Homeಮುಖಪುಟಅಬಕಾರಿ ನೀತಿ ಪ್ರಕರಣ: ಸಿಎಂ ಕೇಜ್ರಿವಾಲ್‌ಗೆ ಇಡಿ ಸಮನ್ಸ್

ಅಬಕಾರಿ ನೀತಿ ಪ್ರಕರಣ: ಸಿಎಂ ಕೇಜ್ರಿವಾಲ್‌ಗೆ ಇಡಿ ಸಮನ್ಸ್

- Advertisement -
- Advertisement -

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್ ನೀಡಿದ್ದು, ನವೆಂಬರ್ 2ರಂದು ತನ್ನ ಮುಂದೆ ಹಾಜರಾಗುವಂತೆ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಈ ಪ್ರಕರಣವು ಕೇಂದ್ರೀಯ ತನಿಖಾ ದಳವು (ಸಿಬಿಐ) ದಾಖಲಿಸಿದ ಎಫ್‌ಐಆರ್‌ನ್ನು ಆಧರಿಸಿದೆ. ದೆಹಲಿಯ ಆಪ್‌ ಸರ್ಕಾರವು ರದ್ದುಗೊಳಿಸಿರುವ ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ. ಈ ವಿಚಾರವಾಗಿ ಏಪ್ರಿಲ್ 16 ರಂದು ಸಿಬಿಐ ಅಧಿಕಾರಿಗಳು ಕೇಜ್ರಿವಾಲ್ ಅವರನ್ನು ಸುಮಾರು ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು.

ಇದೀಗ ಆಮ್ ಆದ್ಮಿ ಪಕ್ಷದ ವರಿಷ್ಠರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ವಿಚಾರಣೆಗೆ ಕರೆಸಲಾಗಿದೆ. ಜಾರಿ ನಿರ್ದೇಶನಾಲಯದ ಚಾರ್ಜ್‌ಶೀಟ್‌ನಲ್ಲಿ ಅವರ ಹೆಸರನ್ನು ಹಲವು ಬಾರಿ ಉಲ್ಲೇಖಿಸಲಾಗಿದೆ, ಆರೋಪಿಗಳು ನೀತಿಯನ್ನು ಸಿದ್ಧಪಡಿಸಲು ಮುಖ್ಯಮಂತ್ರಿಗಳೊಂದಿಗೆ ಸಂಪರ್ಕದಲ್ಲಿದ್ದರು ಎಂದು ಹೇಳುತ್ತದೆ ಎಂದು ಪಿಟಿಐ ವರದಿ ಮಾಡಿದೆ.

”ಸಗಟು ವ್ಯಾಪಾರಿಗಳಿಗೆ 12% ಲಾಭಾಂಶ ಮತ್ತು ಚಿಲ್ಲರೆ ವ್ಯಾಪಾರಿಗಳಿಗೆ ಸುಮಾರು 185% ಲಾಭಾಂಶವನ್ನು ಒದಗಿಸುವಂತೆ ದೆಹಲಿ ಆಪ್ ಸರ್ಕಾರವು ಈ ಮದ್ಯದ ಅಬಕಾರಿ ನೀತಿಯನ್ನು ಮಾರ್ಪಡಿಸಿದೆ” ಎಂದು ಕೇಂದ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ ಆರೋಪಿಸಿದೆ.

”ಸೌತ್ ಗ್ರೂಪ್ ಸದಸ್ಯರಾದ ಉದ್ಯಮಿ ವಿಜಯ್ ನಾಯರ್ ಮೂಲಕ ಆಮ್ ಆದ್ಮಿ ಪಕ್ಷದ ನಾಯಕರಿಗೆ ಕನಿಷ್ಠ 100 ಕೋಟಿ ರೂ. ಕಿಕ್‌ಬ್ಯಾಕ್‌ ಪಡೆದಿದ್ದಾರೆ. ಈ ಮೂಲಕ ಸೌತ್ ಗ್ರೂಪ್ ಅನಿರ್ಬಂಧಿತ ಪ್ರವೇಶವನ್ನು ಪಡೆದುಕೊಂಡಿದೆ, ಸ್ಥಾಪಿತವಾದ ಸಗಟು ವ್ಯಾಪಾರಗಳು ಮತ್ತು ಬಹು ಚಿಲ್ಲರೆ ವಲಯಗಳಲ್ಲಿ [ನೀತಿಯಲ್ಲಿ ಅನುಮತಿಸಲಾದ ಮೇಲೆ ಮತ್ತು ಹೆಚ್ಚಿನ] ಪಾಲನ್ನು ಗಳಿಸಿದೆ” ಎಂದು ಏಜೆನ್ಸಿ ಆರೋಪಿಸಿದೆ.

