Homeಕರ್ನಾಟಕ‘ಎದ್ದೇಳು ಕರ್ನಾಟಕ’ ತಂಡದ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ; ಆರೋಪ

‘ಎದ್ದೇಳು ಕರ್ನಾಟಕ’ ತಂಡದ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ; ಆರೋಪ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ಧ ಜಾಗೃತಿ ಮೂಡಿಸುತ್ತಾ, ಈ ಭಾರಿ ಸರ್ಕಾರವನ್ನು ಬದಲಿಸಿ ಎಂದು ಪ್ರಚಾರ ಮಾಡುತ್ತಿದ್ದ ‘ಎದ್ದೇಳು ಕರ್ನಾಟಕ’ ಜಾಗೃತ ತಂಡದ ಮೇಲೆ ಬಿಜೆಪಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆಂಬ ಆರೋಪ ಬಂದಿದೆ.

ಜಯಜನಗರ ಕ್ಷೇತ್ರದಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ಬಿಜೆಪಿ ಕಡೆಯವರು ಬಂದು ಹಲ್ಲೆ ನಡೆಸಿದ್ದಾರೆ, ಈ ಕುರಿತು ಯಾವುದೇ ಕ್ರಮವನ್ನು ಈವರೆಗೆ ಜರುಗಿಸಿಲ್ಲ ಎಂದು ಕ್ಷೇತ್ರದ ಶಾಸಕಿ ಸೌಮ್ಯಾ ರೆಡ್ಡಿ ದೂರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಎದ್ದೇಳು ಕರ್ನಾಟಕದ ಪ್ರಜ್ಞಾವಂತ ನಾಗರಿಕರು ಶಾಂತಿಯುತವಾಗಿ ಪ್ರಚಾರ ನಡೆಸುತ್ತಿದ್ದರು. ಆದರೆ ಜಯನಗರದ ಬಿಜೆಪಿ ಅಭ್ಯರ್ಥಿ (ಸಿ.ಕೆ.ರಾಮಮೂರ್ತಿ) ಮತ್ತು ಸಂಸದ ತೇಜಸ್ವಿಸೂರ್ಯ ಅವರ ನಿರ್ದೇಶನದ ಮೇರೆಗೆ ನಾಗರಿಕರ ಮೇಲೆ ಹಲ್ಲೆ ಮಾಡಲಾಗಿದೆ ಮತ್ತು ಅಶ್ಲೀಲ ಪದಗಳಿಂದ ನಿಂದಿಸಲಾಗಿದೆ” ಎಂದು ವಿಡಿಯೊ ಹಂಚಿಕೊಂಡಿದ್ದಾರೆ.

“ದೂರು ನೀಡಿದರೂ ಬೆಂಗಳೂರು ನಗರ ಪೊಲೀಸರಾಗಲಿ, ಜಯನಗರ ಪೊಲೀಸರಾಗಲೀ ಈ ಪುಂಡರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ. ಸಾಕು, ಸಾಕು. ಬಿಜೆಪಿಯ ಗೂಂಡಾ ಸಂಸ್ಕೃತಿಯನ್ನು ಕೊನೆಗಾಣಿಸಬೇಕಾಗಿದೆ. ಎದ್ದೇಳು ಕರ್ನಾಟಕ, ಎದ್ದೇಳು. ನಾವು ಮಹಿಳೆಯರು- ನಮಗೆ ರಕ್ಷಣೆ ಬೇಕಿದೆ. ಮತ್ತೆ ನಮ್ಮ ಬೆಂಗಳೂರು ಸುರಕ್ಷಿತ ನಗರವಾಗಬೇಕೆಂದು ನಾವು ಬಯಸುತ್ತೇವೆ” ಎಂದಿದ್ದಾರೆ.

ವಾರ್ಡ್ ನಂ.170ರ (ಅರಸು ಕಾಲೋನಿ) ಬಿಜೆಪಿ ಅಧ್ಯಕ್ಷ ಷಣ್ಮುಗಂ, ಆತನ ಮೈದುನ ಮಣಿಕಂಠ ಮತ್ತು ಸಹಚರರು ಹಲ್ಲೆ ಮಾಡಿದ್ದಾರೆಂದು ತಿಳಿದುಬಂದಿದೆ. ಕಾರ್ಮಲ್ ಕಾನ್ವೆಂಟ್ ಪೊಲಿಂಗ್ ಬೂತ್ ವ್ಯಾಪ್ತಿಯಲ್ಲಿ ಘಟನೆ ನಡೆದೆ. ಎದ್ದೇಳು ಕರ್ನಾಟಕದ 17 ಮಂದಿ ಸಾಮಾಜಿಕ ಕಾರ್ಯಕರ್ತರು ಸ್ಥಳದಲ್ಲಿ ಹಾಜರಿದ್ದರು.

