Homeಮುಖಪುಟ'ಎಂಪುರಾನ್' ಸಿನಿಮಾ ನಿರ್ಮಾಪಕನ ಮನೆ, ಕಚೇರಿ ಮೇಲೆ ಇಡಿ ದಾಳಿ

‘ಎಂಪುರಾನ್’ ಸಿನಿಮಾ ನಿರ್ಮಾಪಕನ ಮನೆ, ಕಚೇರಿ ಮೇಲೆ ಇಡಿ ದಾಳಿ

- Advertisement -
- Advertisement -

ಸಂಘಪರಿವಾರದ ಕೆಂಗಣ್ಣಿಗೆ ಗುರಿಯಾಗಿರುವ ಮೋಹನ್ ಲಾಲ್ ಅಭಿನಯದ ‘ಎಂಪುರಾನ್’ ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಗೋಕುಲಂ ಗೋಪಾಲನ್ ಅವರ, ಚೆನ್ನೈನ ಮನೆ, ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ (ಏ.4) ದಾಳಿ ನಡೆಸಿದೆ.

ಚೆನ್ನೈನ ಕೊಡಂಬಕ್ಕಂನಲ್ಲಿರುವ ಕಚೇರಿ ಮತ್ತು ನೀಲಂಕರೈನಲ್ಲಿರುವ ಮನೆ ಮೇಲೆ ಇಡಿ ದಾಳಿ ನಡೆಸಿದೆ. ಕೊಚ್ಚಿ ವಿಭಾಗದ ಅಧಿಕಾರಿಗಳ ತಂಡ ಎರಡೂ ಕಡೆ ಶೋಧ ನಡೆಸುತ್ತಿದೆ ಎಂದು ವರದಿಗಳು ಹೇಳಿವೆ.

ಗೋಪಾಲನ್ ಅವರ ಕಚೇರಿ ಮೇಲೆ ದಾಳಿ ಮಾಡಿರುವ ಕುರಿತ ವಿವರಗಳನ್ನು ಇಡಿ ಅಧಿಕಾರಿಗಳು ಬಹಿರಂಗಪಡಿಸಿಲ್ಲ. ಶ್ರೀ ಗೋಕುಲಂ ಚಿಟ್ಸ್ ಅಂಡ್ ಫೈನಾನ್ಸ್ ಗೋಪಾಲನ್ ಅವರ ಮಾಲೀಕತ್ವದ ಪ್ರಮುಖ ಸಂಸ್ಥೆಯಾಗಿದ್ದು, ಹಾಸ್ಪಿಟಾಲಿಟಿ, ಮಾಧ್ಯಮ, ಆರೋಗ್ಯ, ಶಿಕ್ಷಣ, ಸಾರಿಗೆ ಮತ್ತು ಲಾಜಿಸ್ಟಿಕ್ಸ್ ವಲಯಗಳಲ್ಲಿ ಪಾಲನ್ನು ಹೊಂದಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

‘ಎಂಪುರಾನ್’ ಚಿತ್ರದಲ್ಲಿ ನಟ ಮೋಹನ್ ಲಾಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ನಟ ಪೃಥ್ವಿರಾಜ್ ಸುಕುಮಾರನ್ ನಿರ್ದೇಶಿಸಿದ್ದು, ಅವರೂ ಕೂಡ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಈ ಚಿತ್ರವು 2019 ರ ‘ಲೂಸಿಫರ್’ ಚಿತ್ರದ ಮುಂದುವರಿದ ಭಾಗವಾಗಿದೆ.

ಗೋಧ್ರಾ ಗಲಭೆಯ ಬಗ್ಗೆ ಉಲ್ಲೇಖಿಸಿದ್ದಕ್ಕೆ ಚಿತ್ರ ಬಿಜೆಪಿ, ಆರ್‌ಎಸ್‌ಎಸ್‌ ಸೇರಿದಂತೆ ಸಂಘ ಪರಿವಾರದ ಕೆಂಗಣ್ಣಿಗೆ ಗುರಿಯಾಗಿದೆ. ಚಿತ್ರದ ಬರಹಗಾರ ಮುರಳಿ ಗೋಪಿ ಮತ್ತು ನಿರ್ಮಾಪಕ ಆಂಥೋನಿ ಪೆರುಬ್ಮಾವೂರ್ (ಚಿತ್ರದಲ್ಲಿ ಸಣ್ಣ ಪಾತ್ರವನ್ನು ನಿರ್ವಹಿಸಿದ್ದಾರೆ) ಸೇರಿದಂತೆ ಇಡೀ ಚಿತ್ರತಂಡ ಟೀಕೆಗೆ ಗುರಿಯಾಗಿದೆ. ಅವರನ್ನು ‘ಹಿಂದೂ ವಿರೋಧಿ’ ಎಂದು ಬಿಂಬಿಸುವ ಪ್ರಯತ್ನ ನಡೆಯುತ್ತಿದೆ.

