Homeಮುಖಪುಟಮೋದಿ ಆಡಳಿತದ 10 ವರ್ಷಗಳಲ್ಲಿ 'ED' ದಾಳಿಗಳಲ್ಲಿ ಹೆಚ್ಚಳ: ವರದಿ

ಮೋದಿ ಆಡಳಿತದ 10 ವರ್ಷಗಳಲ್ಲಿ ‘ED’ ದಾಳಿಗಳಲ್ಲಿ ಹೆಚ್ಚಳ: ವರದಿ

- Advertisement -
- Advertisement -

ಮೋದಿ ಆಡಳಿತದ ಕಳೆದ 10 ವರ್ಷಗಳಲ್ಲಿ ಜಾರಿ ನಿರ್ದೇಶನಾಲಯದ ದಾಳಿ ಮತ್ತು, ಆಸ್ತಿಮುಟ್ಟುಗೋಲು ಪ್ರಮಾಣದಲ್ಲಿ ಭಾರೀ ಹೆಚ್ಚಳವಾಗಿದೆ ಎಂದು ವರದಿಯೊಂದು ಬಹಿರಂಗಪಡಿಸಿದೆ. ಬಿಜೆಪಿ ಸರಕಾರ ‘ಇಡಿ’ ಮತ್ತು ಸಿಬಿಐಯಂತಹ ಸರಕಾರಿ ಸಂಸ್ಥೆಗಳನ್ನು ಪ್ರತಿಪಕ್ಷಗಳ ನಾಯಕರನ್ನು ಗುರಿಯಾಗಿಸಲು, ಮಟ್ಟಹಾಕಲು ಬಳಸುತ್ತಿದೆ ಎಂದು ವಿಪಕ್ಷಗಳು ಟೀಕಿಸುತ್ತಿರುವ ಹೊಸ್ತಿಲಲ್ಲೇ ಈ ವರದಿ ಬಹಿರಂಗವಾಗಿದೆ.

2014ರಿಂದ ಕಳೆದ 10 ವರ್ಷಗಳಲ್ಲಿ ಅಕ್ರಮ ಹಣ ವರ್ಗಾವಣೆ ವಿರೋಧಿ ಕಾನೂನಿನಡಿಯಲ್ಲಿ ಜಾರಿ ನಿರ್ದೇಶನಾಲಯ (ED) ನಡೆಸಿದ ದಾಳಿಗಳ ಪ್ರಮಾಣದಲ್ಲಿ 86 ಪಟ್ಟು ಹೆಚ್ಚಾಗಿದೆ, ಆಸ್ತಿ ಮುಟ್ಟುಗೋಲು ಪ್ರಮಾಣದಲ್ಲಿ 25 ಪಟ್ಟು ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ. ಜುಲೈ 2005ರಿಂದ ಮಾರ್ಚ್ 2014 ರವರೆಗಿನ ಒಂಬತ್ತು ವರ್ಷಗಳ ಅವಧಿ ಮತ್ತು ಏಪ್ರಿಲ್ 2014ರಿಂದ  ಮಾರ್ಚ್ 2024ರ ನಡುವೆ ಕಳೆದ 10 ವರ್ಷಗಳಲ್ಲಿನ ದಾಖಲೆಯನ್ನು ವಿಶ್ಲೇಷಿಸಿ ಪಿಟಿಐ ಈ ಕುರಿತ ವರದಿಯನ್ನು ಸಿದ್ಧಪಡಿಸಿದೆ.

PMLAಅನ್ನು 2002ರಲ್ಲಿ ಜಾರಿಗೊಳಿಸಲಾಗಿದೆ ಮತ್ತು ತೆರಿಗೆ ವಂಚನೆ, ಕಪ್ಪು ಹಣ ಮತ್ತು ಅಕ್ರಮ ಹಣ ವರ್ಗಾವಣೆ ಕುರಿತ ಗಂಭೀರ ಅಪರಾಧಗಳ ಬಗ್ಗೆ ಕ್ರಮಕ್ಕೆ ಜುಲೈ 1, 2005ರಿಂದ PMLA ಕಾಯ್ದೆಯನ್ನು ಜಾರಿಗೆ ತರಲಾಗಿದೆ.

ಕಳೆದ 1 ದಶಕದಲ್ಲಿ ಇಡಿ ಕ್ರಮವು ಪ್ರತಿಪಕ್ಷಗಳು ಮತ್ತು ಬಿಜೆಪಿ ವಿರುದ್ಧ ಮಾತನಾಡುವವರ ವಿರುದ್ಧದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ “ದಬ್ಬಾಳಿಕೆಯ” ತಂತ್ರಗಳ ಭಾಗವಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದರೆ, ಕೇಂದ್ರ ಸರ್ಕಾರ ಮತ್ತು ಬಿಜೆಪಿ ಪಕ್ಷವು, ಜಾರಿ ನಿರ್ದೇಶನಾಲಯವು ಸ್ವತಂತ್ರವಾಗಿದೆ ಮತ್ತು ಅದರ ತನಿಖೆಗಳು ಸಂಪೂರ್ಣವಾಗಿ ಅಕ್ರಮ ಮತ್ತು ಭ್ರಷ್ಟರ ವಿರುದ್ಧದ ಕಾರ್ಯಚರಣೆಯ ಭಾಗವಾಗಿದೆ ಎಂದು ‘ಇಡಿ’ ದಾಳಿಯನ್ನು ಸಮರ್ಥಿಸಿಕೊಳ್ಳುತ್ತಾ ಬಂದಿದೆ.

