Homeಮುಖಪುಟಕಾಂಗ್ರೆಸ್ ಪ್ರತಿಭಟನೆ: ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ರನ್ನು ಎಳೆದೊಯ್ದ ಪೊಲೀಸರು

ಕಾಂಗ್ರೆಸ್ ಪ್ರತಿಭಟನೆ: ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ರನ್ನು ಎಳೆದೊಯ್ದ ಪೊಲೀಸರು

- Advertisement -
- Advertisement -

ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್‌ ನೀಡಿರುವುದನ್ನು ವಿರೋಧಿಸಿ ದೇಶದಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಭಾಗವಹಿಸದಂತೆ ತಡೆಯಲು ಪೊಲೀಸರು ಅವರನ್ನು ಎಳೆದುಕೊಂಡು ಹೋಗುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ಸಂಸದರಾಗಿರುವ ವೇಣುಗೋಪಾಲ್‌ ಅವರನ್ನು ಪ್ರತಿಭಟನೆಯಲ್ಲಿ ಭಾಗವಹಿಸಲು ಬಿಡದೆ, ಎಳೆದುಕೊಂಡು ಹೋಗಿ ಬಸ್‌ನಲ್ಲಿ ಕೂರಿಸಲಾಗಿದೆ. ಅವರ ಬಟ್ಟೆಗಳು ಕೂಡ ಹರಿದಿದ್ದು, ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ನಾಯಕರು ಆರೋಪಿಸಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರು ವಿಚಾರಣೆಗೆ ಹಾಜರಾಗಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಯಿಂದ ಜಾರಿ ನಿರ್ದೇಶನಾಲಯದ ಕಚೇರಿಗಳವರೆಗೆ ಮೆರವಣಿಗೆ ನಡೆಸಲು ಕಾಂಗ್ರೆಸ್ ಉದ್ದೇಶಿಸಿತ್ತು.  ಬೆಳಿಗ್ಗೆಯಿಂದಲೇ ದೆಹಲಿ ಪೊಲೀಸರು ಶಕ್ತಿ ಪ್ರದರ್ಶನಕ್ಕೆ ಪೂರ್ವಭಾವಿಯಾಗಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರನ್ನು ಸುತ್ತುವರಿಯಲು ಪ್ರಾರಂಭಿಸಿದ್ದರು.

ಇದನ್ನೂ ಓದಿ: ಮಂಗಳೂರು: ಅಮ್ಮನಿಗೆ ಜನ್ಮದಿನದ ಶುಭ ಕೋರಲು ಬಿಡದ ಶಾಲಾ ಮಂಡಲಿ; ವಿದ್ಯಾರ್ಥಿ ಆತ್ಮಹತ್ಯೆ

 

ಯುವ ಕಾಂಗ್ರೆಸ್ ಮುಖ್ಯಸ್ಥ ಬಿ.ವಿ ಶ್ರೀನಿವಾಸ್ ತಮ್ಮ ಟ್ವಿಟರ್‌ ಖಾತೆಯಲ್ಲಿ ವಿಡಿಯೋವನ್ನು ಶೇರ್ ಮಾಡಿದ್ದು, “ಹಾಲಿ ರಾಜ್ಯಸಭಾ ಸಂಸದ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರೊಂದಿಗೆ ದೆಹಲಿ ಪೊಲೀಸರ ಈ ವರ್ತನೆ ಅತ್ಯಂತ ಖಂಡನೀಯ” ಎಂದು ಹೇಳಿದ್ದಾರೆ.

ವಿಡಿಯೋದಲ್ಲಿ 59 ವರ್ಷದ ವೇಣುಗೋಪಾಲ್ ಅವರನ್ನು ಪೊಲೀಸರು ಎತ್ತಿಕೊಂಡು ಹೋಗಿ ಬಸ್‌ನ ಕಡೆಗೆ ಎಳೆದುಕೊಂಡು ಹೋಗುವುದನ್ನು ಕಾಣಬಹುದು.

ನಂತರ ಪ್ರಿಯಾಂಕಾ ಗಾಂಧಿ ವಾದ್ರಾ, ಬಂಧಿತ ಕೆ.ಸಿ.ವೇಣುಗೋಪಾಲ್‌ ಸೇರಿದಂತೆ ಇತರ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸ್‌ ಠಾಣೆಗೆ ಹೋಗಿ ಭೇಟಿಯಾದರು.

ಈ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅವರಿಗೂ ಕೇಂದ್ರ ಸಂಸ್ಥೆ ಸಮನ್ಸ್ ನೀಡಿದೆ. ಅವರು ಕೋವಿಡ್‌ನಿಂದ ಬಳಲುತ್ತಿದ್ದು, ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಸೋನಿಯಾ ಗಾಂಧಿ ಅವರು ಜೂನ್ 23 ರಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಪ್ರತಿಪಕ್ಷಗಳ ಧ್ವನಿಯನ್ನು ಅಡಗಿಸಲು ಜಾರಿ ನಿರ್ದೇಶನಾಲಯ ಮತ್ತು ಇತರ ಕೇಂದ್ರೀಯ ಸಂಸ್ಥೆಗಳನ್ನು ಬಳಸುತ್ತಿದ್ದಾರೆ. ತನ್ನ ನಾಯಕರ ವಿರುದ್ಧದ ಆರೋಪಗಳು “ನಕಲಿ ಮತ್ತು ಆಧಾರರಹಿತ” ಮತ್ತು ಬಿಜೆಪಿಯು “ಸೇಡಿನ ರಾಜಕೀಯ” ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.


ಇದನ್ನೂ ಓದಿ: ರಾಜಸ್ಥಾನ: ಮದ್ಯಪಾನ ಮಾಡಲು ನಿರಾಕರಿಸಿದ ಬುಡಕಟ್ಟು ಯುವಕನ ಮೇಲೆ ಅಮಾನುಷ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...