Homeಮುಖಪುಟಮಲ್ಲಿಕಾರ್ಜುನ ಖರ್ಗೆಗೆ ಇಡಿ ಸಮನ್ಸ್‌: ‘ಮೋದಿಶಾಹಿ’ ಅಧೋಗತಿಗೆ ತಲುಪುತ್ತಿದೆ ಎಂದ ಕಾಂಗ್ರೆಸ್‌

ಮಲ್ಲಿಕಾರ್ಜುನ ಖರ್ಗೆಗೆ ಇಡಿ ಸಮನ್ಸ್‌: ‘ಮೋದಿಶಾಹಿ’ ಅಧೋಗತಿಗೆ ತಲುಪುತ್ತಿದೆ ಎಂದ ಕಾಂಗ್ರೆಸ್‌

- Advertisement -
- Advertisement -

ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ವಿಷಯವನ್ನು ಪ್ರಸ್ತಾಪಿಸಿದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಒಕ್ಕೂಟ ಸರ್ಕಾರವು ಪ್ರತಿಪಕ್ಷಗಳ ನೈತಿಕತೆಯನ್ನು ಕುಗ್ಗಿಸಲು ಮತ್ತು ಹೆದರಿಸಲು ಪ್ರಯತ್ನಿಸುತ್ತಿದೆ ಎಂದು ಗುರುವಾರ ಆರೋಪಿಸಿದ್ದಾರೆ. ಸಂಸತ್ತಿನ ಅಧಿವೇಶನ ನಡೆಯುತ್ತಿರುವ ಸಮಯದಲ್ಲಿ ಜಾರಿ ನಿರ್ದೇಶನಾಲಯದಿಂದ ತಮ್ಮನ್ನು ಕರೆಸಲಾಗಿದೆ ಎಂದು ಸೂಚಿಸಿದ ಖರ್ಗೆ, ಇಡಿ ಹಾಗೆ ಮಾಡುವುದು ನ್ಯಾಯವೇ ಎಂದು ಪ್ರಶ್ನಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ, ನಾಯಕರನ್ನು ಗುರಿಯಾಗಿಸಲು ಸರ್ಕಾರವು ಏಜೆನ್ಸಿಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ ನಂತರ ಮಾತನಾಡಿದ ಕಾಂಗ್ರೆಸ್ ನಾಯಕ ಖರ್ಗೆ, “ಸದನ ಈಗ ಕಾರ್ಯನಿರ್ವಹಿಸುತ್ತಿದ್ದು, ನಾನು ವಿರೋಧ ಪಕ್ಷಗಳ ನಾಯಕನಾಗಿದ್ದೇನೆ. ಆದರೆ ಇದೀಗ ಸಂಸತ್ ಅಧಿವೇಶನ ನಡೆಯುತ್ತಿರುವಾಗಲೆ ಇಡಿ ಮುಂದೆ ಹಾಜರಾಗುವಂತೆ ನನಗೆ ಸಮನ್ಸ್ ಬಂದಿದೆ. ಸಂಸತ್ತು ಕಾರ್ಯನಿರ್ವಹಿಸುತ್ತಿರುವಾಗ ಇಡಿ ನನ್ನನ್ನು ಕರೆಸುವುದು ನ್ಯಾಯವೇ?” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಧ್ಯಾಹ್ನ 12.30ಕ್ಕೆ ಇಡಿ ಕಚೇರಿಗೆ ತೆರಳಬೇಕು ಎಂದು ಹೇಳಿದ ಖರ್ಗೆ, “ನಾನು ಕಾನೂನನ್ನು ಅನುಸರಿಸಲು ಬಯಸುತ್ತೇನೆ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನಿವಾಸಗಳನ್ನು ಪೊಲೀಸರು ಸುತ್ತುವರೆದಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ. “ನಾವು ಹೀಗೆಯೇ ಮುಂದುವರಿದರೆ, ನಮ್ಮ ಪ್ರಜಾಪ್ರಭುತ್ವ ಜೀವಂತವಾಗಿ ಉಳಿಯುತ್ತದೆಯೇ? ನಮ್ಮ ಸಂವಿಧಾನದ ಪ್ರಕಾರ ನಾವು ಕಾರ್ಯನಿರ್ವಹಿಸುತ್ತೇವೆಯೇ? ಇದನ್ನು ಉದ್ದೇಶಪೂರ್ವಕವಾಗಿ ನಮ್ಮನ್ನು ಕುಗ್ಗಿಸಲು, ನಾಶಪಡಿಸಲು ಮತ್ತು ನಮ್ಮನ್ನು ಬೆದರಿಸಲು ಮಾಡಲಾಗುತ್ತಿದೆ. ಆದರೆ ನಾವು ಇದಕ್ಕೆ ಹೆದರುವುದಿಲ್ಲ, ಇದರ ವಿರುದ್ಧ ಹೋರಾಟ ಮಾಡುತ್ತೇವೆ” ಎಂದು ಅವರು ಹೇಳಿದ್ದು, ಸದನದಲ್ಲಿ ಈ ವಿಷಯದ ಬಗ್ಗೆ ಚರ್ಚೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಭಾರತೀಯರನ್ನು ಸ್ಥಳಾಂತರಿಸುವಲ್ಲೂ ಪ್ರಚಾರ ಪಡೆಯುತ್ತಿರುವ ಬಿಜೆಪಿ; ಪ್ರಿಯಾಂಕ್ ಖರ್ಗೆ ತಿರುಗೇಟು

