Homeಮುಖಪುಟ'ಎಂಪುರಾನ್' ಸಿನಿಮಾ ನಿರ್ಮಾಪಕನ ಮನೆ, ಕಚೇರಿ ಮೇಲೆ ಇಡಿ ದಾಳಿ

‘ಎಂಪುರಾನ್’ ಸಿನಿಮಾ ನಿರ್ಮಾಪಕನ ಮನೆ, ಕಚೇರಿ ಮೇಲೆ ಇಡಿ ದಾಳಿ

- Advertisement -
- Advertisement -

ಸಂಘಪರಿವಾರದ ಕೆಂಗಣ್ಣಿಗೆ ಗುರಿಯಾಗಿರುವ ಮೋಹನ್ ಲಾಲ್ ಅಭಿನಯದ ‘ಎಂಪುರಾನ್’ ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಗೋಕುಲಂ ಗೋಪಾಲನ್ ಅವರ, ಚೆನ್ನೈನ ಮನೆ, ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ (ಏ.4) ದಾಳಿ ನಡೆಸಿದೆ.

ಚೆನ್ನೈನ ಕೊಡಂಬಕ್ಕಂನಲ್ಲಿರುವ ಕಚೇರಿ ಮತ್ತು ನೀಲಂಕರೈನಲ್ಲಿರುವ ಮನೆ ಮೇಲೆ ಇಡಿ ದಾಳಿ ನಡೆಸಿದೆ. ಕೊಚ್ಚಿ ವಿಭಾಗದ ಅಧಿಕಾರಿಗಳ ತಂಡ ಎರಡೂ ಕಡೆ ಶೋಧ ನಡೆಸುತ್ತಿದೆ ಎಂದು ವರದಿಗಳು ಹೇಳಿವೆ.

ಗೋಪಾಲನ್ ಅವರ ಕಚೇರಿ ಮೇಲೆ ದಾಳಿ ಮಾಡಿರುವ ಕುರಿತ ವಿವರಗಳನ್ನು ಇಡಿ ಅಧಿಕಾರಿಗಳು ಬಹಿರಂಗಪಡಿಸಿಲ್ಲ. ಶ್ರೀ ಗೋಕುಲಂ ಚಿಟ್ಸ್ ಅಂಡ್ ಫೈನಾನ್ಸ್ ಗೋಪಾಲನ್ ಅವರ ಮಾಲೀಕತ್ವದ ಪ್ರಮುಖ ಸಂಸ್ಥೆಯಾಗಿದ್ದು, ಹಾಸ್ಪಿಟಾಲಿಟಿ, ಮಾಧ್ಯಮ, ಆರೋಗ್ಯ, ಶಿಕ್ಷಣ, ಸಾರಿಗೆ ಮತ್ತು ಲಾಜಿಸ್ಟಿಕ್ಸ್ ವಲಯಗಳಲ್ಲಿ ಪಾಲನ್ನು ಹೊಂದಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

‘ಎಂಪುರಾನ್’ ಚಿತ್ರದಲ್ಲಿ ನಟ ಮೋಹನ್ ಲಾಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ನಟ ಪೃಥ್ವಿರಾಜ್ ಸುಕುಮಾರನ್ ನಿರ್ದೇಶಿಸಿದ್ದು, ಅವರೂ ಕೂಡ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಈ ಚಿತ್ರವು 2019 ರ ‘ಲೂಸಿಫರ್’ ಚಿತ್ರದ ಮುಂದುವರಿದ ಭಾಗವಾಗಿದೆ.

ಗೋಧ್ರಾ ಗಲಭೆಯ ಬಗ್ಗೆ ಉಲ್ಲೇಖಿಸಿದ್ದಕ್ಕೆ ಚಿತ್ರ ಬಿಜೆಪಿ, ಆರ್‌ಎಸ್‌ಎಸ್‌ ಸೇರಿದಂತೆ ಸಂಘ ಪರಿವಾರದ ಕೆಂಗಣ್ಣಿಗೆ ಗುರಿಯಾಗಿದೆ. ಚಿತ್ರದ ಬರಹಗಾರ ಮುರಳಿ ಗೋಪಿ ಮತ್ತು ನಿರ್ಮಾಪಕ ಆಂಥೋನಿ ಪೆರುಬ್ಮಾವೂರ್ (ಚಿತ್ರದಲ್ಲಿ ಸಣ್ಣ ಪಾತ್ರವನ್ನು ನಿರ್ವಹಿಸಿದ್ದಾರೆ) ಸೇರಿದಂತೆ ಇಡೀ ಚಿತ್ರತಂಡ ಟೀಕೆಗೆ ಗುರಿಯಾಗಿದೆ. ಅವರನ್ನು ‘ಹಿಂದೂ ವಿರೋಧಿ’ ಎಂದು ಬಿಂಬಿಸುವ ಪ್ರಯತ್ನ ನಡೆಯುತ್ತಿದೆ.

