Homeಕರ್ನಾಟಕಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ‘ಎದ್ದೇಳು ಕರ್ನಾಟಕ’ ನಿಯೋಗ; ಮನವಿ ಸಲ್ಲಿಕೆ

ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ‘ಎದ್ದೇಳು ಕರ್ನಾಟಕ’ ನಿಯೋಗ; ಮನವಿ ಸಲ್ಲಿಕೆ

ಚುನಾವಣೆ ಸಂದರ್ಭದಲ್ಲಿ ‘ಎದ್ದೇಳು ಕರ್ನಾಟಕ’ ಅಭಿಯಾನ ಮಾಡಿರುವ ಕೆಲಸಗಳಿಗೆ ಸಿಎಂ ಸಂತಸ ವ್ಯಕ್ತಪಡಿಸಿದರು

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ನಾಗರಿಕರ ಜಾಗೃತಿಗಾಗಿ ರೂಪುತಾಳಿ ಪರಿಣಾಮಕಾರಿ ಅಭಿಯಾನ ನಡೆಸಿದ ‘ಎದ್ದೇಳು ಕರ್ನಾಟಕ’ ತಂಡವು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಚರ್ಚೆ ನಡೆಸಿತು.

ಎದ್ದೇಳು ಕರ್ನಾಟಕದ ಕಾರ್ಯಕಾರಿ ಸಮಿತಿಯ ಪ್ರತಿನಿಧಿಗಳು ಮತ್ತು ವಿವಿಧ ಸಮುದಾಯಗಳ ಸಂಘಟನೆಗಳ ಮುಂದಾಳುಗಳ ನಿಯೋಗವು ಜೂನ್ 8ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಹಲವು ಸಂಗತಿಗಳನ್ನು ಚರ್ಚಿಸಿತು. ಹೋರಾಟಗಾರ್ತಿ ಮಲ್ಲಿಗೆ ಸಿರಿಮನೆಯವರು ತಂಡದ ಸದಸ್ಯರನ್ನು ಮುಖ್ಯಮಂತ್ರಿಯವರಿಗೆ ಪರಿಚಯಿಸಿದರು.

ಕೋಮುವಾದಿ‌ ಬಿಜೆಪಿಯ ವಿರುದ್ಧ ಎದ್ದೇಳು ಕರ್ನಾಟಕವನ್ನೂ ಒಳಗೊಂಡಂತೆ ಶ್ರಮಿಸಿದ ಜನಪರ ಚಳವಳಿಗಳು, ಕೆಲವು ಜನಪರ ಮಾಧ್ಯಮಗಳು ಮತ್ತು ಪ್ರಜ್ಞಾವಂತರ ಪಾತ್ರದ ಬಗ್ಗೆ ಹೋರಾಟಗಾರ ಕೆ. ಎಲ್. ಅಶೋಕ್ ಪೀಠಿಕೆಯ ಮಾತುಗಳನ್ನಾಡಿದರು. ಶೋಷಿತರು, ದಲಿತ ದಮನಿತರು, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಮಹಿಳೆಯರೇ ಮುಂತಾದ ಎಲ್ಲರ ಎದೆಯ ಮೇಲಿದ್ದ ಭಾರವನ್ನು ಇಳಿಸಿದಂತೆ ಅಸ್ತಿತ್ವಕ್ಕೆ ಬಂದಿರುವ ಈ ಸರ್ಕಾರದ ನೇತೃತ್ವ ವಹಿಸಿರುವ‌ ಮುಖ್ಯಮಂತ್ರಿಯವರನ್ನು ಎದ್ದೇಳು ಕರ್ನಾಟಕದ ಕಾರ್ಯಕಾರಿ ಮಂಡಳಿ ಪರವಾಗಿ ಅಭಿನಂದಿಸಿದರು.

“ಸರ್ಕಾರವು 5 ಗ್ಯಾರಂಟಿಗಳನ್ನು ಈಡೇರಿಸುವುದರ ಜೊತೆಗೆ, ಬಿಜೆಪಿಯ ದುರಾಡಳಿತದಿಂದಾಗಿ ಜಾರಿಗೆ ಬಂದಂತಹ ತಪ್ಪುಗಳನ್ನು ಸರಿಪಡಿಸಬೇಕಾದ ಗುರುತರ ಹೊಣೆಯನ್ನೂ ನಿರ್ವಹಿಸಬೇಕಿದೆ” ಎಂದು ಕರ್ನಾಟಕ ಜನಶಕ್ತಿಯ ನೂರ್ ಶ್ರೀಧರ್‌ ಹೇಳಿದರು. ಜೊತೆಗೆ ಹಲವಾರು ಅಂಶಗಳನ್ನು ಸಿದ್ದರಾಮಯ್ಯನವರ ಮುಂದಿಟ್ಟರು.

