Homeಮುಖಪುಟಮೋದಿ ಆಡಳಿತದ 10 ವರ್ಷಗಳಲ್ಲಿ 'ED' ದಾಳಿಗಳಲ್ಲಿ ಹೆಚ್ಚಳ: ವರದಿ

ಮೋದಿ ಆಡಳಿತದ 10 ವರ್ಷಗಳಲ್ಲಿ ‘ED’ ದಾಳಿಗಳಲ್ಲಿ ಹೆಚ್ಚಳ: ವರದಿ

- Advertisement -
- Advertisement -

ಮೋದಿ ಆಡಳಿತದ ಕಳೆದ 10 ವರ್ಷಗಳಲ್ಲಿ ಜಾರಿ ನಿರ್ದೇಶನಾಲಯದ ದಾಳಿ ಮತ್ತು, ಆಸ್ತಿಮುಟ್ಟುಗೋಲು ಪ್ರಮಾಣದಲ್ಲಿ ಭಾರೀ ಹೆಚ್ಚಳವಾಗಿದೆ ಎಂದು ವರದಿಯೊಂದು ಬಹಿರಂಗಪಡಿಸಿದೆ. ಬಿಜೆಪಿ ಸರಕಾರ ‘ಇಡಿ’ ಮತ್ತು ಸಿಬಿಐಯಂತಹ ಸರಕಾರಿ ಸಂಸ್ಥೆಗಳನ್ನು ಪ್ರತಿಪಕ್ಷಗಳ ನಾಯಕರನ್ನು ಗುರಿಯಾಗಿಸಲು, ಮಟ್ಟಹಾಕಲು ಬಳಸುತ್ತಿದೆ ಎಂದು ವಿಪಕ್ಷಗಳು ಟೀಕಿಸುತ್ತಿರುವ ಹೊಸ್ತಿಲಲ್ಲೇ ಈ ವರದಿ ಬಹಿರಂಗವಾಗಿದೆ.

2014ರಿಂದ ಕಳೆದ 10 ವರ್ಷಗಳಲ್ಲಿ ಅಕ್ರಮ ಹಣ ವರ್ಗಾವಣೆ ವಿರೋಧಿ ಕಾನೂನಿನಡಿಯಲ್ಲಿ ಜಾರಿ ನಿರ್ದೇಶನಾಲಯ (ED) ನಡೆಸಿದ ದಾಳಿಗಳ ಪ್ರಮಾಣದಲ್ಲಿ 86 ಪಟ್ಟು ಹೆಚ್ಚಾಗಿದೆ, ಆಸ್ತಿ ಮುಟ್ಟುಗೋಲು ಪ್ರಮಾಣದಲ್ಲಿ 25 ಪಟ್ಟು ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ. ಜುಲೈ 2005ರಿಂದ ಮಾರ್ಚ್ 2014 ರವರೆಗಿನ ಒಂಬತ್ತು ವರ್ಷಗಳ ಅವಧಿ ಮತ್ತು ಏಪ್ರಿಲ್ 2014ರಿಂದ  ಮಾರ್ಚ್ 2024ರ ನಡುವೆ ಕಳೆದ 10 ವರ್ಷಗಳಲ್ಲಿನ ದಾಖಲೆಯನ್ನು ವಿಶ್ಲೇಷಿಸಿ ಪಿಟಿಐ ಈ ಕುರಿತ ವರದಿಯನ್ನು ಸಿದ್ಧಪಡಿಸಿದೆ.

PMLAಅನ್ನು 2002ರಲ್ಲಿ ಜಾರಿಗೊಳಿಸಲಾಗಿದೆ ಮತ್ತು ತೆರಿಗೆ ವಂಚನೆ, ಕಪ್ಪು ಹಣ ಮತ್ತು ಅಕ್ರಮ ಹಣ ವರ್ಗಾವಣೆ ಕುರಿತ ಗಂಭೀರ ಅಪರಾಧಗಳ ಬಗ್ಗೆ ಕ್ರಮಕ್ಕೆ ಜುಲೈ 1, 2005ರಿಂದ PMLA ಕಾಯ್ದೆಯನ್ನು ಜಾರಿಗೆ ತರಲಾಗಿದೆ.

ಕಳೆದ 1 ದಶಕದಲ್ಲಿ ಇಡಿ ಕ್ರಮವು ಪ್ರತಿಪಕ್ಷಗಳು ಮತ್ತು ಬಿಜೆಪಿ ವಿರುದ್ಧ ಮಾತನಾಡುವವರ ವಿರುದ್ಧದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ “ದಬ್ಬಾಳಿಕೆಯ” ತಂತ್ರಗಳ ಭಾಗವಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದರೆ, ಕೇಂದ್ರ ಸರ್ಕಾರ ಮತ್ತು ಬಿಜೆಪಿ ಪಕ್ಷವು, ಜಾರಿ ನಿರ್ದೇಶನಾಲಯವು ಸ್ವತಂತ್ರವಾಗಿದೆ ಮತ್ತು ಅದರ ತನಿಖೆಗಳು ಸಂಪೂರ್ಣವಾಗಿ ಅಕ್ರಮ ಮತ್ತು ಭ್ರಷ್ಟರ ವಿರುದ್ಧದ ಕಾರ್ಯಚರಣೆಯ ಭಾಗವಾಗಿದೆ ಎಂದು ‘ಇಡಿ’ ದಾಳಿಯನ್ನು ಸಮರ್ಥಿಸಿಕೊಳ್ಳುತ್ತಾ ಬಂದಿದೆ.

