Homeಮುಖಪುಟ'ಎಂಪುರಾನ್' ಸಿನಿಮಾ ನಿರ್ಮಾಪಕನ ಮನೆ, ಕಚೇರಿ ಮೇಲೆ ಇಡಿ ದಾಳಿ

‘ಎಂಪುರಾನ್’ ಸಿನಿಮಾ ನಿರ್ಮಾಪಕನ ಮನೆ, ಕಚೇರಿ ಮೇಲೆ ಇಡಿ ದಾಳಿ

- Advertisement -
- Advertisement -

ಸಂಘಪರಿವಾರದ ಕೆಂಗಣ್ಣಿಗೆ ಗುರಿಯಾಗಿರುವ ಮೋಹನ್ ಲಾಲ್ ಅಭಿನಯದ ‘ಎಂಪುರಾನ್’ ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಗೋಕುಲಂ ಗೋಪಾಲನ್ ಅವರ, ಚೆನ್ನೈನ ಮನೆ, ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ (ಏ.4) ದಾಳಿ ನಡೆಸಿದೆ.

ಚೆನ್ನೈನ ಕೊಡಂಬಕ್ಕಂನಲ್ಲಿರುವ ಕಚೇರಿ ಮತ್ತು ನೀಲಂಕರೈನಲ್ಲಿರುವ ಮನೆ ಮೇಲೆ ಇಡಿ ದಾಳಿ ನಡೆಸಿದೆ. ಕೊಚ್ಚಿ ವಿಭಾಗದ ಅಧಿಕಾರಿಗಳ ತಂಡ ಎರಡೂ ಕಡೆ ಶೋಧ ನಡೆಸುತ್ತಿದೆ ಎಂದು ವರದಿಗಳು ಹೇಳಿವೆ.

ಗೋಪಾಲನ್ ಅವರ ಕಚೇರಿ ಮೇಲೆ ದಾಳಿ ಮಾಡಿರುವ ಕುರಿತ ವಿವರಗಳನ್ನು ಇಡಿ ಅಧಿಕಾರಿಗಳು ಬಹಿರಂಗಪಡಿಸಿಲ್ಲ. ಶ್ರೀ ಗೋಕುಲಂ ಚಿಟ್ಸ್ ಅಂಡ್ ಫೈನಾನ್ಸ್ ಗೋಪಾಲನ್ ಅವರ ಮಾಲೀಕತ್ವದ ಪ್ರಮುಖ ಸಂಸ್ಥೆಯಾಗಿದ್ದು, ಹಾಸ್ಪಿಟಾಲಿಟಿ, ಮಾಧ್ಯಮ, ಆರೋಗ್ಯ, ಶಿಕ್ಷಣ, ಸಾರಿಗೆ ಮತ್ತು ಲಾಜಿಸ್ಟಿಕ್ಸ್ ವಲಯಗಳಲ್ಲಿ ಪಾಲನ್ನು ಹೊಂದಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

‘ಎಂಪುರಾನ್’ ಚಿತ್ರದಲ್ಲಿ ನಟ ಮೋಹನ್ ಲಾಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ನಟ ಪೃಥ್ವಿರಾಜ್ ಸುಕುಮಾರನ್ ನಿರ್ದೇಶಿಸಿದ್ದು, ಅವರೂ ಕೂಡ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಈ ಚಿತ್ರವು 2019 ರ ‘ಲೂಸಿಫರ್’ ಚಿತ್ರದ ಮುಂದುವರಿದ ಭಾಗವಾಗಿದೆ.

ಗೋಧ್ರಾ ಗಲಭೆಯ ಬಗ್ಗೆ ಉಲ್ಲೇಖಿಸಿದ್ದಕ್ಕೆ ಚಿತ್ರ ಬಿಜೆಪಿ, ಆರ್‌ಎಸ್‌ಎಸ್‌ ಸೇರಿದಂತೆ ಸಂಘ ಪರಿವಾರದ ಕೆಂಗಣ್ಣಿಗೆ ಗುರಿಯಾಗಿದೆ. ಚಿತ್ರದ ಬರಹಗಾರ ಮುರಳಿ ಗೋಪಿ ಮತ್ತು ನಿರ್ಮಾಪಕ ಆಂಥೋನಿ ಪೆರುಬ್ಮಾವೂರ್ (ಚಿತ್ರದಲ್ಲಿ ಸಣ್ಣ ಪಾತ್ರವನ್ನು ನಿರ್ವಹಿಸಿದ್ದಾರೆ) ಸೇರಿದಂತೆ ಇಡೀ ಚಿತ್ರತಂಡ ಟೀಕೆಗೆ ಗುರಿಯಾಗಿದೆ. ಅವರನ್ನು ‘ಹಿಂದೂ ವಿರೋಧಿ’ ಎಂದು ಬಿಂಬಿಸುವ ಪ್ರಯತ್ನ ನಡೆಯುತ್ತಿದೆ.

