Homeಮುಖಪುಟಮೋದಿ ಆಡಳಿತದ 10 ವರ್ಷಗಳಲ್ಲಿ 'ED' ದಾಳಿಗಳಲ್ಲಿ ಹೆಚ್ಚಳ: ವರದಿ

ಮೋದಿ ಆಡಳಿತದ 10 ವರ್ಷಗಳಲ್ಲಿ ‘ED’ ದಾಳಿಗಳಲ್ಲಿ ಹೆಚ್ಚಳ: ವರದಿ

- Advertisement -
- Advertisement -

ಮೋದಿ ಆಡಳಿತದ ಕಳೆದ 10 ವರ್ಷಗಳಲ್ಲಿ ಜಾರಿ ನಿರ್ದೇಶನಾಲಯದ ದಾಳಿ ಮತ್ತು, ಆಸ್ತಿಮುಟ್ಟುಗೋಲು ಪ್ರಮಾಣದಲ್ಲಿ ಭಾರೀ ಹೆಚ್ಚಳವಾಗಿದೆ ಎಂದು ವರದಿಯೊಂದು ಬಹಿರಂಗಪಡಿಸಿದೆ. ಬಿಜೆಪಿ ಸರಕಾರ ‘ಇಡಿ’ ಮತ್ತು ಸಿಬಿಐಯಂತಹ ಸರಕಾರಿ ಸಂಸ್ಥೆಗಳನ್ನು ಪ್ರತಿಪಕ್ಷಗಳ ನಾಯಕರನ್ನು ಗುರಿಯಾಗಿಸಲು, ಮಟ್ಟಹಾಕಲು ಬಳಸುತ್ತಿದೆ ಎಂದು ವಿಪಕ್ಷಗಳು ಟೀಕಿಸುತ್ತಿರುವ ಹೊಸ್ತಿಲಲ್ಲೇ ಈ ವರದಿ ಬಹಿರಂಗವಾಗಿದೆ.

2014ರಿಂದ ಕಳೆದ 10 ವರ್ಷಗಳಲ್ಲಿ ಅಕ್ರಮ ಹಣ ವರ್ಗಾವಣೆ ವಿರೋಧಿ ಕಾನೂನಿನಡಿಯಲ್ಲಿ ಜಾರಿ ನಿರ್ದೇಶನಾಲಯ (ED) ನಡೆಸಿದ ದಾಳಿಗಳ ಪ್ರಮಾಣದಲ್ಲಿ 86 ಪಟ್ಟು ಹೆಚ್ಚಾಗಿದೆ, ಆಸ್ತಿ ಮುಟ್ಟುಗೋಲು ಪ್ರಮಾಣದಲ್ಲಿ 25 ಪಟ್ಟು ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ. ಜುಲೈ 2005ರಿಂದ ಮಾರ್ಚ್ 2014 ರವರೆಗಿನ ಒಂಬತ್ತು ವರ್ಷಗಳ ಅವಧಿ ಮತ್ತು ಏಪ್ರಿಲ್ 2014ರಿಂದ  ಮಾರ್ಚ್ 2024ರ ನಡುವೆ ಕಳೆದ 10 ವರ್ಷಗಳಲ್ಲಿನ ದಾಖಲೆಯನ್ನು ವಿಶ್ಲೇಷಿಸಿ ಪಿಟಿಐ ಈ ಕುರಿತ ವರದಿಯನ್ನು ಸಿದ್ಧಪಡಿಸಿದೆ.

PMLAಅನ್ನು 2002ರಲ್ಲಿ ಜಾರಿಗೊಳಿಸಲಾಗಿದೆ ಮತ್ತು ತೆರಿಗೆ ವಂಚನೆ, ಕಪ್ಪು ಹಣ ಮತ್ತು ಅಕ್ರಮ ಹಣ ವರ್ಗಾವಣೆ ಕುರಿತ ಗಂಭೀರ ಅಪರಾಧಗಳ ಬಗ್ಗೆ ಕ್ರಮಕ್ಕೆ ಜುಲೈ 1, 2005ರಿಂದ PMLA ಕಾಯ್ದೆಯನ್ನು ಜಾರಿಗೆ ತರಲಾಗಿದೆ.

ಕಳೆದ 1 ದಶಕದಲ್ಲಿ ಇಡಿ ಕ್ರಮವು ಪ್ರತಿಪಕ್ಷಗಳು ಮತ್ತು ಬಿಜೆಪಿ ವಿರುದ್ಧ ಮಾತನಾಡುವವರ ವಿರುದ್ಧದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ “ದಬ್ಬಾಳಿಕೆಯ” ತಂತ್ರಗಳ ಭಾಗವಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದರೆ, ಕೇಂದ್ರ ಸರ್ಕಾರ ಮತ್ತು ಬಿಜೆಪಿ ಪಕ್ಷವು, ಜಾರಿ ನಿರ್ದೇಶನಾಲಯವು ಸ್ವತಂತ್ರವಾಗಿದೆ ಮತ್ತು ಅದರ ತನಿಖೆಗಳು ಸಂಪೂರ್ಣವಾಗಿ ಅಕ್ರಮ ಮತ್ತು ಭ್ರಷ್ಟರ ವಿರುದ್ಧದ ಕಾರ್ಯಚರಣೆಯ ಭಾಗವಾಗಿದೆ ಎಂದು ‘ಇಡಿ’ ದಾಳಿಯನ್ನು ಸಮರ್ಥಿಸಿಕೊಳ್ಳುತ್ತಾ ಬಂದಿದೆ.

