Homeಮುಖಪುಟಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಸೇರಿ ಮಲಯಾಳಂ ನಟರ ಮನೆಗಳ ಮೇಲೆ ಇಡಿ ದಾಳಿ

ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಸೇರಿ ಮಲಯಾಳಂ ನಟರ ಮನೆಗಳ ಮೇಲೆ ಇಡಿ ದಾಳಿ

- Advertisement -
- Advertisement -

ಐಷಾರಾಮಿ ವಾಹನಗಳ ಕಳ್ಳಸಾಗಣೆ ಮತ್ತು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಎಫ್ಇಎಂಎ) ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಕೇರಳ ಮತ್ತು ತಮಿಳುನಾಡಿನ 17 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬುಧವಾರ (ಅ.8) ದಾಳಿ ನಡೆಸಿದ್ದಾರೆ.

ಮಲಯಾಳಂ ಸಿನಿಮಾ ನಟರಾದ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಸುಕುಮಾರನ್ ಮತ್ತು ಅಮಿತ್ ಚಕ್ಕಲಕ್ಕಲ್ ಅವರ ಮನೆ ಮತ್ತು ಇತರ ಸಂಸ್ಥೆಗಳು ಹಾಗೂ ಎರ್ನಾಕುಲಂ, ತ್ರಿಶೂರ್, ಕೋಝಿಕ್ಕೋಡ್, ಮಲಪ್ಪುರಂ, ಕೊಟ್ಟಾಯಂ, ಕೊಯಮತ್ತೂರಿನಲ್ಲಿರುವ ಕೆಲವು ವಾಹನ ಮಾಲೀಕರು, ಆಟೋಮೊಬೈಲ್ ಕಾರ್ಯಾಗಾರಗಳು ಮತ್ತು ವ್ಯಾಪಾರಿಗಳಿಗೆ ಸಂಬಂಧಿಸಿದ ಜಾಗಳಲ್ಲಿ ಇಡಿ ಅಧಿಕಾರಿಗಳು ಶೋಧ ಕಾರ್ಯ ಕೈಗೊಂಡಿದ್ದಾರೆ.

ದುಲ್ಕರ್ ಸಲ್ಮಾನ್ ಅವರ ತಂದೆ ಮಲಯಾಳಂ ಸಿನಿಮಾ ರಂಗದ ಹಿರಿಯ ನಟ ಮಮ್ಮುಟ್ಟಿ ಅವರ ಕೊಚ್ಚಿಯ ಪನಂಪಿಲ್ಲಿ ನಗರದಲ್ಲಿರುವ ಮನೆಯಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಇದು ಹಳೆಯ ಮನೆಯಾಗಿದ್ದು, ಪ್ರಸ್ತುತ ಮಮ್ಮುಟ್ಟಿ ಅಲ್ಲಿ ವಾಸ ಇಲ್ಲ ಎಂದು ವರದಿಯಾಗಿದೆ.

ಇನ್ನುಳಿದಂತೆ ಚೆನ್ನೈಯ ಗ್ರೀನ್‌ವೇಸ್ ರೋಡ್‌ನಲ್ಲಿರುವ ಮಮ್ಮುಟ್ಟಿ ಮತ್ತು ದುಲ್ಕರ್ ಸಲ್ಮಾನ್ ಅವರಿಗೆ ಸೇರಿದ ‘ವೇಫೇರ್ ಫಿಲ್ಮ್ಸ್’ ಸಂಸ್ಥೆ ಮೇಲೂ ಇಡಿ ದಾಳಿ ಮಾಡಿದೆ.

