Homeಮುಖಪುಟಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಸೇರಿ ಮಲಯಾಳಂ ನಟರ ಮನೆಗಳ ಮೇಲೆ ಇಡಿ ದಾಳಿ

ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಸೇರಿ ಮಲಯಾಳಂ ನಟರ ಮನೆಗಳ ಮೇಲೆ ಇಡಿ ದಾಳಿ

- Advertisement -
- Advertisement -

ಐಷಾರಾಮಿ ವಾಹನಗಳ ಕಳ್ಳಸಾಗಣೆ ಮತ್ತು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಎಫ್ಇಎಂಎ) ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಕೇರಳ ಮತ್ತು ತಮಿಳುನಾಡಿನ 17 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬುಧವಾರ (ಅ.8) ದಾಳಿ ನಡೆಸಿದ್ದಾರೆ.

ಮಲಯಾಳಂ ಸಿನಿಮಾ ನಟರಾದ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಸುಕುಮಾರನ್ ಮತ್ತು ಅಮಿತ್ ಚಕ್ಕಲಕ್ಕಲ್ ಅವರ ಮನೆ ಮತ್ತು ಇತರ ಸಂಸ್ಥೆಗಳು ಹಾಗೂ ಎರ್ನಾಕುಲಂ, ತ್ರಿಶೂರ್, ಕೋಝಿಕ್ಕೋಡ್, ಮಲಪ್ಪುರಂ, ಕೊಟ್ಟಾಯಂ, ಕೊಯಮತ್ತೂರಿನಲ್ಲಿರುವ ಕೆಲವು ವಾಹನ ಮಾಲೀಕರು, ಆಟೋಮೊಬೈಲ್ ಕಾರ್ಯಾಗಾರಗಳು ಮತ್ತು ವ್ಯಾಪಾರಿಗಳಿಗೆ ಸಂಬಂಧಿಸಿದ ಜಾಗಳಲ್ಲಿ ಇಡಿ ಅಧಿಕಾರಿಗಳು ಶೋಧ ಕಾರ್ಯ ಕೈಗೊಂಡಿದ್ದಾರೆ.

ದುಲ್ಕರ್ ಸಲ್ಮಾನ್ ಅವರ ತಂದೆ ಮಲಯಾಳಂ ಸಿನಿಮಾ ರಂಗದ ಹಿರಿಯ ನಟ ಮಮ್ಮುಟ್ಟಿ ಅವರ ಕೊಚ್ಚಿಯ ಪನಂಪಿಲ್ಲಿ ನಗರದಲ್ಲಿರುವ ಮನೆಯಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಇದು ಹಳೆಯ ಮನೆಯಾಗಿದ್ದು, ಪ್ರಸ್ತುತ ಮಮ್ಮುಟ್ಟಿ ಅಲ್ಲಿ ವಾಸ ಇಲ್ಲ ಎಂದು ವರದಿಯಾಗಿದೆ.

ಇನ್ನುಳಿದಂತೆ ಚೆನ್ನೈಯ ಗ್ರೀನ್‌ವೇಸ್ ರೋಡ್‌ನಲ್ಲಿರುವ ಮಮ್ಮುಟ್ಟಿ ಮತ್ತು ದುಲ್ಕರ್ ಸಲ್ಮಾನ್ ಅವರಿಗೆ ಸೇರಿದ ‘ವೇಫೇರ್ ಫಿಲ್ಮ್ಸ್’ ಸಂಸ್ಥೆ ಮೇಲೂ ಇಡಿ ದಾಳಿ ಮಾಡಿದೆ.

