Homeಕರ್ನಾಟಕಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ‘ಎದ್ದೇಳು ಕರ್ನಾಟಕ’ ನಿಯೋಗ; ಮನವಿ ಸಲ್ಲಿಕೆ

ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ‘ಎದ್ದೇಳು ಕರ್ನಾಟಕ’ ನಿಯೋಗ; ಮನವಿ ಸಲ್ಲಿಕೆ

ಚುನಾವಣೆ ಸಂದರ್ಭದಲ್ಲಿ ‘ಎದ್ದೇಳು ಕರ್ನಾಟಕ’ ಅಭಿಯಾನ ಮಾಡಿರುವ ಕೆಲಸಗಳಿಗೆ ಸಿಎಂ ಸಂತಸ ವ್ಯಕ್ತಪಡಿಸಿದರು

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ನಾಗರಿಕರ ಜಾಗೃತಿಗಾಗಿ ರೂಪುತಾಳಿ ಪರಿಣಾಮಕಾರಿ ಅಭಿಯಾನ ನಡೆಸಿದ ‘ಎದ್ದೇಳು ಕರ್ನಾಟಕ’ ತಂಡವು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಚರ್ಚೆ ನಡೆಸಿತು.

ಎದ್ದೇಳು ಕರ್ನಾಟಕದ ಕಾರ್ಯಕಾರಿ ಸಮಿತಿಯ ಪ್ರತಿನಿಧಿಗಳು ಮತ್ತು ವಿವಿಧ ಸಮುದಾಯಗಳ ಸಂಘಟನೆಗಳ ಮುಂದಾಳುಗಳ ನಿಯೋಗವು ಜೂನ್ 8ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಹಲವು ಸಂಗತಿಗಳನ್ನು ಚರ್ಚಿಸಿತು. ಹೋರಾಟಗಾರ್ತಿ ಮಲ್ಲಿಗೆ ಸಿರಿಮನೆಯವರು ತಂಡದ ಸದಸ್ಯರನ್ನು ಮುಖ್ಯಮಂತ್ರಿಯವರಿಗೆ ಪರಿಚಯಿಸಿದರು.

ಕೋಮುವಾದಿ‌ ಬಿಜೆಪಿಯ ವಿರುದ್ಧ ಎದ್ದೇಳು ಕರ್ನಾಟಕವನ್ನೂ ಒಳಗೊಂಡಂತೆ ಶ್ರಮಿಸಿದ ಜನಪರ ಚಳವಳಿಗಳು, ಕೆಲವು ಜನಪರ ಮಾಧ್ಯಮಗಳು ಮತ್ತು ಪ್ರಜ್ಞಾವಂತರ ಪಾತ್ರದ ಬಗ್ಗೆ ಹೋರಾಟಗಾರ ಕೆ. ಎಲ್. ಅಶೋಕ್ ಪೀಠಿಕೆಯ ಮಾತುಗಳನ್ನಾಡಿದರು. ಶೋಷಿತರು, ದಲಿತ ದಮನಿತರು, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಮಹಿಳೆಯರೇ ಮುಂತಾದ ಎಲ್ಲರ ಎದೆಯ ಮೇಲಿದ್ದ ಭಾರವನ್ನು ಇಳಿಸಿದಂತೆ ಅಸ್ತಿತ್ವಕ್ಕೆ ಬಂದಿರುವ ಈ ಸರ್ಕಾರದ ನೇತೃತ್ವ ವಹಿಸಿರುವ‌ ಮುಖ್ಯಮಂತ್ರಿಯವರನ್ನು ಎದ್ದೇಳು ಕರ್ನಾಟಕದ ಕಾರ್ಯಕಾರಿ ಮಂಡಳಿ ಪರವಾಗಿ ಅಭಿನಂದಿಸಿದರು.

“ಸರ್ಕಾರವು 5 ಗ್ಯಾರಂಟಿಗಳನ್ನು ಈಡೇರಿಸುವುದರ ಜೊತೆಗೆ, ಬಿಜೆಪಿಯ ದುರಾಡಳಿತದಿಂದಾಗಿ ಜಾರಿಗೆ ಬಂದಂತಹ ತಪ್ಪುಗಳನ್ನು ಸರಿಪಡಿಸಬೇಕಾದ ಗುರುತರ ಹೊಣೆಯನ್ನೂ ನಿರ್ವಹಿಸಬೇಕಿದೆ” ಎಂದು ಕರ್ನಾಟಕ ಜನಶಕ್ತಿಯ ನೂರ್ ಶ್ರೀಧರ್‌ ಹೇಳಿದರು. ಜೊತೆಗೆ ಹಲವಾರು ಅಂಶಗಳನ್ನು ಸಿದ್ದರಾಮಯ್ಯನವರ ಮುಂದಿಟ್ಟರು.