ದುಲ್ಕರ್ ಸಲ್ಮಾನ್ ಅವರ ಕೊಚ್ಚಿ ಮತ್ತು ಚೆನ್ನೈನಲ್ಲಿರುವ ಮನೆಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಶೋಧ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ಸೆಪ್ಟೆಂಬರ್ 23ರಂದು ಕೊಚ್ಚಿಯ ಕಸ್ಟಮ್ಸ್ (ಪ್ರಿವೆಂಟಿವ್) ಕಮಿಷನರೇಟ್, ನಟರ ಮನೆಗಳು ಸೇರಿದಂತೆ 30ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿತ್ತು. ಈ ದಾಳಿಗಳಲ್ಲಿ, ಕಳೆದ ಕೆಲವು ವರ್ಷಗಳಿಂದ ಭೂತಾನ್‌ನಿಂದ ಕಳ್ಳಸಾಗಣೆ ಮಾಡಲಾಗಿದೆ ಎಂದು ಶಂಕಿಸಲಾದ 37 ಐಷಾರಾಮಿ ಸೆಕೆಂಡ್ ಹ್ಯಾಂಡ್ ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇಂಡೋ-ಭೂತಾನ್/ನೇಪಾಳ ಮಾರ್ಗಗಳ ಮೂಲಕ ಲ್ಯಾಂಡ್ ಕ್ರೂಸರ್, ಡಿಫೆಂಡರ್ ಮತ್ತು ಮಸೆರಾಟಿಯಂತಹ ಐಷಾರಾಮಿ ಕಾರುಗಳ ಅಕ್ರಮ ಆಮದು ಮತ್ತು ನೋಂದಣಿಯಲ್ಲಿ ತೊಡಗಿರುವ ಜಾಲ ನೀಡಿದ ಮಾಹಿತಿಯ ಆಧಾರದ ಮೇಲೆ ಶೋಧ ನಡೆಸಲಾಗಿದೆ ಎಂದು ಇಡಿ ಬುಧವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತೀಯ ಸೇನೆ, ಅಮೆರಿಕ ರಾಯಭಾರ ಕಚೇರಿ ಮತ್ತು ವಿದೇಶಾಂಗ ಸಚಿವಾಲಯದ ನಕಲಿ ದಾಖಲೆಗಳನ್ನು ಬಳಸಿಕೊಂಡು ಕೊಯಮತ್ತೂರು ಮೂಲದ ಜಾಲವೊಂದು ವಂಚನೆ ನಡೆಸುತ್ತಿದೆ. ಅರುಣಾಚಲ ಪ್ರದೇಶ, ಹಿಮಾಚಲ ಪ್ರದೇಶ ಮತ್ತು ಇತರ ರಾಜ್ಯಗಳ ಆರ್‌ಟಿಒ (ಪ್ರಾದೇಶಿಕ ಸಾರಿಗೆ ಕಚೇರಿ) ನೋಂದಣಿಗಳಲ್ಲಿ ವಂಚನೆ ಎಸಗುತ್ತಿದೆ. ನಂತರ ಈ ವಾಹನಗಳನ್ನು ಸಿನಿಮಾ ನಟರು ಸೇರಿದಂತೆ ಸೆಲೆಬ್ರೆಟಿಗಳಿಗೆ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಪ್ರಕಟಣೆ ಹೇಳಿದೆ.

ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆ (ಎಫ್‌ಇಎಂಎ), 1999 ರ ಕಲಂ 3, 4, ಮತ್ತು 8 ರ ಉಲ್ಲಂಘನೆಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆ ಇಡಿ ಕ್ರಮ ಕೈಗೊಂಡಿದೆ. ಅನಧಿಕೃತ ವಿದೇಶಿ ವಿನಿಮಯ ವ್ಯವಹಾರಗಳು ಮತ್ತು ಹವಾಲಾ ಮಾರ್ಗಗಳ ಮೂಲಕ ಗಡಿಯಾಚೆಗಿನ ಪಾವತಿಗಳು ಉಲ್ಲಂಘನೆಯಲ್ಲಿ ಒಳಗೊಂಡಿವೆ. ಹಣದ ಮಾರ್ಗ, ಫಲಾನುಭವಿಗಳ ಜಾಲ ಮತ್ತು ವಿದೇಶಿ ವಿನಿಮಯ ಚಲನೆಯನ್ನು ಕಂಡುಹಿಡಿಯಲು ಮುಂದಿನ ತನಿಖೆ ನಡೆಯುತ್ತಿದೆ.

