Homeಕರ್ನಾಟಕ‘ಭಾರತ ಐಕ್ಯತಾ ಯಾತ್ರೆ’ ನಡುವೆ ಡಿ.ಕೆ. ಶಿವಕುಮಾರ್‌‌ಗೆ ಇಡಿ ಸಮನ್ಸ್

‘ಭಾರತ ಐಕ್ಯತಾ ಯಾತ್ರೆ’ ನಡುವೆ ಡಿ.ಕೆ. ಶಿವಕುಮಾರ್‌‌ಗೆ ಇಡಿ ಸಮನ್ಸ್

ಯಾತ್ರೆಯು ಒಕ್ಕಲಿಗ ಸಮುದಾಯದ ಶಕ್ತಿ ಕೇಂದ್ರವಾದ ಆದಿಚುಂಚನಗಿರಿ ಮಠದಲ್ಲಿ ವಾಸ್ತವ್ಯ ಹೂಡಲಿರುವ ದಿನವೆ ಹಾಜರಾಗುವಂತೆ ಇಡಿ ಅವರಿಗೆ ಹೇಳಿದೆ

- Advertisement -
- Advertisement -

ಯಂಗ್ ಇಂಡಿಯನ್‌ ಲಿಮಿಟೆಡ್ ಮತ್ತು ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದ್ದು, ಇಬ್ಬರೂ ಅಕ್ಟೋಬರ್ 7 ರಂದು ತನಿಖಾ ಸಂಸ್ಥೆಯ ಮುಂದೆ ಹಾಜರಾಗುವಂತೆ ಸೂಚಿಸಿದೆ.

ಮೈಸೂರು ಜಿಲ್ಲೆಯ ಬದನವಾಳುವಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, “ರಾಜ್ಯದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ ಇರುವುದರಿಂದ, ವಿಚಾರಣೆಗೆ ಹಾಜರಾಗಲು ಮತ್ತೊಂದು ದಿನಾಂಕವನ್ನು ನೀಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಪ್ರಕರಣವು ನ್ಯಾಷನಲ್ ಹೆರಾಲ್ಡ್‌ನ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವಾಗ ಯಂಗ್ ಇಂಡಿಯಾ ಲಿಮಿಟೆಡ್ ಎಸಗಿರುವ ಹಣಕಾಸು ಅಕ್ರಮಗಳಿಗೆ ಸಂಬಂಧಿಸಿದೆ.

ಇದನ್ನೂ ಓದಿ: ಬಿಜೆಪಿಯ ಕೊನೆಯ ದಿನಗಳು ಆರಂಭ, ಬೊಮ್ಮಾಯಿ ಧಮ್ ಇಳಿಯುತ್ತದೆ: ಡಿ.ಕೆ. ಶಿವಕುಮಾರ್‌

“ನಾನು ಕಾನೂನು ಗೌರವಿಸಿ, ಇಡಿ ಮುಂದೆ ಹಾಜರಾಗಲು ನಿರ್ಧರಿಸಿದ್ದೇನೆ …ಆದರೆ ನಮಗೆ ಇನ್ನೊಂದು ದಿನಾಂಕವನ್ನು ಒದಗಿಸುವಂತೆ ಅವರಿಗೆ ಪತ್ರ ಬರೆಯುತ್ತೇನೆ. ಅವರಿಗೆ ಖಂಡಿತ ಸಹಕಾರ ನೀಡುತ್ತೇನೆ” ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ  ಐಕ್ಯತಾ ಯಾತ್ರೆಯು ಮಂಡ್ಯ ಜಿಲ್ಲೆಯ ನಾಗಮಂಗಲ ಸಮೀಪದ ಒಕ್ಕಲಿಗ ಸಮುದಾಯದ ಶಕ್ತಿ ಕೇಂದ್ರವಾದ ಆದಿಚುಂಚನಗಿರಿ ಮಠದಲ್ಲಿ ವಾಸ್ತವ್ಯ ಹೂಡಲಿರುವ ದಿನದಂದೆ ಇಡಿ ಅವರಿಗೆ ಸಮನ್ಸ್‌‌ ಜಾರಿ ಮಾಡಿದೆ.