“ಭೂಮಿ ಮತ್ತು ವಸತಿ ವಂಚಿತರಿಗೆ ಆಗಿರುವ ಅನ್ಯಾಯ ಸರಿಪಡಿಸುವುದು, ರೈತವಿರೋಧಿ ಕೃಷಿಕಾಯ್ದೆಗಳನ್ನು ಹಿಂಪಡೆಯುವುದು ಮತ್ತು ನ್ಯಾಯಬದ್ಧ ಬೆಲೆ ಖಾತ್ರಿಯ ಪ್ರಕ್ರಿಯೆ ಪ್ರಾರಂಭಿಸುವುದು, ಪಠ್ಯಕ್ರಮ- ಶಿಕ್ಷಣದ ಕೇಸರೀಕರಣ, ಸರ್ಕಾರಿ ಶಾಲೆಗಳ ದುರಾವಸ್ಥೆ ಹಾಗೂ ಕನ್ನಡ ಭಾಷೆ ಮತ್ತು ಸಂಸ್ಕೃತಿಗೆ ಸಂಬಂಧಿಸಿ ಮಾಡಲಾದ ತಪ್ಪು ನಿರ್ಧಾರಗಳನ್ನು ಸರಿಪಡಿಸುವುದು, ಮೀಸಲಾತಿ ಗೋಜಲನ್ನು ಸರಿಪಡಿಸಲು ಸಮಗ್ರ ಯೋಜನೆ ರೂಪಿಸುವುದು, ಸಮುದಾಯಗಳನ್ನು ಒಡೆಯದಂತೆ ಎಚ್ಚರಿಕೆ ವಹಿಸುತ್ತಲೇ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಒದಗಿಸುವುದು, ಕನ್ನಡದ‌ ಜನಮಾನಸದಲ್ಲಿ ಆರೆಸ್ಸೆಸ್‌ ಬಿತ್ತಿರುವ ವಿಷವನ್ನು ಇಲ್ಲವಾಗಿಸುವಂತಹ ಸಹಬಾಳ್ವೆ ಪರವಾದ ಹೆಜ್ಜೆಗಳನ್ನು ಸರ್ಕಾರವೇ ಮುಂದಾಳತ್ವ ತೆಗೆದುಕೊಂಡು ಮುಂದಿಡುವುದು, ಹಾಗೆಯೇ ಯುವಜನರಿಗೆ ಉದ್ಯೋಗ ಸೃಷ್ಟಿ- ಉದ್ಯೋಗ ಭದ್ರತೆಯ ವಿಷಯದಲ್ಲಿ ಪರಿಣತರೊಂದಿಗೆ ಚರ್ಚಿಸಿ ದಿಟ್ಟ ಕ್ರಮಗಳಿಗೆ ಮುಂದಾಗುವುದು, 12 ಗಂಟೆ ಕೆಲಸದ ಅವಧಿಯ ಕಾಯ್ದೆಯನ್ನು ರದ್ದುಗೊಳಿಸುವುದು”- ಈ ಅಂಶಗಳನ್ನು ಸಿಎಂ ಅವರಲ್ಲಿ ಪ್ರಸ್ತಾಪಿಸಿದರು.

ಈ ವಿಷಯಗಳು ಬೊಕ್ಕಸಕ್ಕೆ ಹೆಚ್ಚುವರಿ ಹೊರೆಮಾಡದಂತೆ ಜನಸಮುದಾಯಗಳ ಮತ್ತು ಚಳವಳಿಗಳ ಸಹಭಾಗಿತ್ವದಲ್ಲಿ ನಡೆಯುವಂಥವಾದ್ದರಿಂದ ಕೂಡಲೇ ನಿರ್ಧಾರಗಳನ್ನು ತೆಗೆದುಕೊಳ್ಳಬಹುದಾದ್ದರಿಂದ, ಈ ಬಗ್ಗೆ ಚಿಂತಿಸಬೇಕೆಂದು ಮನವಿ ಮಾಡಲಾಯಿತು.

