Homeಮುಖಪುಟಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಸೇರಿ ಮಲಯಾಳಂ ನಟರ ಮನೆಗಳ ಮೇಲೆ ಇಡಿ ದಾಳಿ

ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಸೇರಿ ಮಲಯಾಳಂ ನಟರ ಮನೆಗಳ ಮೇಲೆ ಇಡಿ ದಾಳಿ

- Advertisement -
- Advertisement -

ಐಷಾರಾಮಿ ವಾಹನಗಳ ಕಳ್ಳಸಾಗಣೆ ಮತ್ತು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಎಫ್ಇಎಂಎ) ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಕೇರಳ ಮತ್ತು ತಮಿಳುನಾಡಿನ 17 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬುಧವಾರ (ಅ.8) ದಾಳಿ ನಡೆಸಿದ್ದಾರೆ.

ಮಲಯಾಳಂ ಸಿನಿಮಾ ನಟರಾದ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಸುಕುಮಾರನ್ ಮತ್ತು ಅಮಿತ್ ಚಕ್ಕಲಕ್ಕಲ್ ಅವರ ಮನೆ ಮತ್ತು ಇತರ ಸಂಸ್ಥೆಗಳು ಹಾಗೂ ಎರ್ನಾಕುಲಂ, ತ್ರಿಶೂರ್, ಕೋಝಿಕ್ಕೋಡ್, ಮಲಪ್ಪುರಂ, ಕೊಟ್ಟಾಯಂ, ಕೊಯಮತ್ತೂರಿನಲ್ಲಿರುವ ಕೆಲವು ವಾಹನ ಮಾಲೀಕರು, ಆಟೋಮೊಬೈಲ್ ಕಾರ್ಯಾಗಾರಗಳು ಮತ್ತು ವ್ಯಾಪಾರಿಗಳಿಗೆ ಸಂಬಂಧಿಸಿದ ಜಾಗಳಲ್ಲಿ ಇಡಿ ಅಧಿಕಾರಿಗಳು ಶೋಧ ಕಾರ್ಯ ಕೈಗೊಂಡಿದ್ದಾರೆ.

ದುಲ್ಕರ್ ಸಲ್ಮಾನ್ ಅವರ ತಂದೆ ಮಲಯಾಳಂ ಸಿನಿಮಾ ರಂಗದ ಹಿರಿಯ ನಟ ಮಮ್ಮುಟ್ಟಿ ಅವರ ಕೊಚ್ಚಿಯ ಪನಂಪಿಲ್ಲಿ ನಗರದಲ್ಲಿರುವ ಮನೆಯಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಇದು ಹಳೆಯ ಮನೆಯಾಗಿದ್ದು, ಪ್ರಸ್ತುತ ಮಮ್ಮುಟ್ಟಿ ಅಲ್ಲಿ ವಾಸ ಇಲ್ಲ ಎಂದು ವರದಿಯಾಗಿದೆ.

ಇನ್ನುಳಿದಂತೆ ಚೆನ್ನೈಯ ಗ್ರೀನ್‌ವೇಸ್ ರೋಡ್‌ನಲ್ಲಿರುವ ಮಮ್ಮುಟ್ಟಿ ಮತ್ತು ದುಲ್ಕರ್ ಸಲ್ಮಾನ್ ಅವರಿಗೆ ಸೇರಿದ ‘ವೇಫೇರ್ ಫಿಲ್ಮ್ಸ್’ ಸಂಸ್ಥೆ ಮೇಲೂ ಇಡಿ ದಾಳಿ ಮಾಡಿದೆ.

