Homeಕರ್ನಾಟಕಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ‘ಎದ್ದೇಳು ಕರ್ನಾಟಕ’ ನಿಯೋಗ; ಮನವಿ ಸಲ್ಲಿಕೆ

ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ‘ಎದ್ದೇಳು ಕರ್ನಾಟಕ’ ನಿಯೋಗ; ಮನವಿ ಸಲ್ಲಿಕೆ

ಚುನಾವಣೆ ಸಂದರ್ಭದಲ್ಲಿ ‘ಎದ್ದೇಳು ಕರ್ನಾಟಕ’ ಅಭಿಯಾನ ಮಾಡಿರುವ ಕೆಲಸಗಳಿಗೆ ಸಿಎಂ ಸಂತಸ ವ್ಯಕ್ತಪಡಿಸಿದರು

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ನಾಗರಿಕರ ಜಾಗೃತಿಗಾಗಿ ರೂಪುತಾಳಿ ಪರಿಣಾಮಕಾರಿ ಅಭಿಯಾನ ನಡೆಸಿದ ‘ಎದ್ದೇಳು ಕರ್ನಾಟಕ’ ತಂಡವು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಚರ್ಚೆ ನಡೆಸಿತು.

ಎದ್ದೇಳು ಕರ್ನಾಟಕದ ಕಾರ್ಯಕಾರಿ ಸಮಿತಿಯ ಪ್ರತಿನಿಧಿಗಳು ಮತ್ತು ವಿವಿಧ ಸಮುದಾಯಗಳ ಸಂಘಟನೆಗಳ ಮುಂದಾಳುಗಳ ನಿಯೋಗವು ಜೂನ್ 8ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಹಲವು ಸಂಗತಿಗಳನ್ನು ಚರ್ಚಿಸಿತು. ಹೋರಾಟಗಾರ್ತಿ ಮಲ್ಲಿಗೆ ಸಿರಿಮನೆಯವರು ತಂಡದ ಸದಸ್ಯರನ್ನು ಮುಖ್ಯಮಂತ್ರಿಯವರಿಗೆ ಪರಿಚಯಿಸಿದರು.

ಕೋಮುವಾದಿ‌ ಬಿಜೆಪಿಯ ವಿರುದ್ಧ ಎದ್ದೇಳು ಕರ್ನಾಟಕವನ್ನೂ ಒಳಗೊಂಡಂತೆ ಶ್ರಮಿಸಿದ ಜನಪರ ಚಳವಳಿಗಳು, ಕೆಲವು ಜನಪರ ಮಾಧ್ಯಮಗಳು ಮತ್ತು ಪ್ರಜ್ಞಾವಂತರ ಪಾತ್ರದ ಬಗ್ಗೆ ಹೋರಾಟಗಾರ ಕೆ. ಎಲ್. ಅಶೋಕ್ ಪೀಠಿಕೆಯ ಮಾತುಗಳನ್ನಾಡಿದರು. ಶೋಷಿತರು, ದಲಿತ ದಮನಿತರು, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಮಹಿಳೆಯರೇ ಮುಂತಾದ ಎಲ್ಲರ ಎದೆಯ ಮೇಲಿದ್ದ ಭಾರವನ್ನು ಇಳಿಸಿದಂತೆ ಅಸ್ತಿತ್ವಕ್ಕೆ ಬಂದಿರುವ ಈ ಸರ್ಕಾರದ ನೇತೃತ್ವ ವಹಿಸಿರುವ‌ ಮುಖ್ಯಮಂತ್ರಿಯವರನ್ನು ಎದ್ದೇಳು ಕರ್ನಾಟಕದ ಕಾರ್ಯಕಾರಿ ಮಂಡಳಿ ಪರವಾಗಿ ಅಭಿನಂದಿಸಿದರು.

“ಸರ್ಕಾರವು 5 ಗ್ಯಾರಂಟಿಗಳನ್ನು ಈಡೇರಿಸುವುದರ ಜೊತೆಗೆ, ಬಿಜೆಪಿಯ ದುರಾಡಳಿತದಿಂದಾಗಿ ಜಾರಿಗೆ ಬಂದಂತಹ ತಪ್ಪುಗಳನ್ನು ಸರಿಪಡಿಸಬೇಕಾದ ಗುರುತರ ಹೊಣೆಯನ್ನೂ ನಿರ್ವಹಿಸಬೇಕಿದೆ” ಎಂದು ಕರ್ನಾಟಕ ಜನಶಕ್ತಿಯ ನೂರ್ ಶ್ರೀಧರ್‌ ಹೇಳಿದರು. ಜೊತೆಗೆ ಹಲವಾರು ಅಂಶಗಳನ್ನು ಸಿದ್ದರಾಮಯ್ಯನವರ ಮುಂದಿಟ್ಟರು.