ಪರಿಸರ ಹೋರಾಟಗಾರ್ತಿ ಹಾಗೂ ಎದ್ದೇಳು ಕರ್ನಾಟಕದ ಚಾಲನಾ ಸದಸ್ಯರಲ್ಲೊಬ್ಬರಾದ ತಾರಾ‌ರಾವ್ ಅವರು ಮಾತನಾಡಿ, “ಆಡಳಿತದಲ್ಲಿ ಉತ್ತರದಾಯಿತ್ವ ಹಾಗೂ ಜನಪರತೆಗಾಗಿ ಸಮುದಾಯಗಳು, ತಜ್ಞರೊಂದಿಗೆ ತಳಮಟ್ಟದ ತನಕ ನಿರಂತರ ಸಮನ್ವಯ ಇರುವಂತೆ ಸರ್ಕಾರ ನೋಡಿಕೊಳ್ಳುವ ಮೂಲಕ, ಬಿಜೆಪಿಯ ವಿರುದ್ಧ ಇಡೀ ಭಾರತಕ್ಕೆ ಕರ್ನಾಟಕ ಹೊಸದೊಂದು ಮಾದರಿ ಆಡಳಿತ ನೀಡಬಹುದು” ಎಂದು ವಿವರಿಸಿದರು.

ಮುಸ್ಲಿಂ ಸಮುದಾಯದ ನಾಯಕರಾದ ಮಹಮ್ಮದ್ ಯೂಸುಫ್ ಕನ್ನಿಯವರು 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾರ್ಯನಿರ್ವಹಿಸಲು ಎದ್ದೇಳು ಕರ್ನಾಟಕ ರೂಪಿಸಿಕೊಂಡಿರುವ ಯೋಜನೆಯನ್ನು ಮುಂದಿಟ್ಟರು.

ಇದನ್ನೂ ಓದಿರಿ: ‘ಎದ್ದೇಳು ಕರ್ನಾಟಕ’ ಅನುಭವ ಕಥನ (ಭಾಗ-2): ಅಭಿಯಾನ ಕೈಗೊಂಡ ಕಾರ್ಯಗಳು

ಜಾಗತಿಕ ಲಿಂಗಾಯತ ಮಹಾಸಭಾದ ಜಿ.ಬಿ.ಪಾಟೀಲರ್‌ ಮಾತನಾಡಿ, “ವಾಟ್ಸಾಪ್ ಮೂಲಕ ವಿಷಬೀಜ ಬಿತ್ತುತ್ತಿರುವ ಸಂಘಪರಿವಾರದ ತಂತ್ರಕ್ಕೆ ಪ್ರತಿತಂತ್ರ ರೂಪಿಸುವ ಸಲುವಾಗಿ ನಿರ್ದಿಷ್ಟ ಯೋಜನೆ ರೂಪಿಸಬೇಕು” ಎಂದು ತಿಳಿಸಿದರು.

ಮುಖ್ಯಮಂತ್ರಿಗಳನ್ನು ಭೇಟಿಮಾಡಿದ ತಂಡದ ನೇತೃತ್ವವನ್ನು ಚಾಲನಾ ಸಮಿತಿಯ ಸದಸ್ಯರಲ್ಲೊಬ್ಬರೂ ಹಿರಿಯರೂ ಆದ ವಿಜಯಮ್ಮ ವಹಿಸಿದ್ದರು. ನಿಯೋಗದ ಭಾಗವಾಗಿ ದಲಿತ ಚಳುವಳಿಯ ಹಿರಿಯ ನಾಯಕರಾದ‌ ಎನ್. ವೆಂಕಟೇಶ್, ರೈತಮುಖಂಡರಾದ ವೀರಸಂಗಯ್ಯ, ಕ್ರೈಸ್ತ ಸಮುದಾಯದ ಪ್ರತಿನಿಧಿಯಾಗಿ ಫಾ. ಅರುಣ್ ಲೂಯಿಸ್, ಹಿಂದುಳಿದ ವರ್ಗಗಳ ಸಂಘಟನೆಗಳ ನಾಯಕರಾದ ರಾಮಚಂದ್ರಪ್ಪ, ಎಣ್ಣೆಗೆರೆ ವೆಂಕಟರಾಮಯ್ಯ, ಸ್ವರಾಜ್ ಅಭಿಯಾನದ ವಿಜಯ್ ಕುಮಾರ್ ಸೀತಪ್ಪ, ಜಮಾತ್ ಎ ಇಸ್ಲಾಮಿ ಹಿಂದ್‌ನ ನಾಯಕರಾದ ಅಕ್ಬರ್ ಅಲಿ ಉಡುಪಿ, ಮೌಲಾನಾ ಹಾಮಿದ್ ಉಮರಿ, ವಿಚಾರವಾದಿ ಸಂಘದ ಅರಳುಕುಪ್ಪೆ ನಾಗೇಶ್, ಎದ್ದೇಳು ಕರ್ನಾಟಕದ ವರದರಾಜ ನಿಯೋಗದಲ್ಲಿದ್ದರು.