ದುಲ್ಕರ್ ಸಲ್ಮಾನ್ ಅವರ ಕೊಚ್ಚಿ ಮತ್ತು ಚೆನ್ನೈನಲ್ಲಿರುವ ಮನೆಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಶೋಧ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ಸೆಪ್ಟೆಂಬರ್ 23ರಂದು ಕೊಚ್ಚಿಯ ಕಸ್ಟಮ್ಸ್ (ಪ್ರಿವೆಂಟಿವ್) ಕಮಿಷನರೇಟ್, ನಟರ ಮನೆಗಳು ಸೇರಿದಂತೆ 30ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿತ್ತು. ಈ ದಾಳಿಗಳಲ್ಲಿ, ಕಳೆದ ಕೆಲವು ವರ್ಷಗಳಿಂದ ಭೂತಾನ್‌ನಿಂದ ಕಳ್ಳಸಾಗಣೆ ಮಾಡಲಾಗಿದೆ ಎಂದು ಶಂಕಿಸಲಾದ 37 ಐಷಾರಾಮಿ ಸೆಕೆಂಡ್ ಹ್ಯಾಂಡ್ ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇಂಡೋ-ಭೂತಾನ್/ನೇಪಾಳ ಮಾರ್ಗಗಳ ಮೂಲಕ ಲ್ಯಾಂಡ್ ಕ್ರೂಸರ್, ಡಿಫೆಂಡರ್ ಮತ್ತು ಮಸೆರಾಟಿಯಂತಹ ಐಷಾರಾಮಿ ಕಾರುಗಳ ಅಕ್ರಮ ಆಮದು ಮತ್ತು ನೋಂದಣಿಯಲ್ಲಿ ತೊಡಗಿರುವ ಜಾಲ ನೀಡಿದ ಮಾಹಿತಿಯ ಆಧಾರದ ಮೇಲೆ ಶೋಧ ನಡೆಸಲಾಗಿದೆ ಎಂದು ಇಡಿ ಬುಧವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತೀಯ ಸೇನೆ, ಅಮೆರಿಕ ರಾಯಭಾರ ಕಚೇರಿ ಮತ್ತು ವಿದೇಶಾಂಗ ಸಚಿವಾಲಯದ ನಕಲಿ ದಾಖಲೆಗಳನ್ನು ಬಳಸಿಕೊಂಡು ಕೊಯಮತ್ತೂರು ಮೂಲದ ಜಾಲವೊಂದು ವಂಚನೆ ನಡೆಸುತ್ತಿದೆ. ಅರುಣಾಚಲ ಪ್ರದೇಶ, ಹಿಮಾಚಲ ಪ್ರದೇಶ ಮತ್ತು ಇತರ ರಾಜ್ಯಗಳ ಆರ್‌ಟಿಒ (ಪ್ರಾದೇಶಿಕ ಸಾರಿಗೆ ಕಚೇರಿ) ನೋಂದಣಿಗಳಲ್ಲಿ ವಂಚನೆ ಎಸಗುತ್ತಿದೆ. ನಂತರ ಈ ವಾಹನಗಳನ್ನು ಸಿನಿಮಾ ನಟರು ಸೇರಿದಂತೆ ಸೆಲೆಬ್ರೆಟಿಗಳಿಗೆ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಪ್ರಕಟಣೆ ಹೇಳಿದೆ.

ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆ (ಎಫ್‌ಇಎಂಎ), 1999 ರ ಕಲಂ 3, 4, ಮತ್ತು 8 ರ ಉಲ್ಲಂಘನೆಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆ ಇಡಿ ಕ್ರಮ ಕೈಗೊಂಡಿದೆ. ಅನಧಿಕೃತ ವಿದೇಶಿ ವಿನಿಮಯ ವ್ಯವಹಾರಗಳು ಮತ್ತು ಹವಾಲಾ ಮಾರ್ಗಗಳ ಮೂಲಕ ಗಡಿಯಾಚೆಗಿನ ಪಾವತಿಗಳು ಉಲ್ಲಂಘನೆಯಲ್ಲಿ ಒಳಗೊಂಡಿವೆ. ಹಣದ ಮಾರ್ಗ, ಫಲಾನುಭವಿಗಳ ಜಾಲ ಮತ್ತು ವಿದೇಶಿ ವಿನಿಮಯ ಚಲನೆಯನ್ನು ಕಂಡುಹಿಡಿಯಲು ಮುಂದಿನ ತನಿಖೆ ನಡೆಯುತ್ತಿದೆ.