2005-14ರ ಅವಧಿಯಲ್ಲಿ ಒಟ್ಟು 1,797 ದೂರುಗಳು ಮಾತ್ರ ಜಾರಿ ನಿರ್ದೇಶನಾಲಯ ದಾಖಲಿಸಿದ್ದವು, ಆದರೆ  2014ರಿಂದ 2024ರ ಅವಧಿಯಲ್ಲಿ ಕಳೆದ 10 ವರ್ಷಗಳಲ್ಲಿ 5,155 PMLA ಪ್ರಕರಣಗಳನ್ನು ದಾಖಲಿಸಿದೆ, ಇದು 2005-14ರ ಅವಧಿಗೆ ಹೋಲಿಸಿದರೆ ಮೂರು ಪಟ್ಟು ಹೆಚ್ಚಳ ಎಂದು ವಿಶ್ಲೇಷಣೆಯು ಉಲ್ಲೇಖಿಸಿದೆ.

2014ರ ಹಣಕಾಸು ವರ್ಷದಿಂದ ಜಾರಿ ನಿರ್ದೇಶನಾಲಯವು ಇದುವರೆಗೆ 63 ವ್ಯಕ್ತಿಗಳನ್ನು ಮನಿ ಲಾಂಡರಿಂಗ್ ವಿರೋಧಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಿದೆ ಎಂದು ಮಾಹಿತಿಯು ತೋರಿಸುತ್ತದೆ. 2014-2024ರ ಅವಧಿಯಲ್ಲಿ ದೇಶಾದ್ಯಂತ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ 7,264 ದಾಳಿಗಳನ್ನು ನಡೆಸಿದೆ. ಇದು ಯುಪಿಎ ಸರಕಾರದ 10ವರ್ಷದ ಅವಧಿಗೆ ಹೋಲಿಸಿದೆ 86 ಪಟ್ಟು ಹೆಚ್ಚಳವಾಗಿದೆ ಅಂದರೆ ಯುಪಿಎ ಅವಧಿಯಲ್ಲಿ 84 ದಾಳಿಗಳನ್ನು ನಡೆಸಲಾಗಿತ್ತು.

ಕಳೆದ ಒಂದು ದಶಕದಲ್ಲಿ ಒಟ್ಟು 755 ಜನರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ ಮತ್ತು 1,21,618 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. 2005-14ರ ಅವಧಿಯಲ್ಲಿ 29 ಮಂದಿಯ ಬಂಧನ ನಡೆದಿತ್ತು ಮತ್ತು  5,086.43 ಕೋಟಿ ರೂ. ಜಪ್ತಿ ಮಾಡಲಾಗಿತ್ತು. ಈ ಅಂಕಿಅಂಶಗಳು ಯುಪಿಎ ಅವಧಿಗೆ ಹೋಲಿಸಿದರೆ ಬಂಧನಗಳು 26 ಪಟ್ಟು ಹೆಚ್ಚಳವಾಗಿರುವುದನ್ನು ತೋರಿಸುತ್ತದೆ. 2014ರಿಂದ 2024ರವರೆಗೆ ಒಂದು ದಶಕದಲ್ಲಿ ದೋಷಾರೋಪ ಪಟ್ಟಿಗಳ ಸಲ್ಲಿಕೆಯು ಅದರ ಹಿಂದಿನ ದಶಕಕ್ಕಿಂತ 12 ಪಟ್ಟು ಹೆಚ್ಚಳವನ್ನು ಕಂಡಿದೆ. 1,281 ಪ್ರಾಸಿಕ್ಯೂಶನ್ ದೂರುಗಳನ್ನು ನ್ಯಾಯಾಲಯಗಳ ಮುಂದೆ ದಾಖಲಿಸಲಾಗಿತ್ತು ಹಾಗೂ ಅದರ ಹಿಂದಿನ ಅವಧಿಯಲ್ಲಿ 102 ಪ್ರಕರಣಗಳು ದಾಖಲಾಗಿದ್ದವು.

ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಸಂಜಯ್ ಭಂಡಾರ ಆರ್ಥಿಕ ವಂಚನೆ ಮಾಡಿ ವಿದೇಶಗಳಲ್ಲಿ ಹೋಗಿ ನೆಲೆಸಿದ್ದಾರೆ, ಆದರೆ ಇಡಿ ಅವರನ್ನು ದೇಶಕ್ಕೆ ತರುವಲ್ಲಿ ಪ್ರಯತ್ನಿಸುತ್ತಿದೆ ಎಂದು ಹೇಳಿಕೊಂಡಿದೆ. ಪ್ರತಿಪಕ್ಷಗಳು ಈ ಮೂವರು ಉದ್ಯಮಿಗಳಿಗೆ ದೇಶ ಬಿಟ್ಟು ಪಲಾಯನ ಮಾಡಲು ಸಹಕಾರಿಯಾದ ವ್ಯವಸ್ಥೆಯ ಬಗ್ಗೆ ಹಲವು ಬಾರಿ ಟೀಕಿಸಿದ್ದವು.

ಇದನ್ನು ಓದಿ: ಚುನಾವಣಾ ಬಾಂಡ್‌ ಯೋಜನೆಗೆ ಜನಸಾಮಾನ್ಯರ ತೆರಿಗೆಯ ’14 ಕೋಟಿ ರೂ.’ ವ್ಯಯಿಸಿದ್ದ ಮೋದಿ ಸರಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...