“ಭೂಮಿ ಮತ್ತು ವಸತಿ ವಂಚಿತರಿಗೆ ಆಗಿರುವ ಅನ್ಯಾಯ ಸರಿಪಡಿಸುವುದು, ರೈತವಿರೋಧಿ ಕೃಷಿಕಾಯ್ದೆಗಳನ್ನು ಹಿಂಪಡೆಯುವುದು ಮತ್ತು ನ್ಯಾಯಬದ್ಧ ಬೆಲೆ ಖಾತ್ರಿಯ ಪ್ರಕ್ರಿಯೆ ಪ್ರಾರಂಭಿಸುವುದು, ಪಠ್ಯಕ್ರಮ- ಶಿಕ್ಷಣದ ಕೇಸರೀಕರಣ, ಸರ್ಕಾರಿ ಶಾಲೆಗಳ ದುರಾವಸ್ಥೆ ಹಾಗೂ ಕನ್ನಡ ಭಾಷೆ ಮತ್ತು ಸಂಸ್ಕೃತಿಗೆ ಸಂಬಂಧಿಸಿ ಮಾಡಲಾದ ತಪ್ಪು ನಿರ್ಧಾರಗಳನ್ನು ಸರಿಪಡಿಸುವುದು, ಮೀಸಲಾತಿ ಗೋಜಲನ್ನು ಸರಿಪಡಿಸಲು ಸಮಗ್ರ ಯೋಜನೆ ರೂಪಿಸುವುದು, ಸಮುದಾಯಗಳನ್ನು ಒಡೆಯದಂತೆ ಎಚ್ಚರಿಕೆ ವಹಿಸುತ್ತಲೇ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಒದಗಿಸುವುದು, ಕನ್ನಡದ‌ ಜನಮಾನಸದಲ್ಲಿ ಆರೆಸ್ಸೆಸ್‌ ಬಿತ್ತಿರುವ ವಿಷವನ್ನು ಇಲ್ಲವಾಗಿಸುವಂತಹ ಸಹಬಾಳ್ವೆ ಪರವಾದ ಹೆಜ್ಜೆಗಳನ್ನು ಸರ್ಕಾರವೇ ಮುಂದಾಳತ್ವ ತೆಗೆದುಕೊಂಡು ಮುಂದಿಡುವುದು, ಹಾಗೆಯೇ ಯುವಜನರಿಗೆ ಉದ್ಯೋಗ ಸೃಷ್ಟಿ- ಉದ್ಯೋಗ ಭದ್ರತೆಯ ವಿಷಯದಲ್ಲಿ ಪರಿಣತರೊಂದಿಗೆ ಚರ್ಚಿಸಿ ದಿಟ್ಟ ಕ್ರಮಗಳಿಗೆ ಮುಂದಾಗುವುದು, 12 ಗಂಟೆ ಕೆಲಸದ ಅವಧಿಯ ಕಾಯ್ದೆಯನ್ನು ರದ್ದುಗೊಳಿಸುವುದು”- ಈ ಅಂಶಗಳನ್ನು ಸಿಎಂ ಅವರಲ್ಲಿ ಪ್ರಸ್ತಾಪಿಸಿದರು.

ಈ ವಿಷಯಗಳು ಬೊಕ್ಕಸಕ್ಕೆ ಹೆಚ್ಚುವರಿ ಹೊರೆಮಾಡದಂತೆ ಜನಸಮುದಾಯಗಳ ಮತ್ತು ಚಳವಳಿಗಳ ಸಹಭಾಗಿತ್ವದಲ್ಲಿ ನಡೆಯುವಂಥವಾದ್ದರಿಂದ ಕೂಡಲೇ ನಿರ್ಧಾರಗಳನ್ನು ತೆಗೆದುಕೊಳ್ಳಬಹುದಾದ್ದರಿಂದ, ಈ ಬಗ್ಗೆ ಚಿಂತಿಸಬೇಕೆಂದು ಮನವಿ ಮಾಡಲಾಯಿತು.

