Homeಮುಖಪುಟಮಲ್ಲಿಕಾರ್ಜುನ ಖರ್ಗೆಗೆ ಇಡಿ ಸಮನ್ಸ್‌: ‘ಮೋದಿಶಾಹಿ’ ಅಧೋಗತಿಗೆ ತಲುಪುತ್ತಿದೆ ಎಂದ ಕಾಂಗ್ರೆಸ್‌

ಮಲ್ಲಿಕಾರ್ಜುನ ಖರ್ಗೆಗೆ ಇಡಿ ಸಮನ್ಸ್‌: ‘ಮೋದಿಶಾಹಿ’ ಅಧೋಗತಿಗೆ ತಲುಪುತ್ತಿದೆ ಎಂದ ಕಾಂಗ್ರೆಸ್‌

- Advertisement -
- Advertisement -

ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ವಿಷಯವನ್ನು ಪ್ರಸ್ತಾಪಿಸಿದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಒಕ್ಕೂಟ ಸರ್ಕಾರವು ಪ್ರತಿಪಕ್ಷಗಳ ನೈತಿಕತೆಯನ್ನು ಕುಗ್ಗಿಸಲು ಮತ್ತು ಹೆದರಿಸಲು ಪ್ರಯತ್ನಿಸುತ್ತಿದೆ ಎಂದು ಗುರುವಾರ ಆರೋಪಿಸಿದ್ದಾರೆ. ಸಂಸತ್ತಿನ ಅಧಿವೇಶನ ನಡೆಯುತ್ತಿರುವ ಸಮಯದಲ್ಲಿ ಜಾರಿ ನಿರ್ದೇಶನಾಲಯದಿಂದ ತಮ್ಮನ್ನು ಕರೆಸಲಾಗಿದೆ ಎಂದು ಸೂಚಿಸಿದ ಖರ್ಗೆ, ಇಡಿ ಹಾಗೆ ಮಾಡುವುದು ನ್ಯಾಯವೇ ಎಂದು ಪ್ರಶ್ನಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ, ನಾಯಕರನ್ನು ಗುರಿಯಾಗಿಸಲು ಸರ್ಕಾರವು ಏಜೆನ್ಸಿಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ ನಂತರ ಮಾತನಾಡಿದ ಕಾಂಗ್ರೆಸ್ ನಾಯಕ ಖರ್ಗೆ, “ಸದನ ಈಗ ಕಾರ್ಯನಿರ್ವಹಿಸುತ್ತಿದ್ದು, ನಾನು ವಿರೋಧ ಪಕ್ಷಗಳ ನಾಯಕನಾಗಿದ್ದೇನೆ. ಆದರೆ ಇದೀಗ ಸಂಸತ್ ಅಧಿವೇಶನ ನಡೆಯುತ್ತಿರುವಾಗಲೆ ಇಡಿ ಮುಂದೆ ಹಾಜರಾಗುವಂತೆ ನನಗೆ ಸಮನ್ಸ್ ಬಂದಿದೆ. ಸಂಸತ್ತು ಕಾರ್ಯನಿರ್ವಹಿಸುತ್ತಿರುವಾಗ ಇಡಿ ನನ್ನನ್ನು ಕರೆಸುವುದು ನ್ಯಾಯವೇ?” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಧ್ಯಾಹ್ನ 12.30ಕ್ಕೆ ಇಡಿ ಕಚೇರಿಗೆ ತೆರಳಬೇಕು ಎಂದು ಹೇಳಿದ ಖರ್ಗೆ, “ನಾನು ಕಾನೂನನ್ನು ಅನುಸರಿಸಲು ಬಯಸುತ್ತೇನೆ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನಿವಾಸಗಳನ್ನು ಪೊಲೀಸರು ಸುತ್ತುವರೆದಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ. “ನಾವು ಹೀಗೆಯೇ ಮುಂದುವರಿದರೆ, ನಮ್ಮ ಪ್ರಜಾಪ್ರಭುತ್ವ ಜೀವಂತವಾಗಿ ಉಳಿಯುತ್ತದೆಯೇ? ನಮ್ಮ ಸಂವಿಧಾನದ ಪ್ರಕಾರ ನಾವು ಕಾರ್ಯನಿರ್ವಹಿಸುತ್ತೇವೆಯೇ? ಇದನ್ನು ಉದ್ದೇಶಪೂರ್ವಕವಾಗಿ ನಮ್ಮನ್ನು ಕುಗ್ಗಿಸಲು, ನಾಶಪಡಿಸಲು ಮತ್ತು ನಮ್ಮನ್ನು ಬೆದರಿಸಲು ಮಾಡಲಾಗುತ್ತಿದೆ. ಆದರೆ ನಾವು ಇದಕ್ಕೆ ಹೆದರುವುದಿಲ್ಲ, ಇದರ ವಿರುದ್ಧ ಹೋರಾಟ ಮಾಡುತ್ತೇವೆ” ಎಂದು ಅವರು ಹೇಳಿದ್ದು, ಸದನದಲ್ಲಿ ಈ ವಿಷಯದ ಬಗ್ಗೆ ಚರ್ಚೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಭಾರತೀಯರನ್ನು ಸ್ಥಳಾಂತರಿಸುವಲ್ಲೂ ಪ್ರಚಾರ ಪಡೆಯುತ್ತಿರುವ ಬಿಜೆಪಿ; ಪ್ರಿಯಾಂಕ್ ಖರ್ಗೆ ತಿರುಗೇಟು

