Homeಕರ್ನಾಟಕ‘ಎದ್ದೇಳು ಕರ್ನಾಟಕ’ ತಂಡದ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ; ಆರೋಪ

‘ಎದ್ದೇಳು ಕರ್ನಾಟಕ’ ತಂಡದ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ; ಆರೋಪ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ಧ ಜಾಗೃತಿ ಮೂಡಿಸುತ್ತಾ, ಈ ಭಾರಿ ಸರ್ಕಾರವನ್ನು ಬದಲಿಸಿ ಎಂದು ಪ್ರಚಾರ ಮಾಡುತ್ತಿದ್ದ ‘ಎದ್ದೇಳು ಕರ್ನಾಟಕ’ ಜಾಗೃತ ತಂಡದ ಮೇಲೆ ಬಿಜೆಪಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆಂಬ ಆರೋಪ ಬಂದಿದೆ.

ಜಯಜನಗರ ಕ್ಷೇತ್ರದಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ಬಿಜೆಪಿ ಕಡೆಯವರು ಬಂದು ಹಲ್ಲೆ ನಡೆಸಿದ್ದಾರೆ, ಈ ಕುರಿತು ಯಾವುದೇ ಕ್ರಮವನ್ನು ಈವರೆಗೆ ಜರುಗಿಸಿಲ್ಲ ಎಂದು ಕ್ಷೇತ್ರದ ಶಾಸಕಿ ಸೌಮ್ಯಾ ರೆಡ್ಡಿ ದೂರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಎದ್ದೇಳು ಕರ್ನಾಟಕದ ಪ್ರಜ್ಞಾವಂತ ನಾಗರಿಕರು ಶಾಂತಿಯುತವಾಗಿ ಪ್ರಚಾರ ನಡೆಸುತ್ತಿದ್ದರು. ಆದರೆ ಜಯನಗರದ ಬಿಜೆಪಿ ಅಭ್ಯರ್ಥಿ (ಸಿ.ಕೆ.ರಾಮಮೂರ್ತಿ) ಮತ್ತು ಸಂಸದ ತೇಜಸ್ವಿಸೂರ್ಯ ಅವರ ನಿರ್ದೇಶನದ ಮೇರೆಗೆ ನಾಗರಿಕರ ಮೇಲೆ ಹಲ್ಲೆ ಮಾಡಲಾಗಿದೆ ಮತ್ತು ಅಶ್ಲೀಲ ಪದಗಳಿಂದ ನಿಂದಿಸಲಾಗಿದೆ” ಎಂದು ವಿಡಿಯೊ ಹಂಚಿಕೊಂಡಿದ್ದಾರೆ.

“ದೂರು ನೀಡಿದರೂ ಬೆಂಗಳೂರು ನಗರ ಪೊಲೀಸರಾಗಲಿ, ಜಯನಗರ ಪೊಲೀಸರಾಗಲೀ ಈ ಪುಂಡರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ. ಸಾಕು, ಸಾಕು. ಬಿಜೆಪಿಯ ಗೂಂಡಾ ಸಂಸ್ಕೃತಿಯನ್ನು ಕೊನೆಗಾಣಿಸಬೇಕಾಗಿದೆ. ಎದ್ದೇಳು ಕರ್ನಾಟಕ, ಎದ್ದೇಳು. ನಾವು ಮಹಿಳೆಯರು- ನಮಗೆ ರಕ್ಷಣೆ ಬೇಕಿದೆ. ಮತ್ತೆ ನಮ್ಮ ಬೆಂಗಳೂರು ಸುರಕ್ಷಿತ ನಗರವಾಗಬೇಕೆಂದು ನಾವು ಬಯಸುತ್ತೇವೆ” ಎಂದಿದ್ದಾರೆ.

ವಾರ್ಡ್ ನಂ.170ರ (ಅರಸು ಕಾಲೋನಿ) ಬಿಜೆಪಿ ಅಧ್ಯಕ್ಷ ಷಣ್ಮುಗಂ, ಆತನ ಮೈದುನ ಮಣಿಕಂಠ ಮತ್ತು ಸಹಚರರು ಹಲ್ಲೆ ಮಾಡಿದ್ದಾರೆಂದು ತಿಳಿದುಬಂದಿದೆ. ಕಾರ್ಮಲ್ ಕಾನ್ವೆಂಟ್ ಪೊಲಿಂಗ್ ಬೂತ್ ವ್ಯಾಪ್ತಿಯಲ್ಲಿ ಘಟನೆ ನಡೆದೆ. ಎದ್ದೇಳು ಕರ್ನಾಟಕದ 17 ಮಂದಿ ಸಾಮಾಜಿಕ ಕಾರ್ಯಕರ್ತರು ಸ್ಥಳದಲ್ಲಿ ಹಾಜರಿದ್ದರು.

