Homeಮುಖಪುಟಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಸೇರಿ ಮಲಯಾಳಂ ನಟರ ಮನೆಗಳ ಮೇಲೆ ಇಡಿ ದಾಳಿ

ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಸೇರಿ ಮಲಯಾಳಂ ನಟರ ಮನೆಗಳ ಮೇಲೆ ಇಡಿ ದಾಳಿ

- Advertisement -
- Advertisement -

ಐಷಾರಾಮಿ ವಾಹನಗಳ ಕಳ್ಳಸಾಗಣೆ ಮತ್ತು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಎಫ್ಇಎಂಎ) ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಕೇರಳ ಮತ್ತು ತಮಿಳುನಾಡಿನ 17 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬುಧವಾರ (ಅ.8) ದಾಳಿ ನಡೆಸಿದ್ದಾರೆ.

ಮಲಯಾಳಂ ಸಿನಿಮಾ ನಟರಾದ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಸುಕುಮಾರನ್ ಮತ್ತು ಅಮಿತ್ ಚಕ್ಕಲಕ್ಕಲ್ ಅವರ ಮನೆ ಮತ್ತು ಇತರ ಸಂಸ್ಥೆಗಳು ಹಾಗೂ ಎರ್ನಾಕುಲಂ, ತ್ರಿಶೂರ್, ಕೋಝಿಕ್ಕೋಡ್, ಮಲಪ್ಪುರಂ, ಕೊಟ್ಟಾಯಂ, ಕೊಯಮತ್ತೂರಿನಲ್ಲಿರುವ ಕೆಲವು ವಾಹನ ಮಾಲೀಕರು, ಆಟೋಮೊಬೈಲ್ ಕಾರ್ಯಾಗಾರಗಳು ಮತ್ತು ವ್ಯಾಪಾರಿಗಳಿಗೆ ಸಂಬಂಧಿಸಿದ ಜಾಗಳಲ್ಲಿ ಇಡಿ ಅಧಿಕಾರಿಗಳು ಶೋಧ ಕಾರ್ಯ ಕೈಗೊಂಡಿದ್ದಾರೆ.

ದುಲ್ಕರ್ ಸಲ್ಮಾನ್ ಅವರ ತಂದೆ ಮಲಯಾಳಂ ಸಿನಿಮಾ ರಂಗದ ಹಿರಿಯ ನಟ ಮಮ್ಮುಟ್ಟಿ ಅವರ ಕೊಚ್ಚಿಯ ಪನಂಪಿಲ್ಲಿ ನಗರದಲ್ಲಿರುವ ಮನೆಯಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಇದು ಹಳೆಯ ಮನೆಯಾಗಿದ್ದು, ಪ್ರಸ್ತುತ ಮಮ್ಮುಟ್ಟಿ ಅಲ್ಲಿ ವಾಸ ಇಲ್ಲ ಎಂದು ವರದಿಯಾಗಿದೆ.

ಇನ್ನುಳಿದಂತೆ ಚೆನ್ನೈಯ ಗ್ರೀನ್‌ವೇಸ್ ರೋಡ್‌ನಲ್ಲಿರುವ ಮಮ್ಮುಟ್ಟಿ ಮತ್ತು ದುಲ್ಕರ್ ಸಲ್ಮಾನ್ ಅವರಿಗೆ ಸೇರಿದ ‘ವೇಫೇರ್ ಫಿಲ್ಮ್ಸ್’ ಸಂಸ್ಥೆ ಮೇಲೂ ಇಡಿ ದಾಳಿ ಮಾಡಿದೆ.

