Homeಮುಖಪುಟ'ED' ಸಮನ್ಸ್ ನೀಡುವಾಗ ಕನಿಷ್ಠ ಆರೋಪಗಳ ಸಾರವನ್ನು ಒದಗಿಸಬೇಕು: ಅಲಹಾಬಾದ್ ಹೈಕೋರ್ಟ್

‘ED’ ಸಮನ್ಸ್ ನೀಡುವಾಗ ಕನಿಷ್ಠ ಆರೋಪಗಳ ಸಾರವನ್ನು ಒದಗಿಸಬೇಕು: ಅಲಹಾಬಾದ್ ಹೈಕೋರ್ಟ್

- Advertisement -
- Advertisement -

ಜಾರಿ ನಿರ್ದೇಶನಾಲಯದ ಪ್ರರಕಣದಲ್ಲಿ ಇಸಿಐಆರ್ ನೀಡದಿದ್ದಲ್ಲಿ ಕನಿಷ್ಠ ಪಕ್ಷ ಆರೋಪಗಳ ಸಾರಾಂಶವನ್ನು ಸಮನ್ಸ್ ಪಡೆದ ವ್ಯಕ್ತಿಗಳಿಗೆ ಒದಗಿಸಬೇಕು ಎಂದು ಅಲಹಬಾದ್‌ ಹೈಕೋರ್ಟ್‌ ಮಹತ್ವದ ತೀರ್ಪಿನಲ್ಲಿ ತಿಳಿಸಿದೆ.

ಜಾರಿ ನಿರ್ದೇಶನಾಲಯವು (ಇಡಿ) ‘ಜಾರಿ ಪ್ರಕರಣದ ಮಾಹಿತಿ ವರದಿಯ’ (ಇಸಿಐಆರ್) ನಕಲನ್ನು ಸಮನ್ಸ್ ಪಡೆದ ವ್ಯಕ್ತಿಗೆ ಒದಗಿಸದಿದ್ದಲ್ಲಿ, ಕನಿಷ್ಠ ಪಕ್ಷ ಆರೋಪದ ಬಗ್ಗೆ ತಿಳಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್  ಸೌರಭ್ ಮುಕುಂದ್/ ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಇತ್ತೀಚೆಗೆ ಹೇಳಿದೆ.

ನ್ಯಾಯಮೂರ್ತಿ ಮೊಹಮ್ಮದ್ ಫೈಜ್ ಆಲಂ ಖಾನ್ ಅವರು ವಿಚಾರಣೆ ಅಥವಾ ತನಿಖೆ ಎಲ್ಲರಿಗೂ ನ್ಯಾಯಯುತವಾಗಿರುವ ಅಗತ್ಯವಿದೆ, ವಿಶೇಷವಾಗಿ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್ 50ರ ಅಡಿಯಲ್ಲಿ ಇಡಿಯಿಂದ ಸಮನ್ಸ್ ಪಡೆಯುವಾಗ ನ್ಯಾಯಯುತವಾಗಿರಬೇಕು ಎಂದು ಹೇಳಿದ್ದಾರೆ. ಸಮನ್ಸ್ ಪಡೆದ ವ್ಯಕ್ತಿಗೆ ECIRನ ಪ್ರತಿಯನ್ನು ನೀಡುವುದು ಇಡಿ ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ ಎಂಬ ಅಂಶವನ್ನು ಗಮನಿಸಿ, ನ್ಯಾಯಮೂರ್ತಿ ಖಾನ್ ಹೇಳಿದ್ದಾರೆ.

ಸಾಮಾನ್ಯವಾಗಿ EDಯಿಂದ ಸಮನ್ಸ್‌ ಪಡೆದ ವ್ಯಕ್ತಿ, ECIRನ ನಕಲು ಇಲ್ಲದಿದ್ದರೆ ಕನಿಷ್ಠ ಈ ಬಗ್ಗೆ ತಿಳಿಯಬೇಕಿದೆ, ಆಗ ಅದಕ್ಕೆ ತಕ್ಕಂತೆ ತನ್ನನ್ನು ಆಪಾದಿತ ವ್ಯಕ್ತಿ ತಾನು ಸಿದ್ಧಪಡಿಸಿಕೊಳ್ಳಬಹುದು ಅಥವಾ ಸಮನ್ಸ್ ಪಡೆದ ವ್ಯಕ್ತಿಯನ್ನು ವಿಚಾರಣೆ ನಡೆಸುವಾಗ EDಯಿಂದ ಕೇಳಬಹುದಾದ ಪ್ರಶ್ನೆಗಳಿಗೆ ಉತ್ತರಿಸಲು ಸಂಬಂಧಿತ ದಾಖಲೆಗಳನ್ನು ಸಂಗ್ರಹಿಸಬಹುದು ಎಂದು ಹೇಳಿದ್ದಾರೆ. ಇದಲ್ಲದೆ ಬಂಧಿಸುವ ಸಾಧ್ಯತೆಯಿದೆ ಎಂಬ ಕಾರಣಕ್ಕಾಗಿ ಪಿಎಂಎಲ್‌ಎಯ ಸೆಕ್ಷನ್ 50ರ ಅಡಿಯಲ್ಲಿ ‘ಇಡಿ’ ನೀಡಿದ ಸಮನ್ಸ್‌ನಿಂದ ತಪ್ಪಿಸಿಕೊಳ್ಳಲು ಯಾವುದೇ ವ್ಯಕ್ತಿಗೆ ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ನ್ಯಾಯಾಲಯ ಹೇಳಿದೆ.