ಕಸ್ಟಮ್ಸ್ ವಿಭಾಗವು ‘ನುಮ್‌ಖೋರ್’ ಎಂಬ ಕಾರ್ಯಾಚರಣೆಯನ್ನು ಕೇರಳದಾದ್ಯಂತ ಆರಂಭಿಸಿದೆ. ‘ನುಮ್‌ಖೋರ್’ ಎಂಬ ಪದವು ಭೂತಾನಿನ ಭಾಷೆಯಲ್ಲಿ ‘ವಾಹನ’ ಎಂಬ ಅರ್ಥವನ್ನು ಹೊಂದಿದೆ. ಈ ಕಾರ್ಯಾಚರಣೆಯ ಉದ್ದೇಶವು ಕಾನೂನುಬಾಹಿರವಾಗಿ ತರಲಾದ ವಾಹನಗಳನ್ನು ಗುರುತಿಸಿ, ಜಪ್ತಿ ಮಾಡುವುದಾಗಿದೆ.

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಡೇಟಾಬೇಸ್‌ನಲ್ಲಿ 150 ರಿಂದ 200 ವಾಹನಗಳ ದಾಖಲೆಗಳಲ್ಲಿ ತಪ್ಪು ಮಾಹಿತಿ, ನಕಲಿ ದಾಖಲೆಗಳು ಮತ್ತು ಸುಂಕದಿಂದ ತಪ್ಪಿಸಿಕೊಂಡಿರುವುದನ್ನು ಗುರುತಿಸಿವೆ. ಈ ವಾಹನಗಳು ಕಾನೂನುಬಾಹಿರವಾಗಿ ದೇಶಕ್ಕೆ ತರಲಾದವು ಎಂಬ ಶಂಕೆಯಿದೆ.

ದುಲ್ಕರ್ ಸಲ್ಮಾನ್ ಮತ್ತು ಅಮಿತ್ ಚಕ್ಕಲಕ್ಕಲ್ ಅವರಿಗೆ ಸೇರಿದ ಹಲವು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಧಿಕಾರಿಗಳು ಕೊಚ್ಚಿಯಲ್ಲಿರುವ ಪೃಥ್ವಿರಾಜ್ ಅವರ ಮನೆ ಮೇಲೆ ದಾಳಿ ಮಾಡಿದ್ದರೂ, ಅವರ ಯಾವುದೇ ವಾಹನಗಳನ್ನು ವಶಪಡಿಸಿಕೊಂಡಿಲ್ಲ ಎಂದು ದಿ ಹಿಂದೂ ವರದಿ ಮಾಡಿದೆ.

ದುಲ್ಕರ್ ಸಲ್ಮಾನ್ ತಮ್ಮ ವಾಹನಗಳನ್ನು ಬಿಡುಗಡೆ ಮಾಡುವಂತೆ ಕೇರಳ ಹೈಕೋರ್ಟ್ ಮೊರೆ ಹೋಗಿದ್ದಾರೆ. ಮಂಗಳವಾರ, ನ್ಯಾಯಾಲಯವು ಅವರ ಐಷಾರಾಮಿ ಎಸ್‌ಯುವಿಗಳಲ್ಲಿ ಒಂದನ್ನು ಬಿಡುಗಡೆ ಮಾಡಲು ಕಸ್ಟಮ್ಸ್ ಕಾಯ್ದೆಯಡಿಯಲ್ಲಿ ನ್ಯಾಯನಿರ್ಣಯ ಪ್ರಾಧಿಕಾರವನ್ನು ಸಂಪರ್ಕಿಸಲು ನಿರ್ದೇಶಿಸಿದೆ.