2005-14ರ ಅವಧಿಯಲ್ಲಿ ಒಟ್ಟು 1,797 ದೂರುಗಳು ಮಾತ್ರ ಜಾರಿ ನಿರ್ದೇಶನಾಲಯ ದಾಖಲಿಸಿದ್ದವು, ಆದರೆ  2014ರಿಂದ 2024ರ ಅವಧಿಯಲ್ಲಿ ಕಳೆದ 10 ವರ್ಷಗಳಲ್ಲಿ 5,155 PMLA ಪ್ರಕರಣಗಳನ್ನು ದಾಖಲಿಸಿದೆ, ಇದು 2005-14ರ ಅವಧಿಗೆ ಹೋಲಿಸಿದರೆ ಮೂರು ಪಟ್ಟು ಹೆಚ್ಚಳ ಎಂದು ವಿಶ್ಲೇಷಣೆಯು ಉಲ್ಲೇಖಿಸಿದೆ.

2014ರ ಹಣಕಾಸು ವರ್ಷದಿಂದ ಜಾರಿ ನಿರ್ದೇಶನಾಲಯವು ಇದುವರೆಗೆ 63 ವ್ಯಕ್ತಿಗಳನ್ನು ಮನಿ ಲಾಂಡರಿಂಗ್ ವಿರೋಧಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಿದೆ ಎಂದು ಮಾಹಿತಿಯು ತೋರಿಸುತ್ತದೆ. 2014-2024ರ ಅವಧಿಯಲ್ಲಿ ದೇಶಾದ್ಯಂತ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ 7,264 ದಾಳಿಗಳನ್ನು ನಡೆಸಿದೆ. ಇದು ಯುಪಿಎ ಸರಕಾರದ 10ವರ್ಷದ ಅವಧಿಗೆ ಹೋಲಿಸಿದೆ 86 ಪಟ್ಟು ಹೆಚ್ಚಳವಾಗಿದೆ ಅಂದರೆ ಯುಪಿಎ ಅವಧಿಯಲ್ಲಿ 84 ದಾಳಿಗಳನ್ನು ನಡೆಸಲಾಗಿತ್ತು.

ಕಳೆದ ಒಂದು ದಶಕದಲ್ಲಿ ಒಟ್ಟು 755 ಜನರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ ಮತ್ತು 1,21,618 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. 2005-14ರ ಅವಧಿಯಲ್ಲಿ 29 ಮಂದಿಯ ಬಂಧನ ನಡೆದಿತ್ತು ಮತ್ತು  5,086.43 ಕೋಟಿ ರೂ. ಜಪ್ತಿ ಮಾಡಲಾಗಿತ್ತು. ಈ ಅಂಕಿಅಂಶಗಳು ಯುಪಿಎ ಅವಧಿಗೆ ಹೋಲಿಸಿದರೆ ಬಂಧನಗಳು 26 ಪಟ್ಟು ಹೆಚ್ಚಳವಾಗಿರುವುದನ್ನು ತೋರಿಸುತ್ತದೆ. 2014ರಿಂದ 2024ರವರೆಗೆ ಒಂದು ದಶಕದಲ್ಲಿ ದೋಷಾರೋಪ ಪಟ್ಟಿಗಳ ಸಲ್ಲಿಕೆಯು ಅದರ ಹಿಂದಿನ ದಶಕಕ್ಕಿಂತ 12 ಪಟ್ಟು ಹೆಚ್ಚಳವನ್ನು ಕಂಡಿದೆ. 1,281 ಪ್ರಾಸಿಕ್ಯೂಶನ್ ದೂರುಗಳನ್ನು ನ್ಯಾಯಾಲಯಗಳ ಮುಂದೆ ದಾಖಲಿಸಲಾಗಿತ್ತು ಹಾಗೂ ಅದರ ಹಿಂದಿನ ಅವಧಿಯಲ್ಲಿ 102 ಪ್ರಕರಣಗಳು ದಾಖಲಾಗಿದ್ದವು.

ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಸಂಜಯ್ ಭಂಡಾರ ಆರ್ಥಿಕ ವಂಚನೆ ಮಾಡಿ ವಿದೇಶಗಳಲ್ಲಿ ಹೋಗಿ ನೆಲೆಸಿದ್ದಾರೆ, ಆದರೆ ಇಡಿ ಅವರನ್ನು ದೇಶಕ್ಕೆ ತರುವಲ್ಲಿ ಪ್ರಯತ್ನಿಸುತ್ತಿದೆ ಎಂದು ಹೇಳಿಕೊಂಡಿದೆ. ಪ್ರತಿಪಕ್ಷಗಳು ಈ ಮೂವರು ಉದ್ಯಮಿಗಳಿಗೆ ದೇಶ ಬಿಟ್ಟು ಪಲಾಯನ ಮಾಡಲು ಸಹಕಾರಿಯಾದ ವ್ಯವಸ್ಥೆಯ ಬಗ್ಗೆ ಹಲವು ಬಾರಿ ಟೀಕಿಸಿದ್ದವು.

ಇದನ್ನು ಓದಿ: ಚುನಾವಣಾ ಬಾಂಡ್‌ ಯೋಜನೆಗೆ ಜನಸಾಮಾನ್ಯರ ತೆರಿಗೆಯ ’14 ಕೋಟಿ ರೂ.’ ವ್ಯಯಿಸಿದ್ದ ಮೋದಿ ಸರಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...