Homeಮುಖಪುಟಯಂಗ್ ಇಂಡಿಯನ್ ಕಚೇರಿಗೆ ಇಡಿ ಸೀಲ್: ‘ನೀವು ಏನು ಬೇಕಾದರೂ ಮಾಡಿ; ಮೋದಿಗೆ ಹೆದರುವುದಿಲ್ಲ’ ಎಂದ...

ಯಂಗ್ ಇಂಡಿಯನ್ ಕಚೇರಿಗೆ ಇಡಿ ಸೀಲ್: ‘ನೀವು ಏನು ಬೇಕಾದರೂ ಮಾಡಿ; ಮೋದಿಗೆ ಹೆದರುವುದಿಲ್ಲ’ ಎಂದ ರಾಹುಲ್ ಗಾಂಧಿ

ದೇಶವನ್ನು, ಪ್ರಜಾಪ್ರಭುತ್ವವನ್ನು ಮತ್ತು ಸೌಹಾರ್ದತೆಯನ್ನ ಕಾಪಾಡುವುದು ನನ್ನ ಕರ್ತವ್ಯವಾಗಿದ್ದು, ಅದನ್ನು ನಾನು ಮಾಡುತ್ತಲೆ ಇರುತ್ತೇನೆ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ನವದೆಹಲಿಯ ಹೆರಾಲ್ಡ್ ಹೌಸ್ ಕಟ್ಟಡದಲ್ಲಿರುವ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನ ಆವರಣವನ್ನು ಜಾರಿ ನಿರ್ದೇಶನಾಲಯವು ಬುಧವಾರ ಸೀಲ್ ಮಾಡಿದೆ. ಇದರ ನಂತರ ಕಾಂಗ್ರೆಸ್ ಕೇಂದ್ರ ಕಚೇರಿ ಮತ್ತು ಪಕ್ಷದ ಅಧ್ಯಕ್ಷ ಸೋನಿಯಾ ಗಾಂಧಿ ನಿವಾಸಕ್ಕೆ ಹೆಚ್ಚುವರಿ ಪಡೆಯನ್ನು ನಿಯೋಜಿಸಲಾಗಿದೆ. ಬೆಳವಣಿಗೆಯ ಬಗ್ಗೆ ಮಾತನಾಡಿರುವ ರಾಹುಲ್ ಗಾಂಧಿ,“ನೀವು ಏನು ಬೇಕಾದರೂ ಮಾಡಿ, ನಾನು ಪ್ರಧಾನಿ ನರೇಂದ್ರ ಮೋದಿಗೆ ಹೆದರುವುದಿಲ್ಲ; ದೇಶವನ್ನು, ಪ್ರಜಾಪ್ರಭುತ್ವವನ್ನು ಮತ್ತು ಸೌಹಾರ್ದತೆಯನ್ನ ಕಾಪಾಡುವುದು ನನ್ನ ಕರ್ತವ್ಯ. ಅದನ್ನು ನಾನು ಮಾಡುತ್ತಲೆ ಇರುತ್ತೇನೆ” ಎಂದು ಗುರುವಾರ ಹೇಳಿದ್ದಾರೆ.

ದೆಹಲಿಯಲ್ಲಿರುವ ಪಕ್ಷದ ಮುಖ್ಯ ಕಚೇರಿ ಸೇರಿದಂತೆ, ಕಾಂಗ್ರೆಸ್‌ ಸಂಯೋಜಿತ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಹನ್ನೆರಡು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಹುಡುಕಾಟ ನಡೆಸಿದ ಮರುದಿನ ಈ ಬೆಳವಣಿಗೆ ನಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯಾಷನಲ್ ಹೆರಾಲ್ಡ್ ಅನ್ನು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಪ್ರಕಟಿಸಿದ್ದು, ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದೆ. ಮನಿ ಲಾಂಡರಿಂಗ್‌ ಪ್ರಕರಣದಲ್ಲಿ ಪತ್ರಿಕೆಯ ವಿರುದ್ಧ ತನಿಖೆ ನಡೆಯುತ್ತಿದೆ.

“ಕಾಂಗ್ರೆಸ್ ಪ್ರಧಾನ ಕಚೇರಿ ಮತ್ತು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಮನೆಯ ಹೊರಗೆ ಹೆಚ್ಚುವರಿ ಪಡೆಯನ್ನು ನಿಯೋಜಿಸಲಾಗಿದೆ” ಎಂದು ಎಎನ್‌ಐ ವರದಿ ಮಾಡಿದೆ.