ದುಲ್ಕರ್ ಸಲ್ಮಾನ್ ಅವರ ಕೊಚ್ಚಿ ಮತ್ತು ಚೆನ್ನೈನಲ್ಲಿರುವ ಮನೆಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಶೋಧ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ಸೆಪ್ಟೆಂಬರ್ 23ರಂದು ಕೊಚ್ಚಿಯ ಕಸ್ಟಮ್ಸ್ (ಪ್ರಿವೆಂಟಿವ್) ಕಮಿಷನರೇಟ್, ನಟರ ಮನೆಗಳು ಸೇರಿದಂತೆ 30ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿತ್ತು. ಈ ದಾಳಿಗಳಲ್ಲಿ, ಕಳೆದ ಕೆಲವು ವರ್ಷಗಳಿಂದ ಭೂತಾನ್‌ನಿಂದ ಕಳ್ಳಸಾಗಣೆ ಮಾಡಲಾಗಿದೆ ಎಂದು ಶಂಕಿಸಲಾದ 37 ಐಷಾರಾಮಿ ಸೆಕೆಂಡ್ ಹ್ಯಾಂಡ್ ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇಂಡೋ-ಭೂತಾನ್/ನೇಪಾಳ ಮಾರ್ಗಗಳ ಮೂಲಕ ಲ್ಯಾಂಡ್ ಕ್ರೂಸರ್, ಡಿಫೆಂಡರ್ ಮತ್ತು ಮಸೆರಾಟಿಯಂತಹ ಐಷಾರಾಮಿ ಕಾರುಗಳ ಅಕ್ರಮ ಆಮದು ಮತ್ತು ನೋಂದಣಿಯಲ್ಲಿ ತೊಡಗಿರುವ ಜಾಲ ನೀಡಿದ ಮಾಹಿತಿಯ ಆಧಾರದ ಮೇಲೆ ಶೋಧ ನಡೆಸಲಾಗಿದೆ ಎಂದು ಇಡಿ ಬುಧವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತೀಯ ಸೇನೆ, ಅಮೆರಿಕ ರಾಯಭಾರ ಕಚೇರಿ ಮತ್ತು ವಿದೇಶಾಂಗ ಸಚಿವಾಲಯದ ನಕಲಿ ದಾಖಲೆಗಳನ್ನು ಬಳಸಿಕೊಂಡು ಕೊಯಮತ್ತೂರು ಮೂಲದ ಜಾಲವೊಂದು ವಂಚನೆ ನಡೆಸುತ್ತಿದೆ. ಅರುಣಾಚಲ ಪ್ರದೇಶ, ಹಿಮಾಚಲ ಪ್ರದೇಶ ಮತ್ತು ಇತರ ರಾಜ್ಯಗಳ ಆರ್‌ಟಿಒ (ಪ್ರಾದೇಶಿಕ ಸಾರಿಗೆ ಕಚೇರಿ) ನೋಂದಣಿಗಳಲ್ಲಿ ವಂಚನೆ ಎಸಗುತ್ತಿದೆ. ನಂತರ ಈ ವಾಹನಗಳನ್ನು ಸಿನಿಮಾ ನಟರು ಸೇರಿದಂತೆ ಸೆಲೆಬ್ರೆಟಿಗಳಿಗೆ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಪ್ರಕಟಣೆ ಹೇಳಿದೆ.

ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆ (ಎಫ್‌ಇಎಂಎ), 1999 ರ ಕಲಂ 3, 4, ಮತ್ತು 8 ರ ಉಲ್ಲಂಘನೆಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆ ಇಡಿ ಕ್ರಮ ಕೈಗೊಂಡಿದೆ. ಅನಧಿಕೃತ ವಿದೇಶಿ ವಿನಿಮಯ ವ್ಯವಹಾರಗಳು ಮತ್ತು ಹವಾಲಾ ಮಾರ್ಗಗಳ ಮೂಲಕ ಗಡಿಯಾಚೆಗಿನ ಪಾವತಿಗಳು ಉಲ್ಲಂಘನೆಯಲ್ಲಿ ಒಳಗೊಂಡಿವೆ. ಹಣದ ಮಾರ್ಗ, ಫಲಾನುಭವಿಗಳ ಜಾಲ ಮತ್ತು ವಿದೇಶಿ ವಿನಿಮಯ ಚಲನೆಯನ್ನು ಕಂಡುಹಿಡಿಯಲು ಮುಂದಿನ ತನಿಖೆ ನಡೆಯುತ್ತಿದೆ.

