ್‌ ಮಾಡಿದ್ದಾರೆ. ಹೀಗಾಗಿ ಸರ್ಕಾರವನ್ನು ಪ್ರಶ್ನಿಸುವ ಮಾಧ್ಯಮಗಳ ವಿರುದ್ಧ ಐ.ಟಿ., ಇ.ಡಿ.ಗಳನ್ನು ಸರ್ಕಾರ ಬಳಸುತ್ತದೆ ಎಂಬ ಟೀಕೆ ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿರಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಇಮೇಜ್‌ಗೆ ಧಕ್ಕೆ ತಂದಿದ್ದಕ್ಕೆ ಬಿಬಿಸಿ ಕಚೇರಿಗಳ ಮೇಲೆ ದಾಳಿ: ದಿಗ್ವಿಜಯ ಸಿಂಗ್

“ಅಂತಾರಾಷ್ಟ್ರೀಯ ತೆರಿಗೆ ಮತ್ತು ವರ್ಗಾವಣೆ ಬೆಲೆಗಳ ಅಕ್ರಮದ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದು, ಅದರಂತೆ ಬಿಬಿಸಿ ಮೇಲೂ ಆರೋಪ ಕೇಳಿಬಂದಿದೆ. ಹಾಗಾಗಿ ಸಮೀಕ್ಷೆ ಮಾಡುತ್ತಿದ್ದೇವೆ” ಎಂದು ಅಧಿಕಾರಿಗಳು ಹೇಳಿದ್ದಾರೆ. ಕೆಲವು ಪತ್ರಕರ್ತರ ದಾಖಲೆಗಳು ಮತ್ತು ಫೋನ್‌ಗಳನ್ನು ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದಾರೆ ಎಂದೂ ಮೂಲಗಳು ಹೇಳಿವೆ. ಬಿಬಿಸಿಯ ಮೇಲೆ ದಾಳಿ ಮಾಡಿದಂತೆಯೇ ಸರ್ಕಾರ ಇತ್ತೀಚಿನ ವರ್ಷಗಳಲ್ಲಿ ಹಲವು ಮಾಧ್ಯಮಗಳ ಮೇಲೆ ಐ.ಟಿ. ಮತ್ತು ಇ.ಡಿ. ಬಾಣಗಳನ್ನು ಬಳಸಿದೆ.

ನ್ಯಾಷನಲ್ ಹೆರಾಲ್ಡ್‌ ಮೇಲೆ ಇ.ಡಿ. ರೈಡ್‌

ಕಾಂಗ್ರೆಸ್‌ ಪಕ್ಷದ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮೇಲೆ ಇ.ಡಿ. ಪ್ರಹಾರ ನಡೆಸಿದೆ. ಮನಿಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಳೆದ ವರ್ಷ ಕಾಂಗ್ರೆಸ್ ನಾಯಕರಿಗೆ ಸಮನ್ಸ್ ಜಾರಿ ಮಾಡಿದ್ದರು. ರಾಹುಲ್‌ ಗಾಂಧಿ, ಸೋನಿಯಾ ಗಾಂಧಿಯವರು ವಿಚಾರಣೆಗೂ ಹಾಜರಾಗಿದ್ದರು.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದ್ದು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಪ್ರಕಟಿಸುತ್ತಿದೆ. ಇದರ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾಜ್ಯಸಭೆಯ ವಿರೋಧ ಪಕ್ಷದ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಪವನ್ ಬನ್ಸಾಲ್ ಅವರನ್ನು ಪ್ರಶ್ನಿಸಿತ್ತು. ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್‌ ಗಾಂಧಿಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್ ನೀಡಿತ್ತು. ಕಾಂಗ್ರೆಸ್‌ ಕಾರ್ಯಕರ್ತರು ಬೃಹತ್‌ ಮಟ್ಟದಲ್ಲಿ ಪ್ರತಿಭಟನೆ ನಡೆಸಿದ್ದರು.