ಮಲ್ಲಿಕಾರ್ಜುನ ಖರ್ಗೆ, ಸಲ್ಮಾನ್ ಖುರ್ಷಿದ್, ದಿಗ್ವಿಜಯ ಸಿಂಗ್, ಪಿ ಚಿದಂಬರಂ ಅವರಂತಹ ಹಲವಾರು ಹಿರಿಯ ಕಾಂಗ್ರೆಸ್ ನಾಯಕರು ಬುಧವಾರ ಪಕ್ಷದ ಪ್ರಧಾನ ಕಚೇರಿಯನ್ನು ತಲುಪಿದ್ದಾರೆ. ಪಕ್ಷದ ಸಂಸದ ಜೈರಾಮ್ ರಮೇಶ್ ಅವರು ಕಾಂಗ್ರೆಸ್‌‌ ಕಚೇರಿಗೆ ದಿಗ್ಭಂಧನ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರ ವಿಫಲವಾದಾಗ ಪ್ರತಿಪಕ್ಷಗಳು ’ಇಡಿ’ ಪರೀಕ್ಷೆ ಎದುರಿಸಬೇಕು- ಅಖಿಲೇಶ್ ಯಾದವ್

“ದೆಹಲಿ ಪೊಲೀಸರು ನಮ್ಮ ಕೇಂದ್ರ ಕಚೇರಿ ಮತ್ತು ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷೆ ಮತ್ತು ಮಾಜಿ ಅಧ್ಯಕ್ಷರ ಮನೆಗಳನ್ನು ಸುತ್ತುವರೆದಿದ್ದಾರೆ. ಇದು ಸೇಡಿನ ರಾಜಕಾರಣದ ಅತ್ಯಂತ ಕೆಟ್ಟ ರೂಪ. ನಾವು ಸಲ್ಲಿಸುವುದಿಲ್ಲ! ನಾವು ಮೌನವಾಗುವುದಿಲ್ಲ! ಮೋದಿ ಸರ್ಕಾರದ ಅನ್ಯಾಯ ಮತ್ತು ವೈಫಲ್ಯಗಳ ವಿರುದ್ಧ ನಾವು ಧ್ವನಿ ಎತ್ತುವುದನ್ನು ಮುಂದುವರಿಸುತ್ತೇವೆ!” ಎಂದು ಹೇಳಿದ್ದಾರೆ.

ಈ ಮಧ್ಯೆ, ನ್ಯಾಷನಲ್ ಹೆರಾಲ್ಡ್ ಪತ್ರಿಕೆ ತನ್ನ ಕಚೇರಿಯನ್ನು ಸೀಲ್ ಮಾಡಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ನಿರಾಕರಿಸಿದೆ. ಈ ಹಿಂದೆ ಹೀಗೆ ವರದಿ ಮಾಡಿದ್ದ ಸುದ್ದಿ ಸಂಸ್ಥೆ ಎಎನ್‌ಐ, “ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನ ಆವರಣವನ್ನು ಮಾತ್ರ ಸೀಲ್ ಮಾಡಲಾಗಿದೆ” ಎಂದು ನಂತರ ಸ್ಪಷ್ಟೀಕರಣ ನೀಡಿತು.

“ನ್ಯಾಷನಲ್ ಹೆರಾಲ್ಡ್ ಕಚೇರಿಯನ್ನು ಸೀಲ್ ಮಾಡಲಾಗಿದೆ ಎಂದು ಕೆಲವು ಮಾಧ್ಯಮಗಳು ಸುಳ್ಳು ವರದಿಗಳನ್ನು ಮಾಡಿವೆ. ನಾವು ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದೇವೆ” ಎಂದು ಪತ್ರಿಕೆ ಟ್ವೀಟ್‌ನಲ್ಲಿ ತಿಳಿಸಿದೆ.

ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಹೆಚ್ಚುವರಿ ಸಾಕ್ಷ್ಯಗಳನ್ನು ಸಂಗ್ರಹಿಸಲು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ದಾಳಿ ನಡೆಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಮಂಗಳವಾರ ತಿಳಿಸಿತ್ತು.

