Homeಮುಖಪುಟಯಂಗ್ ಇಂಡಿಯನ್ ಕಚೇರಿಗೆ ಇಡಿ ಸೀಲ್: ‘ನೀವು ಏನು ಬೇಕಾದರೂ ಮಾಡಿ; ಮೋದಿಗೆ ಹೆದರುವುದಿಲ್ಲ’ ಎಂದ...

ಯಂಗ್ ಇಂಡಿಯನ್ ಕಚೇರಿಗೆ ಇಡಿ ಸೀಲ್: ‘ನೀವು ಏನು ಬೇಕಾದರೂ ಮಾಡಿ; ಮೋದಿಗೆ ಹೆದರುವುದಿಲ್ಲ’ ಎಂದ ರಾಹುಲ್ ಗಾಂಧಿ

ದೇಶವನ್ನು, ಪ್ರಜಾಪ್ರಭುತ್ವವನ್ನು ಮತ್ತು ಸೌಹಾರ್ದತೆಯನ್ನ ಕಾಪಾಡುವುದು ನನ್ನ ಕರ್ತವ್ಯವಾಗಿದ್ದು, ಅದನ್ನು ನಾನು ಮಾಡುತ್ತಲೆ ಇರುತ್ತೇನೆ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ನವದೆಹಲಿಯ ಹೆರಾಲ್ಡ್ ಹೌಸ್ ಕಟ್ಟಡದಲ್ಲಿರುವ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನ ಆವರಣವನ್ನು ಜಾರಿ ನಿರ್ದೇಶನಾಲಯವು ಬುಧವಾರ ಸೀಲ್ ಮಾಡಿದೆ. ಇದರ ನಂತರ ಕಾಂಗ್ರೆಸ್ ಕೇಂದ್ರ ಕಚೇರಿ ಮತ್ತು ಪಕ್ಷದ ಅಧ್ಯಕ್ಷ ಸೋನಿಯಾ ಗಾಂಧಿ ನಿವಾಸಕ್ಕೆ ಹೆಚ್ಚುವರಿ ಪಡೆಯನ್ನು ನಿಯೋಜಿಸಲಾಗಿದೆ. ಬೆಳವಣಿಗೆಯ ಬಗ್ಗೆ ಮಾತನಾಡಿರುವ ರಾಹುಲ್ ಗಾಂಧಿ,“ನೀವು ಏನು ಬೇಕಾದರೂ ಮಾಡಿ, ನಾನು ಪ್ರಧಾನಿ ನರೇಂದ್ರ ಮೋದಿಗೆ ಹೆದರುವುದಿಲ್ಲ; ದೇಶವನ್ನು, ಪ್ರಜಾಪ್ರಭುತ್ವವನ್ನು ಮತ್ತು ಸೌಹಾರ್ದತೆಯನ್ನ ಕಾಪಾಡುವುದು ನನ್ನ ಕರ್ತವ್ಯ. ಅದನ್ನು ನಾನು ಮಾಡುತ್ತಲೆ ಇರುತ್ತೇನೆ” ಎಂದು ಗುರುವಾರ ಹೇಳಿದ್ದಾರೆ.

ದೆಹಲಿಯಲ್ಲಿರುವ ಪಕ್ಷದ ಮುಖ್ಯ ಕಚೇರಿ ಸೇರಿದಂತೆ, ಕಾಂಗ್ರೆಸ್‌ ಸಂಯೋಜಿತ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಹನ್ನೆರಡು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಹುಡುಕಾಟ ನಡೆಸಿದ ಮರುದಿನ ಈ ಬೆಳವಣಿಗೆ ನಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯಾಷನಲ್ ಹೆರಾಲ್ಡ್ ಅನ್ನು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಪ್ರಕಟಿಸಿದ್ದು, ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದೆ. ಮನಿ ಲಾಂಡರಿಂಗ್‌ ಪ್ರಕರಣದಲ್ಲಿ ಪತ್ರಿಕೆಯ ವಿರುದ್ಧ ತನಿಖೆ ನಡೆಯುತ್ತಿದೆ.

“ಕಾಂಗ್ರೆಸ್ ಪ್ರಧಾನ ಕಚೇರಿ ಮತ್ತು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಮನೆಯ ಹೊರಗೆ ಹೆಚ್ಚುವರಿ ಪಡೆಯನ್ನು ನಿಯೋಜಿಸಲಾಗಿದೆ” ಎಂದು ಎಎನ್‌ಐ ವರದಿ ಮಾಡಿದೆ.