‘ನಾನುಗೌರಿ.ಕಾಂ’ ಜೊತೆ ಮಾಡಿದ ಸಾಮಾಜಿಕ ಕಾರ್ಯಕರ್ತೆ ಗೌರಿಯವರು ಘಟನೆಯ ಕುರಿತು ವಿವರಿಸಿದರು. “ಎಂದಿನಂತೆ ನಾವು ಪ್ರಚಾರವನ್ನು ಮಾಡಿಕೊಂಡು ಹೋಗುತ್ತಿದ್ದೆವು. ಈ ವಾರ್ಡ್‌ನಲ್ಲಿ ಬಿಜೆಪಿ ಪ್ರಬಲವಾಗಿದೆ. ಕಳೆದ ಚುನಾವಣೆ ಸಂದರ್ಭದಲ್ಲಿ ಹೆಣ್ಣುಮಕ್ಕಳ ಮತದಾನ ಈ ಕ್ಷೇತ್ರದಲ್ಲಿ ಕುಸಿದಿತ್ತು. ಹೀಗಾಗಿ ಜಾಗೃತಿ ಮಾಡುತ್ತಿದ್ದೆವು. ಸಂವಿಧಾನವನ್ನು ಎತ್ತಿಹಿಡಿಯುವವರ ಪರವಾಗಿ, ಕೋಮುವಾದಿಗಳ ವಿರುದ್ಧ ಪ್ರಚಾರ ಮಾಡಲು ಹಕ್ಕು ನಮಗಿದೆ. ಆದರೆ ಇದನ್ನು ಬಿಜೆಪಿಯವರು ಸಹಿಸಲಿಲ್ಲ” ಎಂದು ವಿವರಿಸಿದರು.

ಇದನ್ನೂ ಓದಿರಿ: ಸಿದ್ದರಾಮಯ್ಯ ಹೆಸರಲ್ಲಿ ನಕಲಿಪತ್ರ; ಕ್ರಮ ಜರುಗಿಸಲು ಕಾಂಗ್ರೆಸ್ ಆಗ್ರಹ

“ಬಿಜೆಪಿಯವರು ಬಂದು ನಮಗೆ ತಡೆ ನೀಡಿದರು. ಬೆಲೆ ಏರಿಕೆ ಬಗ್ಗೆ ಮಾತನಾಡಬೇಡಿ, ಜಿಎಸ್‌ಟಿ ಕುರಿತು ಪ್ರಸ್ತಾಪಿಸಬೇಡಿ ಎಂದು ಧಮ್ಕಿ ಹಾಕಿದರು. ಜನರಿಗೆ ಈ ಸಮಸ್ಯೆಗಳು ಬಾಧಿಸುತ್ತಿವೆ ಎಂದು ನಾವು ತಿಳಿಸಿದೆವು. ನಾಗರಿಕರಾಗಿ ಮಾತನಾಡುವ ಹಕ್ಕು ನಮಗಿದೆ ಎಂದೆವು. ನಮ್ಮೆಲ್ಲರ ವಿರುದ್ಧ ಕೆಟ್ಟದ್ದಾಗಿ ಮಾತನಾಡಲು ಶುರು ಮಾಡಿದರು. ನೀವು ಕಾಂಗ್ರೆಸ್ ಏಜೆಂಟಾರಾಗಿದ್ದು, ದುಡ್ಡು ತೆಗೆದುಕೊಂಡು ಬಂದು ಪ್ರಚಾರ ಮಾಡುತ್ತಿದ್ದೀರಿ ಎಂದು ಆರೋಪಿಸಿದರು. ನರೇಂದ್ರ ಮೋದಿಯವರ ಬಗ್ಗೆ ಮಾತನಾಡುವ ಹಕ್ಕು ನಿಮಗಿಲ್ಲ ಎಂದರು. ಸಮಾಧಾನದಲ್ಲಿ ಚರ್ಚೆ ಮಾಡಲು ನಾವು ಕರೆದೆವು” ಎಂದು ತಿಳಿಸಿದರು.

“ಸಮಾಧಾನವಾಗಿಯೇ ನಾವು ಎಲ್ಲವನ್ನು ಹೇಳುತ್ತಿದ್ದೆವು. ನಮ್ಮ ಜೊತೆಯಲ್ಲಿದ್ದ ಗಂಡಸರನ್ನು ಟಾರ್ಗೆಟ್ ಮಾಡಲು ಮುಂದಾದರು. ನಾವು ಬೇರೆ ಜಾಗಕ್ಕೆ ತೆರಳಲು ಸಿದ್ಧವಾದೆವು. ಅಷ್ಟರಲ್ಲಿ ಒಂದಿಷ್ಟು ಜನರಿಗೆ ಸಂದೇಶ ಕಳುಹಿಸಿ ಕರೆಸಿಕೊಂಡಿದ್ದರು. ಮೂವತ್ತರಿಂದ ಐವತ್ತು ಮಂದಿ ಬಂದು, ನಮ್ಮನ್ನು ಸುತ್ತುವರಿದರು. ನಮ್ಮ ಕರಪತ್ರಗಳನ್ನು ಕಿತ್ತುಕೊಂಡರು. ನಾವೇನೂ ಮಾತನಾಡಲಿಲ್ಲ. ನಮಗೆ ಹೊಡೆಯಲು ಬಂದಿದ್ದಾರೆಂದು ತಿಳಿಯಿತು. ಆದರೆ ನಮ್ಮ ಇಬ್ಬರು ಕಾರ್ಯಕರ್ತರ ಮುಖಕ್ಕೆ ಹೊಡೆದೇಬಿಟ್ಟರು. ಜಾಗ ಬಿಟ್ಟು ಹೊರಹೋಗುವಂತೆ ಧಮ್ಕಿ ಹಾಕಿದರು. ನಾವು ಬೆಂಗಳೂರಿನವರೇ ಆಗಿದ್ದೇವೆ. ಹೊರಗಡೆಯಿಂದ ಬಂದಿಲ್ಲ ಎಂದು ತಿಳಿಸಿ ಅಲ್ಲಿಂದ ಹೊರಟುಬಂದೆವು” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...