Homeಮುಖಪುಟಮಲ್ಲಿಕಾರ್ಜುನ ಖರ್ಗೆಗೆ ಇಡಿ ಸಮನ್ಸ್‌: ‘ಮೋದಿಶಾಹಿ’ ಅಧೋಗತಿಗೆ ತಲುಪುತ್ತಿದೆ ಎಂದ ಕಾಂಗ್ರೆಸ್‌

ಮಲ್ಲಿಕಾರ್ಜುನ ಖರ್ಗೆಗೆ ಇಡಿ ಸಮನ್ಸ್‌: ‘ಮೋದಿಶಾಹಿ’ ಅಧೋಗತಿಗೆ ತಲುಪುತ್ತಿದೆ ಎಂದ ಕಾಂಗ್ರೆಸ್‌

- Advertisement -
- Advertisement -

ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ವಿಷಯವನ್ನು ಪ್ರಸ್ತಾಪಿಸಿದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಒಕ್ಕೂಟ ಸರ್ಕಾರವು ಪ್ರತಿಪಕ್ಷಗಳ ನೈತಿಕತೆಯನ್ನು ಕುಗ್ಗಿಸಲು ಮತ್ತು ಹೆದರಿಸಲು ಪ್ರಯತ್ನಿಸುತ್ತಿದೆ ಎಂದು ಗುರುವಾರ ಆರೋಪಿಸಿದ್ದಾರೆ. ಸಂಸತ್ತಿನ ಅಧಿವೇಶನ ನಡೆಯುತ್ತಿರುವ ಸಮಯದಲ್ಲಿ ಜಾರಿ ನಿರ್ದೇಶನಾಲಯದಿಂದ ತಮ್ಮನ್ನು ಕರೆಸಲಾಗಿದೆ ಎಂದು ಸೂಚಿಸಿದ ಖರ್ಗೆ, ಇಡಿ ಹಾಗೆ ಮಾಡುವುದು ನ್ಯಾಯವೇ ಎಂದು ಪ್ರಶ್ನಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ, ನಾಯಕರನ್ನು ಗುರಿಯಾಗಿಸಲು ಸರ್ಕಾರವು ಏಜೆನ್ಸಿಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ ನಂತರ ಮಾತನಾಡಿದ ಕಾಂಗ್ರೆಸ್ ನಾಯಕ ಖರ್ಗೆ, “ಸದನ ಈಗ ಕಾರ್ಯನಿರ್ವಹಿಸುತ್ತಿದ್ದು, ನಾನು ವಿರೋಧ ಪಕ್ಷಗಳ ನಾಯಕನಾಗಿದ್ದೇನೆ. ಆದರೆ ಇದೀಗ ಸಂಸತ್ ಅಧಿವೇಶನ ನಡೆಯುತ್ತಿರುವಾಗಲೆ ಇಡಿ ಮುಂದೆ ಹಾಜರಾಗುವಂತೆ ನನಗೆ ಸಮನ್ಸ್ ಬಂದಿದೆ. ಸಂಸತ್ತು ಕಾರ್ಯನಿರ್ವಹಿಸುತ್ತಿರುವಾಗ ಇಡಿ ನನ್ನನ್ನು ಕರೆಸುವುದು ನ್ಯಾಯವೇ?” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಧ್ಯಾಹ್ನ 12.30ಕ್ಕೆ ಇಡಿ ಕಚೇರಿಗೆ ತೆರಳಬೇಕು ಎಂದು ಹೇಳಿದ ಖರ್ಗೆ, “ನಾನು ಕಾನೂನನ್ನು ಅನುಸರಿಸಲು ಬಯಸುತ್ತೇನೆ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನಿವಾಸಗಳನ್ನು ಪೊಲೀಸರು ಸುತ್ತುವರೆದಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ. “ನಾವು ಹೀಗೆಯೇ ಮುಂದುವರಿದರೆ, ನಮ್ಮ ಪ್ರಜಾಪ್ರಭುತ್ವ ಜೀವಂತವಾಗಿ ಉಳಿಯುತ್ತದೆಯೇ? ನಮ್ಮ ಸಂವಿಧಾನದ ಪ್ರಕಾರ ನಾವು ಕಾರ್ಯನಿರ್ವಹಿಸುತ್ತೇವೆಯೇ? ಇದನ್ನು ಉದ್ದೇಶಪೂರ್ವಕವಾಗಿ ನಮ್ಮನ್ನು ಕುಗ್ಗಿಸಲು, ನಾಶಪಡಿಸಲು ಮತ್ತು ನಮ್ಮನ್ನು ಬೆದರಿಸಲು ಮಾಡಲಾಗುತ್ತಿದೆ. ಆದರೆ ನಾವು ಇದಕ್ಕೆ ಹೆದರುವುದಿಲ್ಲ, ಇದರ ವಿರುದ್ಧ ಹೋರಾಟ ಮಾಡುತ್ತೇವೆ” ಎಂದು ಅವರು ಹೇಳಿದ್ದು, ಸದನದಲ್ಲಿ ಈ ವಿಷಯದ ಬಗ್ಗೆ ಚರ್ಚೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಭಾರತೀಯರನ್ನು ಸ್ಥಳಾಂತರಿಸುವಲ್ಲೂ ಪ್ರಚಾರ ಪಡೆಯುತ್ತಿರುವ ಬಿಜೆಪಿ; ಪ್ರಿಯಾಂಕ್ ಖರ್ಗೆ ತಿರುಗೇಟು