“ಭೂಮಿ ಮತ್ತು ವಸತಿ ವಂಚಿತರಿಗೆ ಆಗಿರುವ ಅನ್ಯಾಯ ಸರಿಪಡಿಸುವುದು, ರೈತವಿರೋಧಿ ಕೃಷಿಕಾಯ್ದೆಗಳನ್ನು ಹಿಂಪಡೆಯುವುದು ಮತ್ತು ನ್ಯಾಯಬದ್ಧ ಬೆಲೆ ಖಾತ್ರಿಯ ಪ್ರಕ್ರಿಯೆ ಪ್ರಾರಂಭಿಸುವುದು, ಪಠ್ಯಕ್ರಮ- ಶಿಕ್ಷಣದ ಕೇಸರೀಕರಣ, ಸರ್ಕಾರಿ ಶಾಲೆಗಳ ದುರಾವಸ್ಥೆ ಹಾಗೂ ಕನ್ನಡ ಭಾಷೆ ಮತ್ತು ಸಂಸ್ಕೃತಿಗೆ ಸಂಬಂಧಿಸಿ ಮಾಡಲಾದ ತಪ್ಪು ನಿರ್ಧಾರಗಳನ್ನು ಸರಿಪಡಿಸುವುದು, ಮೀಸಲಾತಿ ಗೋಜಲನ್ನು ಸರಿಪಡಿಸಲು ಸಮಗ್ರ ಯೋಜನೆ ರೂಪಿಸುವುದು, ಸಮುದಾಯಗಳನ್ನು ಒಡೆಯದಂತೆ ಎಚ್ಚರಿಕೆ ವಹಿಸುತ್ತಲೇ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಒದಗಿಸುವುದು, ಕನ್ನಡದ‌ ಜನಮಾನಸದಲ್ಲಿ ಆರೆಸ್ಸೆಸ್‌ ಬಿತ್ತಿರುವ ವಿಷವನ್ನು ಇಲ್ಲವಾಗಿಸುವಂತಹ ಸಹಬಾಳ್ವೆ ಪರವಾದ ಹೆಜ್ಜೆಗಳನ್ನು ಸರ್ಕಾರವೇ ಮುಂದಾಳತ್ವ ತೆಗೆದುಕೊಂಡು ಮುಂದಿಡುವುದು, ಹಾಗೆಯೇ ಯುವಜನರಿಗೆ ಉದ್ಯೋಗ ಸೃಷ್ಟಿ- ಉದ್ಯೋಗ ಭದ್ರತೆಯ ವಿಷಯದಲ್ಲಿ ಪರಿಣತರೊಂದಿಗೆ ಚರ್ಚಿಸಿ ದಿಟ್ಟ ಕ್ರಮಗಳಿಗೆ ಮುಂದಾಗುವುದು, 12 ಗಂಟೆ ಕೆಲಸದ ಅವಧಿಯ ಕಾಯ್ದೆಯನ್ನು ರದ್ದುಗೊಳಿಸುವುದು”- ಈ ಅಂಶಗಳನ್ನು ಸಿಎಂ ಅವರಲ್ಲಿ ಪ್ರಸ್ತಾಪಿಸಿದರು.

ಈ ವಿಷಯಗಳು ಬೊಕ್ಕಸಕ್ಕೆ ಹೆಚ್ಚುವರಿ ಹೊರೆಮಾಡದಂತೆ ಜನಸಮುದಾಯಗಳ ಮತ್ತು ಚಳವಳಿಗಳ ಸಹಭಾಗಿತ್ವದಲ್ಲಿ ನಡೆಯುವಂಥವಾದ್ದರಿಂದ ಕೂಡಲೇ ನಿರ್ಧಾರಗಳನ್ನು ತೆಗೆದುಕೊಳ್ಳಬಹುದಾದ್ದರಿಂದ, ಈ ಬಗ್ಗೆ ಚಿಂತಿಸಬೇಕೆಂದು ಮನವಿ ಮಾಡಲಾಯಿತು.