ಇದಕ್ಕೆ ಪ್ರತಿಕ್ರಿಯಿಸಿದ ಸದನದ ನಾಯಕ ಪಿಯೂಷ್ ಗೋಯಲ್, ಕಾನೂನು ಜಾರಿ ಸಂಸ್ಥೆಗಳ ಕಾರ್ಯಚಟುವಟಿಕೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಕಾಂಗ್ರೆಸ್ ನಾಯಕರು ಕಾನೂನನ್ನು ಎದುರಿಸಬೇಕು, ಅದರಿಂದ ಓಡಿಹೋಗಬಾರದು ಮತ್ತು ಸಂಸತ್ತಿನ ಕಾರ್ಯನಿರ್ವಹಣೆಗೆ ಅವಕಾಶ ನೀಡಬೇಕು ಎಂದು ಅವರು ಹೇಳಿದ್ದಾರೆ. ತಮ್ಮ ಸರ್ಕಾರದ ಮೇಲಿನ ಆರೋಪಕ್ಕೆ ತಿರುಗೇಟು ನೀಡಿದ ಗೋಯಲ್, “ಅವರು (ಕಾಂಗ್ರೆಸ್) ಅಧಿಕಾರದಲ್ಲಿದ್ದಾಗ ಕಾನೂನು ಜಾರಿ ಸಂಸ್ಥೆಗಳ ಕಾರ್ಯಚಟುವಟಿಕೆಯಲ್ಲಿ ಹಸ್ತಕ್ಷೇಪ ಮಾಡಿರಬಹುದು…” ಎಂದು ಹೇಳಿದ್ದಾರೆ.

“ನಮ್ಮ ಸರ್ಕಾರವು ಕಾನೂನು ಜಾರಿ ಸಂಸ್ಥೆಗಳ ಕಾರ್ಯಚಟುವಟಿಕೆಯಲ್ಲಿ ಯಾವುದೇ ರೀತಿಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಅವರ ಕೆಲಸವನ್ನು ಮಾಡಲು ಅವರಿಗೆ ಅವಕಾಶ ನೀಡುತ್ತದೆ. ಕಾಂಗ್ರೆಸ್‌ ಸರ್ಕಾರವು ಕಾನೂನು ಜಾರಿ ಸಂಸ್ಥೆಗಳ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿತ್ತು. ನಮ್ಮ ಸರ್ಕಾರ ಈ ರೀತಿ ಮಾಡಿಲ್ಲ” ಎಂದು ಗೋಯೆಲ್ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಮಕ್ಕಳು ಶಿಕ್ಷಿತರಾಗುವುದಕ್ಕಿಂತ, ಮನುಸ್ಮೃತಿಯ ರೋಬೊಟ್‌ಗಳಾಗಬೇಕಿದೆ: ಪ್ರಿಯಾಂಕ್‌ ಖರ್ಗೆ ಆಕ್ರೋಶ

ಸಂಸತ್ತಿನ ಅಧಿವೇಶನದ ಮಧ್ಯದಲ್ಲಿ ಜಾರಿ ನಿರ್ದೇಶನಾಲಯವು ಖರ್ಗೆ ಅವರಿಗೆ ಸಮನ್ಸ್‌ ನೀಡಿರುವುದು “ಮೋದಿಶಾಹಿ” ಹೊಸ ಅಧೋಗತಿಗೆ ತಲುಪುತ್ತಿದೆ ಎಂದು ರಾಜ್ಯಸಭೆಯಲ್ಲಿ ಕಾಂಗ್ರೆಸ್‌ನ ಮುಖ್ಯ ಸಚೇತಕ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಸಂಸತ್ತಿನ ಅಧಿವೇಶನ ನಡೆಯುತ್ತಿರುವಾಗ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಡಿ ಸಮನ್ಸ್ ನೀಡಿತ್ತು. ಅವರು ಸಹಜವಾಗಿಯೇ ಮಧ್ಯಾಹ್ನ 12:20 ರ ಸುಮಾರಿಗೆ ಹೊರಟು ಸ್ವತಃ ಹಾಜರಾದರು. ಇದು ‘ಮೋದಿಶಾಹಿ’ ಹೊಸದಾಗಿ ತನ್ನ ಕನಿಷ್ಠ ಮಟ್ಟವನ್ನು ತಲುಪುತ್ತಿದೆ” ಎಂದು ಜೈರಾಮ್‌ ರಮೇಶ್ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...