Homeಮುಖಪುಟಹರ್ಯಾಣ: ED ಅಧಿಕಾರಿಗಳಿಂದ ಕಾಂಗ್ರೆಸ್ ಶಾಸಕರಿಗೆ ಸೇರಿದ 20ಕ್ಕೂ ಅಧಿಕ ಸ್ಥಳಗಳ ಮೇಲೆ ದಾಳಿ

ಹರ್ಯಾಣ: ED ಅಧಿಕಾರಿಗಳಿಂದ ಕಾಂಗ್ರೆಸ್ ಶಾಸಕರಿಗೆ ಸೇರಿದ 20ಕ್ಕೂ ಅಧಿಕ ಸ್ಥಳಗಳ ಮೇಲೆ ದಾಳಿ

- Advertisement -
- Advertisement -

ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹರ್ಯಾಣ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಮತ್ತು ಐಎನ್‌ಎಲ್‌ಡಿ ಮಾಜಿ ಶಾಸಕ ದಿಲ್‌ಬಾಗ್ ಸಿಂಗ್ ನಿವಾಸ ಸೇರಿ ಹಲವೆಡೆ ದಾಳಿಯನ್ನು ನಡೆಸಿದ್ದಾರೆ.

ಶಾಸಕ ಸುರೇಂದರ್ ಪನ್ವಾರ್, ಮಾಜಿ ಐಎನ್‌ಎಲ್‌ಡಿ ಶಾಸಕ ದಿಲ್‌ಬಾಗ್ ಸಿಂಗ್‌ಗೆ ಸೇರಿದ 20 ಸ್ಥಳಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಯಮುನಾ ನಗರ, ಸೋನಿಪತ್, ಮೊಹಾಲಿ, ಫರಿದಾಬಾದ್, ಚಂಡೀಗಢ ಮತ್ತು ಕರ್ನಾಲ್‌ನಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇ.ಡಿ ಅಧಿಕಾರಿಗಳಿಗೆ ಕೇಂದ್ರೀಯ ಅರೆಸೇನಾ ಪಡೆಗಳ ಮೂಲಕ ರಕ್ಷಣೆಯನ್ನು ಕೂಡ ನೀಡಲಾಗಿದೆ.

ಸುರೇಂದರ್ ಪನ್ವಾರ್ ಸೋನಿಪತ್‌ ಕ್ಷೇತ್ರದ ಕಾಂಗ್ರೆಸ್‌ ಶಾಸಕರಾಗಿದ್ದು, ದಿಲ್‌ಬಾಗ್ ಸಿಂಗ್  ಅವರು ಭಾರತ ರಾಷ್ಟ್ರೀಯ ಲೋಕ ದಳದಿಂದ (ಐಎನ್‌ಎಲ್‌ಡಿ) ಯಮುನಾ ನಗರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಈ ಹಿಂದೆ ಯಮುನಾ ನಗರ ಮತ್ತು ಸಮೀಪದ ಜಿಲ್ಲೆಗಳಲ್ಲಿ ಅಕ್ರಮ ಗಣಿಗಾರಿಕೆ  ಕುರಿತು ಹಲವು ಎಫ್‌ಐಆರ್‌ಗಳು ದಾಖಲಾದ ಬಳಿಕ ಇಡಿ ಅಧಿಕಾರಿಗಳು ಪ್ರಕರಣವನ್ನು ದಾಖಲಿಸಿ ತನಿಖೆಯನ್ನು ಕೈಗೆತ್ತಿಕೊಂಡಿದ್ದರು. ಗಣಿಗಾರಿಕ ನಡೆಸದಂತೆ ನ್ಯಾಯಾಲಯದ ಆದೇಶವಿದ್ದರೂ ಅಕ್ರಮವಾಗಿ ನಡೆಸುತ್ತಿರುವ  ಆರೋಪ ಕೇಳಿ ಬಂದಿತ್ತು.

ಇದಲ್ಲದೆ ತೆರಿಗೆಗಳ ಸಂಗ್ರಹವನ್ನು ಸರಳಗೊಳಿಸಲು ಮತ್ತು ಗಣಿಗಾರಿಕೆ ಪ್ರದೇಶಗಳಲ್ಲಿ ತೆರಿಗೆ ವಂಚನೆಯನ್ನು ತಡೆಗಟ್ಟಲು ಹರ್ಯಾಣ ಸರ್ಕಾರ 2020ರಲ್ಲಿ ಜಾರಿಗೆ ತಂದ ಆನ್‌ಲೈನ್ ಪೋರ್ಟಲ್ ‘ಇ-ರಾವಣ್’ ಯೋಜನೆಯಲ್ಲಿನ ವಂಚನೆಯನ್ನು ಕೂಡ ಇ.ಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಜಾರ್ಖಂಡ್‌ ಮತ್ತು ರಾಜಸ್ಥಾನದಲ್ಲಿ ನಿನ್ನೆ ಗಣಿ ಹಗರಣಕ್ಕೆ ಸಂಬಂಧಿಸಿದಂತೆ ಹಲವು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಆಪ್ತರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯವು ರಾಂಚಿಯಲ್ಲಿ ದಾಳಿ ನಡೆಸಿದೆ. ಇಡಿ ದಾಳಿಗೆ ಒಳಗಾಗಿರುವ ಅಭಿಷೇಕ್ ಪ್ರಸಾದ್ ಅವರು ಸಿಎಂ ಹೇಮಂತ್ ಅವರ ಮಾಧ್ಯಮ ಸಲಹೆಗಾರರಾಗಿದ್ದಾರೆ. ಅಭಿಷೇಕ್ ಪ್ರಸಾದ್ ಅವರ ನಿವಾಸ ಮತ್ತು ಸಾಹೇಬ್‌ಗಂಜ್ ಜಿಲ್ಲಾಧಿಕಾರಿ ನಿವಾಸ ಸೇರಿದಂತೆ 12 ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, ದಾಖಲೆಗಳನ್ನು ಪರಿಶೀಲಿಸಲಾಗಿದೆ.

ಇಡಿ ನೀಡಿದ ಸಮನ್ಸ್‌ಗಳನ್ನು ಮುಖ್ಯಮಂತ್ರಿ ನಿರ್ಲಕ್ಷಿಸಿದ್ದರಿಂದ ಈ ದಾಳಿಗಳು ನಡೆಯುತ್ತಿದ್ದು, ಈಗಾಗಲೇ ಅವರು ತಮ್ಮ ಆಸ್ತಿಯ ಎಲ್ಲ ವಿವರಗಳನ್ನು ತನಿಖಾ ಸಂಸ್ಥೆಗೆ ಒದಗಿಸಿದ್ದಾರೆ. ಈಗ ನೀಡುತ್ತಿರುವ ಸಮನ್ಸ್ ಕಾನೂನುಬಾಹಿರವಾಗಿದೆ ಎಂದು ಹೇಮಂತ್ ಸೋರೆನ್ ಆಪ್ತರು ಹೇಳಿದ್ದರು.

ಇದನ್ನು ಓದಿ: ಭಾರತದ ಪ್ರಧಾನಿಯೋರ್ವರು ಕೊನೆಯ ಪತ್ರಿಕಾಗೋಷ್ಟಿ ನಡೆಸಿ ಇಂದಿಗೆ 10 ವರ್ಷ!

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...