ಮುಖ್ಯಮಂತ್ರಿಗಳಿಗೆ ಜನತೆಯ ನಿರೀಕ್ಷೆಗಳ ಪತ್ರ ಸಲ್ಲಿಸಲಾಯಿತು. ಎದ್ದೇಳು ಕರ್ನಾಟಕದ ನಿಯೋಗಕ್ಕೆ ಮುಕ್ತ ಕಂಠದಿಂದ ಧನ್ಯವಾದ ಹೇಳಿದ ಮುಖ್ಯಮಂತ್ರಿಗಳು “ಕೋಮುವಾದಿಗಳನ್ನು ಸೋಲಿಸುವ ಗುರಿಯೊಂದಿಗೆ ನೀವೆಲ್ಲಾ ನಿಸ್ವಾರ್ಥವಾಗಿ ಕೆಲಸ ಮಾಡಿದ್ದರಿಂದಲೇ ನಮ್ಮ ಪಕ್ಷ 136 ಸೀಟುಗಳನ್ನು ಪಡೆಯಲು ಸಾಧ್ಯವಾಯಿತು. ನಾವು ಕೆಲವು ತಪ್ಪುಗಳನ್ನು ಮಾಡಿರದಿದ್ದರೆ 150 ಸೀಟುಗಳನ್ನು ಪಡೆಯಬಹುದಿತ್ತು. ನೀವು ಮುಂದಿಟ್ಟಿರುವ ಸಲಹೆಗಳು ಸರಿಯಾಗಿವೆ. ಎಷ್ಟೇ ಕಷ್ಟವಾದರೂ ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ. 5 ಗ್ಯಾರಂಟಿಗಳನ್ನು ಕಾರ್ಯರೂಪಕ್ಕೆ ತರುತ್ತೇವೆ. ಕೃಷಿ ಕಾಯ್ದೆಗಳನ್ನು ಕೂಡಲೇ ಹಿಂಪಡಿಯುತ್ತೇವೆ. ಭೂಮಿ ವಸತಿ, ಶಿಕ್ಷಣ ಮುಂತಾದ ನಿಮ್ಮ ಸಲಹೆಗಳನ್ನೆಲ್ಲಾ ಕೂಲಂಕಷವಾಗಿ ಗಮನಿಸಿ ಕಾರ್ಯಪ್ರವೃತ್ತರಾಗುತ್ತೇವೆ. ನೀವೆಲ್ಲರೂ ನಮ್ಮ ಮೇಲೆ ಇಟ್ಟಿರುವ ನಿರೀಕ್ಷೆಗಳಿಗೆ ನಿರಾಸೆಯಾಗದಂತೆ ನಡೆದುಕೊಳ್ಳುತ್ತೇವೆ” ಎಂದು ಭರವಸೆಕೊಟ್ಟರು. ನಿರ್ದಿಷ್ಟವಾದ ಕೆಲವು ಸಂಗತಿಗಳನ್ನು ಚರ್ಚಿಸಲು ಮತ್ತೆ ಸಭೆ ಗೊತ್ತುಪಡಿಸುವುದಾಗಿ ತಿಳಿಸಿದರು. ಒಟ್ಟಿನಲ್ಲಿ ಇದು ಬಹಳ ಫಲಪ್ರದ ಮತ್ತು ಅರ್ಥಪೂರ್ಣ ಸಭೆಯಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...