ದುಲ್ಕರ್ ಸಲ್ಮಾನ್ ಅವರ ಕೊಚ್ಚಿ ಮತ್ತು ಚೆನ್ನೈನಲ್ಲಿರುವ ಮನೆಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಶೋಧ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ಸೆಪ್ಟೆಂಬರ್ 23ರಂದು ಕೊಚ್ಚಿಯ ಕಸ್ಟಮ್ಸ್ (ಪ್ರಿವೆಂಟಿವ್) ಕಮಿಷನರೇಟ್, ನಟರ ಮನೆಗಳು ಸೇರಿದಂತೆ 30ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿತ್ತು. ಈ ದಾಳಿಗಳಲ್ಲಿ, ಕಳೆದ ಕೆಲವು ವರ್ಷಗಳಿಂದ ಭೂತಾನ್‌ನಿಂದ ಕಳ್ಳಸಾಗಣೆ ಮಾಡಲಾಗಿದೆ ಎಂದು ಶಂಕಿಸಲಾದ 37 ಐಷಾರಾಮಿ ಸೆಕೆಂಡ್ ಹ್ಯಾಂಡ್ ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇಂಡೋ-ಭೂತಾನ್/ನೇಪಾಳ ಮಾರ್ಗಗಳ ಮೂಲಕ ಲ್ಯಾಂಡ್ ಕ್ರೂಸರ್, ಡಿಫೆಂಡರ್ ಮತ್ತು ಮಸೆರಾಟಿಯಂತಹ ಐಷಾರಾಮಿ ಕಾರುಗಳ ಅಕ್ರಮ ಆಮದು ಮತ್ತು ನೋಂದಣಿಯಲ್ಲಿ ತೊಡಗಿರುವ ಜಾಲ ನೀಡಿದ ಮಾಹಿತಿಯ ಆಧಾರದ ಮೇಲೆ ಶೋಧ ನಡೆಸಲಾಗಿದೆ ಎಂದು ಇಡಿ ಬುಧವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತೀಯ ಸೇನೆ, ಅಮೆರಿಕ ರಾಯಭಾರ ಕಚೇರಿ ಮತ್ತು ವಿದೇಶಾಂಗ ಸಚಿವಾಲಯದ ನಕಲಿ ದಾಖಲೆಗಳನ್ನು ಬಳಸಿಕೊಂಡು ಕೊಯಮತ್ತೂರು ಮೂಲದ ಜಾಲವೊಂದು ವಂಚನೆ ನಡೆಸುತ್ತಿದೆ. ಅರುಣಾಚಲ ಪ್ರದೇಶ, ಹಿಮಾಚಲ ಪ್ರದೇಶ ಮತ್ತು ಇತರ ರಾಜ್ಯಗಳ ಆರ್‌ಟಿಒ (ಪ್ರಾದೇಶಿಕ ಸಾರಿಗೆ ಕಚೇರಿ) ನೋಂದಣಿಗಳಲ್ಲಿ ವಂಚನೆ ಎಸಗುತ್ತಿದೆ. ನಂತರ ಈ ವಾಹನಗಳನ್ನು ಸಿನಿಮಾ ನಟರು ಸೇರಿದಂತೆ ಸೆಲೆಬ್ರೆಟಿಗಳಿಗೆ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಪ್ರಕಟಣೆ ಹೇಳಿದೆ.

ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆ (ಎಫ್‌ಇಎಂಎ), 1999 ರ ಕಲಂ 3, 4, ಮತ್ತು 8 ರ ಉಲ್ಲಂಘನೆಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆ ಇಡಿ ಕ್ರಮ ಕೈಗೊಂಡಿದೆ. ಅನಧಿಕೃತ ವಿದೇಶಿ ವಿನಿಮಯ ವ್ಯವಹಾರಗಳು ಮತ್ತು ಹವಾಲಾ ಮಾರ್ಗಗಳ ಮೂಲಕ ಗಡಿಯಾಚೆಗಿನ ಪಾವತಿಗಳು ಉಲ್ಲಂಘನೆಯಲ್ಲಿ ಒಳಗೊಂಡಿವೆ. ಹಣದ ಮಾರ್ಗ, ಫಲಾನುಭವಿಗಳ ಜಾಲ ಮತ್ತು ವಿದೇಶಿ ವಿನಿಮಯ ಚಲನೆಯನ್ನು ಕಂಡುಹಿಡಿಯಲು ಮುಂದಿನ ತನಿಖೆ ನಡೆಯುತ್ತಿದೆ.

