Homeಮುಖಪುಟ'ED' ಸಮನ್ಸ್ ನೀಡುವಾಗ ಕನಿಷ್ಠ ಆರೋಪಗಳ ಸಾರವನ್ನು ಒದಗಿಸಬೇಕು: ಅಲಹಾಬಾದ್ ಹೈಕೋರ್ಟ್

‘ED’ ಸಮನ್ಸ್ ನೀಡುವಾಗ ಕನಿಷ್ಠ ಆರೋಪಗಳ ಸಾರವನ್ನು ಒದಗಿಸಬೇಕು: ಅಲಹಾಬಾದ್ ಹೈಕೋರ್ಟ್

- Advertisement -
- Advertisement -

ಜಾರಿ ನಿರ್ದೇಶನಾಲಯದ ಪ್ರರಕಣದಲ್ಲಿ ಇಸಿಐಆರ್ ನೀಡದಿದ್ದಲ್ಲಿ ಕನಿಷ್ಠ ಪಕ್ಷ ಆರೋಪಗಳ ಸಾರಾಂಶವನ್ನು ಸಮನ್ಸ್ ಪಡೆದ ವ್ಯಕ್ತಿಗಳಿಗೆ ಒದಗಿಸಬೇಕು ಎಂದು ಅಲಹಬಾದ್‌ ಹೈಕೋರ್ಟ್‌ ಮಹತ್ವದ ತೀರ್ಪಿನಲ್ಲಿ ತಿಳಿಸಿದೆ.

ಜಾರಿ ನಿರ್ದೇಶನಾಲಯವು (ಇಡಿ) ‘ಜಾರಿ ಪ್ರಕರಣದ ಮಾಹಿತಿ ವರದಿಯ’ (ಇಸಿಐಆರ್) ನಕಲನ್ನು ಸಮನ್ಸ್ ಪಡೆದ ವ್ಯಕ್ತಿಗೆ ಒದಗಿಸದಿದ್ದಲ್ಲಿ, ಕನಿಷ್ಠ ಪಕ್ಷ ಆರೋಪದ ಬಗ್ಗೆ ತಿಳಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್  ಸೌರಭ್ ಮುಕುಂದ್/ ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಇತ್ತೀಚೆಗೆ ಹೇಳಿದೆ.

ನ್ಯಾಯಮೂರ್ತಿ ಮೊಹಮ್ಮದ್ ಫೈಜ್ ಆಲಂ ಖಾನ್ ಅವರು ವಿಚಾರಣೆ ಅಥವಾ ತನಿಖೆ ಎಲ್ಲರಿಗೂ ನ್ಯಾಯಯುತವಾಗಿರುವ ಅಗತ್ಯವಿದೆ, ವಿಶೇಷವಾಗಿ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್ 50ರ ಅಡಿಯಲ್ಲಿ ಇಡಿಯಿಂದ ಸಮನ್ಸ್ ಪಡೆಯುವಾಗ ನ್ಯಾಯಯುತವಾಗಿರಬೇಕು ಎಂದು ಹೇಳಿದ್ದಾರೆ. ಸಮನ್ಸ್ ಪಡೆದ ವ್ಯಕ್ತಿಗೆ ECIRನ ಪ್ರತಿಯನ್ನು ನೀಡುವುದು ಇಡಿ ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ ಎಂಬ ಅಂಶವನ್ನು ಗಮನಿಸಿ, ನ್ಯಾಯಮೂರ್ತಿ ಖಾನ್ ಹೇಳಿದ್ದಾರೆ.

ಸಾಮಾನ್ಯವಾಗಿ EDಯಿಂದ ಸಮನ್ಸ್‌ ಪಡೆದ ವ್ಯಕ್ತಿ, ECIRನ ನಕಲು ಇಲ್ಲದಿದ್ದರೆ ಕನಿಷ್ಠ ಈ ಬಗ್ಗೆ ತಿಳಿಯಬೇಕಿದೆ, ಆಗ ಅದಕ್ಕೆ ತಕ್ಕಂತೆ ತನ್ನನ್ನು ಆಪಾದಿತ ವ್ಯಕ್ತಿ ತಾನು ಸಿದ್ಧಪಡಿಸಿಕೊಳ್ಳಬಹುದು ಅಥವಾ ಸಮನ್ಸ್ ಪಡೆದ ವ್ಯಕ್ತಿಯನ್ನು ವಿಚಾರಣೆ ನಡೆಸುವಾಗ EDಯಿಂದ ಕೇಳಬಹುದಾದ ಪ್ರಶ್ನೆಗಳಿಗೆ ಉತ್ತರಿಸಲು ಸಂಬಂಧಿತ ದಾಖಲೆಗಳನ್ನು ಸಂಗ್ರಹಿಸಬಹುದು ಎಂದು ಹೇಳಿದ್ದಾರೆ. ಇದಲ್ಲದೆ ಬಂಧಿಸುವ ಸಾಧ್ಯತೆಯಿದೆ ಎಂಬ ಕಾರಣಕ್ಕಾಗಿ ಪಿಎಂಎಲ್‌ಎಯ ಸೆಕ್ಷನ್ 50ರ ಅಡಿಯಲ್ಲಿ ‘ಇಡಿ’ ನೀಡಿದ ಸಮನ್ಸ್‌ನಿಂದ ತಪ್ಪಿಸಿಕೊಳ್ಳಲು ಯಾವುದೇ ವ್ಯಕ್ತಿಗೆ ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ನ್ಯಾಯಾಲಯ ಹೇಳಿದೆ.

