Homeಮುಖಪುಟಮೋದಿ ಆಡಳಿತದ 10 ವರ್ಷಗಳಲ್ಲಿ 'ED' ದಾಳಿಗಳಲ್ಲಿ ಹೆಚ್ಚಳ: ವರದಿ

ಮೋದಿ ಆಡಳಿತದ 10 ವರ್ಷಗಳಲ್ಲಿ ‘ED’ ದಾಳಿಗಳಲ್ಲಿ ಹೆಚ್ಚಳ: ವರದಿ

- Advertisement -
- Advertisement -

ಮೋದಿ ಆಡಳಿತದ ಕಳೆದ 10 ವರ್ಷಗಳಲ್ಲಿ ಜಾರಿ ನಿರ್ದೇಶನಾಲಯದ ದಾಳಿ ಮತ್ತು, ಆಸ್ತಿಮುಟ್ಟುಗೋಲು ಪ್ರಮಾಣದಲ್ಲಿ ಭಾರೀ ಹೆಚ್ಚಳವಾಗಿದೆ ಎಂದು ವರದಿಯೊಂದು ಬಹಿರಂಗಪಡಿಸಿದೆ. ಬಿಜೆಪಿ ಸರಕಾರ ‘ಇಡಿ’ ಮತ್ತು ಸಿಬಿಐಯಂತಹ ಸರಕಾರಿ ಸಂಸ್ಥೆಗಳನ್ನು ಪ್ರತಿಪಕ್ಷಗಳ ನಾಯಕರನ್ನು ಗುರಿಯಾಗಿಸಲು, ಮಟ್ಟಹಾಕಲು ಬಳಸುತ್ತಿದೆ ಎಂದು ವಿಪಕ್ಷಗಳು ಟೀಕಿಸುತ್ತಿರುವ ಹೊಸ್ತಿಲಲ್ಲೇ ಈ ವರದಿ ಬಹಿರಂಗವಾಗಿದೆ.

2014ರಿಂದ ಕಳೆದ 10 ವರ್ಷಗಳಲ್ಲಿ ಅಕ್ರಮ ಹಣ ವರ್ಗಾವಣೆ ವಿರೋಧಿ ಕಾನೂನಿನಡಿಯಲ್ಲಿ ಜಾರಿ ನಿರ್ದೇಶನಾಲಯ (ED) ನಡೆಸಿದ ದಾಳಿಗಳ ಪ್ರಮಾಣದಲ್ಲಿ 86 ಪಟ್ಟು ಹೆಚ್ಚಾಗಿದೆ, ಆಸ್ತಿ ಮುಟ್ಟುಗೋಲು ಪ್ರಮಾಣದಲ್ಲಿ 25 ಪಟ್ಟು ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ. ಜುಲೈ 2005ರಿಂದ ಮಾರ್ಚ್ 2014 ರವರೆಗಿನ ಒಂಬತ್ತು ವರ್ಷಗಳ ಅವಧಿ ಮತ್ತು ಏಪ್ರಿಲ್ 2014ರಿಂದ  ಮಾರ್ಚ್ 2024ರ ನಡುವೆ ಕಳೆದ 10 ವರ್ಷಗಳಲ್ಲಿನ ದಾಖಲೆಯನ್ನು ವಿಶ್ಲೇಷಿಸಿ ಪಿಟಿಐ ಈ ಕುರಿತ ವರದಿಯನ್ನು ಸಿದ್ಧಪಡಿಸಿದೆ.

PMLAಅನ್ನು 2002ರಲ್ಲಿ ಜಾರಿಗೊಳಿಸಲಾಗಿದೆ ಮತ್ತು ತೆರಿಗೆ ವಂಚನೆ, ಕಪ್ಪು ಹಣ ಮತ್ತು ಅಕ್ರಮ ಹಣ ವರ್ಗಾವಣೆ ಕುರಿತ ಗಂಭೀರ ಅಪರಾಧಗಳ ಬಗ್ಗೆ ಕ್ರಮಕ್ಕೆ ಜುಲೈ 1, 2005ರಿಂದ PMLA ಕಾಯ್ದೆಯನ್ನು ಜಾರಿಗೆ ತರಲಾಗಿದೆ.

ಕಳೆದ 1 ದಶಕದಲ್ಲಿ ಇಡಿ ಕ್ರಮವು ಪ್ರತಿಪಕ್ಷಗಳು ಮತ್ತು ಬಿಜೆಪಿ ವಿರುದ್ಧ ಮಾತನಾಡುವವರ ವಿರುದ್ಧದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ “ದಬ್ಬಾಳಿಕೆಯ” ತಂತ್ರಗಳ ಭಾಗವಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದರೆ, ಕೇಂದ್ರ ಸರ್ಕಾರ ಮತ್ತು ಬಿಜೆಪಿ ಪಕ್ಷವು, ಜಾರಿ ನಿರ್ದೇಶನಾಲಯವು ಸ್ವತಂತ್ರವಾಗಿದೆ ಮತ್ತು ಅದರ ತನಿಖೆಗಳು ಸಂಪೂರ್ಣವಾಗಿ ಅಕ್ರಮ ಮತ್ತು ಭ್ರಷ್ಟರ ವಿರುದ್ಧದ ಕಾರ್ಯಚರಣೆಯ ಭಾಗವಾಗಿದೆ ಎಂದು ‘ಇಡಿ’ ದಾಳಿಯನ್ನು ಸಮರ್ಥಿಸಿಕೊಳ್ಳುತ್ತಾ ಬಂದಿದೆ.