ದಲಿತ ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಆತ್ಮಹತ್ಯೆ ಪ್ರಕರಣ; ಸಾವಿಗೆ ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ’: ಪ್ರಿಯಾಂಕ್ ಖರ್ಗೆ

ಬೆಂಗಳೂರು: ‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ’ ಎಂದು ಆರ್.ಎಸ್.ಎಸ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ಗುಡುಗಿದ್ದಾರೆ.  ರಾಜ್ಯದ ಗಮನ‌ ಸೆಳೆದಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ...

“ಮಾಸ್ಕ್ ಧರಿಸಿದರೂ ಪ್ರಯೋಜನವಿಲ್ಲ”: ದೆಹಲಿ ವಾಯುಮಾಲಿನ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

ದೆಹಲಿಯ ವಾಯುಮಾಲಿನ್ಯ 'ಗಂಭೀರ ಮಟ್ಟ' ತಲುಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಮಾಸ್ಕ್‌ ಧರಿಸಿದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ವಕೀಲರು ವರ್ಚುವಲ್ ಮೂಲಕ ನ್ಯಾಯಾಲಯಕ್ಕೆ ಹಾಜರಾದರೆ ಸಾಕು ಎಂದು ಹೇಳಿದೆ. ವಿವಿಧ ಪ್ರಕರಣಗಳಲ್ಲಿ...

ಛತ್ತೀಸ್‌ಗಢ| ಇಬ್ಬರು ಉನ್ನತ ಕಮಾಂಡರ್‌ಗಳು ಸೇರಿದಂತೆ ಆರು ಜನ ಮಾವೋವಾದಿಗಳ ಎನ್‌ಕೌಂಟರ್‌

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನವೆಂಬರ್ 11 ರಂದು ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಆರು ಮಾವೋವಾದಿಗಳಲ್ಲಿ ಮಾವೋವಾದಿ ನಾಯಕಿ, ಹಿರಿಯ ಕಾರ್ಯಕರ್ತ ಪಾಪಾ ರಾವ್ ಅವರ ಪತ್ನಿ ಊರ್ಮಿಳಾ ಮತ್ತು ಬುಚಣ್ಣ...

ಗ್ರೆನೇಡ್ ದಾಳಿಗೆ ಸಂಚು ರೂಪಿಸಿದ್ದ, ಪಾಕ್ ಐಎಸ್ಐ ಬೆಂಬಲಿತ ಗುಂಪು: ವಿದೇಶಿ ಮೂಲದ 10 ಹ್ಯಾಂಡ್ಲರ್‌ಗಳ ಬಂಧನ

ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಮಹತ್ವದ ಪ್ರಗತಿ ಸಾಧಿಸಿರುವ ಲುಧಿಯಾನ ಕಮಿಷನರೇಟ್ ಪೊಲೀಸರು, ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಬೆಂಬಲಿತ ಗ್ರೆನೇಡ್ ದಾಳಿ ಘಟಕದ 10 ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಅವರಿಂದ ಸ್ಪೋಟಕಗಳನ್ನು ವಶಕ್ಕೆ ಪಡೆದಿದ್ದಾರೆ.  ನವೆಂಬರ್...