ವಿವಾದದ ನಂತರ ಚಿತ್ರದ ಕೆಲವು ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಮಾಪಕರು ಸ್ವಯಂ ಪ್ರೇರಿತರಾಗಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿತ್ತು. ನಟ ಮೋಹನ್ ಲಾಲ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿ, ಚಿತ್ರದಲ್ಲಿರುವ ವಿವಾದಾತ್ಮಕ ದೃಶ್ಯಗಳನ್ನು ಚಿತ್ರದಿಂದ ತೆಗೆದುಹಾಕಲಾಗುವುದು ಎಂದು ಹೇಳಿದ್ದರು. ಅದರಂತೆ ಚಿತ್ರದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ ಎಂದು ವರದಿಯಾಗಿದೆ.

“ಚಿತ್ರದಲ್ಲಿ ಯಾರಿಗಾದರೂ ನೋವುಂಟುಮಾಡುವ ದೃಶ್ಯಗಳು ಅಥವಾ ಸಂಭಾಷಣೆಗಳಿದ್ದರೆ ತೆಗೆದು ಹಾಕಲಾಗುವುದು ಎಂದು ಗೋಪಾಲನ್ ಕೂಡ ಹೇಳಿದ್ದರು.

“ಈ ಚಿತ್ರ ಯಾರನ್ನೂ ನೋಯಿಸುವ ಉದ್ದೇಶ ಹೊಂದಿಲ್ಲ. ಚಿತ್ರದಲ್ಲಿನ ಯಾವುದೇ ಸಂಭಾಷಣೆ ಅಥವಾ ದೃಶ್ಯ ಯಾರನ್ನಾದರೂ ನೋಯಿಸಿದ್ದರೆ, ಅಗತ್ಯ ಬದಲಾವಣೆಗಳನ್ನು ಮಾಡಲು ನಾನು ಪೃಥ್ವಿರಾಜ್ ಸುಕುಮಾರನ್‌ ಅವರಿಗೆ ಹೇಳಿದ್ದೇನೆ. ಚಿತ್ರದ ಸಂಭಾಷಣೆಯ ಕೆಲವು ಪದಗಳನ್ನು ಈಗಾಗಲೇ ಮ್ಯೂಟ್ ಮಾಡಲಾಗಿದೆ. ಚಿತ್ರದಲ್ಲಿನ ಕೆಲವು ವಿಷಯಗಳ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ನಾವು ಯಾವುದೇ ರಾಜಕೀಯದ ಭಾಗವಲ್ಲ” ಎಂದು ಗೋಪಾಲನ್ ತಿಳಿಸಿದ್ದರು.

ಚಿತ್ರದಲ್ಲಿ 24 ವಿಷಯಗಳಿಗೆ ಕತ್ತರಿ

ವಿವಾದದ ನಂತರ ನಿರ್ಮಾಪಕರು ಚಿತ್ರದ 24 ವಿಷಯಗಳಿಗೆ ಸ್ವಯಂಪ್ರೇರಿತ ಕತ್ತರಿ ಹಾಕಿದ್ದಾರೆ. ಅವುಗಳ ಒಟ್ಟು ಅವಧಿ 2 ನಿಮಿಷ ಮತ್ತು 8 ಸೆಕೆಂಡುಗಳು ಎಂದು ವರದಿಗಳು ಹೇಳಿವೆ.