“ಇದು ನಮ್ಮ ಮಠವಾಗಿದ್ದು, ನಾನು ಆ ದಿನ ಹಾಜರಾಗದಿದ್ದರೆ ಅದು ಸರಿಯಲ್ಲ. ಯಾತ್ರೆಯ ಸಂಪೂರ್ಣ ಜವಾಬ್ದಾರಿಯನ್ನು ನಾನು ಮತ್ತು ನನ್ನ ಸಹೋದರ ವಹಿಸಿಕೊಂಡಿದ್ದೇವೆ” ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಸ್ಥಿತಿ ಗೋವಿಂದಾ, ಗೋವಿಂದ! – ಡಿ.ಕೆ. ಶಿವಕುಮಾರ್

ಕಳೆದ ತಿಂಗಳಿನಿಂದ ಇದು ಎರಡನೇ ಬಾರಿಗೆ ಇಡಿ ಶಿವಕುಮಾರ್‌ ಅವರಿಗೆ ಸಮನ್ಸ್ ನೀಡಿದೆ. ಸೆಪ್ಟೆಂಬರ್‌ನಲ್ಲಿ ಅವರು ತಮ್ಮ ವಿರುದ್ಧ ದಾಖಲಾದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲು ಇಡಿ ಮುಂದೆ ಹಾಜರಾಗಿದ್ದರು. ಅಲ್ಲದೆ, ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ರಾಮನಗರ ಜಿಲ್ಲೆಯಲ್ಲಿರುವ ಅವರ ಆಸ್ತಿಗಳಿಗೆ ಪರಿಶೀಲನೆ ಉದ್ದೇಶಗಳಿಗಾಗಿ ಕಳೆದ ವಾರ ಭೇಟಿ ನೀಡಿದ್ದರು.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನ್ನ ವಿರುದ್ಧ ಇಡಿ ಆರೋಪಪಟ್ಟಿ ಸಲ್ಲಿಸಿದ್ದು, ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದೆ ಎಂದು ಶಿವಕುಮಾರ್ ಹೇಳಿದ್ದಾರೆ.

“ಆದರೂ, ಭ್ರಷ್ಟಾಚಾರ ನಿಗ್ರಹ ದಳದ ಮಟ್ಟದಲ್ಲಿ ಇತ ನಾಯಕರ ಅಂತಹ ಪ್ರಕರಣಗಳನ್ನು ತನಿಖೆ ಮಾಡಲಾಗುತ್ತಿದೆ. ಅಡ್ವೊಕೇಟ್ ಜನರಲ್ ಅವರು ಸಿಬಿಐ ತನಿಖೆಗೆ ಯೋಗ್ಯವಾದ ಪ್ರಕರಣವಲ್ಲ ಎಂದು ಅಭಿಪ್ರಾಯಪಟ್ಟಿದ್ದರೂ, ಸರ್ಕಾರ ಅದನ್ನು ಹಸ್ತಾಂತರಿಸಿದೆ. ನನಗೆ ರಾಜಕೀಯವಾಗಿ ಕಿರುಕುಳ ನೀಡಲು ಈ ರೀತಿ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಡಿ.ಕೆ.ಶಿವಕುಮಾರ್‌, ನನ್ನ ನಡುವೆ ಬಿರುಕಿಲ್ಲ, ಅದು ಮಾಧ್ಯಮ ಸೃಷ್ಟಿ: ಅಮೃತ ಮಹೋತ್ಸವದಲ್ಲಿ ಸಿದ್ದರಾಮಯ್ಯ ಮನದ ಮಾತು

2017ರಲ್ಲಿ ರಾಜ್ಯಸಭಾ ಚುನಾವಣೆಗೆ ಮುನ್ನ ಗುಜರಾತ್ ಕಾಂಗ್ರೆಸ್ ಶಾಸಕರಿಗೆ ಆಶ್ರಯ ನೀಡುತ್ತಿದ್ದ ವೇಳೆ ಡಿಕೆ ಶಿವಕುಮಾರ್‌‌ ವಿರುದ್ಧ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಇದರ ನಂತರ ಅವರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಇಡಿ ದಾಖಲಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...