ಗಾಜಾದಲ್ಲಿ ಮುಂದುವರೆದ ಪ್ಯಾಲೆಸ್ತೀನಿಯನ್ ಮಕ್ಕಳ ಕಾಣೆ ಪ್ರಕರಣ: ಮಕ್ಕಳ ಹಕ್ಕುಗಳ ಗುಂಪು

ಬುಧವಾರ ಪ್ಯಾಲೆಸ್ತೀನಿಯನ್ ಹಕ್ಕುಗಳ ಗುಂಪಿನ ವರದಿಯ ಪ್ರಕಾರ, ಇತ್ತೀಚಿನ ತಿಂಗಳುಗಳಲ್ಲಿ ಗಾಜಾದಿಂದ ಕನಿಷ್ಠ ಆರು ಮಕ್ಕಳು ಕಣ್ಮರೆಯಾಗಿದ್ದಾರೆ ಎಂದು 'ಮಕ್ತೂಬ್‌ ಮೀಡಿಯಾ' ವರದಿ ಮಾಡಿದೆ. ಕಾಣೆಯಾದ ಮಕ್ಕಳ ಕುಟುಂಬಗಳು ಈ ಪ್ರದೇಶದಲ್ಲಿನ ತನ್ನ ಮಿಲಿಟರಿ...

ರೂ. 15 ಲಕ್ಷ ಲಂಚ ಪಡೆದ ಪ್ರಕರಣ : ನ್ಯಾಯಾಧೀಶನ ಮೇಲೆ ಕೇಸ್, ಕೋರ್ಟ್ ಗುಮಾಸ್ತ ಅರೆಸ್ಟ್

ವಾಣಿಜ್ಯ ಮೊಕದ್ದಮೆಯೊಂದರಲ್ಲಿ ಅನುಕೂಲಕರ ಆದೇಶವನ್ನು ಪಡೆಯಲು 15 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಮುಂಬೈ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಜಗಾಂವ್ ಸಿವಿಲ್ ಮತ್ತು ಸೆಷನ್ಸ್...

ಅಲಿಘರ್| ಶಾಲೆಯಲ್ಲಿ ‘ವಂದೇ ಮಾತರಂ’ ಹಾಡುವುದಕ್ಕೆ ಆಕ್ಷೇಪಿಸಿದ ಶಿಕ್ಷಕನ ಅಮಾನತು

ಉತ್ತರ ಪ್ರದೇಶದ ಶಾಹಪುರ್ ಕುತುಬ್‌ನ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ 'ವಂದೇ ಮಾತರಂ' ಹಾಡುವುದನ್ನು ಆಕ್ಷೇಪಿಸಿದ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ರಾಷ್ಟ್ರಗೀತೆಯ ನಂತರ ವಂದೇಮಾತರಂ...

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್ಎಸ್ ಪಥಸಂಚಲನಕ್ಕೆ ಕರ್ನಾಟಕ ಹೈಕೋರ್ಟ್ ನ ಕಲಬುರಗಿ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ಇದರಿಂದ ತೀವ್ರ ಪ್ರತಿಷ್ಠೆಯ ವಿಷಯವಾಗಿದ್ದ ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ದಿನಾಂಕ ನಿಗದಿಯಾಗಿದೆ. ನವೆಂಬರ್ 16ರ‌ ಭಾನುವಾರ...

ಯಡಿಯೂರಪ್ಪ ವಿರುದ್ದದ ಪೋಕ್ಸೋ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ನ್ಯಾಯಮೂರ್ತಿ ಎಂ.ಐ ಅರುಣ್ ಅವರು, ವಿಚಾರಣಾ ನ್ಯಾಯಾಲಯ ಸಂಜ್ಞೇ (cognisance)ಪರಿಗಣಿಸಿ ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿ...

ಗುಜರಾತ್| ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ; ರೂ.18 ಲಕ್ಷ ದಂಡ

ಗುಜರಾತ್‌ನ ಅಮ್ರೇಲಿಯಲ್ಲಿರುವ ಸೆಷನ್ಸ್ ನ್ಯಾಯಾಲಯವು, ಗುಜರಾತ್ ಪ್ರಾಣಿ ಸಂರಕ್ಷಣಾ ಕಾಯ್ದೆಯಡಿ ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಗೋ ಕುಟುಂಬಕ್ಕೆ ಸೇರಿದ ಪ್ರಾಣಿಗಳ ಹತ್ಯೆಯನ್ನು ಕಾನೂನು...