Homeಮುಖಪುಟಪಶ್ಚಿಮ ಬಂಗಾಳ: ಇಡಿ ಅಧಿಕಾರಿಗಳ ಮೇಲೆ ಗುಂಪು ದಾಳಿ; ಮೂವರಿಗೆ ಗಾಯ

ಪಶ್ಚಿಮ ಬಂಗಾಳ: ಇಡಿ ಅಧಿಕಾರಿಗಳ ಮೇಲೆ ಗುಂಪು ದಾಳಿ; ಮೂವರಿಗೆ ಗಾಯ

- Advertisement -
- Advertisement -

ಸ್ಥಳೀಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡರೊಬ್ಬರ ಮನೆಯಲ್ಲಿ ಪರಿಶೀಲನೆ ನಡೆಸಲು ತೆರಳಿದ್ದ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳ ತಂಡದ ಮೇಲೆ ನೂರಾರು ಜನರ ಗುಂಪು ದಾಳಿ ನಡೆಸಿರುವ ಘಟನೆ ಶುಕ್ರವಾರ ಬೆಳಿಗ್ಗೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಳಿ ಎಂಬಲ್ಲಿ ನಡೆದಿದೆ.

ಘಟನೆಯಲ್ಲಿ ಮೂವರು ಇಡಿ ಅಧಿಕಾರಿಗಳು ಗಾಯಗೊಂಡಿದ್ದಾರೆ. ಬಹುಕೋಟಿ ಪಡಿತರ ಹಗರಣ ಪ್ರಕರಣ ಸಂಬಂಧ ಸ್ಥಳೀಯ ಟಿಎಂಸಿ ಸಂಚಾಲಕ ಷಹಜಹಾನ್ ಶೇಖ್ ಅವರ ಮನೆಯಲ್ಲಿ ಪರಿಶೀಲನೆ ನಡೆಸಲು ಇಡಿ ಅಧಿಕಾರಿಗಳು ತೆರಳಿದ್ದರು. ಈ ವೇಳೆ ಉದ್ರಿಕ್ತಗೊಂಡ ಸ್ಥಳೀಯರು ಕಲ್ಲು, ಇಟ್ಟಿಗೆ, ದೊಣ್ಣೆಗಳಿಂದ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ನೂರಾರು ಜನರ ಗುಂಪು ದಾಳಿ ನಡೆಸಿದ್ದರಿಂದ ಮೂವರು ಅಧಿಕಾರಿಗಳು ಗಾಯಗೊಂಡಿದ್ದಾರೆ. ಜನರು ಹಿಂಸಾತ್ಮಕವಾಗಿ ವರ್ತಿಸಿದ್ದರಿಂದ ಉಳಿದ ಅಧಿಕಾರಿಗಳು ಜೀವ ಉಳಿಸಿಕೊಳ್ಳಲು ಸ್ಥಳದಿಂದ ತಪ್ಪಿಸಿಕೊಂಡಿದ್ದಾರೆ. ಜನರು ಉದ್ರಿಕ್ತಗೊಂಡಿದ್ದರಿಂದ ಅಧಿಕಾರಿಗಳು ಟಿಎಂಸಿ ನಾಯಕನ ಮನೆ ಪರಿಶೀಲನೆ ನಡೆಸಿಲ್ಲ. ಆಕ್ರೋಶಿತ ಗುಂಪು ಅಧಿಕಾರಿಗಳನ್ನು ಕೊಲ್ಲಲು ಮುಂದಾಗಿತ್ತು ಎಂದು ಇಡಿ ಪ್ರಕಟನೆಯಲ್ಲಿ ತಿಳಿಸಿದೆ.

ಸುಮಾರು 800 ರಿಂದ 1000 ಸಾವಿರ ಜನರು ಇಡಿ ಅಧಿಕಾರಿಗಳು ಮತ್ತು 27 ಅರೆಸೇನಾ ಪಡೆ ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದಾರೆ. ಅಧಿಕಾರಿಗಳು ತೆರಳಿದ್ದ ವಾಹನಗಳನ್ನು ಜಖಂಗೊಳಿಸಿದ್ದಾರೆ. ಈ ಸಂಬಂಧ ನಾವು ಕಾನೂನು ಸಲಹೆ ಪಡೆಯುತ್ತಿದ್ದೇವೆ. ಕೇಂದ್ರ ಗೃಹ ಸಚಿವಾಲಯಕ್ಕೂ ಮಾಹಿತಿ ನಿಡಿದ್ದೇವೆ ಎಂದು ಇಡಿ ಹೇಳಿದೆ.

ಪಡಿತರ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯ ಆಹಾರ ಇಲಾಖೆ ಸಚಿವ ಜ್ಯೋತಿಪ್ರಿಯೊ ಮುಲ್ಲಿಕಿನ್ ಅವರನ್ನು ಕಳೆದ ಅಕ್ಟೋಬರ್ ತಿಂಗಳಲ್ಲಿ ಇಡಿ ಬಂಧಿಸಿದೆ. ಷಹಜಹಾನ್ ಶೇಖ್ ಬಂಧಿತ ಸಚಿವನ ಆಪ್ತ ಎನ್ನಲಾಗಿದೆ.

ಘಟನೆಯನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ್ ಬೋಸ್ ತೀವ್ರವಾಗಿ ಖಂಡಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಬಿಪಿ ಗೋಪಾಲಿಕಾ, ಗೃಹ ಕಾರ್ಯದರ್ಶಿ ನಂದಿನಿ ಚಕ್ರವರ್ತಿ ಮತ್ತು ಪೊಲೀಸ್ ಮಹಾನಿರ್ದೇಶಕ ರಾಜೀವ್ ಕುಮಾರ್ ಅವರಿಂದ ಘಟನೆಯ ಕುರಿತು ವರದಿ ಕೇಳಿದ್ದಾರೆ.

ಘಟನೆಯ ಹೊಣೆಯನ್ನು ಸಂಪೂರ್ಣವಾಗಿ ರಾಜ್ಯ ಸರ್ಕಾರ ಹೊತ್ತುಕೊಳ್ಳಬೇಕು. ಸರ್ಕಾರ ಸರಿಯಾಗಿ ಕೆಲಸ ಮಾಡಡಿದ್ದರೆ ಸಂವಿಧಾನ ಅದರ ಕಾರ್ಯ ನಿರ್ವಹಿಸಲಿದೆ. ಸಂವಿಧಾನದಲ್ಲಿ ನನಗಿರುವ ಎಲ್ಲಾ ಆಯ್ಕೆಗಳನ್ನು ಬಳಸಿಕೊಳ್ಳಲು ಸಿದ್ದನಿದ್ದೇನೆ ಎಂದು ರಾಜ್ಯಪಾಲರು ವಿಡಿಯೋ ಸಂದೇಶದ ಮೂಲಕ ಹೇಳಿದ್ದಾರೆ. ಈ ಮೂಲಕ ರಾಷ್ಟ್ರಪತಿ ಆಳ್ವಿಕೆ ಹೇರುವ ಎಚ್ಚರಿಕೆ ಕೊಟ್ಟಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಹೇಳಿದೆ. ದೆಹಲಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ವಕ್ತಾರ ಗೌರವ್ ಭಾಟಿಯಾ, ” ಇಡಿ ಅಧಿಕಾರಿಗಳ ಮೇಲೆ ಟಿಎಂಸಿ ಗೂಂಡಾಗಳು ಮತ್ತು ಬಂಗಾಳಕ್ಕೆ ನುಸುಳಿರುವ ರೋಹಿಂಗ್ಯಾಗಳು ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಮೂಗಿನ ನೇರಕ್ಕೆ ಪಶ್ಚಿಮ ಬಂಗಾಳದಲ್ಲಿ ಜಂಗಲ್ ರಾಜ್ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

ಪರಿತರ ಆಹಾರ ಸಾಮಾಗ್ರಿಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿರುವ ಸಂಬಂಧ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 2020 ಮತ್ತು 2022 ರ ನಡುವೆ ಐದು ಎಫ್‌ಐಆರ್‌ಗಳು ದಾಖಲಾಗಿವೆ. ಇದನ್ನು ಆಧರಿಸಿ ಇಡಿ ಏಪ್ರಿಲ್ 2022ರಲ್ಲಿ ಜಾರಿ ಪ್ರಕರಣದ ಮಾಹಿತಿ ವರದಿ (ಇಸಿಐಆರ್) ದಾಖಲಿಸಿದೆ.

ಅಕ್ಟೋಬರ್ 14, 2023 ರಂದು, ಪಡಿತರ ವಿತರಕರಿಗೆ ಸರಬರಾಜು ಮಾಡಲು ಮೀಸಲಿಟ್ಟಿದ್ದ ಅಕ್ಕಿ ಮತ್ತು ಗೋಧಿಯನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದ ಆರೋಪದ ಮೇಲೆ ಉದ್ಯಮಿ ಬಾಕಿಬುರ್ ರಹಮಾನ್ ಅವರನ್ನು ಇಡಿ ಬಂಧಿಸಿತ್ತು. ಬಾಕಿಬುರ್ ಆರೋಗ್ಯ ಸಚಿವ ಜ್ಯೋತಿಪ್ರಿಯೊ ಮುಲ್ಲಿಕ್ ಜೊತೆ ನಿಕಟ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಅಕ್ಟೋಬರ್ 27ರಂದು ರಾಜ್ಯ ಆಹಾರ ಸಚಿವ ಜ್ಯೋತಿಪ್ರಿಯೊ ಮುಲ್ಲಿಕ್ ಅವರನ್ನು ಇಡಿ ಬಂಧಿಸಿದೆ.

ಇದನ್ನೂ ಓದಿ : ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...