ಇದನ್ನೂ ಓದಿ: ಪ್ರತಿಭಟನೆ ವೇಳೆ ಪೊಲೀಸರಿಂದ ಕಾಂಗ್ರೆಸ್ ನಾಯಕರ ಮೇಲೆ ಅಮಾನವೀಯ ಹಲ್ಲೆ-ಆರೋಪ

ಪ್ರಕರಣಕ್ಕೆ ಸಂಬಂಧಿಸಿದ “ಹಲವು ಜನರನ್ನು” ಪ್ರಶ್ನಿಸಿದ ನಂತರ ಜಾರಿ ನಿರ್ದೇಶನಾಲಯವು ಹೊಸದಾಗಿ ಪುರಾವೆಗಳನ್ನು ಪಡೆದು ಹುಡುಕಾಟ ನಡೆಸುತ್ತಿದೆ ಎಂದು ಕೆಲವು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.

ಈ ಎಲ್ಲಾ ಬೆಳವಣಿಗೆಯ ಬಗ್ಗೆ ಮಾತನಾಡಿರುವ ರಾಹುಲ್ ಗಾಂಧಿ,“ಸತ್ಯಕ್ಕೆ ಅಡ್ಡಗಾಲು ಹಾಕಲು ಸಾಧ್ಯವಿಲ್ಲ. ನೀವು ಏನು ಬೇಕಾದರೂ ಮಾಡಿ, ನಾನು ಪ್ರಧಾನಿ ನರೇಂದ್ರ ಮೋದಿಗೆ ಹೆದರುವುದಿಲ್ಲ. ನಾನು ಯಾವಾಗಲೂ ದೇಶದ ಹಿತದೃಷ್ಟಿಯಿಂದ ಕೆಲಸ ಮಾಡುತ್ತೇನೆ. ಕೇಳಿಸಿಕೊಳ್ಳಿ ಮತ್ತು ಅರ್ಥಮಾಡಿಕೊಳ್ಳಿ!”

ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈನಲ್ಲಿ ಕೇಂದ್ರ ತನಿಖಾ ಸಂಸ್ಥೆ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಮೂರು ದಿನಗಳ ಕಾಲ ವಿಚಾರಣೆ ನಡೆಸಿತ್ತು. ಜೊತೆಗೆ ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಅವರನ್ನು ಜೂನ್‌ನಲ್ಲಿ ಐದು ದಿನಗಳ ಕಾಲ ಜಾರಿ ನಿರ್ದೇಶನಾಲಯವು 50 ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು.

ಇದನ್ನೂ ಓದಿ: ‘ಮೋದಿ ಪೊಲೀಸ್‌ ರಾಜ್ಯದ ದೊರೆ’: ಪ್ರತಿಭಟನೆ ವೇಳೆ ರಾಹುಲ್ ಗಾಂಧಿ; ವಶಕ್ಕೆ ಪಡೆದ ಪೊಲೀಸರು

ಗಾಂಧಿ ಕುಟುಂಬದ ವಿರುದ್ಧ ಕೇಸು

ನ್ಯಾಷನಲ್ ಹೆರಾಲ್ಡ್‌ ಅನ್ನು ಜವಾಹರಲಾಲ್ ನೆಹರು ಅವರು ಭಾರತದ ಮೊದಲ ಪ್ರಧಾನಿಯಾಗುವ ಮೊದಲು ಸ್ಥಾಪಿಸಿದ್ದರು ಮತ್ತು ಅದರ ಸಂಪಾದಕರಾಗಿದ್ದರು. ಏಪ್ರಿಲ್ 2008 ರಲ್ಲಿ, ಪತ್ರಿಕೆಯು 90 ಕೋಟಿ ರೂಪಾಯಿಗಿಂತ ಹೆಚ್ಚಿನ ಸಾಲವನ್ನು ಹೊಂದಿದ್ದರಿಂದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿತ್ತು.

ಆದರೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ, “ಕಾಂಗ್ರೆಸ್‌ನ ಹಣವನ್ನು ಬಳಸಿಕೊಂಡು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ನ್ಯಾಯಾಲಯದ ದಾಖಲೆಗಳ ಪ್ರಕಾರ, ಪಕ್ಷವು ಬಡ್ಡಿರಹಿತ ಆಧಾರದ ಮೇಲೆ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ಗೆ ಸಾಲವನ್ನು ನೀಡಿದೆ. ಯಾವುದೆ ಹಣ ವಿನಿಮಯವಿಲ್ಲದೆ ಸಂಬಳದಂತಹ ಬಾಕಿಗಳನ್ನು ಪಾವತಿಸಲು ಸಾಲವನ್ನು ಈಕ್ವಿಟಿಯಾಗಿ ಪರಿವರ್ತಿಸಲಾಗಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...