‘ನಾನುಗೌರಿ.ಕಾಂ’ ಜೊತೆ ಮಾಡಿದ ಸಾಮಾಜಿಕ ಕಾರ್ಯಕರ್ತೆ ಗೌರಿಯವರು ಘಟನೆಯ ಕುರಿತು ವಿವರಿಸಿದರು. “ಎಂದಿನಂತೆ ನಾವು ಪ್ರಚಾರವನ್ನು ಮಾಡಿಕೊಂಡು ಹೋಗುತ್ತಿದ್ದೆವು. ಈ ವಾರ್ಡ್‌ನಲ್ಲಿ ಬಿಜೆಪಿ ಪ್ರಬಲವಾಗಿದೆ. ಕಳೆದ ಚುನಾವಣೆ ಸಂದರ್ಭದಲ್ಲಿ ಹೆಣ್ಣುಮಕ್ಕಳ ಮತದಾನ ಈ ಕ್ಷೇತ್ರದಲ್ಲಿ ಕುಸಿದಿತ್ತು. ಹೀಗಾಗಿ ಜಾಗೃತಿ ಮಾಡುತ್ತಿದ್ದೆವು. ಸಂವಿಧಾನವನ್ನು ಎತ್ತಿಹಿಡಿಯುವವರ ಪರವಾಗಿ, ಕೋಮುವಾದಿಗಳ ವಿರುದ್ಧ ಪ್ರಚಾರ ಮಾಡಲು ಹಕ್ಕು ನಮಗಿದೆ. ಆದರೆ ಇದನ್ನು ಬಿಜೆಪಿಯವರು ಸಹಿಸಲಿಲ್ಲ” ಎಂದು ವಿವರಿಸಿದರು.

ಇದನ್ನೂ ಓದಿರಿ: ಸಿದ್ದರಾಮಯ್ಯ ಹೆಸರಲ್ಲಿ ನಕಲಿಪತ್ರ; ಕ್ರಮ ಜರುಗಿಸಲು ಕಾಂಗ್ರೆಸ್ ಆಗ್ರಹ

“ಬಿಜೆಪಿಯವರು ಬಂದು ನಮಗೆ ತಡೆ ನೀಡಿದರು. ಬೆಲೆ ಏರಿಕೆ ಬಗ್ಗೆ ಮಾತನಾಡಬೇಡಿ, ಜಿಎಸ್‌ಟಿ ಕುರಿತು ಪ್ರಸ್ತಾಪಿಸಬೇಡಿ ಎಂದು ಧಮ್ಕಿ ಹಾಕಿದರು. ಜನರಿಗೆ ಈ ಸಮಸ್ಯೆಗಳು ಬಾಧಿಸುತ್ತಿವೆ ಎಂದು ನಾವು ತಿಳಿಸಿದೆವು. ನಾಗರಿಕರಾಗಿ ಮಾತನಾಡುವ ಹಕ್ಕು ನಮಗಿದೆ ಎಂದೆವು. ನಮ್ಮೆಲ್ಲರ ವಿರುದ್ಧ ಕೆಟ್ಟದ್ದಾಗಿ ಮಾತನಾಡಲು ಶುರು ಮಾಡಿದರು. ನೀವು ಕಾಂಗ್ರೆಸ್ ಏಜೆಂಟಾರಾಗಿದ್ದು, ದುಡ್ಡು ತೆಗೆದುಕೊಂಡು ಬಂದು ಪ್ರಚಾರ ಮಾಡುತ್ತಿದ್ದೀರಿ ಎಂದು ಆರೋಪಿಸಿದರು. ನರೇಂದ್ರ ಮೋದಿಯವರ ಬಗ್ಗೆ ಮಾತನಾಡುವ ಹಕ್ಕು ನಿಮಗಿಲ್ಲ ಎಂದರು. ಸಮಾಧಾನದಲ್ಲಿ ಚರ್ಚೆ ಮಾಡಲು ನಾವು ಕರೆದೆವು” ಎಂದು ತಿಳಿಸಿದರು.

“ಸಮಾಧಾನವಾಗಿಯೇ ನಾವು ಎಲ್ಲವನ್ನು ಹೇಳುತ್ತಿದ್ದೆವು. ನಮ್ಮ ಜೊತೆಯಲ್ಲಿದ್ದ ಗಂಡಸರನ್ನು ಟಾರ್ಗೆಟ್ ಮಾಡಲು ಮುಂದಾದರು. ನಾವು ಬೇರೆ ಜಾಗಕ್ಕೆ ತೆರಳಲು ಸಿದ್ಧವಾದೆವು. ಅಷ್ಟರಲ್ಲಿ ಒಂದಿಷ್ಟು ಜನರಿಗೆ ಸಂದೇಶ ಕಳುಹಿಸಿ ಕರೆಸಿಕೊಂಡಿದ್ದರು. ಮೂವತ್ತರಿಂದ ಐವತ್ತು ಮಂದಿ ಬಂದು, ನಮ್ಮನ್ನು ಸುತ್ತುವರಿದರು. ನಮ್ಮ ಕರಪತ್ರಗಳನ್ನು ಕಿತ್ತುಕೊಂಡರು. ನಾವೇನೂ ಮಾತನಾಡಲಿಲ್ಲ. ನಮಗೆ ಹೊಡೆಯಲು ಬಂದಿದ್ದಾರೆಂದು ತಿಳಿಯಿತು. ಆದರೆ ನಮ್ಮ ಇಬ್ಬರು ಕಾರ್ಯಕರ್ತರ ಮುಖಕ್ಕೆ ಹೊಡೆದೇಬಿಟ್ಟರು. ಜಾಗ ಬಿಟ್ಟು ಹೊರಹೋಗುವಂತೆ ಧಮ್ಕಿ ಹಾಕಿದರು. ನಾವು ಬೆಂಗಳೂರಿನವರೇ ಆಗಿದ್ದೇವೆ. ಹೊರಗಡೆಯಿಂದ ಬಂದಿಲ್ಲ ಎಂದು ತಿಳಿಸಿ ಅಲ್ಲಿಂದ ಹೊರಟುಬಂದೆವು” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...