ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಮನಿಲಾಂಡರಿಂಗ್ ಪ್ರಕರಣದ ಕುರಿತು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿಯವರನ್ನು ವಿಚಾರಣೆ ನಡಸುತ್ತಿದ್ದಾರೆ. ಮಹಿಳಾ ಅಧಿಕಾರಿಯ ನೇತೃತದಲ್ಲಿ 5 ಜನ ಇಡಿ ಅಧಿಕಾರಿಗಳು ಸೋನಿಯಾರವರನ್ನು ಇದುವರೆಗೂ 3 ಗಂಟೆಗಳ ಕಾಲ ವಿಚಾರಣೆ ನಡೆಸಿವೆ. ಇಡಿಯನ್ನು ಬಳಸಿಕೊಂಡು ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷವು ದೇಶಾದ್ಯಂತ ತೀವ್ರ ಪ್ರತಿಭಟನೆ ನಡೆಸಿದೆ.
ಸೋನಿಯಾ ಗಾಂಧಿಯವರ ವಿಚಾರಣೆ ಸಂದರ್ಭದಲ್ಲಿ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ಮತ್ತು ಪುತ್ರ ರಾಹುಲ್ ಗಾಂಧಿ ಜೊತೆಗಿದ್ದಾರೆ ಎಂದು ವರದಿಯಾಗಿದೆ.
ಸಂಸತ್ನಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಇನ್ನೊಂದೆಡೆ ಪ್ರತಿಭಟನೆ ನಡೆಸಿದ ಸಂಸದರಾದ ಶಶಿತರೂರ್ ಮತ್ತು ರಾಜಸ್ಥಾನದ ಶಾಸಕ ಸಚಿನ್ ಪೈಲಟ್ ಸೇರಿದಂತೆ ಹಲವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನಲ್ಲಿ ಶಾಂತಿನಗರದ ಇಡಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ನಿಂತಿದ್ದ ಕಾರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
#Congress supporters set fire to a car in front of ED office at Shanthi Nagar in Bengaluru today. Video: Special Arrangement pic.twitter.com/uzGGvnhC0X
— The Hindu-Bengaluru (@THBengaluru) July 21, 2022
ಪ್ರತಿಭಟನಾಕಾರರನ್ನು ನಿಯಂತ್ರಿಸಲು ಬ್ಯಾರಿಕೇಡ್ ಹಾಕಿದ್ದನ್ನು ಖಂಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬ್ಯಾರಿಕೇಡ್ ಹತ್ತಿ ಅಲ್ಲಿ ನೆರೆದಿದ್ದ ಪೊಲೀಸರ ಮೇಲೆ ಧುಮುಕಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
DKS_Jumping : ಬ್ಯಾರಿಕೇಡ್ ಹತ್ತಿ ಪೊಲೀಸ್ರ ಮೇಲೆ ಜಂಪ್ ಮಾಡಿದ D.K.Shivakumar#TV9Kannada #CongressProtests #SoniaGandhi #SoniaGandhiAppearBeforeED pic.twitter.com/dWQzeyci6y
— TV9 Kannada (@tv9kannada) July 21, 2022
ಸ್ವಾಯುತ್ತ ಸಂಸ್ಥೆಗಳನ್ನು ಮೋದಿ ಸರ್ಕಾರ ದುರುಪಯೋಗಪಡಿಸಿಕೊಂಡು ವಿರೋಧ ಪಕ್ಷಗಳ ಮೇಲೆ ವಿನಾಕಾರಣ ಮುಗಿಬಿದ್ದಿರುವುದನ್ನು ಇಡೀ ದೇಶವೇ ನೋಡುತ್ತಿದೆ. ಇದಕ್ಕೆ ಬಿಜೆಪಿ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ಕಿಡಿಕಾರಿದ್ದಾರೆ.
ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ ಫಲಿತಾಂಶ: ಸಂಸದರ ಮತಗಳಲ್ಲಿ ದ್ರೌಪದಿ ಮುರ್ಮುಗೆ 540 ಮತ, ಸಿನ್ಹಾಗೆ 208