Homeಮುಖಪುಟಯಂಗ್ ಇಂಡಿಯನ್ ಕಚೇರಿಗೆ ಇಡಿ ಸೀಲ್: ‘ನೀವು ಏನು ಬೇಕಾದರೂ ಮಾಡಿ; ಮೋದಿಗೆ ಹೆದರುವುದಿಲ್ಲ’ ಎಂದ...

ಯಂಗ್ ಇಂಡಿಯನ್ ಕಚೇರಿಗೆ ಇಡಿ ಸೀಲ್: ‘ನೀವು ಏನು ಬೇಕಾದರೂ ಮಾಡಿ; ಮೋದಿಗೆ ಹೆದರುವುದಿಲ್ಲ’ ಎಂದ ರಾಹುಲ್ ಗಾಂಧಿ

ದೇಶವನ್ನು, ಪ್ರಜಾಪ್ರಭುತ್ವವನ್ನು ಮತ್ತು ಸೌಹಾರ್ದತೆಯನ್ನ ಕಾಪಾಡುವುದು ನನ್ನ ಕರ್ತವ್ಯವಾಗಿದ್ದು, ಅದನ್ನು ನಾನು ಮಾಡುತ್ತಲೆ ಇರುತ್ತೇನೆ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ನವದೆಹಲಿಯ ಹೆರಾಲ್ಡ್ ಹೌಸ್ ಕಟ್ಟಡದಲ್ಲಿರುವ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನ ಆವರಣವನ್ನು ಜಾರಿ ನಿರ್ದೇಶನಾಲಯವು ಬುಧವಾರ ಸೀಲ್ ಮಾಡಿದೆ. ಇದರ ನಂತರ ಕಾಂಗ್ರೆಸ್ ಕೇಂದ್ರ ಕಚೇರಿ ಮತ್ತು ಪಕ್ಷದ ಅಧ್ಯಕ್ಷ ಸೋನಿಯಾ ಗಾಂಧಿ ನಿವಾಸಕ್ಕೆ ಹೆಚ್ಚುವರಿ ಪಡೆಯನ್ನು ನಿಯೋಜಿಸಲಾಗಿದೆ. ಬೆಳವಣಿಗೆಯ ಬಗ್ಗೆ ಮಾತನಾಡಿರುವ ರಾಹುಲ್ ಗಾಂಧಿ,“ನೀವು ಏನು ಬೇಕಾದರೂ ಮಾಡಿ, ನಾನು ಪ್ರಧಾನಿ ನರೇಂದ್ರ ಮೋದಿಗೆ ಹೆದರುವುದಿಲ್ಲ; ದೇಶವನ್ನು, ಪ್ರಜಾಪ್ರಭುತ್ವವನ್ನು ಮತ್ತು ಸೌಹಾರ್ದತೆಯನ್ನ ಕಾಪಾಡುವುದು ನನ್ನ ಕರ್ತವ್ಯ. ಅದನ್ನು ನಾನು ಮಾಡುತ್ತಲೆ ಇರುತ್ತೇನೆ” ಎಂದು ಗುರುವಾರ ಹೇಳಿದ್ದಾರೆ.

ದೆಹಲಿಯಲ್ಲಿರುವ ಪಕ್ಷದ ಮುಖ್ಯ ಕಚೇರಿ ಸೇರಿದಂತೆ, ಕಾಂಗ್ರೆಸ್‌ ಸಂಯೋಜಿತ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಹನ್ನೆರಡು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಹುಡುಕಾಟ ನಡೆಸಿದ ಮರುದಿನ ಈ ಬೆಳವಣಿಗೆ ನಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯಾಷನಲ್ ಹೆರಾಲ್ಡ್ ಅನ್ನು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಪ್ರಕಟಿಸಿದ್ದು, ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದೆ. ಮನಿ ಲಾಂಡರಿಂಗ್‌ ಪ್ರಕರಣದಲ್ಲಿ ಪತ್ರಿಕೆಯ ವಿರುದ್ಧ ತನಿಖೆ ನಡೆಯುತ್ತಿದೆ.

“ಕಾಂಗ್ರೆಸ್ ಪ್ರಧಾನ ಕಚೇರಿ ಮತ್ತು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಮನೆಯ ಹೊರಗೆ ಹೆಚ್ಚುವರಿ ಪಡೆಯನ್ನು ನಿಯೋಜಿಸಲಾಗಿದೆ” ಎಂದು ಎಎನ್‌ಐ ವರದಿ ಮಾಡಿದೆ.

