Homeಮುಖಪುಟಮಲ್ಲಿಕಾರ್ಜುನ ಖರ್ಗೆಗೆ ಇಡಿ ಸಮನ್ಸ್‌: ‘ಮೋದಿಶಾಹಿ’ ಅಧೋಗತಿಗೆ ತಲುಪುತ್ತಿದೆ ಎಂದ ಕಾಂಗ್ರೆಸ್‌

ಮಲ್ಲಿಕಾರ್ಜುನ ಖರ್ಗೆಗೆ ಇಡಿ ಸಮನ್ಸ್‌: ‘ಮೋದಿಶಾಹಿ’ ಅಧೋಗತಿಗೆ ತಲುಪುತ್ತಿದೆ ಎಂದ ಕಾಂಗ್ರೆಸ್‌

- Advertisement -
- Advertisement -

ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ವಿಷಯವನ್ನು ಪ್ರಸ್ತಾಪಿಸಿದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಒಕ್ಕೂಟ ಸರ್ಕಾರವು ಪ್ರತಿಪಕ್ಷಗಳ ನೈತಿಕತೆಯನ್ನು ಕುಗ್ಗಿಸಲು ಮತ್ತು ಹೆದರಿಸಲು ಪ್ರಯತ್ನಿಸುತ್ತಿದೆ ಎಂದು ಗುರುವಾರ ಆರೋಪಿಸಿದ್ದಾರೆ. ಸಂಸತ್ತಿನ ಅಧಿವೇಶನ ನಡೆಯುತ್ತಿರುವ ಸಮಯದಲ್ಲಿ ಜಾರಿ ನಿರ್ದೇಶನಾಲಯದಿಂದ ತಮ್ಮನ್ನು ಕರೆಸಲಾಗಿದೆ ಎಂದು ಸೂಚಿಸಿದ ಖರ್ಗೆ, ಇಡಿ ಹಾಗೆ ಮಾಡುವುದು ನ್ಯಾಯವೇ ಎಂದು ಪ್ರಶ್ನಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ, ನಾಯಕರನ್ನು ಗುರಿಯಾಗಿಸಲು ಸರ್ಕಾರವು ಏಜೆನ್ಸಿಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ ನಂತರ ಮಾತನಾಡಿದ ಕಾಂಗ್ರೆಸ್ ನಾಯಕ ಖರ್ಗೆ, “ಸದನ ಈಗ ಕಾರ್ಯನಿರ್ವಹಿಸುತ್ತಿದ್ದು, ನಾನು ವಿರೋಧ ಪಕ್ಷಗಳ ನಾಯಕನಾಗಿದ್ದೇನೆ. ಆದರೆ ಇದೀಗ ಸಂಸತ್ ಅಧಿವೇಶನ ನಡೆಯುತ್ತಿರುವಾಗಲೆ ಇಡಿ ಮುಂದೆ ಹಾಜರಾಗುವಂತೆ ನನಗೆ ಸಮನ್ಸ್ ಬಂದಿದೆ. ಸಂಸತ್ತು ಕಾರ್ಯನಿರ್ವಹಿಸುತ್ತಿರುವಾಗ ಇಡಿ ನನ್ನನ್ನು ಕರೆಸುವುದು ನ್ಯಾಯವೇ?” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಧ್ಯಾಹ್ನ 12.30ಕ್ಕೆ ಇಡಿ ಕಚೇರಿಗೆ ತೆರಳಬೇಕು ಎಂದು ಹೇಳಿದ ಖರ್ಗೆ, “ನಾನು ಕಾನೂನನ್ನು ಅನುಸರಿಸಲು ಬಯಸುತ್ತೇನೆ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನಿವಾಸಗಳನ್ನು ಪೊಲೀಸರು ಸುತ್ತುವರೆದಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ. “ನಾವು ಹೀಗೆಯೇ ಮುಂದುವರಿದರೆ, ನಮ್ಮ ಪ್ರಜಾಪ್ರಭುತ್ವ ಜೀವಂತವಾಗಿ ಉಳಿಯುತ್ತದೆಯೇ? ನಮ್ಮ ಸಂವಿಧಾನದ ಪ್ರಕಾರ ನಾವು ಕಾರ್ಯನಿರ್ವಹಿಸುತ್ತೇವೆಯೇ? ಇದನ್ನು ಉದ್ದೇಶಪೂರ್ವಕವಾಗಿ ನಮ್ಮನ್ನು ಕುಗ್ಗಿಸಲು, ನಾಶಪಡಿಸಲು ಮತ್ತು ನಮ್ಮನ್ನು ಬೆದರಿಸಲು ಮಾಡಲಾಗುತ್ತಿದೆ. ಆದರೆ ನಾವು ಇದಕ್ಕೆ ಹೆದರುವುದಿಲ್ಲ, ಇದರ ವಿರುದ್ಧ ಹೋರಾಟ ಮಾಡುತ್ತೇವೆ” ಎಂದು ಅವರು ಹೇಳಿದ್ದು, ಸದನದಲ್ಲಿ ಈ ವಿಷಯದ ಬಗ್ಗೆ ಚರ್ಚೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಭಾರತೀಯರನ್ನು ಸ್ಥಳಾಂತರಿಸುವಲ್ಲೂ ಪ್ರಚಾರ ಪಡೆಯುತ್ತಿರುವ ಬಿಜೆಪಿ; ಪ್ರಿಯಾಂಕ್ ಖರ್ಗೆ ತಿರುಗೇಟು