ನ್ಯೂಸ್‌ ಕ್ಲಿಕ್‌, ನ್ಯೂಸ್‌ ಲಾಂಡ್ರಿ ಮೇಲೆ ಕಾರ್ಯಾಚರಣೆ

ಪರ್ಯಾಯ ಮಾಧ್ಯಮಗಳಾಗಿ ಭಾರೀ ಸಂಚಲನ ಮೂಡಿಸಿರುವ ನ್ಯೂಸ್‌ಕ್ಲಿಕ್ ಮತ್ತು ನ್ಯೂಸ್‌ಲಾಂಡ್ರಿ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು 2021ರ ಫೆಬ್ರುವರಿಯಲ್ಲಿ ಭೇಟಿ ನೀಡಿ, ಕಾರ್ಯಾಚರಣೆ ನಡೆಸಿದ್ದರು. ಅಧಿಕಾರಿಗಳು ಇದನ್ನು “ಸರ್ವೆ” ಎಂದು ಕರೆದಿದ್ದು, “ದಾಳಿ” ಅಲ್ಲ ಎಂದು ತಿಳಿಸಿದ್ದರು.

ಸರ್ವೇಗಳು ತೆರಿಗೆ ವಂಚನೆಯ ಆರೋಪಗಳಿಗೆ ಸಂಬಂಧಿಸಿದ್ದು, ಪೋರ್ಟಲ್‌ಗಳ ಖಾತೆ ಪುಸ್ತಕಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದರು.

ನ್ಯೂಸ್‌ ಕ್ಲಿಕ್ ವೆ‌ಬ್ ಪೋರ್ಟಲ್‌ 2018-19 ರ ಹಣಕಾಸು ವರ್ಷದಲ್ಲಿ ವರ್ಲ್ಡ್‌ವೈಡ್ ಮೀಡಿಯಾ ಹೋಲ್ಡಿಂಗ್ಸ್ ಎಲ್‌ಎಲ್‌ಸಿ ಯುಎಸ್‌ಎಯಿಂದ 9.59 ಕೋಟಿ ವಿದೇಶಿ ನೇರ ಹೂಡಿಕೆಯನ್ನು (ಎಫ್‌ಡಿಐ) ಪಡೆದಿದೆ ಎಂದು ಆರೋಪಿಸಿದ್ದ ದೆಹಲಿ ಪೊಲೀಸರು ‘ನ್ಯೂಸ್‌ ಕ್ಲಿಕ್‌’ ಮೇಲೆ ಫೆಬ್ರವರಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಇದರ ನಂತರ ನ್ಯೂಸ್‌ಕ್ಲಿಕ್ ಮತ್ತು ಅದರ ಸಂಸ್ಥಾಪಕರ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು.

ಮುಖ್ಯವಾಹಿನಿಯ ಮಾಧ್ಯಮಗಳು ನಿರ್ಲಕ್ಷಿಸುವ ಜನಪರ ಸುದ್ದಿಗಳನ್ನು ಪ್ರಕಟ ಮಾಡುವ ವೆಬ್‌ ಪೋರ್ಟಲ್‌ ನ್ಯೂಸ್‌ ಕ್ಲಿಕ್ ಆಗಿದೆ.

ಮಾಧ್ಯಮಗಳು ಮತ್ತು ಅವುಗಳ ಸುದ್ದಿಗಳನ್ನು ವಿಶ್ಲೇಷಿಸುವ ವೆಬ್‌ಪೋರ್ಟಲ್‌ ‘ನ್ಯೂಸ್‌ ಲಾಂಡ್ರಿ’. ಗ್ರೌಂಡ್ ರಿಪೋರ್ಟ್‌ಗಳಿಗೆ ಈ ಜಾಲತಾಣ ಹೆಸರುವಾಸಿಯಾಗಿದೆ. ಜೊತೆಗೆ ಖಚಿತ ಅಂಕಿ-ಅಂಶಗಳನ್ನು ಆಧರಿಸಿ ಸುದ್ದಿಯ ವಿಭಿನ್ನ ದೃಷ್ಟಿಕೋನಗಳನ್ನು ತೆರೆದಿಡುತ್ತಿದೆ. ಪ್ರಭುತ್ವದ ಪರ ಕೆಲಸ ಮಾಡುವ ಮಾಧ್ಯಮಗಳನ್ನು ವಿಶಿಷ್ಟವಾಗಿ ಗೇಲಿ ಮಾಡುವಲ್ಲಿ ‘ನ್ಯೂಸ್‌ಲಾಂಡ್ರಿ’ ಹೆಸರುವಾಸಿ.