ಮಲ್ಲಿಕಾರ್ಜುನ ಖರ್ಗೆ, ಸಲ್ಮಾನ್ ಖುರ್ಷಿದ್, ದಿಗ್ವಿಜಯ ಸಿಂಗ್, ಪಿ ಚಿದಂಬರಂ ಅವರಂತಹ ಹಲವಾರು ಹಿರಿಯ ಕಾಂಗ್ರೆಸ್ ನಾಯಕರು ಬುಧವಾರ ಪಕ್ಷದ ಪ್ರಧಾನ ಕಚೇರಿಯನ್ನು ತಲುಪಿದ್ದಾರೆ. ಪಕ್ಷದ ಸಂಸದ ಜೈರಾಮ್ ರಮೇಶ್ ಅವರು ಕಾಂಗ್ರೆಸ್‌‌ ಕಚೇರಿಗೆ ದಿಗ್ಭಂಧನ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರ ವಿಫಲವಾದಾಗ ಪ್ರತಿಪಕ್ಷಗಳು ’ಇಡಿ’ ಪರೀಕ್ಷೆ ಎದುರಿಸಬೇಕು- ಅಖಿಲೇಶ್ ಯಾದವ್

“ದೆಹಲಿ ಪೊಲೀಸರು ನಮ್ಮ ಕೇಂದ್ರ ಕಚೇರಿ ಮತ್ತು ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷೆ ಮತ್ತು ಮಾಜಿ ಅಧ್ಯಕ್ಷರ ಮನೆಗಳನ್ನು ಸುತ್ತುವರೆದಿದ್ದಾರೆ. ಇದು ಸೇಡಿನ ರಾಜಕಾರಣದ ಅತ್ಯಂತ ಕೆಟ್ಟ ರೂಪ. ನಾವು ಸಲ್ಲಿಸುವುದಿಲ್ಲ! ನಾವು ಮೌನವಾಗುವುದಿಲ್ಲ! ಮೋದಿ ಸರ್ಕಾರದ ಅನ್ಯಾಯ ಮತ್ತು ವೈಫಲ್ಯಗಳ ವಿರುದ್ಧ ನಾವು ಧ್ವನಿ ಎತ್ತುವುದನ್ನು ಮುಂದುವರಿಸುತ್ತೇವೆ!” ಎಂದು ಹೇಳಿದ್ದಾರೆ.

ಈ ಮಧ್ಯೆ, ನ್ಯಾಷನಲ್ ಹೆರಾಲ್ಡ್ ಪತ್ರಿಕೆ ತನ್ನ ಕಚೇರಿಯನ್ನು ಸೀಲ್ ಮಾಡಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ನಿರಾಕರಿಸಿದೆ. ಈ ಹಿಂದೆ ಹೀಗೆ ವರದಿ ಮಾಡಿದ್ದ ಸುದ್ದಿ ಸಂಸ್ಥೆ ಎಎನ್‌ಐ, “ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನ ಆವರಣವನ್ನು ಮಾತ್ರ ಸೀಲ್ ಮಾಡಲಾಗಿದೆ” ಎಂದು ನಂತರ ಸ್ಪಷ್ಟೀಕರಣ ನೀಡಿತು.

“ನ್ಯಾಷನಲ್ ಹೆರಾಲ್ಡ್ ಕಚೇರಿಯನ್ನು ಸೀಲ್ ಮಾಡಲಾಗಿದೆ ಎಂದು ಕೆಲವು ಮಾಧ್ಯಮಗಳು ಸುಳ್ಳು ವರದಿಗಳನ್ನು ಮಾಡಿವೆ. ನಾವು ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದೇವೆ” ಎಂದು ಪತ್ರಿಕೆ ಟ್ವೀಟ್‌ನಲ್ಲಿ ತಿಳಿಸಿದೆ.

ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಹೆಚ್ಚುವರಿ ಸಾಕ್ಷ್ಯಗಳನ್ನು ಸಂಗ್ರಹಿಸಲು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ದಾಳಿ ನಡೆಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಮಂಗಳವಾರ ತಿಳಿಸಿತ್ತು.

