HomeಮುಖಪುಟFEMA ಉಲ್ಲಂಘನೆ ಆರೋಪ : ನ್ಯೂಸ್‌ಕ್ಲಿಕ್‌ ಪೋರ್ಟಲ್‌, ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥಗೆ 184 ಕೋಟಿ ರೂ.ದಂಡ...

FEMA ಉಲ್ಲಂಘನೆ ಆರೋಪ : ನ್ಯೂಸ್‌ಕ್ಲಿಕ್‌ ಪೋರ್ಟಲ್‌, ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥಗೆ 184 ಕೋಟಿ ರೂ.ದಂಡ ವಿಧಿಸಿದ ಇಡಿ

- Advertisement -
- Advertisement -

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಎಫ್‌ಇಎಂಎ-ಫೆಮಾ) ಉಲ್ಲಂಘನೆಗೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಜಾಲತಾಣ ಮತ್ತು ಅದರ ಪ್ರಧಾನ ಸಂಪಾದಕ ಪ್ರಬೀರ್ ಪುರಕಾಯಸ್ಥ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) 184 ಕೋಟಿ ರೂಪಾಯಿ ದಂಡ ವಿಧಿಸಿದೆ ಎಂದು ಸೋಮವಾರ (ಫೆ.16) ವರದಿಯಾಗಿದೆ.

ನ್ಯೂಸ್‌ಕ್ಲಿಕ್ ಮಾಲೀಕತ್ವದ ‘ಪಿಪಿಕೆ ನ್ಯೂಸ್‌ಕ್ಲಿಕ್ ಸ್ಟುಡಿಯೋ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಗೆ 120 ಕೋಟಿ ರೂಪಾಯಿ ಹಾಗೂ ಪುರಕಾಯಸ್ಥ ಅವರಿಗೆ ವೈಯಕ್ತಿಕವಾಗಿ 64 ಕೋಟಿ ರೂಪಾಯಿ ದಂಡ ವಿಧಿಸಲಾಗಿದೆ.

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಧಿಯ ದುರುಪಯೋಗ ಮತ್ತು ರಫ್ತು ಸೇವೆಗಳ ತಪ್ಪು ಘೋಷಣೆಯ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಗಳು ಹೇಳಿವೆ.

ನ್ಯೂಸ್‌ ಕ್ಲಿಕ್ 2018-19ರ ಹಣಕಾಸು ವರ್ಷದಲ್ಲಿ ಸುಮಾರು 9.59 ಕೋಟಿ ರೂಪಾಯಿ ಎಫ್‌ಡಿಐ ಹಣವನ್ನು ತನ್ನ ವ್ಯವಹಾರದ ಸ್ವರೂಪದ ಬಗ್ಗೆ ತಪ್ಪು ಮಾಹಿತಿ ನೀಡಿ ಪಡೆದಿದೆ ಎಂದು ಇಡಿ ಆರೋಪಿಸಿದೆ. 2018-19 ರಿಂದ 2023-24ರ ಅವಧಿಯಲ್ಲಿ ಸೇವೆಗಳ ರಫ್ತಿಗಾಗಿ ಬಂದ 82.63 ಕೋಟಿ ರೂಪಾಯಿ ವಿದೇಶಿ ಹಣದ ವರ್ಗಾವಣೆಯಲ್ಲಿ ಫೆಮಾ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಹೇಳಿದೆ.

ಹಣ ಅಕ್ರಮ ವರ್ಗಾವಣೆ ಆರೋಪದ ಮೇಲೆ ಇಡಿ ಮೊದಲ ಬಾರಿಗೆ ಸೆಪ್ಟೆಂಬರ್ 2021ರಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯ ಸೈದುಲಾಜಾಬ್ ಪ್ರದೇಶದಲ್ಲಿರುವ ನ್ಯೂಸ್‌ಕ್ಲಿಕ್ ಕಚೇರಿಯ ಮೇಲೆ ದಾಳಿ ನಡೆಸಿತ್ತು. ಈ ದಾಳಿಯು ಸಂಸ್ಥೆಯ ವಿರುದ್ಧದ ತನಿಖೆಯ ಆರಂಭಿಕ ಹಂತವಾಗಿತ್ತು.

ವಿದೇಶಿ ಹೂಡಿಕೆಯಲ್ಲಿನ ಅಕ್ರಮ ಮತ್ತು ಚೀನಾ ಪರ ಪ್ರಚಾರಕ್ಕಾಗಿ ಹಣ ಪಡೆದಿದ್ದಾರೆ ಎಂಬ ಗಂಭೀರ ಆರೋಪಗಳನ್ನು ಮಾಡಿ ಈ ಕಾರ್ಯಾಚರಣೆ ನಡೆಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪುರಕಾಯಸ್ಥ ಸೇರಿದಂತೆ ಸುಮಾರು 25ಕ್ಕೂ ಹೆಚ್ಚು ಜನರ ಹೇಳಿಕೆಗಳನ್ನು ಇಡಿ ದಾಖಲಿಸಿಕೊಂಡಿದೆ. ಇದೇ ತನಿಖೆಯ ಮುಂದುವರಿದ ಭಾಗವಾಗಿ, ಪ್ರಸ್ತುತ ಫೆಬ್ರವರಿ 16,2026 ರಂದು ನ್ಯೂಸ್‌ಕ್ಲಿಕ್ ಮತ್ತು ಅದರ ಸಂಪಾದಕರಿಗೆ 184 ಕೋಟಿ ರೂಪಾಯಿ ದಂಡ ವಿಧಿಸಲಾಗಿದೆ ಎಂದು ವರದಿಯಾಗಿದೆ.