ಮಲ್ಲಿಕಾರ್ಜುನ ಖರ್ಗೆ, ಸಲ್ಮಾನ್ ಖುರ್ಷಿದ್, ದಿಗ್ವಿಜಯ ಸಿಂಗ್, ಪಿ ಚಿದಂಬರಂ ಅವರಂತಹ ಹಲವಾರು ಹಿರಿಯ ಕಾಂಗ್ರೆಸ್ ನಾಯಕರು ಬುಧವಾರ ಪಕ್ಷದ ಪ್ರಧಾನ ಕಚೇರಿಯನ್ನು ತಲುಪಿದ್ದಾರೆ. ಪಕ್ಷದ ಸಂಸದ ಜೈರಾಮ್ ರಮೇಶ್ ಅವರು ಕಾಂಗ್ರೆಸ್‌‌ ಕಚೇರಿಗೆ ದಿಗ್ಭಂಧನ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರ ವಿಫಲವಾದಾಗ ಪ್ರತಿಪಕ್ಷಗಳು ’ಇಡಿ’ ಪರೀಕ್ಷೆ ಎದುರಿಸಬೇಕು- ಅಖಿಲೇಶ್ ಯಾದವ್

“ದೆಹಲಿ ಪೊಲೀಸರು ನಮ್ಮ ಕೇಂದ್ರ ಕಚೇರಿ ಮತ್ತು ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷೆ ಮತ್ತು ಮಾಜಿ ಅಧ್ಯಕ್ಷರ ಮನೆಗಳನ್ನು ಸುತ್ತುವರೆದಿದ್ದಾರೆ. ಇದು ಸೇಡಿನ ರಾಜಕಾರಣದ ಅತ್ಯಂತ ಕೆಟ್ಟ ರೂಪ. ನಾವು ಸಲ್ಲಿಸುವುದಿಲ್ಲ! ನಾವು ಮೌನವಾಗುವುದಿಲ್ಲ! ಮೋದಿ ಸರ್ಕಾರದ ಅನ್ಯಾಯ ಮತ್ತು ವೈಫಲ್ಯಗಳ ವಿರುದ್ಧ ನಾವು ಧ್ವನಿ ಎತ್ತುವುದನ್ನು ಮುಂದುವರಿಸುತ್ತೇವೆ!” ಎಂದು ಹೇಳಿದ್ದಾರೆ.

ಈ ಮಧ್ಯೆ, ನ್ಯಾಷನಲ್ ಹೆರಾಲ್ಡ್ ಪತ್ರಿಕೆ ತನ್ನ ಕಚೇರಿಯನ್ನು ಸೀಲ್ ಮಾಡಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ನಿರಾಕರಿಸಿದೆ. ಈ ಹಿಂದೆ ಹೀಗೆ ವರದಿ ಮಾಡಿದ್ದ ಸುದ್ದಿ ಸಂಸ್ಥೆ ಎಎನ್‌ಐ, “ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನ ಆವರಣವನ್ನು ಮಾತ್ರ ಸೀಲ್ ಮಾಡಲಾಗಿದೆ” ಎಂದು ನಂತರ ಸ್ಪಷ್ಟೀಕರಣ ನೀಡಿತು.

“ನ್ಯಾಷನಲ್ ಹೆರಾಲ್ಡ್ ಕಚೇರಿಯನ್ನು ಸೀಲ್ ಮಾಡಲಾಗಿದೆ ಎಂದು ಕೆಲವು ಮಾಧ್ಯಮಗಳು ಸುಳ್ಳು ವರದಿಗಳನ್ನು ಮಾಡಿವೆ. ನಾವು ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದೇವೆ” ಎಂದು ಪತ್ರಿಕೆ ಟ್ವೀಟ್‌ನಲ್ಲಿ ತಿಳಿಸಿದೆ.

ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಹೆಚ್ಚುವರಿ ಸಾಕ್ಷ್ಯಗಳನ್ನು ಸಂಗ್ರಹಿಸಲು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ದಾಳಿ ನಡೆಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಮಂಗಳವಾರ ತಿಳಿಸಿತ್ತು.