ಇದನ್ನೂ ಓದಿ: ಪ್ರತಿಭಟನೆ ವೇಳೆ ಪೊಲೀಸರಿಂದ ಕಾಂಗ್ರೆಸ್ ನಾಯಕರ ಮೇಲೆ ಅಮಾನವೀಯ ಹಲ್ಲೆ-ಆರೋಪ

ಪ್ರಕರಣಕ್ಕೆ ಸಂಬಂಧಿಸಿದ “ಹಲವು ಜನರನ್ನು” ಪ್ರಶ್ನಿಸಿದ ನಂತರ ಜಾರಿ ನಿರ್ದೇಶನಾಲಯವು ಹೊಸದಾಗಿ ಪುರಾವೆಗಳನ್ನು ಪಡೆದು ಹುಡುಕಾಟ ನಡೆಸುತ್ತಿದೆ ಎಂದು ಕೆಲವು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.

ಈ ಎಲ್ಲಾ ಬೆಳವಣಿಗೆಯ ಬಗ್ಗೆ ಮಾತನಾಡಿರುವ ರಾಹುಲ್ ಗಾಂಧಿ,“ಸತ್ಯಕ್ಕೆ ಅಡ್ಡಗಾಲು ಹಾಕಲು ಸಾಧ್ಯವಿಲ್ಲ. ನೀವು ಏನು ಬೇಕಾದರೂ ಮಾಡಿ, ನಾನು ಪ್ರಧಾನಿ ನರೇಂದ್ರ ಮೋದಿಗೆ ಹೆದರುವುದಿಲ್ಲ. ನಾನು ಯಾವಾಗಲೂ ದೇಶದ ಹಿತದೃಷ್ಟಿಯಿಂದ ಕೆಲಸ ಮಾಡುತ್ತೇನೆ. ಕೇಳಿಸಿಕೊಳ್ಳಿ ಮತ್ತು ಅರ್ಥಮಾಡಿಕೊಳ್ಳಿ!”

ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈನಲ್ಲಿ ಕೇಂದ್ರ ತನಿಖಾ ಸಂಸ್ಥೆ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಮೂರು ದಿನಗಳ ಕಾಲ ವಿಚಾರಣೆ ನಡೆಸಿತ್ತು. ಜೊತೆಗೆ ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಅವರನ್ನು ಜೂನ್‌ನಲ್ಲಿ ಐದು ದಿನಗಳ ಕಾಲ ಜಾರಿ ನಿರ್ದೇಶನಾಲಯವು 50 ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು.

ಇದನ್ನೂ ಓದಿ: ‘ಮೋದಿ ಪೊಲೀಸ್‌ ರಾಜ್ಯದ ದೊರೆ’: ಪ್ರತಿಭಟನೆ ವೇಳೆ ರಾಹುಲ್ ಗಾಂಧಿ; ವಶಕ್ಕೆ ಪಡೆದ ಪೊಲೀಸರು

ಗಾಂಧಿ ಕುಟುಂಬದ ವಿರುದ್ಧ ಕೇಸು

ನ್ಯಾಷನಲ್ ಹೆರಾಲ್ಡ್‌ ಅನ್ನು ಜವಾಹರಲಾಲ್ ನೆಹರು ಅವರು ಭಾರತದ ಮೊದಲ ಪ್ರಧಾನಿಯಾಗುವ ಮೊದಲು ಸ್ಥಾಪಿಸಿದ್ದರು ಮತ್ತು ಅದರ ಸಂಪಾದಕರಾಗಿದ್ದರು. ಏಪ್ರಿಲ್ 2008 ರಲ್ಲಿ, ಪತ್ರಿಕೆಯು 90 ಕೋಟಿ ರೂಪಾಯಿಗಿಂತ ಹೆಚ್ಚಿನ ಸಾಲವನ್ನು ಹೊಂದಿದ್ದರಿಂದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿತ್ತು.

ಆದರೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ, “ಕಾಂಗ್ರೆಸ್‌ನ ಹಣವನ್ನು ಬಳಸಿಕೊಂಡು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ನ್ಯಾಯಾಲಯದ ದಾಖಲೆಗಳ ಪ್ರಕಾರ, ಪಕ್ಷವು ಬಡ್ಡಿರಹಿತ ಆಧಾರದ ಮೇಲೆ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ಗೆ ಸಾಲವನ್ನು ನೀಡಿದೆ. ಯಾವುದೆ ಹಣ ವಿನಿಮಯವಿಲ್ಲದೆ ಸಂಬಳದಂತಹ ಬಾಕಿಗಳನ್ನು ಪಾವತಿಸಲು ಸಾಲವನ್ನು ಈಕ್ವಿಟಿಯಾಗಿ ಪರಿವರ್ತಿಸಲಾಗಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...