Homeಮುಖಪುಟಹಣ ಅಕ್ರಮ ವರ್ಗಾವಣೆ ಪ್ರಕರಣ: ರಾಜ್ಯ ವಕ್ಫ್ ಮಂಡಳಿಗೆ 3.82 ಕೋಟಿ ರೂ. ಮರಳಿಸಿದ ಇಡಿ

ಹಣ ಅಕ್ರಮ ವರ್ಗಾವಣೆ ಪ್ರಕರಣ: ರಾಜ್ಯ ವಕ್ಫ್ ಮಂಡಳಿಗೆ 3.82 ಕೋಟಿ ರೂ. ಮರಳಿಸಿದ ಇಡಿ

- Advertisement -
- Advertisement -

ರಾಜ್ಯ ವಕ್ಫ್ ಮಂಡಳಿಗೆ ಸೇರಿದ 4 ಕೋಟಿ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಪ್ತಿ ಮಾಡಿದ್ದ 3.82 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ರಾಜ್ಯ ವಕ್ಫ್ ಮಂಡಳಿಗೆ ವಾಪಸ್ ನೀಡಿದೆ.

ವಕ್ಫ್ ಮಂಡಳಿಯಿಂದ ಸ್ಥಿರ ಠೇವಣಿಗಾಗಿ ಬಿಡುಗಡೆಯಾಗಿದ್ದ ಹಣದಲ್ಲಿ ಮರ್ಸಿಡಿಸ್-ಬೆನ್ಝ್ ಕಾರು ಖರೀದಿಸಲಾಗಿತ್ತು ಮತ್ತು ಉಳಿದ ಹಣವನ್ನು ಕಂಪನಿಯೊಂದಕ್ಕೆ ವರ್ಗಾಯಿಸಲಾಗಿತ್ತು. ಈ ಸಂಬಂಧ ಇಡಿ ತನಿಖೆ ಕೈಗೊಂಡಿತ್ತು.

ಜುಲೈ 8ರಂದು ಇಡಿ ನೀಡಿದ ಮಾಹಿತಿ ಪ್ರಕಾರ, ರಾಜ್ಯ ವಕ್ಫ್ ಮಂಡಳಿಗೆ ಸೇರಿದ 4 ಕೋಟಿ ರೂ. ಹಣವನ್ನು ಬೆಂಗಳೂರಿನ ಬೆನ್ಸನ್‌ಟೌನ್‌ನ ಇಂಡಿಯನ್‌ ಬ್ಯಾಂಕ್‌ ಶಾಖೆಯ ಖಾತೆಗೆ ಜಮಾ ಮಾಡ ಲಾಗಿತ್ತು. ಈ ಹಣವನ್ನು ಮಂಡಳಿ ಗಮನಕ್ಕೆ ತರದೆ 2017ನೇ ಸಾಲಿನಲ್ಲಿ ಚಿಂತಾಮಣಿಯ ವಿಜಯಾ ಬ್ಯಾಂಕ್‌ ಶಾಖೆಯಲ್ಲಿ ಖಾತೆ ತೆರೆದು ವರ್ಗಾಯಿಸಲಾಗಿತ್ತು. ಬಳಿಕ ಹಣವನ್ನು ವಿರ್ಕೀಸ್ ರಿಯಾಲಿಟೀಸ್‌ ಪ್ರೈವೇಟ್‌ ಲಿಮಿಟೆಡ್‌ ಎಂಬ ಕಂಪನಿಯ ಖಾತೆಗೆ ವರ್ಗಾವಣೆ ಮಾಡಲಾಗಿತ್ತು.

ಈ ಸಂಬಂಧ ವಿಜಯಾ ಬ್ಯಾಂಕ್‌ನ ಇಬ್ಬರು ಅಧಿಕಾರಿಗಳು, ವಕ್ಫ್ ಮಂಡಳಿಯ ಪ್ರಥಮ ದರ್ಜೆ ಸಹಾಯಕ ಸೈಯದ್‌ ಸಿರಾಜ್‌ ಅಹಮ್ಮದ್‌ ವಿರುದ್ಧ ಪ್ರಕರಣ ದಾಖಲಾಗಿತ್ತು. ಆರೋಪಿಗಳು 4 ಕೋಟಿ ರೂ. ಹಣದಲ್ಲಿ 1.10 ಕೊಟಿ ರೂ. ಮೌಲ್ಯದ ಮರ್ಸಿಡಿಸ್‌ ಬೆನ್ಝ್ ಕಾರು ಖರೀದಿಸಿದ್ದರು. ಉಳಿದ 2.72 ಕೋಟಿ ರೂ. ಅನ್ನು ಮತ್ತೊಂದು ಖಾತೆಗೆ ವರ್ಗಾಯಿಸಿದ್ದರು.

ಆರೋಪಿಗಳ ವಿರುದ್ದ ತನಿಖೆ ಕೈಗೊಂಡಿದ್ದ ಇಡಿ ಅಧಿಕಾರಿಗಳು ಅವರಿಂದ 3.82 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಜಪ್ತಿ ಮಾಡಿತ್ತು. ವಿರ್ಕೀಸ್‌ ರಿಯಾಲಿಟೀಸ್‌ ಕಂಪನಿ ಹಾಗೂ ಆರು ಜನ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು.

ಇದೀಗ ನ್ಯಾಯಾಲಯದ ಅನುಮತಿ ಮೇರೆಗೆ ತನಿಖೆ ವೇಳೆ ಆರೋಪಿಗಳಿಂದ ಜಪ್ತಿ ಮಾಡಿದ್ದ 3.82 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ರಾಜ್ಯ ವಕ್ಫ್ ಮಂಡಳಿಗೆ ಹಸ್ತಾಂತರಿಸಲಾಗಿದೆ.

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಸಿಇಒ (ಹೆಚ್ಚುವರಿ ಹುದ್ದೆ ) ಜೀಲಾನಿ ಹೆಚ್. ಮೊಕಾಶಿ ಅವರಿಗೆ 3,82,74,444 ರೂ.ಗಳ ಬ್ಯಾಂಕ್ ಚೆಕ್ ಅನ್ನು ಹಸ್ತಾಂತರಿಸಲಾಗಿದೆ ಎಂದು ಇಡಿ ತಿಳಿಸಿದೆ.

ದುರುಪಯೋಗಪಡಿಸಿಕೊಂಡ ಹಣವನ್ನು ಅನ್ಯಾಯಕ್ಕೊಳಗಾದವರಿಗೆ ಹಿಂದಿರುಗಿಸುವ ತನ್ನ ನಿರಂತರ ಕಾರ್ಯಾಚರಣೆಯಲ್ಲಿ ಇದು ಮಹತ್ವದ ಹೆಜ್ಜೆ ಎಂದು ಇಡಿ ಹೇಳಿಕೊಂಡಿದೆ.

ಅಕ್ರಮ ಗಣಿಗಾರಿಕೆ ಪ್ರಕರಣ| ವಶಪಡಿಸಿಕೊಂಡ ಚಿನ್ನ ಬಿಡುಗಡೆಗೆ ಜನಾರ್ದನ ರೆಡ್ಡಿ ಮನವಿ; ತೆಲಂಗಾಣ ಹೈಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...