Homeಮುಖಪುಟಎಸ್ಸಿ-ಎಸ್ಟಿ ಕಾಯ್ದೆಯಡಿ ಎಫ್‌ಐಆರ್‌ ಪ್ರಶ್ನಿಸಿ ಕೋರ್ಟ್‌ ಮೊರೆ ಹೋದ 'ED' ಅಧಿಕಾರಿಗಳು

ಎಸ್ಸಿ-ಎಸ್ಟಿ ಕಾಯ್ದೆಯಡಿ ಎಫ್‌ಐಆರ್‌ ಪ್ರಶ್ನಿಸಿ ಕೋರ್ಟ್‌ ಮೊರೆ ಹೋದ ‘ED’ ಅಧಿಕಾರಿಗಳು

- Advertisement -
- Advertisement -

ಜಾರ್ಖಾಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ತನಿಖಾ ಸಂಸ್ಥೆ ಕಿರುಕುಳ ನೀಡಿದೆ ಮತ್ತು ತಮ್ಮ ಇಡೀ ಸಮುದಾಯವನ್ನು ದೂಷಣೆ ಮಾಡಿದೆ ಎಂದು ಆರೋಪಿಸಿ ದಾಖಲಿಸಿದ್ದ ಎಫ್‌ಐಆರ್‌ನ್ನು  ಪ್ರಶ್ನಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಾರ್ಖಂಡ್ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಎಸ್ಸಿ-ಎಸ್ಟಿ ಕಾಯ್ದೆಯಡಿ ಮಾಜಿ ಸಿಎಂ ಹೇಮಂತ್ ಸೊರೆನ್ ತನ್ನ ಅಧಿಕಾರಿಗಳ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಾರ್ಖಂಡ್ ಹೈಕೋರ್ಟ್‌ಗೆ ಫೆಬ್ರವರಿ 3 ರಂದು ಅರ್ಜಿ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ಜಾರ್ಖಂಡ್ ಪೊಲೀಸರು ಹೇಮಂತ್‌ ಸೋರೆನ್ ನೀಡಿದ ದೂರಿನ ಆಧಾರದ ಮೇಲೆ  ಹಿರಿಯ ಇಡಿ ಅಧಿಕಾರಿಗಳ ವಿರುದ್ಧ ಎಸ್ಸಿ, ಎಸ್ಟಿ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಇಡಿ ಅಧಿಕಾರಿಗಳು ವಿಚಾರಣೆಯ ನೆಪದಲ್ಲಿ ನನಗೆ ಕಿರುಕುಳ ಕೊಡುತ್ತಿದ್ದಾರೆ. ಇಡಿ ಕ್ರಮವು ನಮ್ಮ ಸಮುದಾಯಕ್ಕೆ ಅಪಮಾನವನ್ನುಂಟು ಮಾಡಿದೆ ಎಂದು ಹೇಮಂತ್ ಸೊರೇನ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದರು.

ಭೂ ಹಗರಣ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ನಾಯಕ ಮತ್ತು ಜಾರ್ಖಾಂಡ್‌ ಸಿಎಂ ಹೇಮಂತ್ ಸೊರೆನ್ ಅವರನ್ನು 7 ಗಂಟೆಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ಅವರನ್ನು ಬಂಧಿಸಿದ್ದಾರೆ.

600 ಕೋಟಿ ಭೂ ಹಗರಣಕ್ಕೆ ಸಂಬಂಧಿಸಿದ ಆಪಾದಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ವಿಚಾರಣೆಗಾಗಿ ಏಳು ಸಮನ್ಸ್‌ಗಳನ್ನು ಹೇಮಂತ್ ಸೊರೆನ್‌ಗೆ ನೀಡಲಾಗಿತ್ತು. ಬಂಧನದ ನಿರೀಕ್ಷೆಯಲ್ಲಿದ್ದ ಸೊರೆನ್‌ ಮಂಗಳವಾರ ಮೈತ್ರಿಕೂಟದ ಶಾಸಕರೊಂದಿಗೆ ಸಭೆ ನಡೆಸಿ ತಮ್ಮ ಉತ್ತರಾಧಿಕಾರಿಯ ಆಯ್ಕೆ ಬಗ್ಗೆ ಚರ್ಚೆ ನಡೆಸಿದ್ದರು. ಅವರ ಪತ್ನಿ ಕಲ್ಪನಾ ಸೊರೆನ್‌ಗೆ ಸಿಎಂ ಹುದ್ದೆ ನೀಡುತ್ತಾರೆ ಎಂಬ ನಿರೀಕ್ಷೆ ಇತ್ತು, ಆದರೆ ನವೆಂಬರ್‌ನಲ್ಲಿ ನಡೆಯಲಿರುವ ರಾಜ್ಯ ಚುನಾವಣೆಗಳನ್ನು ಗಮನಿಸಿ ರಾಜ್ಯದ ಸಾರಿಗೆ ಸಚಿವರಾಗಿದ್ದ ಚಂಪೈ ಸೊರೆನ್ ಅವರನ್ನು ಸಿಎಂ ಹುದ್ದೆಗೆ ಆಯ್ಕೆ ಮಾಡಲಾಗಿತ್ತು.

81 ಸದಸ್ಯ ಬಲದ ಜಾರ್ಖಾಂಡ್‌  ವಿಧಾನಸಭೆಯಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ 29 ಸ್ಥಾನಗಳನ್ನು ಹೊಂದಿದೆ, ಅದರ ಮಿತ್ರಪಕ್ಷ ಕಾಂಗ್ರೆಸ್ 17 ಮತ್ತು ಆರ್‌ಜೆಡಿ ಮತ್ತು ಸಿಪಿಐ (ಎಂಎಲ್) ತಲಾ 1 ಸ್ಥಾನಗಳನ್ನು ಹೊಂದಿವೆ. 43 ಶಾಸಕರ ಬೆಂಬಲ INDIA  ಮೈತ್ರಿಕೂಟ ಮತ್ತೆ ರಾಜ್ಯದಲ್ಲಿ ಅಧಿಕಾರವನ್ನು ನಡೆಸಲಿದೆ. ವಿಶೇಷ ಅಧಿವೇಶನವನ್ನು ಸುಗಮವಾಗಿ ನಡೆಸಲು ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಗಟ್ಟಲು ಜಾರ್ಖಂಡ್ ವಿಧಾನಸಭೆ ಸುತ್ತ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ.

ಇದನ್ನು ಓದಿ: ಮೆಹ್ರೌಲಿಯಲ್ಲಿ ‘ಅಕ್ರಮವೆಂದು’ DDA ಕೆಡವಿದ ಮಸೀದಿ ಶತಮಾನಗಳಷ್ಟು ಹಳೆಯದ್ದು: ASI ದಾಖಲೆಗಳಿಂದ ಬಹಿರಂಗ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...