ವಿವಾದದ ನಂತರ ಚಿತ್ರದ ಕೆಲವು ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಮಾಪಕರು ಸ್ವಯಂ ಪ್ರೇರಿತರಾಗಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿತ್ತು. ನಟ ಮೋಹನ್ ಲಾಲ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿ, ಚಿತ್ರದಲ್ಲಿರುವ ವಿವಾದಾತ್ಮಕ ದೃಶ್ಯಗಳನ್ನು ಚಿತ್ರದಿಂದ ತೆಗೆದುಹಾಕಲಾಗುವುದು ಎಂದು ಹೇಳಿದ್ದರು. ಅದರಂತೆ ಚಿತ್ರದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ ಎಂದು ವರದಿಯಾಗಿದೆ.

“ಚಿತ್ರದಲ್ಲಿ ಯಾರಿಗಾದರೂ ನೋವುಂಟುಮಾಡುವ ದೃಶ್ಯಗಳು ಅಥವಾ ಸಂಭಾಷಣೆಗಳಿದ್ದರೆ ತೆಗೆದು ಹಾಕಲಾಗುವುದು ಎಂದು ಗೋಪಾಲನ್ ಕೂಡ ಹೇಳಿದ್ದರು.

“ಈ ಚಿತ್ರ ಯಾರನ್ನೂ ನೋಯಿಸುವ ಉದ್ದೇಶ ಹೊಂದಿಲ್ಲ. ಚಿತ್ರದಲ್ಲಿನ ಯಾವುದೇ ಸಂಭಾಷಣೆ ಅಥವಾ ದೃಶ್ಯ ಯಾರನ್ನಾದರೂ ನೋಯಿಸಿದ್ದರೆ, ಅಗತ್ಯ ಬದಲಾವಣೆಗಳನ್ನು ಮಾಡಲು ನಾನು ಪೃಥ್ವಿರಾಜ್ ಸುಕುಮಾರನ್‌ ಅವರಿಗೆ ಹೇಳಿದ್ದೇನೆ. ಚಿತ್ರದ ಸಂಭಾಷಣೆಯ ಕೆಲವು ಪದಗಳನ್ನು ಈಗಾಗಲೇ ಮ್ಯೂಟ್ ಮಾಡಲಾಗಿದೆ. ಚಿತ್ರದಲ್ಲಿನ ಕೆಲವು ವಿಷಯಗಳ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ನಾವು ಯಾವುದೇ ರಾಜಕೀಯದ ಭಾಗವಲ್ಲ” ಎಂದು ಗೋಪಾಲನ್ ತಿಳಿಸಿದ್ದರು.

ಚಿತ್ರದಲ್ಲಿ 24 ವಿಷಯಗಳಿಗೆ ಕತ್ತರಿ

ವಿವಾದದ ನಂತರ ನಿರ್ಮಾಪಕರು ಚಿತ್ರದ 24 ವಿಷಯಗಳಿಗೆ ಸ್ವಯಂಪ್ರೇರಿತ ಕತ್ತರಿ ಹಾಕಿದ್ದಾರೆ. ಅವುಗಳ ಒಟ್ಟು ಅವಧಿ 2 ನಿಮಿಷ ಮತ್ತು 8 ಸೆಕೆಂಡುಗಳು ಎಂದು ವರದಿಗಳು ಹೇಳಿವೆ.