ಕಸ್ಟಮ್ಸ್ ವಿಭಾಗವು ‘ನುಮ್‌ಖೋರ್’ ಎಂಬ ಕಾರ್ಯಾಚರಣೆಯನ್ನು ಕೇರಳದಾದ್ಯಂತ ಆರಂಭಿಸಿದೆ. ‘ನುಮ್‌ಖೋರ್’ ಎಂಬ ಪದವು ಭೂತಾನಿನ ಭಾಷೆಯಲ್ಲಿ ‘ವಾಹನ’ ಎಂಬ ಅರ್ಥವನ್ನು ಹೊಂದಿದೆ. ಈ ಕಾರ್ಯಾಚರಣೆಯ ಉದ್ದೇಶವು ಕಾನೂನುಬಾಹಿರವಾಗಿ ತರಲಾದ ವಾಹನಗಳನ್ನು ಗುರುತಿಸಿ, ಜಪ್ತಿ ಮಾಡುವುದಾಗಿದೆ.

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಡೇಟಾಬೇಸ್‌ನಲ್ಲಿ 150 ರಿಂದ 200 ವಾಹನಗಳ ದಾಖಲೆಗಳಲ್ಲಿ ತಪ್ಪು ಮಾಹಿತಿ, ನಕಲಿ ದಾಖಲೆಗಳು ಮತ್ತು ಸುಂಕದಿಂದ ತಪ್ಪಿಸಿಕೊಂಡಿರುವುದನ್ನು ಗುರುತಿಸಿವೆ. ಈ ವಾಹನಗಳು ಕಾನೂನುಬಾಹಿರವಾಗಿ ದೇಶಕ್ಕೆ ತರಲಾದವು ಎಂಬ ಶಂಕೆಯಿದೆ.

ದುಲ್ಕರ್ ಸಲ್ಮಾನ್ ಮತ್ತು ಅಮಿತ್ ಚಕ್ಕಲಕ್ಕಲ್ ಅವರಿಗೆ ಸೇರಿದ ಹಲವು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಧಿಕಾರಿಗಳು ಕೊಚ್ಚಿಯಲ್ಲಿರುವ ಪೃಥ್ವಿರಾಜ್ ಅವರ ಮನೆ ಮೇಲೆ ದಾಳಿ ಮಾಡಿದ್ದರೂ, ಅವರ ಯಾವುದೇ ವಾಹನಗಳನ್ನು ವಶಪಡಿಸಿಕೊಂಡಿಲ್ಲ ಎಂದು ದಿ ಹಿಂದೂ ವರದಿ ಮಾಡಿದೆ.

ದುಲ್ಕರ್ ಸಲ್ಮಾನ್ ತಮ್ಮ ವಾಹನಗಳನ್ನು ಬಿಡುಗಡೆ ಮಾಡುವಂತೆ ಕೇರಳ ಹೈಕೋರ್ಟ್ ಮೊರೆ ಹೋಗಿದ್ದಾರೆ. ಮಂಗಳವಾರ, ನ್ಯಾಯಾಲಯವು ಅವರ ಐಷಾರಾಮಿ ಎಸ್‌ಯುವಿಗಳಲ್ಲಿ ಒಂದನ್ನು ಬಿಡುಗಡೆ ಮಾಡಲು ಕಸ್ಟಮ್ಸ್ ಕಾಯ್ದೆಯಡಿಯಲ್ಲಿ ನ್ಯಾಯನಿರ್ಣಯ ಪ್ರಾಧಿಕಾರವನ್ನು ಸಂಪರ್ಕಿಸಲು ನಿರ್ದೇಶಿಸಿದೆ.

ದಲಿತ ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಆತ್ಮಹತ್ಯೆ ಪ್ರಕರಣ; ಸಾವಿಗೆ ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...