ಇದಕ್ಕೆ ಪ್ರತಿಕ್ರಿಯಿಸಿದ ಸದನದ ನಾಯಕ ಪಿಯೂಷ್ ಗೋಯಲ್, ಕಾನೂನು ಜಾರಿ ಸಂಸ್ಥೆಗಳ ಕಾರ್ಯಚಟುವಟಿಕೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಕಾಂಗ್ರೆಸ್ ನಾಯಕರು ಕಾನೂನನ್ನು ಎದುರಿಸಬೇಕು, ಅದರಿಂದ ಓಡಿಹೋಗಬಾರದು ಮತ್ತು ಸಂಸತ್ತಿನ ಕಾರ್ಯನಿರ್ವಹಣೆಗೆ ಅವಕಾಶ ನೀಡಬೇಕು ಎಂದು ಅವರು ಹೇಳಿದ್ದಾರೆ. ತಮ್ಮ ಸರ್ಕಾರದ ಮೇಲಿನ ಆರೋಪಕ್ಕೆ ತಿರುಗೇಟು ನೀಡಿದ ಗೋಯಲ್, “ಅವರು (ಕಾಂಗ್ರೆಸ್) ಅಧಿಕಾರದಲ್ಲಿದ್ದಾಗ ಕಾನೂನು ಜಾರಿ ಸಂಸ್ಥೆಗಳ ಕಾರ್ಯಚಟುವಟಿಕೆಯಲ್ಲಿ ಹಸ್ತಕ್ಷೇಪ ಮಾಡಿರಬಹುದು…” ಎಂದು ಹೇಳಿದ್ದಾರೆ.

“ನಮ್ಮ ಸರ್ಕಾರವು ಕಾನೂನು ಜಾರಿ ಸಂಸ್ಥೆಗಳ ಕಾರ್ಯಚಟುವಟಿಕೆಯಲ್ಲಿ ಯಾವುದೇ ರೀತಿಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಅವರ ಕೆಲಸವನ್ನು ಮಾಡಲು ಅವರಿಗೆ ಅವಕಾಶ ನೀಡುತ್ತದೆ. ಕಾಂಗ್ರೆಸ್‌ ಸರ್ಕಾರವು ಕಾನೂನು ಜಾರಿ ಸಂಸ್ಥೆಗಳ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿತ್ತು. ನಮ್ಮ ಸರ್ಕಾರ ಈ ರೀತಿ ಮಾಡಿಲ್ಲ” ಎಂದು ಗೋಯೆಲ್ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಮಕ್ಕಳು ಶಿಕ್ಷಿತರಾಗುವುದಕ್ಕಿಂತ, ಮನುಸ್ಮೃತಿಯ ರೋಬೊಟ್‌ಗಳಾಗಬೇಕಿದೆ: ಪ್ರಿಯಾಂಕ್‌ ಖರ್ಗೆ ಆಕ್ರೋಶ

ಸಂಸತ್ತಿನ ಅಧಿವೇಶನದ ಮಧ್ಯದಲ್ಲಿ ಜಾರಿ ನಿರ್ದೇಶನಾಲಯವು ಖರ್ಗೆ ಅವರಿಗೆ ಸಮನ್ಸ್‌ ನೀಡಿರುವುದು “ಮೋದಿಶಾಹಿ” ಹೊಸ ಅಧೋಗತಿಗೆ ತಲುಪುತ್ತಿದೆ ಎಂದು ರಾಜ್ಯಸಭೆಯಲ್ಲಿ ಕಾಂಗ್ರೆಸ್‌ನ ಮುಖ್ಯ ಸಚೇತಕ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಸಂಸತ್ತಿನ ಅಧಿವೇಶನ ನಡೆಯುತ್ತಿರುವಾಗ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಡಿ ಸಮನ್ಸ್ ನೀಡಿತ್ತು. ಅವರು ಸಹಜವಾಗಿಯೇ ಮಧ್ಯಾಹ್ನ 12:20 ರ ಸುಮಾರಿಗೆ ಹೊರಟು ಸ್ವತಃ ಹಾಜರಾದರು. ಇದು ‘ಮೋದಿಶಾಹಿ’ ಹೊಸದಾಗಿ ತನ್ನ ಕನಿಷ್ಠ ಮಟ್ಟವನ್ನು ತಲುಪುತ್ತಿದೆ” ಎಂದು ಜೈರಾಮ್‌ ರಮೇಶ್ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...