Homeಮುಖಪುಟಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಸೇರಿ ಮಲಯಾಳಂ ನಟರ ಮನೆಗಳ ಮೇಲೆ ಇಡಿ ದಾಳಿ

ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಸೇರಿ ಮಲಯಾಳಂ ನಟರ ಮನೆಗಳ ಮೇಲೆ ಇಡಿ ದಾಳಿ

- Advertisement -
- Advertisement -

ಐಷಾರಾಮಿ ವಾಹನಗಳ ಕಳ್ಳಸಾಗಣೆ ಮತ್ತು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಎಫ್ಇಎಂಎ) ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಕೇರಳ ಮತ್ತು ತಮಿಳುನಾಡಿನ 17 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬುಧವಾರ (ಅ.8) ದಾಳಿ ನಡೆಸಿದ್ದಾರೆ.

ಮಲಯಾಳಂ ಸಿನಿಮಾ ನಟರಾದ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಸುಕುಮಾರನ್ ಮತ್ತು ಅಮಿತ್ ಚಕ್ಕಲಕ್ಕಲ್ ಅವರ ಮನೆ ಮತ್ತು ಇತರ ಸಂಸ್ಥೆಗಳು ಹಾಗೂ ಎರ್ನಾಕುಲಂ, ತ್ರಿಶೂರ್, ಕೋಝಿಕ್ಕೋಡ್, ಮಲಪ್ಪುರಂ, ಕೊಟ್ಟಾಯಂ, ಕೊಯಮತ್ತೂರಿನಲ್ಲಿರುವ ಕೆಲವು ವಾಹನ ಮಾಲೀಕರು, ಆಟೋಮೊಬೈಲ್ ಕಾರ್ಯಾಗಾರಗಳು ಮತ್ತು ವ್ಯಾಪಾರಿಗಳಿಗೆ ಸಂಬಂಧಿಸಿದ ಜಾಗಳಲ್ಲಿ ಇಡಿ ಅಧಿಕಾರಿಗಳು ಶೋಧ ಕಾರ್ಯ ಕೈಗೊಂಡಿದ್ದಾರೆ.

ದುಲ್ಕರ್ ಸಲ್ಮಾನ್ ಅವರ ತಂದೆ ಮಲಯಾಳಂ ಸಿನಿಮಾ ರಂಗದ ಹಿರಿಯ ನಟ ಮಮ್ಮುಟ್ಟಿ ಅವರ ಕೊಚ್ಚಿಯ ಪನಂಪಿಲ್ಲಿ ನಗರದಲ್ಲಿರುವ ಮನೆಯಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಇದು ಹಳೆಯ ಮನೆಯಾಗಿದ್ದು, ಪ್ರಸ್ತುತ ಮಮ್ಮುಟ್ಟಿ ಅಲ್ಲಿ ವಾಸ ಇಲ್ಲ ಎಂದು ವರದಿಯಾಗಿದೆ.

ಇನ್ನುಳಿದಂತೆ ಚೆನ್ನೈಯ ಗ್ರೀನ್‌ವೇಸ್ ರೋಡ್‌ನಲ್ಲಿರುವ ಮಮ್ಮುಟ್ಟಿ ಮತ್ತು ದುಲ್ಕರ್ ಸಲ್ಮಾನ್ ಅವರಿಗೆ ಸೇರಿದ ‘ವೇಫೇರ್ ಫಿಲ್ಮ್ಸ್’ ಸಂಸ್ಥೆ ಮೇಲೂ ಇಡಿ ದಾಳಿ ಮಾಡಿದೆ.