ಪರಿಸರ ಹೋರಾಟಗಾರ್ತಿ ಹಾಗೂ ಎದ್ದೇಳು ಕರ್ನಾಟಕದ ಚಾಲನಾ ಸದಸ್ಯರಲ್ಲೊಬ್ಬರಾದ ತಾರಾ‌ರಾವ್ ಅವರು ಮಾತನಾಡಿ, “ಆಡಳಿತದಲ್ಲಿ ಉತ್ತರದಾಯಿತ್ವ ಹಾಗೂ ಜನಪರತೆಗಾಗಿ ಸಮುದಾಯಗಳು, ತಜ್ಞರೊಂದಿಗೆ ತಳಮಟ್ಟದ ತನಕ ನಿರಂತರ ಸಮನ್ವಯ ಇರುವಂತೆ ಸರ್ಕಾರ ನೋಡಿಕೊಳ್ಳುವ ಮೂಲಕ, ಬಿಜೆಪಿಯ ವಿರುದ್ಧ ಇಡೀ ಭಾರತಕ್ಕೆ ಕರ್ನಾಟಕ ಹೊಸದೊಂದು ಮಾದರಿ ಆಡಳಿತ ನೀಡಬಹುದು” ಎಂದು ವಿವರಿಸಿದರು.

ಮುಸ್ಲಿಂ ಸಮುದಾಯದ ನಾಯಕರಾದ ಮಹಮ್ಮದ್ ಯೂಸುಫ್ ಕನ್ನಿಯವರು 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾರ್ಯನಿರ್ವಹಿಸಲು ಎದ್ದೇಳು ಕರ್ನಾಟಕ ರೂಪಿಸಿಕೊಂಡಿರುವ ಯೋಜನೆಯನ್ನು ಮುಂದಿಟ್ಟರು.

ಇದನ್ನೂ ಓದಿರಿ: ‘ಎದ್ದೇಳು ಕರ್ನಾಟಕ’ ಅನುಭವ ಕಥನ (ಭಾಗ-2): ಅಭಿಯಾನ ಕೈಗೊಂಡ ಕಾರ್ಯಗಳು

ಜಾಗತಿಕ ಲಿಂಗಾಯತ ಮಹಾಸಭಾದ ಜಿ.ಬಿ.ಪಾಟೀಲರ್‌ ಮಾತನಾಡಿ, “ವಾಟ್ಸಾಪ್ ಮೂಲಕ ವಿಷಬೀಜ ಬಿತ್ತುತ್ತಿರುವ ಸಂಘಪರಿವಾರದ ತಂತ್ರಕ್ಕೆ ಪ್ರತಿತಂತ್ರ ರೂಪಿಸುವ ಸಲುವಾಗಿ ನಿರ್ದಿಷ್ಟ ಯೋಜನೆ ರೂಪಿಸಬೇಕು” ಎಂದು ತಿಳಿಸಿದರು.

ಮುಖ್ಯಮಂತ್ರಿಗಳನ್ನು ಭೇಟಿಮಾಡಿದ ತಂಡದ ನೇತೃತ್ವವನ್ನು ಚಾಲನಾ ಸಮಿತಿಯ ಸದಸ್ಯರಲ್ಲೊಬ್ಬರೂ ಹಿರಿಯರೂ ಆದ ವಿಜಯಮ್ಮ ವಹಿಸಿದ್ದರು. ನಿಯೋಗದ ಭಾಗವಾಗಿ ದಲಿತ ಚಳುವಳಿಯ ಹಿರಿಯ ನಾಯಕರಾದ‌ ಎನ್. ವೆಂಕಟೇಶ್, ರೈತಮುಖಂಡರಾದ ವೀರಸಂಗಯ್ಯ, ಕ್ರೈಸ್ತ ಸಮುದಾಯದ ಪ್ರತಿನಿಧಿಯಾಗಿ ಫಾ. ಅರುಣ್ ಲೂಯಿಸ್, ಹಿಂದುಳಿದ ವರ್ಗಗಳ ಸಂಘಟನೆಗಳ ನಾಯಕರಾದ ರಾಮಚಂದ್ರಪ್ಪ, ಎಣ್ಣೆಗೆರೆ ವೆಂಕಟರಾಮಯ್ಯ, ಸ್ವರಾಜ್ ಅಭಿಯಾನದ ವಿಜಯ್ ಕುಮಾರ್ ಸೀತಪ್ಪ, ಜಮಾತ್ ಎ ಇಸ್ಲಾಮಿ ಹಿಂದ್‌ನ ನಾಯಕರಾದ ಅಕ್ಬರ್ ಅಲಿ ಉಡುಪಿ, ಮೌಲಾನಾ ಹಾಮಿದ್ ಉಮರಿ, ವಿಚಾರವಾದಿ ಸಂಘದ ಅರಳುಕುಪ್ಪೆ ನಾಗೇಶ್, ಎದ್ದೇಳು ಕರ್ನಾಟಕದ ವರದರಾಜ ನಿಯೋಗದಲ್ಲಿದ್ದರು.