ತನಿಖಾ ಪ್ರಕ್ರಿಯೆಯ ಸಮಯದಲ್ಲಿ, ಸಮನ್ಸ್ ಪಡೆದ ವ್ಯಕ್ತಿಯು ಆರೋಪಿಯಲ್ಲ. ಕೇವಲ ECIR ನೋಂದಣಿಯು ಒಬ್ಬ ವ್ಯಕ್ತಿಯನ್ನು ಆರೋಪಿಯನ್ನಾಗಿ ಮಾಡುವುದಿಲ್ಲ. ಬಂಧನಕ್ಕೊಳಗಾದ ಮೇಲೆ ಅಥವಾ ವಿಚಾರಣೆಗೆ ಒಳಗಾದ ನಂತರ ಅವನು ಅಂತಿಮವಾಗಿ ಆರೋಪಿಯಾಗಬಹುದು ಎಂದು ಕೋರ್ಟ್‌ ಗಮನಿಸಿದೆ.

ಎಸ್‌ಎಫ್‌ಐಒ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ನೋದಲ್ಲಿ ಇಡಿ ದಾಖಲಿಸಿರುವ ಎರಡು ಇಸಿಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಪ್ರಕರಣದ ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯಗಳನ್ನು ನೀಡಿದೆ. ಎರಡು ಇಸಿಐಆರ್‌ಗಳಿಗೆ ಸಂಬಂಧಿಸಿದಂತೆ ಅರ್ಜಿದಾರ ಸೌರಭ್ ಮುಕುಂದ್ ಅವರಿಗೆ ಈ ವರ್ಷದ ಫೆಬ್ರವರಿಯಲ್ಲಿ ಇಡಿ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ನೀಡಿರುವುದು ತಮಗೆ ಕಿರುಕುಳ ನೀಡುವ ಪ್ರಯತ್ನವಾಗಿದೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಪ್ರಕರಣದಲ್ಲಿ EDಯಿಂದ ECIRನ್ನು ಈಗಾಗಲೇ ದಾಖಲಿಸಿರುವುದರಿಂದ, ಅದೇ ಸಂದರ್ಭಗಳಲ್ಲಿ ಎರಡು ECIRಗಳನ್ನು ದಾಖಲಿಸಲು ಸಾಧ್ಯವಿಲ್ಲ ಎಂದು ವಾದಿಸಲಾಗಿದೆ. ಎರಡು ಇಸಿಐಆರ್‌ಗಳ ಬಗ್ಗೆ ಮುಕುಂದ್‌ಗೆ ಯಾವುದೇ ವಿವರಗಳನ್ನು ನೀಡಲಾಗಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.

ಕೊನೆಯಲ್ಲಿ ನ್ಯಾಯಾಲಯವು ಪ್ರಸ್ತುತ ಅರ್ಜಿಯನ್ನು ಕೇವಲ ಆತಂಕದ ಮೇಲೆ ಸಲ್ಲಿಸಲಾಗಿದೆ ಎಂದು ಹೇಳಿದೆ, ಏಕೆಂದರೆ ಅರ್ಜಿದಾರರಿಗೆ ಆರೋಪಿ ಅಥವಾ ಸಾಕ್ಷಿಯಾಗಿ ಸಮನ್ಸ್ ನೀಡಲಾಗುತ್ತಿದೆಯೇ ಎಂದು ತಿಳಿದಿಲ್ಲ. ವ್ಯಕ್ತಿಯ ವಿರುದ್ಧ ಸಾಕಷ್ಟು ದಾಖಲೆಗಳೊಂದಿಗೆ ತನಿಖಾ ಸಂಸ್ಥೆಯು ಕಾನೂನಿನ ಪ್ರಕಾರ ಕಾರ್ಯನಿರ್ವಹಿಸಲು ಅವಕಾಶವಿದೆ ಮತ್ತು ಆರಂಭಿಕ ಹಂತದಲ್ಲಿ ತನಿಖೆ ಪ್ರಕ್ರಿಯೆಗೆ ಅಡ್ಡಿಯಾಗಬಾರದು ಎಂದು ಹೇಳಿದೆ. ಸೌರಭ್ ಮುಕುಂದ್/ ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಅರ್ಜಿದಾರರಿಗೆ ನೀಡಲಾದ ಇಸಿಐಆರ್ ಮತ್ತು ಸಮನ್ಸ್ ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.

ಇದನ್ನು ಓದಿ: ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನಕ್ಕೆ ತಿದ್ದುಪಡಿ: ವಿವಾದ ಸೃಷ್ಟಸಿದ ಬಿಜೆಪಿ ನಾಯಕಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...