2005-14ರ ಅವಧಿಯಲ್ಲಿ ಒಟ್ಟು 1,797 ದೂರುಗಳು ಮಾತ್ರ ಜಾರಿ ನಿರ್ದೇಶನಾಲಯ ದಾಖಲಿಸಿದ್ದವು, ಆದರೆ  2014ರಿಂದ 2024ರ ಅವಧಿಯಲ್ಲಿ ಕಳೆದ 10 ವರ್ಷಗಳಲ್ಲಿ 5,155 PMLA ಪ್ರಕರಣಗಳನ್ನು ದಾಖಲಿಸಿದೆ, ಇದು 2005-14ರ ಅವಧಿಗೆ ಹೋಲಿಸಿದರೆ ಮೂರು ಪಟ್ಟು ಹೆಚ್ಚಳ ಎಂದು ವಿಶ್ಲೇಷಣೆಯು ಉಲ್ಲೇಖಿಸಿದೆ.

2014ರ ಹಣಕಾಸು ವರ್ಷದಿಂದ ಜಾರಿ ನಿರ್ದೇಶನಾಲಯವು ಇದುವರೆಗೆ 63 ವ್ಯಕ್ತಿಗಳನ್ನು ಮನಿ ಲಾಂಡರಿಂಗ್ ವಿರೋಧಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಿದೆ ಎಂದು ಮಾಹಿತಿಯು ತೋರಿಸುತ್ತದೆ. 2014-2024ರ ಅವಧಿಯಲ್ಲಿ ದೇಶಾದ್ಯಂತ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ 7,264 ದಾಳಿಗಳನ್ನು ನಡೆಸಿದೆ. ಇದು ಯುಪಿಎ ಸರಕಾರದ 10ವರ್ಷದ ಅವಧಿಗೆ ಹೋಲಿಸಿದೆ 86 ಪಟ್ಟು ಹೆಚ್ಚಳವಾಗಿದೆ ಅಂದರೆ ಯುಪಿಎ ಅವಧಿಯಲ್ಲಿ 84 ದಾಳಿಗಳನ್ನು ನಡೆಸಲಾಗಿತ್ತು.

ಕಳೆದ ಒಂದು ದಶಕದಲ್ಲಿ ಒಟ್ಟು 755 ಜನರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ ಮತ್ತು 1,21,618 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. 2005-14ರ ಅವಧಿಯಲ್ಲಿ 29 ಮಂದಿಯ ಬಂಧನ ನಡೆದಿತ್ತು ಮತ್ತು  5,086.43 ಕೋಟಿ ರೂ. ಜಪ್ತಿ ಮಾಡಲಾಗಿತ್ತು. ಈ ಅಂಕಿಅಂಶಗಳು ಯುಪಿಎ ಅವಧಿಗೆ ಹೋಲಿಸಿದರೆ ಬಂಧನಗಳು 26 ಪಟ್ಟು ಹೆಚ್ಚಳವಾಗಿರುವುದನ್ನು ತೋರಿಸುತ್ತದೆ. 2014ರಿಂದ 2024ರವರೆಗೆ ಒಂದು ದಶಕದಲ್ಲಿ ದೋಷಾರೋಪ ಪಟ್ಟಿಗಳ ಸಲ್ಲಿಕೆಯು ಅದರ ಹಿಂದಿನ ದಶಕಕ್ಕಿಂತ 12 ಪಟ್ಟು ಹೆಚ್ಚಳವನ್ನು ಕಂಡಿದೆ. 1,281 ಪ್ರಾಸಿಕ್ಯೂಶನ್ ದೂರುಗಳನ್ನು ನ್ಯಾಯಾಲಯಗಳ ಮುಂದೆ ದಾಖಲಿಸಲಾಗಿತ್ತು ಹಾಗೂ ಅದರ ಹಿಂದಿನ ಅವಧಿಯಲ್ಲಿ 102 ಪ್ರಕರಣಗಳು ದಾಖಲಾಗಿದ್ದವು.

ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಸಂಜಯ್ ಭಂಡಾರ ಆರ್ಥಿಕ ವಂಚನೆ ಮಾಡಿ ವಿದೇಶಗಳಲ್ಲಿ ಹೋಗಿ ನೆಲೆಸಿದ್ದಾರೆ, ಆದರೆ ಇಡಿ ಅವರನ್ನು ದೇಶಕ್ಕೆ ತರುವಲ್ಲಿ ಪ್ರಯತ್ನಿಸುತ್ತಿದೆ ಎಂದು ಹೇಳಿಕೊಂಡಿದೆ. ಪ್ರತಿಪಕ್ಷಗಳು ಈ ಮೂವರು ಉದ್ಯಮಿಗಳಿಗೆ ದೇಶ ಬಿಟ್ಟು ಪಲಾಯನ ಮಾಡಲು ಸಹಕಾರಿಯಾದ ವ್ಯವಸ್ಥೆಯ ಬಗ್ಗೆ ಹಲವು ಬಾರಿ ಟೀಕಿಸಿದ್ದವು.

ಇದನ್ನು ಓದಿ: ಚುನಾವಣಾ ಬಾಂಡ್‌ ಯೋಜನೆಗೆ ಜನಸಾಮಾನ್ಯರ ತೆರಿಗೆಯ ’14 ಕೋಟಿ ರೂ.’ ವ್ಯಯಿಸಿದ್ದ ಮೋದಿ ಸರಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...