Homeಮುಖಪುಟ'ಎಂಪುರಾನ್' ಸಿನಿಮಾ ನಿರ್ಮಾಪಕನ ಮನೆ, ಕಚೇರಿ ಮೇಲೆ ಇಡಿ ದಾಳಿ

‘ಎಂಪುರಾನ್’ ಸಿನಿಮಾ ನಿರ್ಮಾಪಕನ ಮನೆ, ಕಚೇರಿ ಮೇಲೆ ಇಡಿ ದಾಳಿ

- Advertisement -
- Advertisement -

ಸಂಘಪರಿವಾರದ ಕೆಂಗಣ್ಣಿಗೆ ಗುರಿಯಾಗಿರುವ ಮೋಹನ್ ಲಾಲ್ ಅಭಿನಯದ ‘ಎಂಪುರಾನ್’ ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಗೋಕುಲಂ ಗೋಪಾಲನ್ ಅವರ, ಚೆನ್ನೈನ ಮನೆ, ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ (ಏ.4) ದಾಳಿ ನಡೆಸಿದೆ.

ಚೆನ್ನೈನ ಕೊಡಂಬಕ್ಕಂನಲ್ಲಿರುವ ಕಚೇರಿ ಮತ್ತು ನೀಲಂಕರೈನಲ್ಲಿರುವ ಮನೆ ಮೇಲೆ ಇಡಿ ದಾಳಿ ನಡೆಸಿದೆ. ಕೊಚ್ಚಿ ವಿಭಾಗದ ಅಧಿಕಾರಿಗಳ ತಂಡ ಎರಡೂ ಕಡೆ ಶೋಧ ನಡೆಸುತ್ತಿದೆ ಎಂದು ವರದಿಗಳು ಹೇಳಿವೆ.

ಗೋಪಾಲನ್ ಅವರ ಕಚೇರಿ ಮೇಲೆ ದಾಳಿ ಮಾಡಿರುವ ಕುರಿತ ವಿವರಗಳನ್ನು ಇಡಿ ಅಧಿಕಾರಿಗಳು ಬಹಿರಂಗಪಡಿಸಿಲ್ಲ. ಶ್ರೀ ಗೋಕುಲಂ ಚಿಟ್ಸ್ ಅಂಡ್ ಫೈನಾನ್ಸ್ ಗೋಪಾಲನ್ ಅವರ ಮಾಲೀಕತ್ವದ ಪ್ರಮುಖ ಸಂಸ್ಥೆಯಾಗಿದ್ದು, ಹಾಸ್ಪಿಟಾಲಿಟಿ, ಮಾಧ್ಯಮ, ಆರೋಗ್ಯ, ಶಿಕ್ಷಣ, ಸಾರಿಗೆ ಮತ್ತು ಲಾಜಿಸ್ಟಿಕ್ಸ್ ವಲಯಗಳಲ್ಲಿ ಪಾಲನ್ನು ಹೊಂದಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

‘ಎಂಪುರಾನ್’ ಚಿತ್ರದಲ್ಲಿ ನಟ ಮೋಹನ್ ಲಾಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ನಟ ಪೃಥ್ವಿರಾಜ್ ಸುಕುಮಾರನ್ ನಿರ್ದೇಶಿಸಿದ್ದು, ಅವರೂ ಕೂಡ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಈ ಚಿತ್ರವು 2019 ರ ‘ಲೂಸಿಫರ್’ ಚಿತ್ರದ ಮುಂದುವರಿದ ಭಾಗವಾಗಿದೆ.

ಗೋಧ್ರಾ ಗಲಭೆಯ ಬಗ್ಗೆ ಉಲ್ಲೇಖಿಸಿದ್ದಕ್ಕೆ ಚಿತ್ರ ಬಿಜೆಪಿ, ಆರ್‌ಎಸ್‌ಎಸ್‌ ಸೇರಿದಂತೆ ಸಂಘ ಪರಿವಾರದ ಕೆಂಗಣ್ಣಿಗೆ ಗುರಿಯಾಗಿದೆ. ಚಿತ್ರದ ಬರಹಗಾರ ಮುರಳಿ ಗೋಪಿ ಮತ್ತು ನಿರ್ಮಾಪಕ ಆಂಥೋನಿ ಪೆರುಬ್ಮಾವೂರ್ (ಚಿತ್ರದಲ್ಲಿ ಸಣ್ಣ ಪಾತ್ರವನ್ನು ನಿರ್ವಹಿಸಿದ್ದಾರೆ) ಸೇರಿದಂತೆ ಇಡೀ ಚಿತ್ರತಂಡ ಟೀಕೆಗೆ ಗುರಿಯಾಗಿದೆ. ಅವರನ್ನು ‘ಹಿಂದೂ ವಿರೋಧಿ’ ಎಂದು ಬಿಂಬಿಸುವ ಪ್ರಯತ್ನ ನಡೆಯುತ್ತಿದೆ.

