Homeಕರ್ನಾಟಕ‘ಎದ್ದೇಳು ಕರ್ನಾಟಕ’ ತಂಡದ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ; ಆರೋಪ

‘ಎದ್ದೇಳು ಕರ್ನಾಟಕ’ ತಂಡದ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ; ಆರೋಪ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ಧ ಜಾಗೃತಿ ಮೂಡಿಸುತ್ತಾ, ಈ ಭಾರಿ ಸರ್ಕಾರವನ್ನು ಬದಲಿಸಿ ಎಂದು ಪ್ರಚಾರ ಮಾಡುತ್ತಿದ್ದ ‘ಎದ್ದೇಳು ಕರ್ನಾಟಕ’ ಜಾಗೃತ ತಂಡದ ಮೇಲೆ ಬಿಜೆಪಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆಂಬ ಆರೋಪ ಬಂದಿದೆ.

ಜಯಜನಗರ ಕ್ಷೇತ್ರದಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ಬಿಜೆಪಿ ಕಡೆಯವರು ಬಂದು ಹಲ್ಲೆ ನಡೆಸಿದ್ದಾರೆ, ಈ ಕುರಿತು ಯಾವುದೇ ಕ್ರಮವನ್ನು ಈವರೆಗೆ ಜರುಗಿಸಿಲ್ಲ ಎಂದು ಕ್ಷೇತ್ರದ ಶಾಸಕಿ ಸೌಮ್ಯಾ ರೆಡ್ಡಿ ದೂರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಎದ್ದೇಳು ಕರ್ನಾಟಕದ ಪ್ರಜ್ಞಾವಂತ ನಾಗರಿಕರು ಶಾಂತಿಯುತವಾಗಿ ಪ್ರಚಾರ ನಡೆಸುತ್ತಿದ್ದರು. ಆದರೆ ಜಯನಗರದ ಬಿಜೆಪಿ ಅಭ್ಯರ್ಥಿ (ಸಿ.ಕೆ.ರಾಮಮೂರ್ತಿ) ಮತ್ತು ಸಂಸದ ತೇಜಸ್ವಿಸೂರ್ಯ ಅವರ ನಿರ್ದೇಶನದ ಮೇರೆಗೆ ನಾಗರಿಕರ ಮೇಲೆ ಹಲ್ಲೆ ಮಾಡಲಾಗಿದೆ ಮತ್ತು ಅಶ್ಲೀಲ ಪದಗಳಿಂದ ನಿಂದಿಸಲಾಗಿದೆ” ಎಂದು ವಿಡಿಯೊ ಹಂಚಿಕೊಂಡಿದ್ದಾರೆ.

“ದೂರು ನೀಡಿದರೂ ಬೆಂಗಳೂರು ನಗರ ಪೊಲೀಸರಾಗಲಿ, ಜಯನಗರ ಪೊಲೀಸರಾಗಲೀ ಈ ಪುಂಡರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ. ಸಾಕು, ಸಾಕು. ಬಿಜೆಪಿಯ ಗೂಂಡಾ ಸಂಸ್ಕೃತಿಯನ್ನು ಕೊನೆಗಾಣಿಸಬೇಕಾಗಿದೆ. ಎದ್ದೇಳು ಕರ್ನಾಟಕ, ಎದ್ದೇಳು. ನಾವು ಮಹಿಳೆಯರು- ನಮಗೆ ರಕ್ಷಣೆ ಬೇಕಿದೆ. ಮತ್ತೆ ನಮ್ಮ ಬೆಂಗಳೂರು ಸುರಕ್ಷಿತ ನಗರವಾಗಬೇಕೆಂದು ನಾವು ಬಯಸುತ್ತೇವೆ” ಎಂದಿದ್ದಾರೆ.

ವಾರ್ಡ್ ನಂ.170ರ (ಅರಸು ಕಾಲೋನಿ) ಬಿಜೆಪಿ ಅಧ್ಯಕ್ಷ ಷಣ್ಮುಗಂ, ಆತನ ಮೈದುನ ಮಣಿಕಂಠ ಮತ್ತು ಸಹಚರರು ಹಲ್ಲೆ ಮಾಡಿದ್ದಾರೆಂದು ತಿಳಿದುಬಂದಿದೆ. ಕಾರ್ಮಲ್ ಕಾನ್ವೆಂಟ್ ಪೊಲಿಂಗ್ ಬೂತ್ ವ್ಯಾಪ್ತಿಯಲ್ಲಿ ಘಟನೆ ನಡೆದೆ. ಎದ್ದೇಳು ಕರ್ನಾಟಕದ 17 ಮಂದಿ ಸಾಮಾಜಿಕ ಕಾರ್ಯಕರ್ತರು ಸ್ಥಳದಲ್ಲಿ ಹಾಜರಿದ್ದರು.