ಇದನ್ನೂ ಓದಿ: ಪ್ರತಿಭಟನೆ ವೇಳೆ ಪೊಲೀಸರಿಂದ ಕಾಂಗ್ರೆಸ್ ನಾಯಕರ ಮೇಲೆ ಅಮಾನವೀಯ ಹಲ್ಲೆ-ಆರೋಪ

ಪ್ರಕರಣಕ್ಕೆ ಸಂಬಂಧಿಸಿದ “ಹಲವು ಜನರನ್ನು” ಪ್ರಶ್ನಿಸಿದ ನಂತರ ಜಾರಿ ನಿರ್ದೇಶನಾಲಯವು ಹೊಸದಾಗಿ ಪುರಾವೆಗಳನ್ನು ಪಡೆದು ಹುಡುಕಾಟ ನಡೆಸುತ್ತಿದೆ ಎಂದು ಕೆಲವು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.

ಈ ಎಲ್ಲಾ ಬೆಳವಣಿಗೆಯ ಬಗ್ಗೆ ಮಾತನಾಡಿರುವ ರಾಹುಲ್ ಗಾಂಧಿ,“ಸತ್ಯಕ್ಕೆ ಅಡ್ಡಗಾಲು ಹಾಕಲು ಸಾಧ್ಯವಿಲ್ಲ. ನೀವು ಏನು ಬೇಕಾದರೂ ಮಾಡಿ, ನಾನು ಪ್ರಧಾನಿ ನರೇಂದ್ರ ಮೋದಿಗೆ ಹೆದರುವುದಿಲ್ಲ. ನಾನು ಯಾವಾಗಲೂ ದೇಶದ ಹಿತದೃಷ್ಟಿಯಿಂದ ಕೆಲಸ ಮಾಡುತ್ತೇನೆ. ಕೇಳಿಸಿಕೊಳ್ಳಿ ಮತ್ತು ಅರ್ಥಮಾಡಿಕೊಳ್ಳಿ!”

ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈನಲ್ಲಿ ಕೇಂದ್ರ ತನಿಖಾ ಸಂಸ್ಥೆ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಮೂರು ದಿನಗಳ ಕಾಲ ವಿಚಾರಣೆ ನಡೆಸಿತ್ತು. ಜೊತೆಗೆ ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಅವರನ್ನು ಜೂನ್‌ನಲ್ಲಿ ಐದು ದಿನಗಳ ಕಾಲ ಜಾರಿ ನಿರ್ದೇಶನಾಲಯವು 50 ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು.

ಇದನ್ನೂ ಓದಿ: ‘ಮೋದಿ ಪೊಲೀಸ್‌ ರಾಜ್ಯದ ದೊರೆ’: ಪ್ರತಿಭಟನೆ ವೇಳೆ ರಾಹುಲ್ ಗಾಂಧಿ; ವಶಕ್ಕೆ ಪಡೆದ ಪೊಲೀಸರು

ಗಾಂಧಿ ಕುಟುಂಬದ ವಿರುದ್ಧ ಕೇಸು

ನ್ಯಾಷನಲ್ ಹೆರಾಲ್ಡ್‌ ಅನ್ನು ಜವಾಹರಲಾಲ್ ನೆಹರು ಅವರು ಭಾರತದ ಮೊದಲ ಪ್ರಧಾನಿಯಾಗುವ ಮೊದಲು ಸ್ಥಾಪಿಸಿದ್ದರು ಮತ್ತು ಅದರ ಸಂಪಾದಕರಾಗಿದ್ದರು. ಏಪ್ರಿಲ್ 2008 ರಲ್ಲಿ, ಪತ್ರಿಕೆಯು 90 ಕೋಟಿ ರೂಪಾಯಿಗಿಂತ ಹೆಚ್ಚಿನ ಸಾಲವನ್ನು ಹೊಂದಿದ್ದರಿಂದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿತ್ತು.

ಆದರೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ, “ಕಾಂಗ್ರೆಸ್‌ನ ಹಣವನ್ನು ಬಳಸಿಕೊಂಡು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ನ್ಯಾಯಾಲಯದ ದಾಖಲೆಗಳ ಪ್ರಕಾರ, ಪಕ್ಷವು ಬಡ್ಡಿರಹಿತ ಆಧಾರದ ಮೇಲೆ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ಗೆ ಸಾಲವನ್ನು ನೀಡಿದೆ. ಯಾವುದೆ ಹಣ ವಿನಿಮಯವಿಲ್ಲದೆ ಸಂಬಳದಂತಹ ಬಾಕಿಗಳನ್ನು ಪಾವತಿಸಲು ಸಾಲವನ್ನು ಈಕ್ವಿಟಿಯಾಗಿ ಪರಿವರ್ತಿಸಲಾಗಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...