Homeಮುಖಪುಟಹರ್ಯಾಣ: ED ಅಧಿಕಾರಿಗಳಿಂದ ಕಾಂಗ್ರೆಸ್ ಶಾಸಕರಿಗೆ ಸೇರಿದ 20ಕ್ಕೂ ಅಧಿಕ ಸ್ಥಳಗಳ ಮೇಲೆ ದಾಳಿ

ಹರ್ಯಾಣ: ED ಅಧಿಕಾರಿಗಳಿಂದ ಕಾಂಗ್ರೆಸ್ ಶಾಸಕರಿಗೆ ಸೇರಿದ 20ಕ್ಕೂ ಅಧಿಕ ಸ್ಥಳಗಳ ಮೇಲೆ ದಾಳಿ

- Advertisement -
- Advertisement -

ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹರ್ಯಾಣ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಮತ್ತು ಐಎನ್‌ಎಲ್‌ಡಿ ಮಾಜಿ ಶಾಸಕ ದಿಲ್‌ಬಾಗ್ ಸಿಂಗ್ ನಿವಾಸ ಸೇರಿ ಹಲವೆಡೆ ದಾಳಿಯನ್ನು ನಡೆಸಿದ್ದಾರೆ.

ಶಾಸಕ ಸುರೇಂದರ್ ಪನ್ವಾರ್, ಮಾಜಿ ಐಎನ್‌ಎಲ್‌ಡಿ ಶಾಸಕ ದಿಲ್‌ಬಾಗ್ ಸಿಂಗ್‌ಗೆ ಸೇರಿದ 20 ಸ್ಥಳಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಯಮುನಾ ನಗರ, ಸೋನಿಪತ್, ಮೊಹಾಲಿ, ಫರಿದಾಬಾದ್, ಚಂಡೀಗಢ ಮತ್ತು ಕರ್ನಾಲ್‌ನಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇ.ಡಿ ಅಧಿಕಾರಿಗಳಿಗೆ ಕೇಂದ್ರೀಯ ಅರೆಸೇನಾ ಪಡೆಗಳ ಮೂಲಕ ರಕ್ಷಣೆಯನ್ನು ಕೂಡ ನೀಡಲಾಗಿದೆ.

ಸುರೇಂದರ್ ಪನ್ವಾರ್ ಸೋನಿಪತ್‌ ಕ್ಷೇತ್ರದ ಕಾಂಗ್ರೆಸ್‌ ಶಾಸಕರಾಗಿದ್ದು, ದಿಲ್‌ಬಾಗ್ ಸಿಂಗ್  ಅವರು ಭಾರತ ರಾಷ್ಟ್ರೀಯ ಲೋಕ ದಳದಿಂದ (ಐಎನ್‌ಎಲ್‌ಡಿ) ಯಮುನಾ ನಗರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಈ ಹಿಂದೆ ಯಮುನಾ ನಗರ ಮತ್ತು ಸಮೀಪದ ಜಿಲ್ಲೆಗಳಲ್ಲಿ ಅಕ್ರಮ ಗಣಿಗಾರಿಕೆ  ಕುರಿತು ಹಲವು ಎಫ್‌ಐಆರ್‌ಗಳು ದಾಖಲಾದ ಬಳಿಕ ಇಡಿ ಅಧಿಕಾರಿಗಳು ಪ್ರಕರಣವನ್ನು ದಾಖಲಿಸಿ ತನಿಖೆಯನ್ನು ಕೈಗೆತ್ತಿಕೊಂಡಿದ್ದರು. ಗಣಿಗಾರಿಕ ನಡೆಸದಂತೆ ನ್ಯಾಯಾಲಯದ ಆದೇಶವಿದ್ದರೂ ಅಕ್ರಮವಾಗಿ ನಡೆಸುತ್ತಿರುವ  ಆರೋಪ ಕೇಳಿ ಬಂದಿತ್ತು.

ಇದಲ್ಲದೆ ತೆರಿಗೆಗಳ ಸಂಗ್ರಹವನ್ನು ಸರಳಗೊಳಿಸಲು ಮತ್ತು ಗಣಿಗಾರಿಕೆ ಪ್ರದೇಶಗಳಲ್ಲಿ ತೆರಿಗೆ ವಂಚನೆಯನ್ನು ತಡೆಗಟ್ಟಲು ಹರ್ಯಾಣ ಸರ್ಕಾರ 2020ರಲ್ಲಿ ಜಾರಿಗೆ ತಂದ ಆನ್‌ಲೈನ್ ಪೋರ್ಟಲ್ ‘ಇ-ರಾವಣ್’ ಯೋಜನೆಯಲ್ಲಿನ ವಂಚನೆಯನ್ನು ಕೂಡ ಇ.ಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಜಾರ್ಖಂಡ್‌ ಮತ್ತು ರಾಜಸ್ಥಾನದಲ್ಲಿ ನಿನ್ನೆ ಗಣಿ ಹಗರಣಕ್ಕೆ ಸಂಬಂಧಿಸಿದಂತೆ ಹಲವು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಆಪ್ತರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯವು ರಾಂಚಿಯಲ್ಲಿ ದಾಳಿ ನಡೆಸಿದೆ. ಇಡಿ ದಾಳಿಗೆ ಒಳಗಾಗಿರುವ ಅಭಿಷೇಕ್ ಪ್ರಸಾದ್ ಅವರು ಸಿಎಂ ಹೇಮಂತ್ ಅವರ ಮಾಧ್ಯಮ ಸಲಹೆಗಾರರಾಗಿದ್ದಾರೆ. ಅಭಿಷೇಕ್ ಪ್ರಸಾದ್ ಅವರ ನಿವಾಸ ಮತ್ತು ಸಾಹೇಬ್‌ಗಂಜ್ ಜಿಲ್ಲಾಧಿಕಾರಿ ನಿವಾಸ ಸೇರಿದಂತೆ 12 ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, ದಾಖಲೆಗಳನ್ನು ಪರಿಶೀಲಿಸಲಾಗಿದೆ.

ಇಡಿ ನೀಡಿದ ಸಮನ್ಸ್‌ಗಳನ್ನು ಮುಖ್ಯಮಂತ್ರಿ ನಿರ್ಲಕ್ಷಿಸಿದ್ದರಿಂದ ಈ ದಾಳಿಗಳು ನಡೆಯುತ್ತಿದ್ದು, ಈಗಾಗಲೇ ಅವರು ತಮ್ಮ ಆಸ್ತಿಯ ಎಲ್ಲ ವಿವರಗಳನ್ನು ತನಿಖಾ ಸಂಸ್ಥೆಗೆ ಒದಗಿಸಿದ್ದಾರೆ. ಈಗ ನೀಡುತ್ತಿರುವ ಸಮನ್ಸ್ ಕಾನೂನುಬಾಹಿರವಾಗಿದೆ ಎಂದು ಹೇಮಂತ್ ಸೋರೆನ್ ಆಪ್ತರು ಹೇಳಿದ್ದರು.

ಇದನ್ನು ಓದಿ: ಭಾರತದ ಪ್ರಧಾನಿಯೋರ್ವರು ಕೊನೆಯ ಪತ್ರಿಕಾಗೋಷ್ಟಿ ನಡೆಸಿ ಇಂದಿಗೆ 10 ವರ್ಷ!

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...