ವಿವಾದದ ನಂತರ ಚಿತ್ರದ ಕೆಲವು ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಮಾಪಕರು ಸ್ವಯಂ ಪ್ರೇರಿತರಾಗಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿತ್ತು. ನಟ ಮೋಹನ್ ಲಾಲ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿ, ಚಿತ್ರದಲ್ಲಿರುವ ವಿವಾದಾತ್ಮಕ ದೃಶ್ಯಗಳನ್ನು ಚಿತ್ರದಿಂದ ತೆಗೆದುಹಾಕಲಾಗುವುದು ಎಂದು ಹೇಳಿದ್ದರು. ಅದರಂತೆ ಚಿತ್ರದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ ಎಂದು ವರದಿಯಾಗಿದೆ.

“ಚಿತ್ರದಲ್ಲಿ ಯಾರಿಗಾದರೂ ನೋವುಂಟುಮಾಡುವ ದೃಶ್ಯಗಳು ಅಥವಾ ಸಂಭಾಷಣೆಗಳಿದ್ದರೆ ತೆಗೆದು ಹಾಕಲಾಗುವುದು ಎಂದು ಗೋಪಾಲನ್ ಕೂಡ ಹೇಳಿದ್ದರು.

“ಈ ಚಿತ್ರ ಯಾರನ್ನೂ ನೋಯಿಸುವ ಉದ್ದೇಶ ಹೊಂದಿಲ್ಲ. ಚಿತ್ರದಲ್ಲಿನ ಯಾವುದೇ ಸಂಭಾಷಣೆ ಅಥವಾ ದೃಶ್ಯ ಯಾರನ್ನಾದರೂ ನೋಯಿಸಿದ್ದರೆ, ಅಗತ್ಯ ಬದಲಾವಣೆಗಳನ್ನು ಮಾಡಲು ನಾನು ಪೃಥ್ವಿರಾಜ್ ಸುಕುಮಾರನ್‌ ಅವರಿಗೆ ಹೇಳಿದ್ದೇನೆ. ಚಿತ್ರದ ಸಂಭಾಷಣೆಯ ಕೆಲವು ಪದಗಳನ್ನು ಈಗಾಗಲೇ ಮ್ಯೂಟ್ ಮಾಡಲಾಗಿದೆ. ಚಿತ್ರದಲ್ಲಿನ ಕೆಲವು ವಿಷಯಗಳ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ನಾವು ಯಾವುದೇ ರಾಜಕೀಯದ ಭಾಗವಲ್ಲ” ಎಂದು ಗೋಪಾಲನ್ ತಿಳಿಸಿದ್ದರು.

ಚಿತ್ರದಲ್ಲಿ 24 ವಿಷಯಗಳಿಗೆ ಕತ್ತರಿ

ವಿವಾದದ ನಂತರ ನಿರ್ಮಾಪಕರು ಚಿತ್ರದ 24 ವಿಷಯಗಳಿಗೆ ಸ್ವಯಂಪ್ರೇರಿತ ಕತ್ತರಿ ಹಾಕಿದ್ದಾರೆ. ಅವುಗಳ ಒಟ್ಟು ಅವಧಿ 2 ನಿಮಿಷ ಮತ್ತು 8 ಸೆಕೆಂಡುಗಳು ಎಂದು ವರದಿಗಳು ಹೇಳಿವೆ.

ಚಿತ್ರದಲ್ಲಿ ಬದಲಾವಣೆ ಮಾಡಿರುವ ವಿಷಯಗಳಿಗೆ ಉದಾಹರಣೆ ಕೊಡುವುದಾದರೆ, ಈ ಹಿಂದೆ ಚಿತ್ರದಲ್ಲಿ ಅಭಿಮನ್ಯು ಸಿಂಗ್ ನಿರ್ವಹಿಸಿದ ವಿಲನ್ ಪಾತ್ರದ ಹೆಸರು ಬಲರಾಜ್ ಪಟೇಲ್ ಎಂದಿತ್ತು. ಇದು ಗೋದ್ರಾ ಗಲಭೆಯ ಅಪರಾಧಿ ವಿಶ್ವ ಹಿಂದೂ ಪರಿಷತ್‌ನ ಬಾಬುಭಾಯಿ ಪಟೇಲ್ ಅಲಿಯಾಸ್ ಬಾಬು ಬಜರಂಗಿಯನ್ನು ಉಲ್ಲೇಖಿಸಿದ ಪಾತ್ರವಾಗಿತ್ತು. ಈಗ ಹೊಸ ಆವೃತ್ತಿಯಲ್ಲಿ ಬಲರಾಜ್ ಪಟೇಲ್ ಎಂಬ ಹೆಸರನ್ನು ಬರೀ ಬಲದೇವ್ ಎಂದು ಬದಲಾಯಿಸಲಾಗಿದೆ.