ಇದಕ್ಕೆ ಪ್ರತಿಕ್ರಿಯಿಸಿದ ಸದನದ ನಾಯಕ ಪಿಯೂಷ್ ಗೋಯಲ್, ಕಾನೂನು ಜಾರಿ ಸಂಸ್ಥೆಗಳ ಕಾರ್ಯಚಟುವಟಿಕೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಕಾಂಗ್ರೆಸ್ ನಾಯಕರು ಕಾನೂನನ್ನು ಎದುರಿಸಬೇಕು, ಅದರಿಂದ ಓಡಿಹೋಗಬಾರದು ಮತ್ತು ಸಂಸತ್ತಿನ ಕಾರ್ಯನಿರ್ವಹಣೆಗೆ ಅವಕಾಶ ನೀಡಬೇಕು ಎಂದು ಅವರು ಹೇಳಿದ್ದಾರೆ. ತಮ್ಮ ಸರ್ಕಾರದ ಮೇಲಿನ ಆರೋಪಕ್ಕೆ ತಿರುಗೇಟು ನೀಡಿದ ಗೋಯಲ್, “ಅವರು (ಕಾಂಗ್ರೆಸ್) ಅಧಿಕಾರದಲ್ಲಿದ್ದಾಗ ಕಾನೂನು ಜಾರಿ ಸಂಸ್ಥೆಗಳ ಕಾರ್ಯಚಟುವಟಿಕೆಯಲ್ಲಿ ಹಸ್ತಕ್ಷೇಪ ಮಾಡಿರಬಹುದು…” ಎಂದು ಹೇಳಿದ್ದಾರೆ.

“ನಮ್ಮ ಸರ್ಕಾರವು ಕಾನೂನು ಜಾರಿ ಸಂಸ್ಥೆಗಳ ಕಾರ್ಯಚಟುವಟಿಕೆಯಲ್ಲಿ ಯಾವುದೇ ರೀತಿಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಅವರ ಕೆಲಸವನ್ನು ಮಾಡಲು ಅವರಿಗೆ ಅವಕಾಶ ನೀಡುತ್ತದೆ. ಕಾಂಗ್ರೆಸ್‌ ಸರ್ಕಾರವು ಕಾನೂನು ಜಾರಿ ಸಂಸ್ಥೆಗಳ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿತ್ತು. ನಮ್ಮ ಸರ್ಕಾರ ಈ ರೀತಿ ಮಾಡಿಲ್ಲ” ಎಂದು ಗೋಯೆಲ್ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಮಕ್ಕಳು ಶಿಕ್ಷಿತರಾಗುವುದಕ್ಕಿಂತ, ಮನುಸ್ಮೃತಿಯ ರೋಬೊಟ್‌ಗಳಾಗಬೇಕಿದೆ: ಪ್ರಿಯಾಂಕ್‌ ಖರ್ಗೆ ಆಕ್ರೋಶ

ಸಂಸತ್ತಿನ ಅಧಿವೇಶನದ ಮಧ್ಯದಲ್ಲಿ ಜಾರಿ ನಿರ್ದೇಶನಾಲಯವು ಖರ್ಗೆ ಅವರಿಗೆ ಸಮನ್ಸ್‌ ನೀಡಿರುವುದು “ಮೋದಿಶಾಹಿ” ಹೊಸ ಅಧೋಗತಿಗೆ ತಲುಪುತ್ತಿದೆ ಎಂದು ರಾಜ್ಯಸಭೆಯಲ್ಲಿ ಕಾಂಗ್ರೆಸ್‌ನ ಮುಖ್ಯ ಸಚೇತಕ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಸಂಸತ್ತಿನ ಅಧಿವೇಶನ ನಡೆಯುತ್ತಿರುವಾಗ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಡಿ ಸಮನ್ಸ್ ನೀಡಿತ್ತು. ಅವರು ಸಹಜವಾಗಿಯೇ ಮಧ್ಯಾಹ್ನ 12:20 ರ ಸುಮಾರಿಗೆ ಹೊರಟು ಸ್ವತಃ ಹಾಜರಾದರು. ಇದು ‘ಮೋದಿಶಾಹಿ’ ಹೊಸದಾಗಿ ತನ್ನ ಕನಿಷ್ಠ ಮಟ್ಟವನ್ನು ತಲುಪುತ್ತಿದೆ” ಎಂದು ಜೈರಾಮ್‌ ರಮೇಶ್ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...