ಪರಿಸರ ಹೋರಾಟಗಾರ್ತಿ ಹಾಗೂ ಎದ್ದೇಳು ಕರ್ನಾಟಕದ ಚಾಲನಾ ಸದಸ್ಯರಲ್ಲೊಬ್ಬರಾದ ತಾರಾ‌ರಾವ್ ಅವರು ಮಾತನಾಡಿ, “ಆಡಳಿತದಲ್ಲಿ ಉತ್ತರದಾಯಿತ್ವ ಹಾಗೂ ಜನಪರತೆಗಾಗಿ ಸಮುದಾಯಗಳು, ತಜ್ಞರೊಂದಿಗೆ ತಳಮಟ್ಟದ ತನಕ ನಿರಂತರ ಸಮನ್ವಯ ಇರುವಂತೆ ಸರ್ಕಾರ ನೋಡಿಕೊಳ್ಳುವ ಮೂಲಕ, ಬಿಜೆಪಿಯ ವಿರುದ್ಧ ಇಡೀ ಭಾರತಕ್ಕೆ ಕರ್ನಾಟಕ ಹೊಸದೊಂದು ಮಾದರಿ ಆಡಳಿತ ನೀಡಬಹುದು” ಎಂದು ವಿವರಿಸಿದರು.

ಮುಸ್ಲಿಂ ಸಮುದಾಯದ ನಾಯಕರಾದ ಮಹಮ್ಮದ್ ಯೂಸುಫ್ ಕನ್ನಿಯವರು 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾರ್ಯನಿರ್ವಹಿಸಲು ಎದ್ದೇಳು ಕರ್ನಾಟಕ ರೂಪಿಸಿಕೊಂಡಿರುವ ಯೋಜನೆಯನ್ನು ಮುಂದಿಟ್ಟರು.

ಇದನ್ನೂ ಓದಿರಿ: ‘ಎದ್ದೇಳು ಕರ್ನಾಟಕ’ ಅನುಭವ ಕಥನ (ಭಾಗ-2): ಅಭಿಯಾನ ಕೈಗೊಂಡ ಕಾರ್ಯಗಳು

ಜಾಗತಿಕ ಲಿಂಗಾಯತ ಮಹಾಸಭಾದ ಜಿ.ಬಿ.ಪಾಟೀಲರ್‌ ಮಾತನಾಡಿ, “ವಾಟ್ಸಾಪ್ ಮೂಲಕ ವಿಷಬೀಜ ಬಿತ್ತುತ್ತಿರುವ ಸಂಘಪರಿವಾರದ ತಂತ್ರಕ್ಕೆ ಪ್ರತಿತಂತ್ರ ರೂಪಿಸುವ ಸಲುವಾಗಿ ನಿರ್ದಿಷ್ಟ ಯೋಜನೆ ರೂಪಿಸಬೇಕು” ಎಂದು ತಿಳಿಸಿದರು.

ಮುಖ್ಯಮಂತ್ರಿಗಳನ್ನು ಭೇಟಿಮಾಡಿದ ತಂಡದ ನೇತೃತ್ವವನ್ನು ಚಾಲನಾ ಸಮಿತಿಯ ಸದಸ್ಯರಲ್ಲೊಬ್ಬರೂ ಹಿರಿಯರೂ ಆದ ವಿಜಯಮ್ಮ ವಹಿಸಿದ್ದರು. ನಿಯೋಗದ ಭಾಗವಾಗಿ ದಲಿತ ಚಳುವಳಿಯ ಹಿರಿಯ ನಾಯಕರಾದ‌ ಎನ್. ವೆಂಕಟೇಶ್, ರೈತಮುಖಂಡರಾದ ವೀರಸಂಗಯ್ಯ, ಕ್ರೈಸ್ತ ಸಮುದಾಯದ ಪ್ರತಿನಿಧಿಯಾಗಿ ಫಾ. ಅರುಣ್ ಲೂಯಿಸ್, ಹಿಂದುಳಿದ ವರ್ಗಗಳ ಸಂಘಟನೆಗಳ ನಾಯಕರಾದ ರಾಮಚಂದ್ರಪ್ಪ, ಎಣ್ಣೆಗೆರೆ ವೆಂಕಟರಾಮಯ್ಯ, ಸ್ವರಾಜ್ ಅಭಿಯಾನದ ವಿಜಯ್ ಕುಮಾರ್ ಸೀತಪ್ಪ, ಜಮಾತ್ ಎ ಇಸ್ಲಾಮಿ ಹಿಂದ್‌ನ ನಾಯಕರಾದ ಅಕ್ಬರ್ ಅಲಿ ಉಡುಪಿ, ಮೌಲಾನಾ ಹಾಮಿದ್ ಉಮರಿ, ವಿಚಾರವಾದಿ ಸಂಘದ ಅರಳುಕುಪ್ಪೆ ನಾಗೇಶ್, ಎದ್ದೇಳು ಕರ್ನಾಟಕದ ವರದರಾಜ ನಿಯೋಗದಲ್ಲಿದ್ದರು.

