Homeಕರ್ನಾಟಕ‘ಎದ್ದೇಳು ಕರ್ನಾಟಕ’ ತಂಡದ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ; ಆರೋಪ

‘ಎದ್ದೇಳು ಕರ್ನಾಟಕ’ ತಂಡದ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ; ಆರೋಪ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ಧ ಜಾಗೃತಿ ಮೂಡಿಸುತ್ತಾ, ಈ ಭಾರಿ ಸರ್ಕಾರವನ್ನು ಬದಲಿಸಿ ಎಂದು ಪ್ರಚಾರ ಮಾಡುತ್ತಿದ್ದ ‘ಎದ್ದೇಳು ಕರ್ನಾಟಕ’ ಜಾಗೃತ ತಂಡದ ಮೇಲೆ ಬಿಜೆಪಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆಂಬ ಆರೋಪ ಬಂದಿದೆ.

ಜಯಜನಗರ ಕ್ಷೇತ್ರದಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ಬಿಜೆಪಿ ಕಡೆಯವರು ಬಂದು ಹಲ್ಲೆ ನಡೆಸಿದ್ದಾರೆ, ಈ ಕುರಿತು ಯಾವುದೇ ಕ್ರಮವನ್ನು ಈವರೆಗೆ ಜರುಗಿಸಿಲ್ಲ ಎಂದು ಕ್ಷೇತ್ರದ ಶಾಸಕಿ ಸೌಮ್ಯಾ ರೆಡ್ಡಿ ದೂರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಎದ್ದೇಳು ಕರ್ನಾಟಕದ ಪ್ರಜ್ಞಾವಂತ ನಾಗರಿಕರು ಶಾಂತಿಯುತವಾಗಿ ಪ್ರಚಾರ ನಡೆಸುತ್ತಿದ್ದರು. ಆದರೆ ಜಯನಗರದ ಬಿಜೆಪಿ ಅಭ್ಯರ್ಥಿ (ಸಿ.ಕೆ.ರಾಮಮೂರ್ತಿ) ಮತ್ತು ಸಂಸದ ತೇಜಸ್ವಿಸೂರ್ಯ ಅವರ ನಿರ್ದೇಶನದ ಮೇರೆಗೆ ನಾಗರಿಕರ ಮೇಲೆ ಹಲ್ಲೆ ಮಾಡಲಾಗಿದೆ ಮತ್ತು ಅಶ್ಲೀಲ ಪದಗಳಿಂದ ನಿಂದಿಸಲಾಗಿದೆ” ಎಂದು ವಿಡಿಯೊ ಹಂಚಿಕೊಂಡಿದ್ದಾರೆ.

“ದೂರು ನೀಡಿದರೂ ಬೆಂಗಳೂರು ನಗರ ಪೊಲೀಸರಾಗಲಿ, ಜಯನಗರ ಪೊಲೀಸರಾಗಲೀ ಈ ಪುಂಡರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ. ಸಾಕು, ಸಾಕು. ಬಿಜೆಪಿಯ ಗೂಂಡಾ ಸಂಸ್ಕೃತಿಯನ್ನು ಕೊನೆಗಾಣಿಸಬೇಕಾಗಿದೆ. ಎದ್ದೇಳು ಕರ್ನಾಟಕ, ಎದ್ದೇಳು. ನಾವು ಮಹಿಳೆಯರು- ನಮಗೆ ರಕ್ಷಣೆ ಬೇಕಿದೆ. ಮತ್ತೆ ನಮ್ಮ ಬೆಂಗಳೂರು ಸುರಕ್ಷಿತ ನಗರವಾಗಬೇಕೆಂದು ನಾವು ಬಯಸುತ್ತೇವೆ” ಎಂದಿದ್ದಾರೆ.

ವಾರ್ಡ್ ನಂ.170ರ (ಅರಸು ಕಾಲೋನಿ) ಬಿಜೆಪಿ ಅಧ್ಯಕ್ಷ ಷಣ್ಮುಗಂ, ಆತನ ಮೈದುನ ಮಣಿಕಂಠ ಮತ್ತು ಸಹಚರರು ಹಲ್ಲೆ ಮಾಡಿದ್ದಾರೆಂದು ತಿಳಿದುಬಂದಿದೆ. ಕಾರ್ಮಲ್ ಕಾನ್ವೆಂಟ್ ಪೊಲಿಂಗ್ ಬೂತ್ ವ್ಯಾಪ್ತಿಯಲ್ಲಿ ಘಟನೆ ನಡೆದೆ. ಎದ್ದೇಳು ಕರ್ನಾಟಕದ 17 ಮಂದಿ ಸಾಮಾಜಿಕ ಕಾರ್ಯಕರ್ತರು ಸ್ಥಳದಲ್ಲಿ ಹಾಜರಿದ್ದರು.