ನಿರ್ಮಾಪಕರ ಮೇಲೆ ಯಾರೂ ಒತ್ತಡ ಹಾಕಿಲ್ಲ : ಸುರೇಶ್ ಗೋಪಿ

ಎಂಪುರಾನ್ ನಿರ್ಮಾಪಕರಿಗೆ ಚಿತ್ರದಲ್ಲಿ ಬದಲಾವಣೆಗಳನ್ನು ಮಾಡುವಂತೆ ಯಾರೂ ಒತ್ತಡ ಹಾಕಿಲ್ಲ ಎಂದು ಗುರುವಾರ ರಾಜ್ಯಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಸುರೇಶ್ ಗೋಪಿ ಹೇಳಿದ್ದಾರೆ.

“ಚಿತ್ರದ ಆರಂಭದಲ್ಲಿ ಪ್ರದರ್ಶಿಸಲಾದ ಕ್ರೆಡಿಟ್‌ಗಳಿಂದ ನನ್ನ ಹೆಸರನ್ನು ಅಳಿಸಲು ನಿರ್ಮಾಪಕರಿಗೆ ಕರೆ ಮಾಡಿ ಮನವಿ ಮಾಡಿದ ಮೊದಲ ವ್ಯಕ್ತಿ ನಾನೇ. ಇದು ಸತ್ಯ” ಎಂದು ಗೋಪಿ ಹೇಳಿಕೊಂಡಿದ್ದಾರೆ.

ನಿರ್ಮಾಪಕರು ಸ್ವಯಂಪ್ರೇರಣೆಯಿಂದ ಚಿತ್ರದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದ್ದಾರೆ ಎಂದು ಹೇಳಿದ ಸುರೇಶ್ ಗೋಪಿ “ನಾನು ಹೇಳಿದ್ದು ಸುಳ್ಳು ಎಂದು ಸಾಬೀತಾದರೆ ಯಾವುದೇ ಶಿಕ್ಷೆ ಅನುಭವಿಸಲು ಸಿದ್ಧನಿದ್ದೇನೆ. ಚಿತ್ರದ ನಿರ್ದೇಶಕರ ಅನುಮತಿಯೊಂದಿಗೆ 17 ವಿಷಯಗಳಿಗೆ ಕತ್ತರಿ ಹಾಕಲು ನಿರ್ಮಾಪಕರು ಮತ್ತು ಚಿತ್ರದ ನಾಯಕ ನಟ ನಿರ್ಧರಿಸಿದ್ದಾರೆ. ಅದು ಅವರ ನಿರ್ಧಾರ. ಆದರೂ, ಅವರು (ವಿಪಕ್ಷದವರು) ನನ್ನ ರಾಜಕೀಯ ಪಕ್ಷವನ್ನು ದೂಷಿಸುತ್ತಿದ್ದಾರೆ” ಎಂದು ಗೋಪಿ ಹೇಳಿದ್ದಾರೆ.

‘ಎಂಪುರಾನ್’ ವಿರುದ್ಧ ಕೋರ್ಟ್ ಮಟ್ಟಿಲೇರಿದ್ದ ಬಿಜೆಪಿ ನಾಯಕ ಪಕ್ಷದಿಂದ ಅಮಾನತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...