ಮುಖ್ಯಮಂತ್ರಿಗಳಿಗೆ ಜನತೆಯ ನಿರೀಕ್ಷೆಗಳ ಪತ್ರ ಸಲ್ಲಿಸಲಾಯಿತು. ಎದ್ದೇಳು ಕರ್ನಾಟಕದ ನಿಯೋಗಕ್ಕೆ ಮುಕ್ತ ಕಂಠದಿಂದ ಧನ್ಯವಾದ ಹೇಳಿದ ಮುಖ್ಯಮಂತ್ರಿಗಳು “ಕೋಮುವಾದಿಗಳನ್ನು ಸೋಲಿಸುವ ಗುರಿಯೊಂದಿಗೆ ನೀವೆಲ್ಲಾ ನಿಸ್ವಾರ್ಥವಾಗಿ ಕೆಲಸ ಮಾಡಿದ್ದರಿಂದಲೇ ನಮ್ಮ ಪಕ್ಷ 136 ಸೀಟುಗಳನ್ನು ಪಡೆಯಲು ಸಾಧ್ಯವಾಯಿತು. ನಾವು ಕೆಲವು ತಪ್ಪುಗಳನ್ನು ಮಾಡಿರದಿದ್ದರೆ 150 ಸೀಟುಗಳನ್ನು ಪಡೆಯಬಹುದಿತ್ತು. ನೀವು ಮುಂದಿಟ್ಟಿರುವ ಸಲಹೆಗಳು ಸರಿಯಾಗಿವೆ. ಎಷ್ಟೇ ಕಷ್ಟವಾದರೂ ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ. 5 ಗ್ಯಾರಂಟಿಗಳನ್ನು ಕಾರ್ಯರೂಪಕ್ಕೆ ತರುತ್ತೇವೆ. ಕೃಷಿ ಕಾಯ್ದೆಗಳನ್ನು ಕೂಡಲೇ ಹಿಂಪಡಿಯುತ್ತೇವೆ. ಭೂಮಿ ವಸತಿ, ಶಿಕ್ಷಣ ಮುಂತಾದ ನಿಮ್ಮ ಸಲಹೆಗಳನ್ನೆಲ್ಲಾ ಕೂಲಂಕಷವಾಗಿ ಗಮನಿಸಿ ಕಾರ್ಯಪ್ರವೃತ್ತರಾಗುತ್ತೇವೆ. ನೀವೆಲ್ಲರೂ ನಮ್ಮ ಮೇಲೆ ಇಟ್ಟಿರುವ ನಿರೀಕ್ಷೆಗಳಿಗೆ ನಿರಾಸೆಯಾಗದಂತೆ ನಡೆದುಕೊಳ್ಳುತ್ತೇವೆ” ಎಂದು ಭರವಸೆಕೊಟ್ಟರು. ನಿರ್ದಿಷ್ಟವಾದ ಕೆಲವು ಸಂಗತಿಗಳನ್ನು ಚರ್ಚಿಸಲು ಮತ್ತೆ ಸಭೆ ಗೊತ್ತುಪಡಿಸುವುದಾಗಿ ತಿಳಿಸಿದರು. ಒಟ್ಟಿನಲ್ಲಿ ಇದು ಬಹಳ ಫಲಪ್ರದ ಮತ್ತು ಅರ್ಥಪೂರ್ಣ ಸಭೆಯಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...