Homeಮುಖಪುಟಪಶ್ಚಿಮ ಬಂಗಾಳ: ಇಡಿ ಅಧಿಕಾರಿಗಳ ಮೇಲೆ ಗುಂಪು ದಾಳಿ; ಮೂವರಿಗೆ ಗಾಯ

ಪಶ್ಚಿಮ ಬಂಗಾಳ: ಇಡಿ ಅಧಿಕಾರಿಗಳ ಮೇಲೆ ಗುಂಪು ದಾಳಿ; ಮೂವರಿಗೆ ಗಾಯ

- Advertisement -
- Advertisement -

ಸ್ಥಳೀಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡರೊಬ್ಬರ ಮನೆಯಲ್ಲಿ ಪರಿಶೀಲನೆ ನಡೆಸಲು ತೆರಳಿದ್ದ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳ ತಂಡದ ಮೇಲೆ ನೂರಾರು ಜನರ ಗುಂಪು ದಾಳಿ ನಡೆಸಿರುವ ಘಟನೆ ಶುಕ್ರವಾರ ಬೆಳಿಗ್ಗೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಳಿ ಎಂಬಲ್ಲಿ ನಡೆದಿದೆ.

ಘಟನೆಯಲ್ಲಿ ಮೂವರು ಇಡಿ ಅಧಿಕಾರಿಗಳು ಗಾಯಗೊಂಡಿದ್ದಾರೆ. ಬಹುಕೋಟಿ ಪಡಿತರ ಹಗರಣ ಪ್ರಕರಣ ಸಂಬಂಧ ಸ್ಥಳೀಯ ಟಿಎಂಸಿ ಸಂಚಾಲಕ ಷಹಜಹಾನ್ ಶೇಖ್ ಅವರ ಮನೆಯಲ್ಲಿ ಪರಿಶೀಲನೆ ನಡೆಸಲು ಇಡಿ ಅಧಿಕಾರಿಗಳು ತೆರಳಿದ್ದರು. ಈ ವೇಳೆ ಉದ್ರಿಕ್ತಗೊಂಡ ಸ್ಥಳೀಯರು ಕಲ್ಲು, ಇಟ್ಟಿಗೆ, ದೊಣ್ಣೆಗಳಿಂದ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ನೂರಾರು ಜನರ ಗುಂಪು ದಾಳಿ ನಡೆಸಿದ್ದರಿಂದ ಮೂವರು ಅಧಿಕಾರಿಗಳು ಗಾಯಗೊಂಡಿದ್ದಾರೆ. ಜನರು ಹಿಂಸಾತ್ಮಕವಾಗಿ ವರ್ತಿಸಿದ್ದರಿಂದ ಉಳಿದ ಅಧಿಕಾರಿಗಳು ಜೀವ ಉಳಿಸಿಕೊಳ್ಳಲು ಸ್ಥಳದಿಂದ ತಪ್ಪಿಸಿಕೊಂಡಿದ್ದಾರೆ. ಜನರು ಉದ್ರಿಕ್ತಗೊಂಡಿದ್ದರಿಂದ ಅಧಿಕಾರಿಗಳು ಟಿಎಂಸಿ ನಾಯಕನ ಮನೆ ಪರಿಶೀಲನೆ ನಡೆಸಿಲ್ಲ. ಆಕ್ರೋಶಿತ ಗುಂಪು ಅಧಿಕಾರಿಗಳನ್ನು ಕೊಲ್ಲಲು ಮುಂದಾಗಿತ್ತು ಎಂದು ಇಡಿ ಪ್ರಕಟನೆಯಲ್ಲಿ ತಿಳಿಸಿದೆ.

ಸುಮಾರು 800 ರಿಂದ 1000 ಸಾವಿರ ಜನರು ಇಡಿ ಅಧಿಕಾರಿಗಳು ಮತ್ತು 27 ಅರೆಸೇನಾ ಪಡೆ ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದಾರೆ. ಅಧಿಕಾರಿಗಳು ತೆರಳಿದ್ದ ವಾಹನಗಳನ್ನು ಜಖಂಗೊಳಿಸಿದ್ದಾರೆ. ಈ ಸಂಬಂಧ ನಾವು ಕಾನೂನು ಸಲಹೆ ಪಡೆಯುತ್ತಿದ್ದೇವೆ. ಕೇಂದ್ರ ಗೃಹ ಸಚಿವಾಲಯಕ್ಕೂ ಮಾಹಿತಿ ನಿಡಿದ್ದೇವೆ ಎಂದು ಇಡಿ ಹೇಳಿದೆ.

ಪಡಿತರ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯ ಆಹಾರ ಇಲಾಖೆ ಸಚಿವ ಜ್ಯೋತಿಪ್ರಿಯೊ ಮುಲ್ಲಿಕಿನ್ ಅವರನ್ನು ಕಳೆದ ಅಕ್ಟೋಬರ್ ತಿಂಗಳಲ್ಲಿ ಇಡಿ ಬಂಧಿಸಿದೆ. ಷಹಜಹಾನ್ ಶೇಖ್ ಬಂಧಿತ ಸಚಿವನ ಆಪ್ತ ಎನ್ನಲಾಗಿದೆ.

ಘಟನೆಯನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ್ ಬೋಸ್ ತೀವ್ರವಾಗಿ ಖಂಡಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಬಿಪಿ ಗೋಪಾಲಿಕಾ, ಗೃಹ ಕಾರ್ಯದರ್ಶಿ ನಂದಿನಿ ಚಕ್ರವರ್ತಿ ಮತ್ತು ಪೊಲೀಸ್ ಮಹಾನಿರ್ದೇಶಕ ರಾಜೀವ್ ಕುಮಾರ್ ಅವರಿಂದ ಘಟನೆಯ ಕುರಿತು ವರದಿ ಕೇಳಿದ್ದಾರೆ.

ಘಟನೆಯ ಹೊಣೆಯನ್ನು ಸಂಪೂರ್ಣವಾಗಿ ರಾಜ್ಯ ಸರ್ಕಾರ ಹೊತ್ತುಕೊಳ್ಳಬೇಕು. ಸರ್ಕಾರ ಸರಿಯಾಗಿ ಕೆಲಸ ಮಾಡಡಿದ್ದರೆ ಸಂವಿಧಾನ ಅದರ ಕಾರ್ಯ ನಿರ್ವಹಿಸಲಿದೆ. ಸಂವಿಧಾನದಲ್ಲಿ ನನಗಿರುವ ಎಲ್ಲಾ ಆಯ್ಕೆಗಳನ್ನು ಬಳಸಿಕೊಳ್ಳಲು ಸಿದ್ದನಿದ್ದೇನೆ ಎಂದು ರಾಜ್ಯಪಾಲರು ವಿಡಿಯೋ ಸಂದೇಶದ ಮೂಲಕ ಹೇಳಿದ್ದಾರೆ. ಈ ಮೂಲಕ ರಾಷ್ಟ್ರಪತಿ ಆಳ್ವಿಕೆ ಹೇರುವ ಎಚ್ಚರಿಕೆ ಕೊಟ್ಟಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಹೇಳಿದೆ. ದೆಹಲಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ವಕ್ತಾರ ಗೌರವ್ ಭಾಟಿಯಾ, ” ಇಡಿ ಅಧಿಕಾರಿಗಳ ಮೇಲೆ ಟಿಎಂಸಿ ಗೂಂಡಾಗಳು ಮತ್ತು ಬಂಗಾಳಕ್ಕೆ ನುಸುಳಿರುವ ರೋಹಿಂಗ್ಯಾಗಳು ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಮೂಗಿನ ನೇರಕ್ಕೆ ಪಶ್ಚಿಮ ಬಂಗಾಳದಲ್ಲಿ ಜಂಗಲ್ ರಾಜ್ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

ಪರಿತರ ಆಹಾರ ಸಾಮಾಗ್ರಿಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿರುವ ಸಂಬಂಧ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 2020 ಮತ್ತು 2022 ರ ನಡುವೆ ಐದು ಎಫ್‌ಐಆರ್‌ಗಳು ದಾಖಲಾಗಿವೆ. ಇದನ್ನು ಆಧರಿಸಿ ಇಡಿ ಏಪ್ರಿಲ್ 2022ರಲ್ಲಿ ಜಾರಿ ಪ್ರಕರಣದ ಮಾಹಿತಿ ವರದಿ (ಇಸಿಐಆರ್) ದಾಖಲಿಸಿದೆ.

ಅಕ್ಟೋಬರ್ 14, 2023 ರಂದು, ಪಡಿತರ ವಿತರಕರಿಗೆ ಸರಬರಾಜು ಮಾಡಲು ಮೀಸಲಿಟ್ಟಿದ್ದ ಅಕ್ಕಿ ಮತ್ತು ಗೋಧಿಯನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದ ಆರೋಪದ ಮೇಲೆ ಉದ್ಯಮಿ ಬಾಕಿಬುರ್ ರಹಮಾನ್ ಅವರನ್ನು ಇಡಿ ಬಂಧಿಸಿತ್ತು. ಬಾಕಿಬುರ್ ಆರೋಗ್ಯ ಸಚಿವ ಜ್ಯೋತಿಪ್ರಿಯೊ ಮುಲ್ಲಿಕ್ ಜೊತೆ ನಿಕಟ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಅಕ್ಟೋಬರ್ 27ರಂದು ರಾಜ್ಯ ಆಹಾರ ಸಚಿವ ಜ್ಯೋತಿಪ್ರಿಯೊ ಮುಲ್ಲಿಕ್ ಅವರನ್ನು ಇಡಿ ಬಂಧಿಸಿದೆ.

ಇದನ್ನೂ ಓದಿ : ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...