2005-14ರ ಅವಧಿಯಲ್ಲಿ ಒಟ್ಟು 1,797 ದೂರುಗಳು ಮಾತ್ರ ಜಾರಿ ನಿರ್ದೇಶನಾಲಯ ದಾಖಲಿಸಿದ್ದವು, ಆದರೆ  2014ರಿಂದ 2024ರ ಅವಧಿಯಲ್ಲಿ ಕಳೆದ 10 ವರ್ಷಗಳಲ್ಲಿ 5,155 PMLA ಪ್ರಕರಣಗಳನ್ನು ದಾಖಲಿಸಿದೆ, ಇದು 2005-14ರ ಅವಧಿಗೆ ಹೋಲಿಸಿದರೆ ಮೂರು ಪಟ್ಟು ಹೆಚ್ಚಳ ಎಂದು ವಿಶ್ಲೇಷಣೆಯು ಉಲ್ಲೇಖಿಸಿದೆ.

2014ರ ಹಣಕಾಸು ವರ್ಷದಿಂದ ಜಾರಿ ನಿರ್ದೇಶನಾಲಯವು ಇದುವರೆಗೆ 63 ವ್ಯಕ್ತಿಗಳನ್ನು ಮನಿ ಲಾಂಡರಿಂಗ್ ವಿರೋಧಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಿದೆ ಎಂದು ಮಾಹಿತಿಯು ತೋರಿಸುತ್ತದೆ. 2014-2024ರ ಅವಧಿಯಲ್ಲಿ ದೇಶಾದ್ಯಂತ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ 7,264 ದಾಳಿಗಳನ್ನು ನಡೆಸಿದೆ. ಇದು ಯುಪಿಎ ಸರಕಾರದ 10ವರ್ಷದ ಅವಧಿಗೆ ಹೋಲಿಸಿದೆ 86 ಪಟ್ಟು ಹೆಚ್ಚಳವಾಗಿದೆ ಅಂದರೆ ಯುಪಿಎ ಅವಧಿಯಲ್ಲಿ 84 ದಾಳಿಗಳನ್ನು ನಡೆಸಲಾಗಿತ್ತು.

ಕಳೆದ ಒಂದು ದಶಕದಲ್ಲಿ ಒಟ್ಟು 755 ಜನರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ ಮತ್ತು 1,21,618 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. 2005-14ರ ಅವಧಿಯಲ್ಲಿ 29 ಮಂದಿಯ ಬಂಧನ ನಡೆದಿತ್ತು ಮತ್ತು  5,086.43 ಕೋಟಿ ರೂ. ಜಪ್ತಿ ಮಾಡಲಾಗಿತ್ತು. ಈ ಅಂಕಿಅಂಶಗಳು ಯುಪಿಎ ಅವಧಿಗೆ ಹೋಲಿಸಿದರೆ ಬಂಧನಗಳು 26 ಪಟ್ಟು ಹೆಚ್ಚಳವಾಗಿರುವುದನ್ನು ತೋರಿಸುತ್ತದೆ. 2014ರಿಂದ 2024ರವರೆಗೆ ಒಂದು ದಶಕದಲ್ಲಿ ದೋಷಾರೋಪ ಪಟ್ಟಿಗಳ ಸಲ್ಲಿಕೆಯು ಅದರ ಹಿಂದಿನ ದಶಕಕ್ಕಿಂತ 12 ಪಟ್ಟು ಹೆಚ್ಚಳವನ್ನು ಕಂಡಿದೆ. 1,281 ಪ್ರಾಸಿಕ್ಯೂಶನ್ ದೂರುಗಳನ್ನು ನ್ಯಾಯಾಲಯಗಳ ಮುಂದೆ ದಾಖಲಿಸಲಾಗಿತ್ತು ಹಾಗೂ ಅದರ ಹಿಂದಿನ ಅವಧಿಯಲ್ಲಿ 102 ಪ್ರಕರಣಗಳು ದಾಖಲಾಗಿದ್ದವು.

ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಸಂಜಯ್ ಭಂಡಾರ ಆರ್ಥಿಕ ವಂಚನೆ ಮಾಡಿ ವಿದೇಶಗಳಲ್ಲಿ ಹೋಗಿ ನೆಲೆಸಿದ್ದಾರೆ, ಆದರೆ ಇಡಿ ಅವರನ್ನು ದೇಶಕ್ಕೆ ತರುವಲ್ಲಿ ಪ್ರಯತ್ನಿಸುತ್ತಿದೆ ಎಂದು ಹೇಳಿಕೊಂಡಿದೆ. ಪ್ರತಿಪಕ್ಷಗಳು ಈ ಮೂವರು ಉದ್ಯಮಿಗಳಿಗೆ ದೇಶ ಬಿಟ್ಟು ಪಲಾಯನ ಮಾಡಲು ಸಹಕಾರಿಯಾದ ವ್ಯವಸ್ಥೆಯ ಬಗ್ಗೆ ಹಲವು ಬಾರಿ ಟೀಕಿಸಿದ್ದವು.

ಇದನ್ನು ಓದಿ: ಚುನಾವಣಾ ಬಾಂಡ್‌ ಯೋಜನೆಗೆ ಜನಸಾಮಾನ್ಯರ ತೆರಿಗೆಯ ’14 ಕೋಟಿ ರೂ.’ ವ್ಯಯಿಸಿದ್ದ ಮೋದಿ ಸರಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...