ಇದಕ್ಕೆ ಪ್ರತಿಕ್ರಿಯಿಸಿದ ಸದನದ ನಾಯಕ ಪಿಯೂಷ್ ಗೋಯಲ್, ಕಾನೂನು ಜಾರಿ ಸಂಸ್ಥೆಗಳ ಕಾರ್ಯಚಟುವಟಿಕೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಕಾಂಗ್ರೆಸ್ ನಾಯಕರು ಕಾನೂನನ್ನು ಎದುರಿಸಬೇಕು, ಅದರಿಂದ ಓಡಿಹೋಗಬಾರದು ಮತ್ತು ಸಂಸತ್ತಿನ ಕಾರ್ಯನಿರ್ವಹಣೆಗೆ ಅವಕಾಶ ನೀಡಬೇಕು ಎಂದು ಅವರು ಹೇಳಿದ್ದಾರೆ. ತಮ್ಮ ಸರ್ಕಾರದ ಮೇಲಿನ ಆರೋಪಕ್ಕೆ ತಿರುಗೇಟು ನೀಡಿದ ಗೋಯಲ್, “ಅವರು (ಕಾಂಗ್ರೆಸ್) ಅಧಿಕಾರದಲ್ಲಿದ್ದಾಗ ಕಾನೂನು ಜಾರಿ ಸಂಸ್ಥೆಗಳ ಕಾರ್ಯಚಟುವಟಿಕೆಯಲ್ಲಿ ಹಸ್ತಕ್ಷೇಪ ಮಾಡಿರಬಹುದು…” ಎಂದು ಹೇಳಿದ್ದಾರೆ.

“ನಮ್ಮ ಸರ್ಕಾರವು ಕಾನೂನು ಜಾರಿ ಸಂಸ್ಥೆಗಳ ಕಾರ್ಯಚಟುವಟಿಕೆಯಲ್ಲಿ ಯಾವುದೇ ರೀತಿಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಅವರ ಕೆಲಸವನ್ನು ಮಾಡಲು ಅವರಿಗೆ ಅವಕಾಶ ನೀಡುತ್ತದೆ. ಕಾಂಗ್ರೆಸ್‌ ಸರ್ಕಾರವು ಕಾನೂನು ಜಾರಿ ಸಂಸ್ಥೆಗಳ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿತ್ತು. ನಮ್ಮ ಸರ್ಕಾರ ಈ ರೀತಿ ಮಾಡಿಲ್ಲ” ಎಂದು ಗೋಯೆಲ್ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಮಕ್ಕಳು ಶಿಕ್ಷಿತರಾಗುವುದಕ್ಕಿಂತ, ಮನುಸ್ಮೃತಿಯ ರೋಬೊಟ್‌ಗಳಾಗಬೇಕಿದೆ: ಪ್ರಿಯಾಂಕ್‌ ಖರ್ಗೆ ಆಕ್ರೋಶ

ಸಂಸತ್ತಿನ ಅಧಿವೇಶನದ ಮಧ್ಯದಲ್ಲಿ ಜಾರಿ ನಿರ್ದೇಶನಾಲಯವು ಖರ್ಗೆ ಅವರಿಗೆ ಸಮನ್ಸ್‌ ನೀಡಿರುವುದು “ಮೋದಿಶಾಹಿ” ಹೊಸ ಅಧೋಗತಿಗೆ ತಲುಪುತ್ತಿದೆ ಎಂದು ರಾಜ್ಯಸಭೆಯಲ್ಲಿ ಕಾಂಗ್ರೆಸ್‌ನ ಮುಖ್ಯ ಸಚೇತಕ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಸಂಸತ್ತಿನ ಅಧಿವೇಶನ ನಡೆಯುತ್ತಿರುವಾಗ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಡಿ ಸಮನ್ಸ್ ನೀಡಿತ್ತು. ಅವರು ಸಹಜವಾಗಿಯೇ ಮಧ್ಯಾಹ್ನ 12:20 ರ ಸುಮಾರಿಗೆ ಹೊರಟು ಸ್ವತಃ ಹಾಜರಾದರು. ಇದು ‘ಮೋದಿಶಾಹಿ’ ಹೊಸದಾಗಿ ತನ್ನ ಕನಿಷ್ಠ ಮಟ್ಟವನ್ನು ತಲುಪುತ್ತಿದೆ” ಎಂದು ಜೈರಾಮ್‌ ರಮೇಶ್ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...