ದೆಹಲಿಯ ಎಎಪಿ ಶಾಸಕ, ವಕ್ಫ್ಬೋರ್ಡ್ ಅಧ್ಯಕ್ಷ ಅಮಾನತುಲ್ಲಾ ಖಾನ್ ಮತ್ತು ಇತರ ಕೆಲವರಿಗೆ ಸಂಬಂಧಿಸಿದ ಸ್ಥಳದಲ್ಲಿ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
49ರ ಹರೆಯದ ಶಾಸಕ ಅಮಾನತುಲ್ಲಾ ಖಾನ್ ಅವರು ದೆಹಲಿಯ ಓಖ್ಲಾ ಕ್ಷೇತ್ರದ ಶಾಸಕರಾಗಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ಡೆಯಡಿ ಈ ದಾಳಿ ನಡೆಸಿ ಶೋಧಗಳನ್ನು ನಡೆಸಲಾಗುತ್ತಿದೆ ಎಂದು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಹೇಳಿದ್ದಾರೆ.
ದೆಹಲಿ ವಕ್ಫ್ ಬೋರ್ಡ್ನಲ್ಲಿನ ಅಕ್ರಮ ನೇಮಕಾತಿಗಳಿಗೆ ಸಂಬಂಧಿಸಿದ ಭ್ರಷ್ಟಾಚಾರಕ್ಕೆ ಸಂಬಂಧಿಸಿ ಶಾಸಕರ ವಿರುದ್ಧ ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳ ಮತ್ತು ಸಿಬಿಐ ದಾಖಲಿಸಿದ ಎಫ್ಐಆರ್ನ ಭಾಗವಾಗಿ ಈ ದಾಳಿ ನಡೆದಿದೆ.
ಎಎಪಿ ಶಾಸಕ ಅಮಾನತುಲ್ಲಾ ಖಾನ್ ದೆಹಲಿಯ ವಕ್ಪ್ ಬೋರ್ಡ್ನ ಅಧ್ಯಕ್ಷರು ಕೂಡ ಆಗಿದ್ದಾರೆ.
ಕಳೆದ ಎರಡು ದಿನಗಳ ಮೊದಲು ಎಎಪಿಯ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮನೆಯ ಮೇಲೆ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಬಳಿಕ ಅವರನ್ನು ಬಂಧಿಸಿದ್ದರು. ಇದರ ಬೆನ್ನಲ್ಲೇ ಮತ್ತೋರ್ವ ಎಎಪಿ ನಾಯಕನ ನಿವಾಸದ ಮೇಲೆ ಇದೀಗ ಇಡಿ ದಾಳಿ ನಡೆದಿದೆ.
#WATCH | Delhi: Enforcement Directorate (ED) raids underway at the premises of Aam Aadmi Party (AAP) MLA Amanatullah Khan in connection with a money laundering case. pic.twitter.com/aFbcIz0xPe
— ANI (@ANI) October 10, 2023
ಇದನ್ನು ಓದಿ: ದೆಹಲಿ; ಎಎಪಿ ಸಂಸದ ಸಂಜಯ್ ಸಿಂಗ್ಗೆ ಬಂಧಿಸಿದ ಇಡಿ ಅಧಿಕಾರಿಗಳು