HomeಮುಖಪುಟFEMA ಉಲ್ಲಂಘನೆ ಆರೋಪ : ನ್ಯೂಸ್‌ಕ್ಲಿಕ್‌ ಪೋರ್ಟಲ್‌, ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥಗೆ 184 ಕೋಟಿ ರೂ.ದಂಡ...

FEMA ಉಲ್ಲಂಘನೆ ಆರೋಪ : ನ್ಯೂಸ್‌ಕ್ಲಿಕ್‌ ಪೋರ್ಟಲ್‌, ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥಗೆ 184 ಕೋಟಿ ರೂ.ದಂಡ ವಿಧಿಸಿದ ಇಡಿ

- Advertisement -
- Advertisement -

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಎಫ್‌ಇಎಂಎ-ಫೆಮಾ) ಉಲ್ಲಂಘನೆಗೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಜಾಲತಾಣ ಮತ್ತು ಅದರ ಪ್ರಧಾನ ಸಂಪಾದಕ ಪ್ರಬೀರ್ ಪುರಕಾಯಸ್ಥ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) 184 ಕೋಟಿ ರೂಪಾಯಿ ದಂಡ ವಿಧಿಸಿದೆ ಎಂದು ಸೋಮವಾರ (ಫೆ.16) ವರದಿಯಾಗಿದೆ.

ನ್ಯೂಸ್‌ಕ್ಲಿಕ್ ಮಾಲೀಕತ್ವದ ‘ಪಿಪಿಕೆ ನ್ಯೂಸ್‌ಕ್ಲಿಕ್ ಸ್ಟುಡಿಯೋ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಗೆ 120 ಕೋಟಿ ರೂಪಾಯಿ ಹಾಗೂ ಪುರಕಾಯಸ್ಥ ಅವರಿಗೆ ವೈಯಕ್ತಿಕವಾಗಿ 64 ಕೋಟಿ ರೂಪಾಯಿ ದಂಡ ವಿಧಿಸಲಾಗಿದೆ.

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಧಿಯ ದುರುಪಯೋಗ ಮತ್ತು ರಫ್ತು ಸೇವೆಗಳ ತಪ್ಪು ಘೋಷಣೆಯ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಗಳು ಹೇಳಿವೆ.

ನ್ಯೂಸ್‌ ಕ್ಲಿಕ್ 2018-19ರ ಹಣಕಾಸು ವರ್ಷದಲ್ಲಿ ಸುಮಾರು 9.59 ಕೋಟಿ ರೂಪಾಯಿ ಎಫ್‌ಡಿಐ ಹಣವನ್ನು ತನ್ನ ವ್ಯವಹಾರದ ಸ್ವರೂಪದ ಬಗ್ಗೆ ತಪ್ಪು ಮಾಹಿತಿ ನೀಡಿ ಪಡೆದಿದೆ ಎಂದು ಇಡಿ ಆರೋಪಿಸಿದೆ. 2018-19 ರಿಂದ 2023-24ರ ಅವಧಿಯಲ್ಲಿ ಸೇವೆಗಳ ರಫ್ತಿಗಾಗಿ ಬಂದ 82.63 ಕೋಟಿ ರೂಪಾಯಿ ವಿದೇಶಿ ಹಣದ ವರ್ಗಾವಣೆಯಲ್ಲಿ ಫೆಮಾ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಹೇಳಿದೆ.

ಹಣ ಅಕ್ರಮ ವರ್ಗಾವಣೆ ಆರೋಪದ ಮೇಲೆ ಇಡಿ ಮೊದಲ ಬಾರಿಗೆ ಸೆಪ್ಟೆಂಬರ್ 2021ರಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯ ಸೈದುಲಾಜಾಬ್ ಪ್ರದೇಶದಲ್ಲಿರುವ ನ್ಯೂಸ್‌ಕ್ಲಿಕ್ ಕಚೇರಿಯ ಮೇಲೆ ದಾಳಿ ನಡೆಸಿತ್ತು. ಈ ದಾಳಿಯು ಸಂಸ್ಥೆಯ ವಿರುದ್ಧದ ತನಿಖೆಯ ಆರಂಭಿಕ ಹಂತವಾಗಿತ್ತು.

ವಿದೇಶಿ ಹೂಡಿಕೆಯಲ್ಲಿನ ಅಕ್ರಮ ಮತ್ತು ಚೀನಾ ಪರ ಪ್ರಚಾರಕ್ಕಾಗಿ ಹಣ ಪಡೆದಿದ್ದಾರೆ ಎಂಬ ಗಂಭೀರ ಆರೋಪಗಳನ್ನು ಮಾಡಿ ಈ ಕಾರ್ಯಾಚರಣೆ ನಡೆಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪುರಕಾಯಸ್ಥ ಸೇರಿದಂತೆ ಸುಮಾರು 25ಕ್ಕೂ ಹೆಚ್ಚು ಜನರ ಹೇಳಿಕೆಗಳನ್ನು ಇಡಿ ದಾಖಲಿಸಿಕೊಂಡಿದೆ. ಇದೇ ತನಿಖೆಯ ಮುಂದುವರಿದ ಭಾಗವಾಗಿ, ಪ್ರಸ್ತುತ ಫೆಬ್ರವರಿ 16,2026 ರಂದು ನ್ಯೂಸ್‌ಕ್ಲಿಕ್ ಮತ್ತು ಅದರ ಸಂಪಾದಕರಿಗೆ 184 ಕೋಟಿ ರೂಪಾಯಿ ದಂಡ ವಿಧಿಸಲಾಗಿದೆ ಎಂದು ವರದಿಯಾಗಿದೆ.