ಚಿತ್ರದಲ್ಲಿ ಬದಲಾವಣೆ ಮಾಡಿರುವ ವಿಷಯಗಳಿಗೆ ಉದಾಹರಣೆ ಕೊಡುವುದಾದರೆ, ಈ ಹಿಂದೆ ಚಿತ್ರದಲ್ಲಿ ಅಭಿಮನ್ಯು ಸಿಂಗ್ ನಿರ್ವಹಿಸಿದ ವಿಲನ್ ಪಾತ್ರದ ಹೆಸರು ಬಲರಾಜ್ ಪಟೇಲ್ ಎಂದಿತ್ತು. ಇದು ಗೋದ್ರಾ ಗಲಭೆಯ ಅಪರಾಧಿ ವಿಶ್ವ ಹಿಂದೂ ಪರಿಷತ್‌ನ ಬಾಬುಭಾಯಿ ಪಟೇಲ್ ಅಲಿಯಾಸ್ ಬಾಬು ಬಜರಂಗಿಯನ್ನು ಉಲ್ಲೇಖಿಸಿದ ಪಾತ್ರವಾಗಿತ್ತು. ಈಗ ಹೊಸ ಆವೃತ್ತಿಯಲ್ಲಿ ಬಲರಾಜ್ ಪಟೇಲ್ ಎಂಬ ಹೆಸರನ್ನು ಬರೀ ಬಲದೇವ್ ಎಂದು ಬದಲಾಯಿಸಲಾಗಿದೆ.

ನಿರ್ಮಾಪಕರ ಮೇಲೆ ಯಾರೂ ಒತ್ತಡ ಹಾಕಿಲ್ಲ : ಸುರೇಶ್ ಗೋಪಿ

ಎಂಪುರಾನ್ ನಿರ್ಮಾಪಕರಿಗೆ ಚಿತ್ರದಲ್ಲಿ ಬದಲಾವಣೆಗಳನ್ನು ಮಾಡುವಂತೆ ಯಾರೂ ಒತ್ತಡ ಹಾಕಿಲ್ಲ ಎಂದು ಗುರುವಾರ ರಾಜ್ಯಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಸುರೇಶ್ ಗೋಪಿ ಹೇಳಿದ್ದಾರೆ.

“ಚಿತ್ರದ ಆರಂಭದಲ್ಲಿ ಪ್ರದರ್ಶಿಸಲಾದ ಕ್ರೆಡಿಟ್‌ಗಳಿಂದ ನನ್ನ ಹೆಸರನ್ನು ಅಳಿಸಲು ನಿರ್ಮಾಪಕರಿಗೆ ಕರೆ ಮಾಡಿ ಮನವಿ ಮಾಡಿದ ಮೊದಲ ವ್ಯಕ್ತಿ ನಾನೇ. ಇದು ಸತ್ಯ” ಎಂದು ಗೋಪಿ ಹೇಳಿಕೊಂಡಿದ್ದಾರೆ.

ನಿರ್ಮಾಪಕರು ಸ್ವಯಂಪ್ರೇರಣೆಯಿಂದ ಚಿತ್ರದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದ್ದಾರೆ ಎಂದು ಹೇಳಿದ ಸುರೇಶ್ ಗೋಪಿ “ನಾನು ಹೇಳಿದ್ದು ಸುಳ್ಳು ಎಂದು ಸಾಬೀತಾದರೆ ಯಾವುದೇ ಶಿಕ್ಷೆ ಅನುಭವಿಸಲು ಸಿದ್ಧನಿದ್ದೇನೆ. ಚಿತ್ರದ ನಿರ್ದೇಶಕರ ಅನುಮತಿಯೊಂದಿಗೆ 17 ವಿಷಯಗಳಿಗೆ ಕತ್ತರಿ ಹಾಕಲು ನಿರ್ಮಾಪಕರು ಮತ್ತು ಚಿತ್ರದ ನಾಯಕ ನಟ ನಿರ್ಧರಿಸಿದ್ದಾರೆ. ಅದು ಅವರ ನಿರ್ಧಾರ. ಆದರೂ, ಅವರು (ವಿಪಕ್ಷದವರು) ನನ್ನ ರಾಜಕೀಯ ಪಕ್ಷವನ್ನು ದೂಷಿಸುತ್ತಿದ್ದಾರೆ” ಎಂದು ಗೋಪಿ ಹೇಳಿದ್ದಾರೆ.

‘ಎಂಪುರಾನ್’ ವಿರುದ್ಧ ಕೋರ್ಟ್ ಮಟ್ಟಿಲೇರಿದ್ದ ಬಿಜೆಪಿ ನಾಯಕ ಪಕ್ಷದಿಂದ ಅಮಾನತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...