ದುಲ್ಕರ್ ಸಲ್ಮಾನ್ ಅವರ ಕೊಚ್ಚಿ ಮತ್ತು ಚೆನ್ನೈನಲ್ಲಿರುವ ಮನೆಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಶೋಧ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ಸೆಪ್ಟೆಂಬರ್ 23ರಂದು ಕೊಚ್ಚಿಯ ಕಸ್ಟಮ್ಸ್ (ಪ್ರಿವೆಂಟಿವ್) ಕಮಿಷನರೇಟ್, ನಟರ ಮನೆಗಳು ಸೇರಿದಂತೆ 30ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿತ್ತು. ಈ ದಾಳಿಗಳಲ್ಲಿ, ಕಳೆದ ಕೆಲವು ವರ್ಷಗಳಿಂದ ಭೂತಾನ್‌ನಿಂದ ಕಳ್ಳಸಾಗಣೆ ಮಾಡಲಾಗಿದೆ ಎಂದು ಶಂಕಿಸಲಾದ 37 ಐಷಾರಾಮಿ ಸೆಕೆಂಡ್ ಹ್ಯಾಂಡ್ ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇಂಡೋ-ಭೂತಾನ್/ನೇಪಾಳ ಮಾರ್ಗಗಳ ಮೂಲಕ ಲ್ಯಾಂಡ್ ಕ್ರೂಸರ್, ಡಿಫೆಂಡರ್ ಮತ್ತು ಮಸೆರಾಟಿಯಂತಹ ಐಷಾರಾಮಿ ಕಾರುಗಳ ಅಕ್ರಮ ಆಮದು ಮತ್ತು ನೋಂದಣಿಯಲ್ಲಿ ತೊಡಗಿರುವ ಜಾಲ ನೀಡಿದ ಮಾಹಿತಿಯ ಆಧಾರದ ಮೇಲೆ ಶೋಧ ನಡೆಸಲಾಗಿದೆ ಎಂದು ಇಡಿ ಬುಧವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತೀಯ ಸೇನೆ, ಅಮೆರಿಕ ರಾಯಭಾರ ಕಚೇರಿ ಮತ್ತು ವಿದೇಶಾಂಗ ಸಚಿವಾಲಯದ ನಕಲಿ ದಾಖಲೆಗಳನ್ನು ಬಳಸಿಕೊಂಡು ಕೊಯಮತ್ತೂರು ಮೂಲದ ಜಾಲವೊಂದು ವಂಚನೆ ನಡೆಸುತ್ತಿದೆ. ಅರುಣಾಚಲ ಪ್ರದೇಶ, ಹಿಮಾಚಲ ಪ್ರದೇಶ ಮತ್ತು ಇತರ ರಾಜ್ಯಗಳ ಆರ್‌ಟಿಒ (ಪ್ರಾದೇಶಿಕ ಸಾರಿಗೆ ಕಚೇರಿ) ನೋಂದಣಿಗಳಲ್ಲಿ ವಂಚನೆ ಎಸಗುತ್ತಿದೆ. ನಂತರ ಈ ವಾಹನಗಳನ್ನು ಸಿನಿಮಾ ನಟರು ಸೇರಿದಂತೆ ಸೆಲೆಬ್ರೆಟಿಗಳಿಗೆ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಪ್ರಕಟಣೆ ಹೇಳಿದೆ.

ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆ (ಎಫ್‌ಇಎಂಎ), 1999 ರ ಕಲಂ 3, 4, ಮತ್ತು 8 ರ ಉಲ್ಲಂಘನೆಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆ ಇಡಿ ಕ್ರಮ ಕೈಗೊಂಡಿದೆ. ಅನಧಿಕೃತ ವಿದೇಶಿ ವಿನಿಮಯ ವ್ಯವಹಾರಗಳು ಮತ್ತು ಹವಾಲಾ ಮಾರ್ಗಗಳ ಮೂಲಕ ಗಡಿಯಾಚೆಗಿನ ಪಾವತಿಗಳು ಉಲ್ಲಂಘನೆಯಲ್ಲಿ ಒಳಗೊಂಡಿವೆ. ಹಣದ ಮಾರ್ಗ, ಫಲಾನುಭವಿಗಳ ಜಾಲ ಮತ್ತು ವಿದೇಶಿ ವಿನಿಮಯ ಚಲನೆಯನ್ನು ಕಂಡುಹಿಡಿಯಲು ಮುಂದಿನ ತನಿಖೆ ನಡೆಯುತ್ತಿದೆ.