‘ನಾನುಗೌರಿ.ಕಾಂ’ ಜೊತೆ ಮಾಡಿದ ಸಾಮಾಜಿಕ ಕಾರ್ಯಕರ್ತೆ ಗೌರಿಯವರು ಘಟನೆಯ ಕುರಿತು ವಿವರಿಸಿದರು. “ಎಂದಿನಂತೆ ನಾವು ಪ್ರಚಾರವನ್ನು ಮಾಡಿಕೊಂಡು ಹೋಗುತ್ತಿದ್ದೆವು. ಈ ವಾರ್ಡ್‌ನಲ್ಲಿ ಬಿಜೆಪಿ ಪ್ರಬಲವಾಗಿದೆ. ಕಳೆದ ಚುನಾವಣೆ ಸಂದರ್ಭದಲ್ಲಿ ಹೆಣ್ಣುಮಕ್ಕಳ ಮತದಾನ ಈ ಕ್ಷೇತ್ರದಲ್ಲಿ ಕುಸಿದಿತ್ತು. ಹೀಗಾಗಿ ಜಾಗೃತಿ ಮಾಡುತ್ತಿದ್ದೆವು. ಸಂವಿಧಾನವನ್ನು ಎತ್ತಿಹಿಡಿಯುವವರ ಪರವಾಗಿ, ಕೋಮುವಾದಿಗಳ ವಿರುದ್ಧ ಪ್ರಚಾರ ಮಾಡಲು ಹಕ್ಕು ನಮಗಿದೆ. ಆದರೆ ಇದನ್ನು ಬಿಜೆಪಿಯವರು ಸಹಿಸಲಿಲ್ಲ” ಎಂದು ವಿವರಿಸಿದರು.

ಇದನ್ನೂ ಓದಿರಿ: ಸಿದ್ದರಾಮಯ್ಯ ಹೆಸರಲ್ಲಿ ನಕಲಿಪತ್ರ; ಕ್ರಮ ಜರುಗಿಸಲು ಕಾಂಗ್ರೆಸ್ ಆಗ್ರಹ

“ಬಿಜೆಪಿಯವರು ಬಂದು ನಮಗೆ ತಡೆ ನೀಡಿದರು. ಬೆಲೆ ಏರಿಕೆ ಬಗ್ಗೆ ಮಾತನಾಡಬೇಡಿ, ಜಿಎಸ್‌ಟಿ ಕುರಿತು ಪ್ರಸ್ತಾಪಿಸಬೇಡಿ ಎಂದು ಧಮ್ಕಿ ಹಾಕಿದರು. ಜನರಿಗೆ ಈ ಸಮಸ್ಯೆಗಳು ಬಾಧಿಸುತ್ತಿವೆ ಎಂದು ನಾವು ತಿಳಿಸಿದೆವು. ನಾಗರಿಕರಾಗಿ ಮಾತನಾಡುವ ಹಕ್ಕು ನಮಗಿದೆ ಎಂದೆವು. ನಮ್ಮೆಲ್ಲರ ವಿರುದ್ಧ ಕೆಟ್ಟದ್ದಾಗಿ ಮಾತನಾಡಲು ಶುರು ಮಾಡಿದರು. ನೀವು ಕಾಂಗ್ರೆಸ್ ಏಜೆಂಟಾರಾಗಿದ್ದು, ದುಡ್ಡು ತೆಗೆದುಕೊಂಡು ಬಂದು ಪ್ರಚಾರ ಮಾಡುತ್ತಿದ್ದೀರಿ ಎಂದು ಆರೋಪಿಸಿದರು. ನರೇಂದ್ರ ಮೋದಿಯವರ ಬಗ್ಗೆ ಮಾತನಾಡುವ ಹಕ್ಕು ನಿಮಗಿಲ್ಲ ಎಂದರು. ಸಮಾಧಾನದಲ್ಲಿ ಚರ್ಚೆ ಮಾಡಲು ನಾವು ಕರೆದೆವು” ಎಂದು ತಿಳಿಸಿದರು.

“ಸಮಾಧಾನವಾಗಿಯೇ ನಾವು ಎಲ್ಲವನ್ನು ಹೇಳುತ್ತಿದ್ದೆವು. ನಮ್ಮ ಜೊತೆಯಲ್ಲಿದ್ದ ಗಂಡಸರನ್ನು ಟಾರ್ಗೆಟ್ ಮಾಡಲು ಮುಂದಾದರು. ನಾವು ಬೇರೆ ಜಾಗಕ್ಕೆ ತೆರಳಲು ಸಿದ್ಧವಾದೆವು. ಅಷ್ಟರಲ್ಲಿ ಒಂದಿಷ್ಟು ಜನರಿಗೆ ಸಂದೇಶ ಕಳುಹಿಸಿ ಕರೆಸಿಕೊಂಡಿದ್ದರು. ಮೂವತ್ತರಿಂದ ಐವತ್ತು ಮಂದಿ ಬಂದು, ನಮ್ಮನ್ನು ಸುತ್ತುವರಿದರು. ನಮ್ಮ ಕರಪತ್ರಗಳನ್ನು ಕಿತ್ತುಕೊಂಡರು. ನಾವೇನೂ ಮಾತನಾಡಲಿಲ್ಲ. ನಮಗೆ ಹೊಡೆಯಲು ಬಂದಿದ್ದಾರೆಂದು ತಿಳಿಯಿತು. ಆದರೆ ನಮ್ಮ ಇಬ್ಬರು ಕಾರ್ಯಕರ್ತರ ಮುಖಕ್ಕೆ ಹೊಡೆದೇಬಿಟ್ಟರು. ಜಾಗ ಬಿಟ್ಟು ಹೊರಹೋಗುವಂತೆ ಧಮ್ಕಿ ಹಾಕಿದರು. ನಾವು ಬೆಂಗಳೂರಿನವರೇ ಆಗಿದ್ದೇವೆ. ಹೊರಗಡೆಯಿಂದ ಬಂದಿಲ್ಲ ಎಂದು ತಿಳಿಸಿ ಅಲ್ಲಿಂದ ಹೊರಟುಬಂದೆವು” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...