Homeಮುಖಪುಟ'ED' ಸಮನ್ಸ್ ನೀಡುವಾಗ ಕನಿಷ್ಠ ಆರೋಪಗಳ ಸಾರವನ್ನು ಒದಗಿಸಬೇಕು: ಅಲಹಾಬಾದ್ ಹೈಕೋರ್ಟ್

‘ED’ ಸಮನ್ಸ್ ನೀಡುವಾಗ ಕನಿಷ್ಠ ಆರೋಪಗಳ ಸಾರವನ್ನು ಒದಗಿಸಬೇಕು: ಅಲಹಾಬಾದ್ ಹೈಕೋರ್ಟ್

- Advertisement -
- Advertisement -

ಜಾರಿ ನಿರ್ದೇಶನಾಲಯದ ಪ್ರರಕಣದಲ್ಲಿ ಇಸಿಐಆರ್ ನೀಡದಿದ್ದಲ್ಲಿ ಕನಿಷ್ಠ ಪಕ್ಷ ಆರೋಪಗಳ ಸಾರಾಂಶವನ್ನು ಸಮನ್ಸ್ ಪಡೆದ ವ್ಯಕ್ತಿಗಳಿಗೆ ಒದಗಿಸಬೇಕು ಎಂದು ಅಲಹಬಾದ್‌ ಹೈಕೋರ್ಟ್‌ ಮಹತ್ವದ ತೀರ್ಪಿನಲ್ಲಿ ತಿಳಿಸಿದೆ.

ಜಾರಿ ನಿರ್ದೇಶನಾಲಯವು (ಇಡಿ) ‘ಜಾರಿ ಪ್ರಕರಣದ ಮಾಹಿತಿ ವರದಿಯ’ (ಇಸಿಐಆರ್) ನಕಲನ್ನು ಸಮನ್ಸ್ ಪಡೆದ ವ್ಯಕ್ತಿಗೆ ಒದಗಿಸದಿದ್ದಲ್ಲಿ, ಕನಿಷ್ಠ ಪಕ್ಷ ಆರೋಪದ ಬಗ್ಗೆ ತಿಳಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್  ಸೌರಭ್ ಮುಕುಂದ್/ ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಇತ್ತೀಚೆಗೆ ಹೇಳಿದೆ.

ನ್ಯಾಯಮೂರ್ತಿ ಮೊಹಮ್ಮದ್ ಫೈಜ್ ಆಲಂ ಖಾನ್ ಅವರು ವಿಚಾರಣೆ ಅಥವಾ ತನಿಖೆ ಎಲ್ಲರಿಗೂ ನ್ಯಾಯಯುತವಾಗಿರುವ ಅಗತ್ಯವಿದೆ, ವಿಶೇಷವಾಗಿ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್ 50ರ ಅಡಿಯಲ್ಲಿ ಇಡಿಯಿಂದ ಸಮನ್ಸ್ ಪಡೆಯುವಾಗ ನ್ಯಾಯಯುತವಾಗಿರಬೇಕು ಎಂದು ಹೇಳಿದ್ದಾರೆ. ಸಮನ್ಸ್ ಪಡೆದ ವ್ಯಕ್ತಿಗೆ ECIRನ ಪ್ರತಿಯನ್ನು ನೀಡುವುದು ಇಡಿ ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ ಎಂಬ ಅಂಶವನ್ನು ಗಮನಿಸಿ, ನ್ಯಾಯಮೂರ್ತಿ ಖಾನ್ ಹೇಳಿದ್ದಾರೆ.

ಸಾಮಾನ್ಯವಾಗಿ EDಯಿಂದ ಸಮನ್ಸ್‌ ಪಡೆದ ವ್ಯಕ್ತಿ, ECIRನ ನಕಲು ಇಲ್ಲದಿದ್ದರೆ ಕನಿಷ್ಠ ಈ ಬಗ್ಗೆ ತಿಳಿಯಬೇಕಿದೆ, ಆಗ ಅದಕ್ಕೆ ತಕ್ಕಂತೆ ತನ್ನನ್ನು ಆಪಾದಿತ ವ್ಯಕ್ತಿ ತಾನು ಸಿದ್ಧಪಡಿಸಿಕೊಳ್ಳಬಹುದು ಅಥವಾ ಸಮನ್ಸ್ ಪಡೆದ ವ್ಯಕ್ತಿಯನ್ನು ವಿಚಾರಣೆ ನಡೆಸುವಾಗ EDಯಿಂದ ಕೇಳಬಹುದಾದ ಪ್ರಶ್ನೆಗಳಿಗೆ ಉತ್ತರಿಸಲು ಸಂಬಂಧಿತ ದಾಖಲೆಗಳನ್ನು ಸಂಗ್ರಹಿಸಬಹುದು ಎಂದು ಹೇಳಿದ್ದಾರೆ. ಇದಲ್ಲದೆ ಬಂಧಿಸುವ ಸಾಧ್ಯತೆಯಿದೆ ಎಂಬ ಕಾರಣಕ್ಕಾಗಿ ಪಿಎಂಎಲ್‌ಎಯ ಸೆಕ್ಷನ್ 50ರ ಅಡಿಯಲ್ಲಿ ‘ಇಡಿ’ ನೀಡಿದ ಸಮನ್ಸ್‌ನಿಂದ ತಪ್ಪಿಸಿಕೊಳ್ಳಲು ಯಾವುದೇ ವ್ಯಕ್ತಿಗೆ ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ನ್ಯಾಯಾಲಯ ಹೇಳಿದೆ.