ವಿವಾದದ ನಂತರ ಚಿತ್ರದ ಕೆಲವು ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಮಾಪಕರು ಸ್ವಯಂ ಪ್ರೇರಿತರಾಗಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿತ್ತು. ನಟ ಮೋಹನ್ ಲಾಲ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿ, ಚಿತ್ರದಲ್ಲಿರುವ ವಿವಾದಾತ್ಮಕ ದೃಶ್ಯಗಳನ್ನು ಚಿತ್ರದಿಂದ ತೆಗೆದುಹಾಕಲಾಗುವುದು ಎಂದು ಹೇಳಿದ್ದರು. ಅದರಂತೆ ಚಿತ್ರದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ ಎಂದು ವರದಿಯಾಗಿದೆ.

“ಚಿತ್ರದಲ್ಲಿ ಯಾರಿಗಾದರೂ ನೋವುಂಟುಮಾಡುವ ದೃಶ್ಯಗಳು ಅಥವಾ ಸಂಭಾಷಣೆಗಳಿದ್ದರೆ ತೆಗೆದು ಹಾಕಲಾಗುವುದು ಎಂದು ಗೋಪಾಲನ್ ಕೂಡ ಹೇಳಿದ್ದರು.

“ಈ ಚಿತ್ರ ಯಾರನ್ನೂ ನೋಯಿಸುವ ಉದ್ದೇಶ ಹೊಂದಿಲ್ಲ. ಚಿತ್ರದಲ್ಲಿನ ಯಾವುದೇ ಸಂಭಾಷಣೆ ಅಥವಾ ದೃಶ್ಯ ಯಾರನ್ನಾದರೂ ನೋಯಿಸಿದ್ದರೆ, ಅಗತ್ಯ ಬದಲಾವಣೆಗಳನ್ನು ಮಾಡಲು ನಾನು ಪೃಥ್ವಿರಾಜ್ ಸುಕುಮಾರನ್‌ ಅವರಿಗೆ ಹೇಳಿದ್ದೇನೆ. ಚಿತ್ರದ ಸಂಭಾಷಣೆಯ ಕೆಲವು ಪದಗಳನ್ನು ಈಗಾಗಲೇ ಮ್ಯೂಟ್ ಮಾಡಲಾಗಿದೆ. ಚಿತ್ರದಲ್ಲಿನ ಕೆಲವು ವಿಷಯಗಳ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ನಾವು ಯಾವುದೇ ರಾಜಕೀಯದ ಭಾಗವಲ್ಲ” ಎಂದು ಗೋಪಾಲನ್ ತಿಳಿಸಿದ್ದರು.

ಚಿತ್ರದಲ್ಲಿ 24 ವಿಷಯಗಳಿಗೆ ಕತ್ತರಿ

ವಿವಾದದ ನಂತರ ನಿರ್ಮಾಪಕರು ಚಿತ್ರದ 24 ವಿಷಯಗಳಿಗೆ ಸ್ವಯಂಪ್ರೇರಿತ ಕತ್ತರಿ ಹಾಕಿದ್ದಾರೆ. ಅವುಗಳ ಒಟ್ಟು ಅವಧಿ 2 ನಿಮಿಷ ಮತ್ತು 8 ಸೆಕೆಂಡುಗಳು ಎಂದು ವರದಿಗಳು ಹೇಳಿವೆ.