ಕಸ್ಟಮ್ಸ್ ವಿಭಾಗವು ‘ನುಮ್‌ಖೋರ್’ ಎಂಬ ಕಾರ್ಯಾಚರಣೆಯನ್ನು ಕೇರಳದಾದ್ಯಂತ ಆರಂಭಿಸಿದೆ. ‘ನುಮ್‌ಖೋರ್’ ಎಂಬ ಪದವು ಭೂತಾನಿನ ಭಾಷೆಯಲ್ಲಿ ‘ವಾಹನ’ ಎಂಬ ಅರ್ಥವನ್ನು ಹೊಂದಿದೆ. ಈ ಕಾರ್ಯಾಚರಣೆಯ ಉದ್ದೇಶವು ಕಾನೂನುಬಾಹಿರವಾಗಿ ತರಲಾದ ವಾಹನಗಳನ್ನು ಗುರುತಿಸಿ, ಜಪ್ತಿ ಮಾಡುವುದಾಗಿದೆ.

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಡೇಟಾಬೇಸ್‌ನಲ್ಲಿ 150 ರಿಂದ 200 ವಾಹನಗಳ ದಾಖಲೆಗಳಲ್ಲಿ ತಪ್ಪು ಮಾಹಿತಿ, ನಕಲಿ ದಾಖಲೆಗಳು ಮತ್ತು ಸುಂಕದಿಂದ ತಪ್ಪಿಸಿಕೊಂಡಿರುವುದನ್ನು ಗುರುತಿಸಿವೆ. ಈ ವಾಹನಗಳು ಕಾನೂನುಬಾಹಿರವಾಗಿ ದೇಶಕ್ಕೆ ತರಲಾದವು ಎಂಬ ಶಂಕೆಯಿದೆ.

ದುಲ್ಕರ್ ಸಲ್ಮಾನ್ ಮತ್ತು ಅಮಿತ್ ಚಕ್ಕಲಕ್ಕಲ್ ಅವರಿಗೆ ಸೇರಿದ ಹಲವು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಧಿಕಾರಿಗಳು ಕೊಚ್ಚಿಯಲ್ಲಿರುವ ಪೃಥ್ವಿರಾಜ್ ಅವರ ಮನೆ ಮೇಲೆ ದಾಳಿ ಮಾಡಿದ್ದರೂ, ಅವರ ಯಾವುದೇ ವಾಹನಗಳನ್ನು ವಶಪಡಿಸಿಕೊಂಡಿಲ್ಲ ಎಂದು ದಿ ಹಿಂದೂ ವರದಿ ಮಾಡಿದೆ.

ದುಲ್ಕರ್ ಸಲ್ಮಾನ್ ತಮ್ಮ ವಾಹನಗಳನ್ನು ಬಿಡುಗಡೆ ಮಾಡುವಂತೆ ಕೇರಳ ಹೈಕೋರ್ಟ್ ಮೊರೆ ಹೋಗಿದ್ದಾರೆ. ಮಂಗಳವಾರ, ನ್ಯಾಯಾಲಯವು ಅವರ ಐಷಾರಾಮಿ ಎಸ್‌ಯುವಿಗಳಲ್ಲಿ ಒಂದನ್ನು ಬಿಡುಗಡೆ ಮಾಡಲು ಕಸ್ಟಮ್ಸ್ ಕಾಯ್ದೆಯಡಿಯಲ್ಲಿ ನ್ಯಾಯನಿರ್ಣಯ ಪ್ರಾಧಿಕಾರವನ್ನು ಸಂಪರ್ಕಿಸಲು ನಿರ್ದೇಶಿಸಿದೆ.

ದಲಿತ ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಆತ್ಮಹತ್ಯೆ ಪ್ರಕರಣ; ಸಾವಿಗೆ ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...