ಆಮ್ ಆದ್ಮಿ ಪಕ್ಷದ ಹಿರಿಯ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಅವರನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ.

ಮದ್ಯ ನೀತಿ ಜಾರಿಯಾದಾಗ ಅಬಕಾರಿ ಇಲಾಖೆ ಸೇರಿದಂತೆ 18 ಖಾತೆಗಳನ್ನು ಸಿಸೋಡಿಯಾ ನಿಭಾಯಿಸಿದ್ದರು. ಫೆಬ್ರವರಿ 26ರಂದು ಕೇಂದ್ರ ತನಿಖಾ ದಳ ಮತ್ತು ಮಾರ್ಚ್ 9ರಂದು ಜಾರಿ ನಿರ್ದೇಶನಾಲಯ ಅವರನ್ನು ಬಂಧಿಸಿತ್ತು.

ಸೋಮವಾರ, ಸುಪ್ರೀಂ ಕೋರ್ಟ್ ದೆಹಲಿಯ ಮಾಜಿ ಉಪಮುಖ್ಯಮಂತ್ರಿಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿತು, ಅಧಿಕಾರಿಗಳು ತಾತ್ಕಾಲಿಕವಾಗಿ 338 ಕೋಟಿ ರೂಪಾಯಿ ಮೌಲ್ಯದ ಹಣದ ಜಾಡು ಸ್ಥಾಪಿಸಿದ್ದಾರೆ ಎಂದು ಹೇಳಿದ್ದಾರೆ.

ED ಸಮನ್ಸ್‌ಗೆ AAP ಪ್ರತಿಕ್ರಿಯೆ

ಕೇಜ್ರಿವಾಲ್‌ಗೆ ಇತ್ತೀಚಿನ ಸಮನ್ಸ್‌ ನೀಡಿದ ಕುರಿತು ಪ್ರತಿಕ್ರಿಯಿಸಿದ ಆಪ್ ನಾಯಕ ಸೌರಭ್ ಭಾರದ್ವಾಜ್ ಅವರು, ”ಮುಖ್ಯಮಂತ್ರಿಯನ್ನು ಬಂಧಿಸಲು ಬಿಜೆಪಿ ಈ ಎಲ್ಲಾ ವಿಧಾನಗಳನ್ನು ಬಳಸುತ್ತಿದೆ” ಎಂದು ಹೇಳಿದರು.

”ಹೇಗಾದರೂ ಮಾಡಿ AAPನ್ನು ನಾಶಮಾಡಬೇಕು ಎನ್ನುವುದು ಕೇಂದ್ರ ಸರ್ಕಾರದ ಏಕೈಕ ಉದ್ದೇಶವಾಗಿದೆ ಎಂದು ಅವರು X ನಲ್ಲಿ ವೀಡಿಯೊ ಪೋಸ್ಟ್ ಮಾಡಿದ್ದಾರೆ.

”ದೆಹಲಿ ಮತ್ತು ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ ಮಾಡುತ್ತಿರುವ ಕೆಲಸಗಳಿಂದ ಬಿಜೆಪಿಗೆ ಭಯವಾಗಿದೆ” ಎಂದು ದೆಹಲಿ ಶಿಕ್ಷಣ ಸಚಿವ ಅತಿಶಿ ಹೇಳಿದ್ದಾರೆ.

”ಇದಕ್ಕಾಗಿಯೇ ಬಿಜೆಪಿಯು ಎಎಪಿ ನಾಯಕರನ್ನು ಜೈಲಿಗೆ ಹಾಕಲು ಸುಳ್ಳು ಪ್ರಕರಣಗಳನ್ನು ನಿರ್ಮಿಸಲು ಮತ್ತು ಪಕ್ಷವನ್ನು ಹತ್ತಿಕ್ಕಲು ಬಯಸುತ್ತದೆ. ಈ ಪಿತೂರಿಯ ಭಾಗವಾಗಿ, ಇಡಿ ಕೇಜ್ರಿವಾಲ್‌ಗೆ ಸಮನ್ಸ್ ನೀಡಿದೆ. ಅವರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಲು ಬಿಜೆಪಿ ಮುಂದಾಗಿದೆ. ನಾವು ಸುಳ್ಳು ಪ್ರಕರಣಗಳಿಗೆ ಹೆದರುವುದಿಲ್ಲ ಮತ್ತು ಜೈಲಿಗೆ ಹೋಗುವುದಿಲ್ಲ ಎಂದು ನಾವು ಬಿಜೆಪಿಗೆ ಹೇಳಲು ಬಯಸುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿ: ನಿಮ್ಮ ಐಫೋನ್ ಹ್ಯಾಕ್ ಮಾಡಿರಬಹುದು: ಪತ್ರಕರ್ತರು ಸೇರಿ ಹಲವು ವಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...