ಕಸ್ಟಮ್ಸ್ ವಿಭಾಗವು ‘ನುಮ್‌ಖೋರ್’ ಎಂಬ ಕಾರ್ಯಾಚರಣೆಯನ್ನು ಕೇರಳದಾದ್ಯಂತ ಆರಂಭಿಸಿದೆ. ‘ನುಮ್‌ಖೋರ್’ ಎಂಬ ಪದವು ಭೂತಾನಿನ ಭಾಷೆಯಲ್ಲಿ ‘ವಾಹನ’ ಎಂಬ ಅರ್ಥವನ್ನು ಹೊಂದಿದೆ. ಈ ಕಾರ್ಯಾಚರಣೆಯ ಉದ್ದೇಶವು ಕಾನೂನುಬಾಹಿರವಾಗಿ ತರಲಾದ ವಾಹನಗಳನ್ನು ಗುರುತಿಸಿ, ಜಪ್ತಿ ಮಾಡುವುದಾಗಿದೆ.

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಡೇಟಾಬೇಸ್‌ನಲ್ಲಿ 150 ರಿಂದ 200 ವಾಹನಗಳ ದಾಖಲೆಗಳಲ್ಲಿ ತಪ್ಪು ಮಾಹಿತಿ, ನಕಲಿ ದಾಖಲೆಗಳು ಮತ್ತು ಸುಂಕದಿಂದ ತಪ್ಪಿಸಿಕೊಂಡಿರುವುದನ್ನು ಗುರುತಿಸಿವೆ. ಈ ವಾಹನಗಳು ಕಾನೂನುಬಾಹಿರವಾಗಿ ದೇಶಕ್ಕೆ ತರಲಾದವು ಎಂಬ ಶಂಕೆಯಿದೆ.

ದುಲ್ಕರ್ ಸಲ್ಮಾನ್ ಮತ್ತು ಅಮಿತ್ ಚಕ್ಕಲಕ್ಕಲ್ ಅವರಿಗೆ ಸೇರಿದ ಹಲವು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಧಿಕಾರಿಗಳು ಕೊಚ್ಚಿಯಲ್ಲಿರುವ ಪೃಥ್ವಿರಾಜ್ ಅವರ ಮನೆ ಮೇಲೆ ದಾಳಿ ಮಾಡಿದ್ದರೂ, ಅವರ ಯಾವುದೇ ವಾಹನಗಳನ್ನು ವಶಪಡಿಸಿಕೊಂಡಿಲ್ಲ ಎಂದು ದಿ ಹಿಂದೂ ವರದಿ ಮಾಡಿದೆ.

ದುಲ್ಕರ್ ಸಲ್ಮಾನ್ ತಮ್ಮ ವಾಹನಗಳನ್ನು ಬಿಡುಗಡೆ ಮಾಡುವಂತೆ ಕೇರಳ ಹೈಕೋರ್ಟ್ ಮೊರೆ ಹೋಗಿದ್ದಾರೆ. ಮಂಗಳವಾರ, ನ್ಯಾಯಾಲಯವು ಅವರ ಐಷಾರಾಮಿ ಎಸ್‌ಯುವಿಗಳಲ್ಲಿ ಒಂದನ್ನು ಬಿಡುಗಡೆ ಮಾಡಲು ಕಸ್ಟಮ್ಸ್ ಕಾಯ್ದೆಯಡಿಯಲ್ಲಿ ನ್ಯಾಯನಿರ್ಣಯ ಪ್ರಾಧಿಕಾರವನ್ನು ಸಂಪರ್ಕಿಸಲು ನಿರ್ದೇಶಿಸಿದೆ.

ದಲಿತ ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಆತ್ಮಹತ್ಯೆ ಪ್ರಕರಣ; ಸಾವಿಗೆ ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...