ಎರಡು ಪೋರ್ಟಲ್‌ಗಳು ಕೂಡಾ ಪ್ರಭುತ್ವದ ಕೆಂಗಣ್ಣಿಗೆ ಗುರಿಯಾಗಿರುವ ಜನಪರ ಸುದ್ದಿ ಸಂಸ್ಥೆಗಳಾಗಿವೆ. ಸರ್ಕಾರದ ರೈತ ಕಾಯ್ದೆಗಳ ವಿರುದ್ಧ ನಡೆದ ಪ್ರತಿಭಟನೆಯನ್ನು ವರದಿ ಮಾಡಿದ ಕಾರಣದಿಂದ ಈ ಸಂಸ್ಥೆಗಳ ಮೇಲೆ ಐಟಿ ಸರ್ಚ್ ಮಾಡಿದೆ ಎಂಬ ಆರೋಪಗಳು ಬಂದಿದ್ದವು.

ದೈನಿಕ್‌ ಭಾಸ್ಕರ್‌‌ ಮೇಲೆ ರೈಡ್‌

ಉತ್ತರ ಭಾರತದ ಪ್ರಮುಖ ಪತ್ರಿಕೆಗಳಲ್ಲಿ ದೈನಿಕ್‌ ಭಾಸ್ಕರ್ ಒಂದಾಗಿದ್ದು, 12 ರಾಜ್ಯಗಳಲ್ಲಿ ಈ ಪತ್ರಿಕೆಯ ಆವೃತ್ತಿಗಳಿವೆ. ಸುಮಾರು 65 ವರ್ಷಗಳ ಇತಿಹಾಸವಿರುವ ಈ ಪತ್ರಿಕೆ ಪ್ರಭುತ್ವಕ್ಕೆ ಸೊಪ್ಪು ಹಾಕುವುದಿಲ್ಲ ಎಂಬ ಪ್ರಶಂಸೆಗೆ ಪಾತ್ರವಾಗಿದೆ.

‘ದೈನಿಕ್ ಭಾಸ್ಕರ್‌’ ಸಂಸ್ಥೆಯು ಆದಾಯ ತೆರಿಗೆ ಪಾವತಿಯಲ್ಲಿ ಅಕ್ರಮ ಎಸಗಿದೆ ಎಂಬ ಆರೋಪದ ಮೇಲೆ ಸಂಸ್ಥೆಯ ಪ್ರಧಾನ ಕಚೇರಿ ಮತ್ತು ಪ್ರಾದೇಶಿಕ ಕಚೇರಿಗಳ ಮೇಲೆ 2021ರ ಜುಲೈ 12ರಂದು ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ದೇಶದ ಒಟ್ಟು ಆರು ರಾಜ್ಯಗಳಲ್ಲಿ ಏಕಕಾಲದಲ್ಲಿ ಪರಿಶೀಲನೆ ನಡೆದಿತ್ತು.

‘ಕೋವಿಡ್‌ ಎರಡನೇ ಅಲೆಯ ಸಂದರ್ಭದಲ್ಲಿ ಉತ್ತರ ಪ್ರದೇಶದ ಗಂಗಾ ತಟದಲ್ಲಿ ಹೆಣಗಳನ್ನು ಮನಬಂದಂತೆ ವಿಲೇವಾರಿ ಮಾಡಲಾಗಿದೆ. ಸರ್ಕಾರವು ಸಾವಿನ ಸಂಖ್ಯೆಯನ್ನು ಮುಚ್ಚಿಡಲು ಯತ್ನಿಸುತ್ತಿದೆ. ಆದರೆ, ಗಂಗೆ ತನ್ನ ಒಡಲಲ್ಲಿ ಇರುವ ಹೆಣಗಳನ್ನು ಹೊರಹಾಕುತ್ತಿದ್ದಾಳೆ’ ಎಂದು ದೈನಿಕ್‌ ಭಾಸ್ಕರ್‌ ಪತ್ರಿಕೆಯು 2021ರ ಜೂನ್‌ ಕೊನೆಯ ವಾರದಲ್ಲಿ ವಿಸ್ತೃತ ವರದಿ ಪ್ರಕಟಿಸಿತ್ತು. ವೈಫಲ್ಯವನ್ನು ಎತ್ತಿ ಹಿಡಿದು ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿತ್ತು.