ಮೋದಿ, ಶಾ ವಿರುದ್ಧ ಘೋಷಣೆ ಆರೋಪ: ತನ್ನದೇ ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಮನವಿ ಮಾಡಿದ ಜೆಎನ್‌ಯು ಆಡಳಿತ ಮಂಡಳಿ

ಸೋಮವಾರ ರಾತ್ರಿ ವಿದ್ಯಾರ್ಥಿಗಳ ಗುಂಪೊಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಿದ್ದು, ಆ ಘೋಷಣೆಗಳು "ಪ್ರಚೋದನಕಾರಿ, ಪ್ರಚೋದನಕಾರಿ ಮತ್ತು ಗೌರವಾನ್ವಿತ ಸುಪ್ರೀಂ ಕೋರ್ಟ್‌ನ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎಸ್‌ಐಟಿ ತನಿಖೆ ಪಕ್ಷಪಾತದಿಂದ ಕೂಡಿದೆ ಎಂಬ ವಿಪಕ್ಷಗಳ ಆರೋಪ ತಿರಸ್ಕರಿಸಿದ ಕೇರಳ ಹೈಕೋರ್ಟ್

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದ ತನಿಖೆಯು ಪಕ್ಷಪಾತದಿಂದ ಕೂಡಿದೆ ಅಥವಾ ಸರ್ಕಾರದ ಒತ್ತಡದಲ್ಲಿದೆ ಎಂಬ ವಿರೋಧ ಪಕ್ಷದ ಆರೋಪಗಳನ್ನು ತಿರಸ್ಕರಿಸಿರುವ ಕೇರಳ ಹೈಕೋರ್ಟ್, ಪ್ರಸ್ತುತ ನಡೆಯುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆಯ...

ಆರ್‌ಎಸ್‌ಎಸ್ ಕುರಿತ ಹೇಳಿಕೆ: ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್, ನಲಪಾಡ್‌ಗೆ ಕೋರ್ಟ್ ನೋಟಿಸ್

ಬೆಂಗಳೂರು: ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಾನನಷ್ಟ ಮೊಕದ್ದಮೆಯಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್ ಮತ್ತು ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ಸಂಸದ/ಶಾಸಕರ...

‘ನಾನು ಹಿಂದೂ ಅಲ್ಲ, ಮನುಷ್ಯ’: ಎಸ್‌ಪಿ ನಾಯಕ ಶಿವರಾಜ್ ಸಿಂಗ್ ಯಾದವ್ ಹೇಳಿಕೆ ತಿರುಚಿ ವಿವಾದ ಸೃಷ್ಟಿಸಿದ ಬಿಜೆಪಿ ಬೆಂಬಲಿಗರು

ಸಮಾಜವಾದಿ ಪಕ್ಷದ ನಾಯಕ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಸಹಾಯಕ ಹಾಗೂ ಉತ್ತರ ಪ್ರದೇಶದ ಫಿರೋಜಾಬಾದ್‌ನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ್ ಸಿಂಗ್ ಯಾದವ್ ‘ನಾನು ಹಿಂದೂ ಅಲ್ಲ, ನಾನು...

ಛತ್ತೀಸ್‌ಗಢ : ಎಂಟು ಮಂದಿ ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ; ವರದಿ

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಭಾನುವಾರ (ಜ.4) ಬಜರಂಗದಳ ಕಾರ್ಯಕರ್ತರು ಎಂಟು ಮಂದಿ ಬಂಗಾಳಿ ಮಾತನಾಡುವ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದು, ಒಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಯ್‌ಪುರ ಜಿಲ್ಲೆಯ ಕಟೋವಾಲಿ...

‘ಉಮರ್ ಮತ್ತು ಶಾರ್ಜಿಲ್ ಜಾಮೀನು ನಿರಾಕರಣೆ’: ಶಾಸಕಾಂಗ, ನ್ಯಾಯಾಂಗದ ಕಾರ್ಯವೈಖರಿಯಲ್ಲಿನ ವೈರುಧ್ಯಗಳಿಗೆ ಉದಾಹರಣೆ: ಶ್ರೀಪಾದ್ ಭಟ್

ಇಂಡಿಯನ್ ಎಕ್ಸ್ಪ್ರೆಸ್ ನಲ್ಲಿನ ವರದಿಯ ಪ್ರಕಾರ ಈ ಪ್ರಕರಣದ ವಿಚಾರಣೆಯಲ್ಲಿರುವ ಮುಖ್ಯ ಪ್ರಶ್ನೆ: ಬಂಧನವಾಗಿ ಐದು ವರ್ಷಗಳಾದರೂ ಸಹ ಇನ್ನೂ ವಿಚಾರಣೆ ಆರಂಭವಾಗಿಲ್ಲ. ದೀರ್ಘಕಾಲದ ಜೈಲುವಾಸವನ್ನು ಭಯೋತ್ಪಾದಕ ವಿರೋಧಿ ಕಾನೂನಿನ ಅಡಿಯಲ್ಲಿ ಸಮರ್ಥಿಸಬಹುದೇ?...