ಚಿತ್ರದಲ್ಲಿ ಬದಲಾವಣೆ ಮಾಡಿರುವ ವಿಷಯಗಳಿಗೆ ಉದಾಹರಣೆ ಕೊಡುವುದಾದರೆ, ಈ ಹಿಂದೆ ಚಿತ್ರದಲ್ಲಿ ಅಭಿಮನ್ಯು ಸಿಂಗ್ ನಿರ್ವಹಿಸಿದ ವಿಲನ್ ಪಾತ್ರದ ಹೆಸರು ಬಲರಾಜ್ ಪಟೇಲ್ ಎಂದಿತ್ತು. ಇದು ಗೋದ್ರಾ ಗಲಭೆಯ ಅಪರಾಧಿ ವಿಶ್ವ ಹಿಂದೂ ಪರಿಷತ್‌ನ ಬಾಬುಭಾಯಿ ಪಟೇಲ್ ಅಲಿಯಾಸ್ ಬಾಬು ಬಜರಂಗಿಯನ್ನು ಉಲ್ಲೇಖಿಸಿದ ಪಾತ್ರವಾಗಿತ್ತು. ಈಗ ಹೊಸ ಆವೃತ್ತಿಯಲ್ಲಿ ಬಲರಾಜ್ ಪಟೇಲ್ ಎಂಬ ಹೆಸರನ್ನು ಬರೀ ಬಲದೇವ್ ಎಂದು ಬದಲಾಯಿಸಲಾಗಿದೆ.

ನಿರ್ಮಾಪಕರ ಮೇಲೆ ಯಾರೂ ಒತ್ತಡ ಹಾಕಿಲ್ಲ : ಸುರೇಶ್ ಗೋಪಿ

ಎಂಪುರಾನ್ ನಿರ್ಮಾಪಕರಿಗೆ ಚಿತ್ರದಲ್ಲಿ ಬದಲಾವಣೆಗಳನ್ನು ಮಾಡುವಂತೆ ಯಾರೂ ಒತ್ತಡ ಹಾಕಿಲ್ಲ ಎಂದು ಗುರುವಾರ ರಾಜ್ಯಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಸುರೇಶ್ ಗೋಪಿ ಹೇಳಿದ್ದಾರೆ.

“ಚಿತ್ರದ ಆರಂಭದಲ್ಲಿ ಪ್ರದರ್ಶಿಸಲಾದ ಕ್ರೆಡಿಟ್‌ಗಳಿಂದ ನನ್ನ ಹೆಸರನ್ನು ಅಳಿಸಲು ನಿರ್ಮಾಪಕರಿಗೆ ಕರೆ ಮಾಡಿ ಮನವಿ ಮಾಡಿದ ಮೊದಲ ವ್ಯಕ್ತಿ ನಾನೇ. ಇದು ಸತ್ಯ” ಎಂದು ಗೋಪಿ ಹೇಳಿಕೊಂಡಿದ್ದಾರೆ.

ನಿರ್ಮಾಪಕರು ಸ್ವಯಂಪ್ರೇರಣೆಯಿಂದ ಚಿತ್ರದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದ್ದಾರೆ ಎಂದು ಹೇಳಿದ ಸುರೇಶ್ ಗೋಪಿ “ನಾನು ಹೇಳಿದ್ದು ಸುಳ್ಳು ಎಂದು ಸಾಬೀತಾದರೆ ಯಾವುದೇ ಶಿಕ್ಷೆ ಅನುಭವಿಸಲು ಸಿದ್ಧನಿದ್ದೇನೆ. ಚಿತ್ರದ ನಿರ್ದೇಶಕರ ಅನುಮತಿಯೊಂದಿಗೆ 17 ವಿಷಯಗಳಿಗೆ ಕತ್ತರಿ ಹಾಕಲು ನಿರ್ಮಾಪಕರು ಮತ್ತು ಚಿತ್ರದ ನಾಯಕ ನಟ ನಿರ್ಧರಿಸಿದ್ದಾರೆ. ಅದು ಅವರ ನಿರ್ಧಾರ. ಆದರೂ, ಅವರು (ವಿಪಕ್ಷದವರು) ನನ್ನ ರಾಜಕೀಯ ಪಕ್ಷವನ್ನು ದೂಷಿಸುತ್ತಿದ್ದಾರೆ” ಎಂದು ಗೋಪಿ ಹೇಳಿದ್ದಾರೆ.

‘ಎಂಪುರಾನ್’ ವಿರುದ್ಧ ಕೋರ್ಟ್ ಮಟ್ಟಿಲೇರಿದ್ದ ಬಿಜೆಪಿ ನಾಯಕ ಪಕ್ಷದಿಂದ ಅಮಾನತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...