ಕಸ್ಟಮ್ಸ್ ವಿಭಾಗವು ‘ನುಮ್‌ಖೋರ್’ ಎಂಬ ಕಾರ್ಯಾಚರಣೆಯನ್ನು ಕೇರಳದಾದ್ಯಂತ ಆರಂಭಿಸಿದೆ. ‘ನುಮ್‌ಖೋರ್’ ಎಂಬ ಪದವು ಭೂತಾನಿನ ಭಾಷೆಯಲ್ಲಿ ‘ವಾಹನ’ ಎಂಬ ಅರ್ಥವನ್ನು ಹೊಂದಿದೆ. ಈ ಕಾರ್ಯಾಚರಣೆಯ ಉದ್ದೇಶವು ಕಾನೂನುಬಾಹಿರವಾಗಿ ತರಲಾದ ವಾಹನಗಳನ್ನು ಗುರುತಿಸಿ, ಜಪ್ತಿ ಮಾಡುವುದಾಗಿದೆ.

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಡೇಟಾಬೇಸ್‌ನಲ್ಲಿ 150 ರಿಂದ 200 ವಾಹನಗಳ ದಾಖಲೆಗಳಲ್ಲಿ ತಪ್ಪು ಮಾಹಿತಿ, ನಕಲಿ ದಾಖಲೆಗಳು ಮತ್ತು ಸುಂಕದಿಂದ ತಪ್ಪಿಸಿಕೊಂಡಿರುವುದನ್ನು ಗುರುತಿಸಿವೆ. ಈ ವಾಹನಗಳು ಕಾನೂನುಬಾಹಿರವಾಗಿ ದೇಶಕ್ಕೆ ತರಲಾದವು ಎಂಬ ಶಂಕೆಯಿದೆ.

ದುಲ್ಕರ್ ಸಲ್ಮಾನ್ ಮತ್ತು ಅಮಿತ್ ಚಕ್ಕಲಕ್ಕಲ್ ಅವರಿಗೆ ಸೇರಿದ ಹಲವು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಧಿಕಾರಿಗಳು ಕೊಚ್ಚಿಯಲ್ಲಿರುವ ಪೃಥ್ವಿರಾಜ್ ಅವರ ಮನೆ ಮೇಲೆ ದಾಳಿ ಮಾಡಿದ್ದರೂ, ಅವರ ಯಾವುದೇ ವಾಹನಗಳನ್ನು ವಶಪಡಿಸಿಕೊಂಡಿಲ್ಲ ಎಂದು ದಿ ಹಿಂದೂ ವರದಿ ಮಾಡಿದೆ.

ದುಲ್ಕರ್ ಸಲ್ಮಾನ್ ತಮ್ಮ ವಾಹನಗಳನ್ನು ಬಿಡುಗಡೆ ಮಾಡುವಂತೆ ಕೇರಳ ಹೈಕೋರ್ಟ್ ಮೊರೆ ಹೋಗಿದ್ದಾರೆ. ಮಂಗಳವಾರ, ನ್ಯಾಯಾಲಯವು ಅವರ ಐಷಾರಾಮಿ ಎಸ್‌ಯುವಿಗಳಲ್ಲಿ ಒಂದನ್ನು ಬಿಡುಗಡೆ ಮಾಡಲು ಕಸ್ಟಮ್ಸ್ ಕಾಯ್ದೆಯಡಿಯಲ್ಲಿ ನ್ಯಾಯನಿರ್ಣಯ ಪ್ರಾಧಿಕಾರವನ್ನು ಸಂಪರ್ಕಿಸಲು ನಿರ್ದೇಶಿಸಿದೆ.

ದಲಿತ ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಆತ್ಮಹತ್ಯೆ ಪ್ರಕರಣ; ಸಾವಿಗೆ ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...