Homeಮುಖಪುಟ'ED' ಸಮನ್ಸ್ ನೀಡುವಾಗ ಕನಿಷ್ಠ ಆರೋಪಗಳ ಸಾರವನ್ನು ಒದಗಿಸಬೇಕು: ಅಲಹಾಬಾದ್ ಹೈಕೋರ್ಟ್

‘ED’ ಸಮನ್ಸ್ ನೀಡುವಾಗ ಕನಿಷ್ಠ ಆರೋಪಗಳ ಸಾರವನ್ನು ಒದಗಿಸಬೇಕು: ಅಲಹಾಬಾದ್ ಹೈಕೋರ್ಟ್

- Advertisement -
- Advertisement -

ಜಾರಿ ನಿರ್ದೇಶನಾಲಯದ ಪ್ರರಕಣದಲ್ಲಿ ಇಸಿಐಆರ್ ನೀಡದಿದ್ದಲ್ಲಿ ಕನಿಷ್ಠ ಪಕ್ಷ ಆರೋಪಗಳ ಸಾರಾಂಶವನ್ನು ಸಮನ್ಸ್ ಪಡೆದ ವ್ಯಕ್ತಿಗಳಿಗೆ ಒದಗಿಸಬೇಕು ಎಂದು ಅಲಹಬಾದ್‌ ಹೈಕೋರ್ಟ್‌ ಮಹತ್ವದ ತೀರ್ಪಿನಲ್ಲಿ ತಿಳಿಸಿದೆ.

ಜಾರಿ ನಿರ್ದೇಶನಾಲಯವು (ಇಡಿ) ‘ಜಾರಿ ಪ್ರಕರಣದ ಮಾಹಿತಿ ವರದಿಯ’ (ಇಸಿಐಆರ್) ನಕಲನ್ನು ಸಮನ್ಸ್ ಪಡೆದ ವ್ಯಕ್ತಿಗೆ ಒದಗಿಸದಿದ್ದಲ್ಲಿ, ಕನಿಷ್ಠ ಪಕ್ಷ ಆರೋಪದ ಬಗ್ಗೆ ತಿಳಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್  ಸೌರಭ್ ಮುಕುಂದ್/ ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಇತ್ತೀಚೆಗೆ ಹೇಳಿದೆ.

ನ್ಯಾಯಮೂರ್ತಿ ಮೊಹಮ್ಮದ್ ಫೈಜ್ ಆಲಂ ಖಾನ್ ಅವರು ವಿಚಾರಣೆ ಅಥವಾ ತನಿಖೆ ಎಲ್ಲರಿಗೂ ನ್ಯಾಯಯುತವಾಗಿರುವ ಅಗತ್ಯವಿದೆ, ವಿಶೇಷವಾಗಿ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್ 50ರ ಅಡಿಯಲ್ಲಿ ಇಡಿಯಿಂದ ಸಮನ್ಸ್ ಪಡೆಯುವಾಗ ನ್ಯಾಯಯುತವಾಗಿರಬೇಕು ಎಂದು ಹೇಳಿದ್ದಾರೆ. ಸಮನ್ಸ್ ಪಡೆದ ವ್ಯಕ್ತಿಗೆ ECIRನ ಪ್ರತಿಯನ್ನು ನೀಡುವುದು ಇಡಿ ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ ಎಂಬ ಅಂಶವನ್ನು ಗಮನಿಸಿ, ನ್ಯಾಯಮೂರ್ತಿ ಖಾನ್ ಹೇಳಿದ್ದಾರೆ.

ಸಾಮಾನ್ಯವಾಗಿ EDಯಿಂದ ಸಮನ್ಸ್‌ ಪಡೆದ ವ್ಯಕ್ತಿ, ECIRನ ನಕಲು ಇಲ್ಲದಿದ್ದರೆ ಕನಿಷ್ಠ ಈ ಬಗ್ಗೆ ತಿಳಿಯಬೇಕಿದೆ, ಆಗ ಅದಕ್ಕೆ ತಕ್ಕಂತೆ ತನ್ನನ್ನು ಆಪಾದಿತ ವ್ಯಕ್ತಿ ತಾನು ಸಿದ್ಧಪಡಿಸಿಕೊಳ್ಳಬಹುದು ಅಥವಾ ಸಮನ್ಸ್ ಪಡೆದ ವ್ಯಕ್ತಿಯನ್ನು ವಿಚಾರಣೆ ನಡೆಸುವಾಗ EDಯಿಂದ ಕೇಳಬಹುದಾದ ಪ್ರಶ್ನೆಗಳಿಗೆ ಉತ್ತರಿಸಲು ಸಂಬಂಧಿತ ದಾಖಲೆಗಳನ್ನು ಸಂಗ್ರಹಿಸಬಹುದು ಎಂದು ಹೇಳಿದ್ದಾರೆ. ಇದಲ್ಲದೆ ಬಂಧಿಸುವ ಸಾಧ್ಯತೆಯಿದೆ ಎಂಬ ಕಾರಣಕ್ಕಾಗಿ ಪಿಎಂಎಲ್‌ಎಯ ಸೆಕ್ಷನ್ 50ರ ಅಡಿಯಲ್ಲಿ ‘ಇಡಿ’ ನೀಡಿದ ಸಮನ್ಸ್‌ನಿಂದ ತಪ್ಪಿಸಿಕೊಳ್ಳಲು ಯಾವುದೇ ವ್ಯಕ್ತಿಗೆ ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ನ್ಯಾಯಾಲಯ ಹೇಳಿದೆ.