2023ರಲ್ಲಿ ಬಿಜೆಪಿ ದಿ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯ ವರದಿಯೊಂದನ್ನು ಉಲ್ಲೇಖಿಸಿ, ನ್ಯೂಸ್‌ಕ್ಲಿಕ್ ಪೋರ್ಟಲ್ ಮತ್ತು ಅದರ ಪ್ರವರ್ತಕರು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿತ್ತು.

ನ್ಯೂಸ್‌ಕ್ಲಿಕ್ ಜಾಗತಿಕ ಜಾಲದ ಭಾಗವಾಗಿದ್ದು, ಚೀನಾ ಸರ್ಕಾರದ ಮಾಧ್ಯಮಗಳೊಂದಿಗೆ ನಿಕಟ ಸಂಬಂಧ ಹೊಂದಿರುವ ಅಮೆರಿಕದ ಬಿಲಿಯನೇರ್ ನೆವಿಲ್ಲೆ ರಾಯ್ ಸಿಂಘಂ ಅವರಿಂದ ಹಣ ಪಡೆದು ಚೀನಾ ಪರ ಅಜೆಂಡಾವನ್ನು ಪ್ರಚಾರ ಮಾಡುತ್ತಿದೆ ಎಂದು ಬಿಜೆಪಿ ನಾಯಕರು ಆರೋಪ ಮಾಡಿದ್ದರು.

ಈ ವರದಿಯನ್ನು ಆಧರಿಸಿ ಕೇಂದ್ರ ಸಚಿವ ಅನಿರುದ್ಧ್ ಧರ್ ಮತ್ತು ನಿಶಿಕಾಂತ್ ದುಬೆ ಸಂಸತ್ತಿನಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ ತನಿಖೆಗೆ ಒತ್ತಾಯಿಸಿದ್ದರು. ಸೈದುಲಾಜಾಬ್ ಕಚೇರಿಯ ಮೇಲೆ ನಡೆದ ದಾಳಿ ಮತ್ತು ಪ್ರಸ್ತುತ ವಿಧಿಸಲಾಗಿರುವ 184 ಕೋಟಿ ರೂಪಾಯಿ ದಂಡವು ಈ ವಿದೇಶಿ ಹೂಡಿಕೆಯ ಅಕ್ರಮ ಆರೋಪಗಳ ತನಿಖೆಯ ಫಲಿತಾಂಶವಾಗಿದೆ.

ನ್ಯೂಸ್‌ಕ್ಲಿಕ್ ಮತ್ತು ಪುರಕಾಯಸ್ಥ ಅವರು ಈ ಎಲ್ಲಾ ಆರೋಪಗಳನ್ನು ಮೊದಲಿನಿಂದಲೂ ನಿರಾಕರಿಸುತ್ತಾ ಬಂದಿದ್ದಾರೆ. ತಾವು ಯಾವುದೇ ವಿದೇಶಿ ಸರ್ಕಾರದ ನಿರ್ದೇಶನದಂತೆ ಸುದ್ದಿ ಪ್ರಕಟಿಸಿಲ್ಲ ಮತ್ತು ಎಲ್ಲಾ ಹೂಡಿಕೆಗಳು ಕಾನೂನುಬದ್ಧವಾಗಿವೆ ಎಂದು ಅವರು ಪ್ರತಿಪಾದಿಸಿದ್ದಾರೆ.

2009ರಲ್ಲಿ ಸ್ಥಾಪನೆಯಾದ ನ್ಯೂಸ್‌ ಕ್ಲಿಕ್ ಸುದ್ದಿ ಪೋರ್ಟಲ್ ತನ್ನ ವೆಬ್‌ಸೈಟ್‌ನಲ್ಲಿ, ತಾನು ಭಾರತ ಮತ್ತು ಅನ್ಯ ದೇಶಗಳ ಸುದ್ದಿಗಳ ಮೇಲೆ ಗಮನಹರಿಸುವ ಹಾಗೂ ಪ್ರಗತಿಪರ ಚಳುವಳಿಗಳಿಗೆ ಒತ್ತು ನೀಡುವ ಒಂದು ಸ್ವತಂತ್ರ ಮಾಧ್ಯಮ ಸಂಸ್ಥೆಯಾಗಿದೆ ಎಂದು ಹೇಳಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...