ಮುಖ್ಯಮಂತ್ರಿಗಳಿಗೆ ಜನತೆಯ ನಿರೀಕ್ಷೆಗಳ ಪತ್ರ ಸಲ್ಲಿಸಲಾಯಿತು. ಎದ್ದೇಳು ಕರ್ನಾಟಕದ ನಿಯೋಗಕ್ಕೆ ಮುಕ್ತ ಕಂಠದಿಂದ ಧನ್ಯವಾದ ಹೇಳಿದ ಮುಖ್ಯಮಂತ್ರಿಗಳು “ಕೋಮುವಾದಿಗಳನ್ನು ಸೋಲಿಸುವ ಗುರಿಯೊಂದಿಗೆ ನೀವೆಲ್ಲಾ ನಿಸ್ವಾರ್ಥವಾಗಿ ಕೆಲಸ ಮಾಡಿದ್ದರಿಂದಲೇ ನಮ್ಮ ಪಕ್ಷ 136 ಸೀಟುಗಳನ್ನು ಪಡೆಯಲು ಸಾಧ್ಯವಾಯಿತು. ನಾವು ಕೆಲವು ತಪ್ಪುಗಳನ್ನು ಮಾಡಿರದಿದ್ದರೆ 150 ಸೀಟುಗಳನ್ನು ಪಡೆಯಬಹುದಿತ್ತು. ನೀವು ಮುಂದಿಟ್ಟಿರುವ ಸಲಹೆಗಳು ಸರಿಯಾಗಿವೆ. ಎಷ್ಟೇ ಕಷ್ಟವಾದರೂ ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ. 5 ಗ್ಯಾರಂಟಿಗಳನ್ನು ಕಾರ್ಯರೂಪಕ್ಕೆ ತರುತ್ತೇವೆ. ಕೃಷಿ ಕಾಯ್ದೆಗಳನ್ನು ಕೂಡಲೇ ಹಿಂಪಡಿಯುತ್ತೇವೆ. ಭೂಮಿ ವಸತಿ, ಶಿಕ್ಷಣ ಮುಂತಾದ ನಿಮ್ಮ ಸಲಹೆಗಳನ್ನೆಲ್ಲಾ ಕೂಲಂಕಷವಾಗಿ ಗಮನಿಸಿ ಕಾರ್ಯಪ್ರವೃತ್ತರಾಗುತ್ತೇವೆ. ನೀವೆಲ್ಲರೂ ನಮ್ಮ ಮೇಲೆ ಇಟ್ಟಿರುವ ನಿರೀಕ್ಷೆಗಳಿಗೆ ನಿರಾಸೆಯಾಗದಂತೆ ನಡೆದುಕೊಳ್ಳುತ್ತೇವೆ” ಎಂದು ಭರವಸೆಕೊಟ್ಟರು. ನಿರ್ದಿಷ್ಟವಾದ ಕೆಲವು ಸಂಗತಿಗಳನ್ನು ಚರ್ಚಿಸಲು ಮತ್ತೆ ಸಭೆ ಗೊತ್ತುಪಡಿಸುವುದಾಗಿ ತಿಳಿಸಿದರು. ಒಟ್ಟಿನಲ್ಲಿ ಇದು ಬಹಳ ಫಲಪ್ರದ ಮತ್ತು ಅರ್ಥಪೂರ್ಣ ಸಭೆಯಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...