ತನಿಖಾ ಪ್ರಕ್ರಿಯೆಯ ಸಮಯದಲ್ಲಿ, ಸಮನ್ಸ್ ಪಡೆದ ವ್ಯಕ್ತಿಯು ಆರೋಪಿಯಲ್ಲ. ಕೇವಲ ECIR ನೋಂದಣಿಯು ಒಬ್ಬ ವ್ಯಕ್ತಿಯನ್ನು ಆರೋಪಿಯನ್ನಾಗಿ ಮಾಡುವುದಿಲ್ಲ. ಬಂಧನಕ್ಕೊಳಗಾದ ಮೇಲೆ ಅಥವಾ ವಿಚಾರಣೆಗೆ ಒಳಗಾದ ನಂತರ ಅವನು ಅಂತಿಮವಾಗಿ ಆರೋಪಿಯಾಗಬಹುದು ಎಂದು ಕೋರ್ಟ್‌ ಗಮನಿಸಿದೆ.

ಎಸ್‌ಎಫ್‌ಐಒ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ನೋದಲ್ಲಿ ಇಡಿ ದಾಖಲಿಸಿರುವ ಎರಡು ಇಸಿಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಪ್ರಕರಣದ ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯಗಳನ್ನು ನೀಡಿದೆ. ಎರಡು ಇಸಿಐಆರ್‌ಗಳಿಗೆ ಸಂಬಂಧಿಸಿದಂತೆ ಅರ್ಜಿದಾರ ಸೌರಭ್ ಮುಕುಂದ್ ಅವರಿಗೆ ಈ ವರ್ಷದ ಫೆಬ್ರವರಿಯಲ್ಲಿ ಇಡಿ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ನೀಡಿರುವುದು ತಮಗೆ ಕಿರುಕುಳ ನೀಡುವ ಪ್ರಯತ್ನವಾಗಿದೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಪ್ರಕರಣದಲ್ಲಿ EDಯಿಂದ ECIRನ್ನು ಈಗಾಗಲೇ ದಾಖಲಿಸಿರುವುದರಿಂದ, ಅದೇ ಸಂದರ್ಭಗಳಲ್ಲಿ ಎರಡು ECIRಗಳನ್ನು ದಾಖಲಿಸಲು ಸಾಧ್ಯವಿಲ್ಲ ಎಂದು ವಾದಿಸಲಾಗಿದೆ. ಎರಡು ಇಸಿಐಆರ್‌ಗಳ ಬಗ್ಗೆ ಮುಕುಂದ್‌ಗೆ ಯಾವುದೇ ವಿವರಗಳನ್ನು ನೀಡಲಾಗಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.

ಕೊನೆಯಲ್ಲಿ ನ್ಯಾಯಾಲಯವು ಪ್ರಸ್ತುತ ಅರ್ಜಿಯನ್ನು ಕೇವಲ ಆತಂಕದ ಮೇಲೆ ಸಲ್ಲಿಸಲಾಗಿದೆ ಎಂದು ಹೇಳಿದೆ, ಏಕೆಂದರೆ ಅರ್ಜಿದಾರರಿಗೆ ಆರೋಪಿ ಅಥವಾ ಸಾಕ್ಷಿಯಾಗಿ ಸಮನ್ಸ್ ನೀಡಲಾಗುತ್ತಿದೆಯೇ ಎಂದು ತಿಳಿದಿಲ್ಲ. ವ್ಯಕ್ತಿಯ ವಿರುದ್ಧ ಸಾಕಷ್ಟು ದಾಖಲೆಗಳೊಂದಿಗೆ ತನಿಖಾ ಸಂಸ್ಥೆಯು ಕಾನೂನಿನ ಪ್ರಕಾರ ಕಾರ್ಯನಿರ್ವಹಿಸಲು ಅವಕಾಶವಿದೆ ಮತ್ತು ಆರಂಭಿಕ ಹಂತದಲ್ಲಿ ತನಿಖೆ ಪ್ರಕ್ರಿಯೆಗೆ ಅಡ್ಡಿಯಾಗಬಾರದು ಎಂದು ಹೇಳಿದೆ. ಸೌರಭ್ ಮುಕುಂದ್/ ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಅರ್ಜಿದಾರರಿಗೆ ನೀಡಲಾದ ಇಸಿಐಆರ್ ಮತ್ತು ಸಮನ್ಸ್ ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.

ಇದನ್ನು ಓದಿ: ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನಕ್ಕೆ ತಿದ್ದುಪಡಿ: ವಿವಾದ ಸೃಷ್ಟಸಿದ ಬಿಜೆಪಿ ನಾಯಕಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...