ಚಿತ್ರದಲ್ಲಿ ಬದಲಾವಣೆ ಮಾಡಿರುವ ವಿಷಯಗಳಿಗೆ ಉದಾಹರಣೆ ಕೊಡುವುದಾದರೆ, ಈ ಹಿಂದೆ ಚಿತ್ರದಲ್ಲಿ ಅಭಿಮನ್ಯು ಸಿಂಗ್ ನಿರ್ವಹಿಸಿದ ವಿಲನ್ ಪಾತ್ರದ ಹೆಸರು ಬಲರಾಜ್ ಪಟೇಲ್ ಎಂದಿತ್ತು. ಇದು ಗೋದ್ರಾ ಗಲಭೆಯ ಅಪರಾಧಿ ವಿಶ್ವ ಹಿಂದೂ ಪರಿಷತ್‌ನ ಬಾಬುಭಾಯಿ ಪಟೇಲ್ ಅಲಿಯಾಸ್ ಬಾಬು ಬಜರಂಗಿಯನ್ನು ಉಲ್ಲೇಖಿಸಿದ ಪಾತ್ರವಾಗಿತ್ತು. ಈಗ ಹೊಸ ಆವೃತ್ತಿಯಲ್ಲಿ ಬಲರಾಜ್ ಪಟೇಲ್ ಎಂಬ ಹೆಸರನ್ನು ಬರೀ ಬಲದೇವ್ ಎಂದು ಬದಲಾಯಿಸಲಾಗಿದೆ.

ನಿರ್ಮಾಪಕರ ಮೇಲೆ ಯಾರೂ ಒತ್ತಡ ಹಾಕಿಲ್ಲ : ಸುರೇಶ್ ಗೋಪಿ

ಎಂಪುರಾನ್ ನಿರ್ಮಾಪಕರಿಗೆ ಚಿತ್ರದಲ್ಲಿ ಬದಲಾವಣೆಗಳನ್ನು ಮಾಡುವಂತೆ ಯಾರೂ ಒತ್ತಡ ಹಾಕಿಲ್ಲ ಎಂದು ಗುರುವಾರ ರಾಜ್ಯಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಸುರೇಶ್ ಗೋಪಿ ಹೇಳಿದ್ದಾರೆ.

“ಚಿತ್ರದ ಆರಂಭದಲ್ಲಿ ಪ್ರದರ್ಶಿಸಲಾದ ಕ್ರೆಡಿಟ್‌ಗಳಿಂದ ನನ್ನ ಹೆಸರನ್ನು ಅಳಿಸಲು ನಿರ್ಮಾಪಕರಿಗೆ ಕರೆ ಮಾಡಿ ಮನವಿ ಮಾಡಿದ ಮೊದಲ ವ್ಯಕ್ತಿ ನಾನೇ. ಇದು ಸತ್ಯ” ಎಂದು ಗೋಪಿ ಹೇಳಿಕೊಂಡಿದ್ದಾರೆ.

ನಿರ್ಮಾಪಕರು ಸ್ವಯಂಪ್ರೇರಣೆಯಿಂದ ಚಿತ್ರದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದ್ದಾರೆ ಎಂದು ಹೇಳಿದ ಸುರೇಶ್ ಗೋಪಿ “ನಾನು ಹೇಳಿದ್ದು ಸುಳ್ಳು ಎಂದು ಸಾಬೀತಾದರೆ ಯಾವುದೇ ಶಿಕ್ಷೆ ಅನುಭವಿಸಲು ಸಿದ್ಧನಿದ್ದೇನೆ. ಚಿತ್ರದ ನಿರ್ದೇಶಕರ ಅನುಮತಿಯೊಂದಿಗೆ 17 ವಿಷಯಗಳಿಗೆ ಕತ್ತರಿ ಹಾಕಲು ನಿರ್ಮಾಪಕರು ಮತ್ತು ಚಿತ್ರದ ನಾಯಕ ನಟ ನಿರ್ಧರಿಸಿದ್ದಾರೆ. ಅದು ಅವರ ನಿರ್ಧಾರ. ಆದರೂ, ಅವರು (ವಿಪಕ್ಷದವರು) ನನ್ನ ರಾಜಕೀಯ ಪಕ್ಷವನ್ನು ದೂಷಿಸುತ್ತಿದ್ದಾರೆ” ಎಂದು ಗೋಪಿ ಹೇಳಿದ್ದಾರೆ.

‘ಎಂಪುರಾನ್’ ವಿರುದ್ಧ ಕೋರ್ಟ್ ಮಟ್ಟಿಲೇರಿದ್ದ ಬಿಜೆಪಿ ನಾಯಕ ಪಕ್ಷದಿಂದ ಅಮಾನತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...