ಇದನ್ನೂ ಓದಿರಿ: ದಲಿತ ಯುವ ಹೋರಾಟಗಾರ ಸಂದೇಶ್ ವಿರುದ್ಧ ಎಫ್‌ಐಆರ್‌; ಬಂಧನ

ಭಾರತ್ ಸಮಾಚಾರ್‌ ಕಚೇರಿ ಪರಿಶೀಲನೆ

ಉತ್ತರ ಪ್ರದೇಶದ ಪ್ರಮುಖ ಸುದ್ದಿವಾಹಿನಿಗಳಲ್ಲಿ ಒಂದಾದ ಭಾರತ್ ಸಮಾಚಾರ್‌ ಕಚೇರಿಯ ಮೇಲೆ 2021ರ ಜುಲೈ 12ರಂದು ಆದಾಯ ತೆರಿಗೆ ಇಲಾಖೆ ಪರಿಶೀಲನೆ ನಡೆಸಿತ್ತು.

ಆದಾಯ ತೆರಿಗೆ ಪಾವತಿಯಲ್ಲಿ ಮತ್ತು ಕಂಪನಿಗೆ ಸಂಬಂಧಿಸಿದ ಖರೀದಿಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಲಾಗಿತ್ತು. ಸರ್ಕಾರವನ್ನು ಎದುರು ಹಾಕಿಕೊಂಡಿದ್ದ ಈ ಪತ್ರಿಕೆಯು ಐಟಿ ದಾಳಿಗೂ ಮುನ್ನ ಕೋವಿಡ್ ವೈಫಲ್ಯಗಳನ್ನು ಸರಣಿಯಾಗಿ ತೆರೆದಿಟ್ಟಿತ್ತು. “ಕೋವಿಡ್‌ ಕಾರಣಕ್ಕೆ ಸಂಭವಿಸಿದ ಸಾವುಗಳ ಸಂಖ್ಯೆಯನ್ನು ಉತ್ತರ ಪ್ರದೇಶ ಸರ್ಕಾರ ಬಚ್ಚಿಟ್ಟಿದೆ. ಆಕ್ಸಿಜನ್‌ ಪೂರೈಕೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈ ಕಾರಣದಿಂದಲೇ ಎರಡನೇ ಅಲೆಯಲ್ಲಿ ಹೆಚ್ಚಿನ ಸಾವುಗಳು ಸಂಭವಿಸಿವೆ” ಎಂದು 2021ರ ಜೂನ್‌ ಮತ್ತು ಜುಲೈನಲ್ಲಿ ಒಂದರ ಹಿಂದೆ ಒಂದು ವರದಿಯನ್ನು ಪ್ರಸಾರ ಮಾಡಿತ್ತು. ಈ ಕಾರಣಕ್ಕಾಗಿಯೇ ಐಟಿ ಪರಿಶೀಲನೆ ನಡೆಸಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು.

‘ನೀವು ಎಷ್ಟು ಬೇಕಾದರೂ ದನಿ ಅಡಗಿಸಲು ಯತ್ನಿಸಿ, ನಾವೂ ಅಷ್ಟೇ ದೊಡ್ಡ ದನಿಯಲ್ಲಿ ಸತ್ಯ ಹೇಳುತ್ತೇವೆ. ನಾವು ಮೊದಲೂ ಹೆದರುತ್ತಿರಲಿಲ್ಲ, ಈಗಲೂ ಹೆದರುವುದಿಲ್ಲ’ ಎಂದು ಭಾರತ್ ಸಮಾಚಾರ್‌ ಚಾಟಿ ಬೀಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...