ತನಿಖಾ ಪ್ರಕ್ರಿಯೆಯ ಸಮಯದಲ್ಲಿ, ಸಮನ್ಸ್ ಪಡೆದ ವ್ಯಕ್ತಿಯು ಆರೋಪಿಯಲ್ಲ. ಕೇವಲ ECIR ನೋಂದಣಿಯು ಒಬ್ಬ ವ್ಯಕ್ತಿಯನ್ನು ಆರೋಪಿಯನ್ನಾಗಿ ಮಾಡುವುದಿಲ್ಲ. ಬಂಧನಕ್ಕೊಳಗಾದ ಮೇಲೆ ಅಥವಾ ವಿಚಾರಣೆಗೆ ಒಳಗಾದ ನಂತರ ಅವನು ಅಂತಿಮವಾಗಿ ಆರೋಪಿಯಾಗಬಹುದು ಎಂದು ಕೋರ್ಟ್‌ ಗಮನಿಸಿದೆ.

ಎಸ್‌ಎಫ್‌ಐಒ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ನೋದಲ್ಲಿ ಇಡಿ ದಾಖಲಿಸಿರುವ ಎರಡು ಇಸಿಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಪ್ರಕರಣದ ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯಗಳನ್ನು ನೀಡಿದೆ. ಎರಡು ಇಸಿಐಆರ್‌ಗಳಿಗೆ ಸಂಬಂಧಿಸಿದಂತೆ ಅರ್ಜಿದಾರ ಸೌರಭ್ ಮುಕುಂದ್ ಅವರಿಗೆ ಈ ವರ್ಷದ ಫೆಬ್ರವರಿಯಲ್ಲಿ ಇಡಿ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ನೀಡಿರುವುದು ತಮಗೆ ಕಿರುಕುಳ ನೀಡುವ ಪ್ರಯತ್ನವಾಗಿದೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಪ್ರಕರಣದಲ್ಲಿ EDಯಿಂದ ECIRನ್ನು ಈಗಾಗಲೇ ದಾಖಲಿಸಿರುವುದರಿಂದ, ಅದೇ ಸಂದರ್ಭಗಳಲ್ಲಿ ಎರಡು ECIRಗಳನ್ನು ದಾಖಲಿಸಲು ಸಾಧ್ಯವಿಲ್ಲ ಎಂದು ವಾದಿಸಲಾಗಿದೆ. ಎರಡು ಇಸಿಐಆರ್‌ಗಳ ಬಗ್ಗೆ ಮುಕುಂದ್‌ಗೆ ಯಾವುದೇ ವಿವರಗಳನ್ನು ನೀಡಲಾಗಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.

ಕೊನೆಯಲ್ಲಿ ನ್ಯಾಯಾಲಯವು ಪ್ರಸ್ತುತ ಅರ್ಜಿಯನ್ನು ಕೇವಲ ಆತಂಕದ ಮೇಲೆ ಸಲ್ಲಿಸಲಾಗಿದೆ ಎಂದು ಹೇಳಿದೆ, ಏಕೆಂದರೆ ಅರ್ಜಿದಾರರಿಗೆ ಆರೋಪಿ ಅಥವಾ ಸಾಕ್ಷಿಯಾಗಿ ಸಮನ್ಸ್ ನೀಡಲಾಗುತ್ತಿದೆಯೇ ಎಂದು ತಿಳಿದಿಲ್ಲ. ವ್ಯಕ್ತಿಯ ವಿರುದ್ಧ ಸಾಕಷ್ಟು ದಾಖಲೆಗಳೊಂದಿಗೆ ತನಿಖಾ ಸಂಸ್ಥೆಯು ಕಾನೂನಿನ ಪ್ರಕಾರ ಕಾರ್ಯನಿರ್ವಹಿಸಲು ಅವಕಾಶವಿದೆ ಮತ್ತು ಆರಂಭಿಕ ಹಂತದಲ್ಲಿ ತನಿಖೆ ಪ್ರಕ್ರಿಯೆಗೆ ಅಡ್ಡಿಯಾಗಬಾರದು ಎಂದು ಹೇಳಿದೆ. ಸೌರಭ್ ಮುಕುಂದ್/ ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಅರ್ಜಿದಾರರಿಗೆ ನೀಡಲಾದ ಇಸಿಐಆರ್ ಮತ್ತು ಸಮನ್ಸ್ ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.

ಇದನ್ನು ಓದಿ: ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನಕ್ಕೆ ತಿದ್ದುಪಡಿ: ವಿವಾದ ಸೃಷ್ಟಸಿದ ಬಿಜೆಪಿ ನಾಯಕಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...