ತನಿಖಾ ಪ್ರಕ್ರಿಯೆಯ ಸಮಯದಲ್ಲಿ, ಸಮನ್ಸ್ ಪಡೆದ ವ್ಯಕ್ತಿಯು ಆರೋಪಿಯಲ್ಲ. ಕೇವಲ ECIR ನೋಂದಣಿಯು ಒಬ್ಬ ವ್ಯಕ್ತಿಯನ್ನು ಆರೋಪಿಯನ್ನಾಗಿ ಮಾಡುವುದಿಲ್ಲ. ಬಂಧನಕ್ಕೊಳಗಾದ ಮೇಲೆ ಅಥವಾ ವಿಚಾರಣೆಗೆ ಒಳಗಾದ ನಂತರ ಅವನು ಅಂತಿಮವಾಗಿ ಆರೋಪಿಯಾಗಬಹುದು ಎಂದು ಕೋರ್ಟ್‌ ಗಮನಿಸಿದೆ.

ಎಸ್‌ಎಫ್‌ಐಒ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ನೋದಲ್ಲಿ ಇಡಿ ದಾಖಲಿಸಿರುವ ಎರಡು ಇಸಿಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಪ್ರಕರಣದ ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯಗಳನ್ನು ನೀಡಿದೆ. ಎರಡು ಇಸಿಐಆರ್‌ಗಳಿಗೆ ಸಂಬಂಧಿಸಿದಂತೆ ಅರ್ಜಿದಾರ ಸೌರಭ್ ಮುಕುಂದ್ ಅವರಿಗೆ ಈ ವರ್ಷದ ಫೆಬ್ರವರಿಯಲ್ಲಿ ಇಡಿ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ನೀಡಿರುವುದು ತಮಗೆ ಕಿರುಕುಳ ನೀಡುವ ಪ್ರಯತ್ನವಾಗಿದೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಪ್ರಕರಣದಲ್ಲಿ EDಯಿಂದ ECIRನ್ನು ಈಗಾಗಲೇ ದಾಖಲಿಸಿರುವುದರಿಂದ, ಅದೇ ಸಂದರ್ಭಗಳಲ್ಲಿ ಎರಡು ECIRಗಳನ್ನು ದಾಖಲಿಸಲು ಸಾಧ್ಯವಿಲ್ಲ ಎಂದು ವಾದಿಸಲಾಗಿದೆ. ಎರಡು ಇಸಿಐಆರ್‌ಗಳ ಬಗ್ಗೆ ಮುಕುಂದ್‌ಗೆ ಯಾವುದೇ ವಿವರಗಳನ್ನು ನೀಡಲಾಗಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.

ಕೊನೆಯಲ್ಲಿ ನ್ಯಾಯಾಲಯವು ಪ್ರಸ್ತುತ ಅರ್ಜಿಯನ್ನು ಕೇವಲ ಆತಂಕದ ಮೇಲೆ ಸಲ್ಲಿಸಲಾಗಿದೆ ಎಂದು ಹೇಳಿದೆ, ಏಕೆಂದರೆ ಅರ್ಜಿದಾರರಿಗೆ ಆರೋಪಿ ಅಥವಾ ಸಾಕ್ಷಿಯಾಗಿ ಸಮನ್ಸ್ ನೀಡಲಾಗುತ್ತಿದೆಯೇ ಎಂದು ತಿಳಿದಿಲ್ಲ. ವ್ಯಕ್ತಿಯ ವಿರುದ್ಧ ಸಾಕಷ್ಟು ದಾಖಲೆಗಳೊಂದಿಗೆ ತನಿಖಾ ಸಂಸ್ಥೆಯು ಕಾನೂನಿನ ಪ್ರಕಾರ ಕಾರ್ಯನಿರ್ವಹಿಸಲು ಅವಕಾಶವಿದೆ ಮತ್ತು ಆರಂಭಿಕ ಹಂತದಲ್ಲಿ ತನಿಖೆ ಪ್ರಕ್ರಿಯೆಗೆ ಅಡ್ಡಿಯಾಗಬಾರದು ಎಂದು ಹೇಳಿದೆ. ಸೌರಭ್ ಮುಕುಂದ್/ ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಅರ್ಜಿದಾರರಿಗೆ ನೀಡಲಾದ ಇಸಿಐಆರ್ ಮತ್ತು ಸಮನ್ಸ್ ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.

ಇದನ್ನು ಓದಿ: ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನಕ್ಕೆ ತಿದ್ದುಪಡಿ: ವಿವಾದ ಸೃಷ್ಟಸಿದ ಬಿಜೆಪಿ ನಾಯಕಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...