2023ರಲ್ಲಿ ಬಿಜೆಪಿ ದಿ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯ ವರದಿಯೊಂದನ್ನು ಉಲ್ಲೇಖಿಸಿ, ನ್ಯೂಸ್‌ಕ್ಲಿಕ್ ಪೋರ್ಟಲ್ ಮತ್ತು ಅದರ ಪ್ರವರ್ತಕರು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿತ್ತು.

ನ್ಯೂಸ್‌ಕ್ಲಿಕ್ ಜಾಗತಿಕ ಜಾಲದ ಭಾಗವಾಗಿದ್ದು, ಚೀನಾ ಸರ್ಕಾರದ ಮಾಧ್ಯಮಗಳೊಂದಿಗೆ ನಿಕಟ ಸಂಬಂಧ ಹೊಂದಿರುವ ಅಮೆರಿಕದ ಬಿಲಿಯನೇರ್ ನೆವಿಲ್ಲೆ ರಾಯ್ ಸಿಂಘಂ ಅವರಿಂದ ಹಣ ಪಡೆದು ಚೀನಾ ಪರ ಅಜೆಂಡಾವನ್ನು ಪ್ರಚಾರ ಮಾಡುತ್ತಿದೆ ಎಂದು ಬಿಜೆಪಿ ನಾಯಕರು ಆರೋಪ ಮಾಡಿದ್ದರು.

ಈ ವರದಿಯನ್ನು ಆಧರಿಸಿ ಕೇಂದ್ರ ಸಚಿವ ಅನಿರುದ್ಧ್ ಧರ್ ಮತ್ತು ನಿಶಿಕಾಂತ್ ದುಬೆ ಸಂಸತ್ತಿನಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ ತನಿಖೆಗೆ ಒತ್ತಾಯಿಸಿದ್ದರು. ಸೈದುಲಾಜಾಬ್ ಕಚೇರಿಯ ಮೇಲೆ ನಡೆದ ದಾಳಿ ಮತ್ತು ಪ್ರಸ್ತುತ ವಿಧಿಸಲಾಗಿರುವ 184 ಕೋಟಿ ರೂಪಾಯಿ ದಂಡವು ಈ ವಿದೇಶಿ ಹೂಡಿಕೆಯ ಅಕ್ರಮ ಆರೋಪಗಳ ತನಿಖೆಯ ಫಲಿತಾಂಶವಾಗಿದೆ.

ನ್ಯೂಸ್‌ಕ್ಲಿಕ್ ಮತ್ತು ಪುರಕಾಯಸ್ಥ ಅವರು ಈ ಎಲ್ಲಾ ಆರೋಪಗಳನ್ನು ಮೊದಲಿನಿಂದಲೂ ನಿರಾಕರಿಸುತ್ತಾ ಬಂದಿದ್ದಾರೆ. ತಾವು ಯಾವುದೇ ವಿದೇಶಿ ಸರ್ಕಾರದ ನಿರ್ದೇಶನದಂತೆ ಸುದ್ದಿ ಪ್ರಕಟಿಸಿಲ್ಲ ಮತ್ತು ಎಲ್ಲಾ ಹೂಡಿಕೆಗಳು ಕಾನೂನುಬದ್ಧವಾಗಿವೆ ಎಂದು ಅವರು ಪ್ರತಿಪಾದಿಸಿದ್ದಾರೆ.

2009ರಲ್ಲಿ ಸ್ಥಾಪನೆಯಾದ ನ್ಯೂಸ್‌ ಕ್ಲಿಕ್ ಸುದ್ದಿ ಪೋರ್ಟಲ್ ತನ್ನ ವೆಬ್‌ಸೈಟ್‌ನಲ್ಲಿ, ತಾನು ಭಾರತ ಮತ್ತು ಅನ್ಯ ದೇಶಗಳ ಸುದ್ದಿಗಳ ಮೇಲೆ ಗಮನಹರಿಸುವ ಹಾಗೂ ಪ್ರಗತಿಪರ ಚಳುವಳಿಗಳಿಗೆ ಒತ್ತು ನೀಡುವ ಒಂದು ಸ್ವತಂತ್ರ ಮಾಧ್ಯಮ ಸಂಸ್ಥೆಯಾಗಿದೆ ಎಂದು ಹೇಳಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...