‘ನಾನುಗೌರಿ.ಕಾಂ’ ಜೊತೆ ಮಾಡಿದ ಸಾಮಾಜಿಕ ಕಾರ್ಯಕರ್ತೆ ಗೌರಿಯವರು ಘಟನೆಯ ಕುರಿತು ವಿವರಿಸಿದರು. “ಎಂದಿನಂತೆ ನಾವು ಪ್ರಚಾರವನ್ನು ಮಾಡಿಕೊಂಡು ಹೋಗುತ್ತಿದ್ದೆವು. ಈ ವಾರ್ಡ್‌ನಲ್ಲಿ ಬಿಜೆಪಿ ಪ್ರಬಲವಾಗಿದೆ. ಕಳೆದ ಚುನಾವಣೆ ಸಂದರ್ಭದಲ್ಲಿ ಹೆಣ್ಣುಮಕ್ಕಳ ಮತದಾನ ಈ ಕ್ಷೇತ್ರದಲ್ಲಿ ಕುಸಿದಿತ್ತು. ಹೀಗಾಗಿ ಜಾಗೃತಿ ಮಾಡುತ್ತಿದ್ದೆವು. ಸಂವಿಧಾನವನ್ನು ಎತ್ತಿಹಿಡಿಯುವವರ ಪರವಾಗಿ, ಕೋಮುವಾದಿಗಳ ವಿರುದ್ಧ ಪ್ರಚಾರ ಮಾಡಲು ಹಕ್ಕು ನಮಗಿದೆ. ಆದರೆ ಇದನ್ನು ಬಿಜೆಪಿಯವರು ಸಹಿಸಲಿಲ್ಲ” ಎಂದು ವಿವರಿಸಿದರು.

ಇದನ್ನೂ ಓದಿರಿ: ಸಿದ್ದರಾಮಯ್ಯ ಹೆಸರಲ್ಲಿ ನಕಲಿಪತ್ರ; ಕ್ರಮ ಜರುಗಿಸಲು ಕಾಂಗ್ರೆಸ್ ಆಗ್ರಹ

“ಬಿಜೆಪಿಯವರು ಬಂದು ನಮಗೆ ತಡೆ ನೀಡಿದರು. ಬೆಲೆ ಏರಿಕೆ ಬಗ್ಗೆ ಮಾತನಾಡಬೇಡಿ, ಜಿಎಸ್‌ಟಿ ಕುರಿತು ಪ್ರಸ್ತಾಪಿಸಬೇಡಿ ಎಂದು ಧಮ್ಕಿ ಹಾಕಿದರು. ಜನರಿಗೆ ಈ ಸಮಸ್ಯೆಗಳು ಬಾಧಿಸುತ್ತಿವೆ ಎಂದು ನಾವು ತಿಳಿಸಿದೆವು. ನಾಗರಿಕರಾಗಿ ಮಾತನಾಡುವ ಹಕ್ಕು ನಮಗಿದೆ ಎಂದೆವು. ನಮ್ಮೆಲ್ಲರ ವಿರುದ್ಧ ಕೆಟ್ಟದ್ದಾಗಿ ಮಾತನಾಡಲು ಶುರು ಮಾಡಿದರು. ನೀವು ಕಾಂಗ್ರೆಸ್ ಏಜೆಂಟಾರಾಗಿದ್ದು, ದುಡ್ಡು ತೆಗೆದುಕೊಂಡು ಬಂದು ಪ್ರಚಾರ ಮಾಡುತ್ತಿದ್ದೀರಿ ಎಂದು ಆರೋಪಿಸಿದರು. ನರೇಂದ್ರ ಮೋದಿಯವರ ಬಗ್ಗೆ ಮಾತನಾಡುವ ಹಕ್ಕು ನಿಮಗಿಲ್ಲ ಎಂದರು. ಸಮಾಧಾನದಲ್ಲಿ ಚರ್ಚೆ ಮಾಡಲು ನಾವು ಕರೆದೆವು” ಎಂದು ತಿಳಿಸಿದರು.

“ಸಮಾಧಾನವಾಗಿಯೇ ನಾವು ಎಲ್ಲವನ್ನು ಹೇಳುತ್ತಿದ್ದೆವು. ನಮ್ಮ ಜೊತೆಯಲ್ಲಿದ್ದ ಗಂಡಸರನ್ನು ಟಾರ್ಗೆಟ್ ಮಾಡಲು ಮುಂದಾದರು. ನಾವು ಬೇರೆ ಜಾಗಕ್ಕೆ ತೆರಳಲು ಸಿದ್ಧವಾದೆವು. ಅಷ್ಟರಲ್ಲಿ ಒಂದಿಷ್ಟು ಜನರಿಗೆ ಸಂದೇಶ ಕಳುಹಿಸಿ ಕರೆಸಿಕೊಂಡಿದ್ದರು. ಮೂವತ್ತರಿಂದ ಐವತ್ತು ಮಂದಿ ಬಂದು, ನಮ್ಮನ್ನು ಸುತ್ತುವರಿದರು. ನಮ್ಮ ಕರಪತ್ರಗಳನ್ನು ಕಿತ್ತುಕೊಂಡರು. ನಾವೇನೂ ಮಾತನಾಡಲಿಲ್ಲ. ನಮಗೆ ಹೊಡೆಯಲು ಬಂದಿದ್ದಾರೆಂದು ತಿಳಿಯಿತು. ಆದರೆ ನಮ್ಮ ಇಬ್ಬರು ಕಾರ್ಯಕರ್ತರ ಮುಖಕ್ಕೆ ಹೊಡೆದೇಬಿಟ್ಟರು. ಜಾಗ ಬಿಟ್ಟು ಹೊರಹೋಗುವಂತೆ ಧಮ್ಕಿ ಹಾಕಿದರು. ನಾವು ಬೆಂಗಳೂರಿನವರೇ ಆಗಿದ್ದೇವೆ. ಹೊರಗಡೆಯಿಂದ ಬಂದಿಲ್ಲ ಎಂದು ತಿಳಿಸಿ ಅಲ್ಲಿಂದ ಹೊರಟುಬಂದೆವು” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...