Homeಕರ್ನಾಟಕ‘ಎದ್ದೇಳು ಕರ್ನಾಟಕ’ ತಂಡದ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ; ಆರೋಪ

‘ಎದ್ದೇಳು ಕರ್ನಾಟಕ’ ತಂಡದ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ; ಆರೋಪ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ಧ ಜಾಗೃತಿ ಮೂಡಿಸುತ್ತಾ, ಈ ಭಾರಿ ಸರ್ಕಾರವನ್ನು ಬದಲಿಸಿ ಎಂದು ಪ್ರಚಾರ ಮಾಡುತ್ತಿದ್ದ ‘ಎದ್ದೇಳು ಕರ್ನಾಟಕ’ ಜಾಗೃತ ತಂಡದ ಮೇಲೆ ಬಿಜೆಪಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆಂಬ ಆರೋಪ ಬಂದಿದೆ.

ಜಯಜನಗರ ಕ್ಷೇತ್ರದಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ಬಿಜೆಪಿ ಕಡೆಯವರು ಬಂದು ಹಲ್ಲೆ ನಡೆಸಿದ್ದಾರೆ, ಈ ಕುರಿತು ಯಾವುದೇ ಕ್ರಮವನ್ನು ಈವರೆಗೆ ಜರುಗಿಸಿಲ್ಲ ಎಂದು ಕ್ಷೇತ್ರದ ಶಾಸಕಿ ಸೌಮ್ಯಾ ರೆಡ್ಡಿ ದೂರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಎದ್ದೇಳು ಕರ್ನಾಟಕದ ಪ್ರಜ್ಞಾವಂತ ನಾಗರಿಕರು ಶಾಂತಿಯುತವಾಗಿ ಪ್ರಚಾರ ನಡೆಸುತ್ತಿದ್ದರು. ಆದರೆ ಜಯನಗರದ ಬಿಜೆಪಿ ಅಭ್ಯರ್ಥಿ (ಸಿ.ಕೆ.ರಾಮಮೂರ್ತಿ) ಮತ್ತು ಸಂಸದ ತೇಜಸ್ವಿಸೂರ್ಯ ಅವರ ನಿರ್ದೇಶನದ ಮೇರೆಗೆ ನಾಗರಿಕರ ಮೇಲೆ ಹಲ್ಲೆ ಮಾಡಲಾಗಿದೆ ಮತ್ತು ಅಶ್ಲೀಲ ಪದಗಳಿಂದ ನಿಂದಿಸಲಾಗಿದೆ” ಎಂದು ವಿಡಿಯೊ ಹಂಚಿಕೊಂಡಿದ್ದಾರೆ.

“ದೂರು ನೀಡಿದರೂ ಬೆಂಗಳೂರು ನಗರ ಪೊಲೀಸರಾಗಲಿ, ಜಯನಗರ ಪೊಲೀಸರಾಗಲೀ ಈ ಪುಂಡರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ. ಸಾಕು, ಸಾಕು. ಬಿಜೆಪಿಯ ಗೂಂಡಾ ಸಂಸ್ಕೃತಿಯನ್ನು ಕೊನೆಗಾಣಿಸಬೇಕಾಗಿದೆ. ಎದ್ದೇಳು ಕರ್ನಾಟಕ, ಎದ್ದೇಳು. ನಾವು ಮಹಿಳೆಯರು- ನಮಗೆ ರಕ್ಷಣೆ ಬೇಕಿದೆ. ಮತ್ತೆ ನಮ್ಮ ಬೆಂಗಳೂರು ಸುರಕ್ಷಿತ ನಗರವಾಗಬೇಕೆಂದು ನಾವು ಬಯಸುತ್ತೇವೆ” ಎಂದಿದ್ದಾರೆ.

ವಾರ್ಡ್ ನಂ.170ರ (ಅರಸು ಕಾಲೋನಿ) ಬಿಜೆಪಿ ಅಧ್ಯಕ್ಷ ಷಣ್ಮುಗಂ, ಆತನ ಮೈದುನ ಮಣಿಕಂಠ ಮತ್ತು ಸಹಚರರು ಹಲ್ಲೆ ಮಾಡಿದ್ದಾರೆಂದು ತಿಳಿದುಬಂದಿದೆ. ಕಾರ್ಮಲ್ ಕಾನ್ವೆಂಟ್ ಪೊಲಿಂಗ್ ಬೂತ್ ವ್ಯಾಪ್ತಿಯಲ್ಲಿ ಘಟನೆ ನಡೆದೆ. ಎದ್ದೇಳು ಕರ್ನಾಟಕದ 17 ಮಂದಿ ಸಾಮಾಜಿಕ ಕಾರ್ಯಕರ್ತರು ಸ್ಥಳದಲ್ಲಿ ಹಾಜರಿದ್ದರು.

‘ನಾನುಗೌರಿ.ಕಾಂ’ ಜೊತೆ ಮಾಡಿದ ಸಾಮಾಜಿಕ ಕಾರ್ಯಕರ್ತೆ ಗೌರಿಯವರು ಘಟನೆಯ ಕುರಿತು ವಿವರಿಸಿದರು. “ಎಂದಿನಂತೆ ನಾವು ಪ್ರಚಾರವನ್ನು ಮಾಡಿಕೊಂಡು ಹೋಗುತ್ತಿದ್ದೆವು. ಈ ವಾರ್ಡ್‌ನಲ್ಲಿ ಬಿಜೆಪಿ ಪ್ರಬಲವಾಗಿದೆ. ಕಳೆದ ಚುನಾವಣೆ ಸಂದರ್ಭದಲ್ಲಿ ಹೆಣ್ಣುಮಕ್ಕಳ ಮತದಾನ ಈ ಕ್ಷೇತ್ರದಲ್ಲಿ ಕುಸಿದಿತ್ತು. ಹೀಗಾಗಿ ಜಾಗೃತಿ ಮಾಡುತ್ತಿದ್ದೆವು. ಸಂವಿಧಾನವನ್ನು ಎತ್ತಿಹಿಡಿಯುವವರ ಪರವಾಗಿ, ಕೋಮುವಾದಿಗಳ ವಿರುದ್ಧ ಪ್ರಚಾರ ಮಾಡಲು ಹಕ್ಕು ನಮಗಿದೆ. ಆದರೆ ಇದನ್ನು ಬಿಜೆಪಿಯವರು ಸಹಿಸಲಿಲ್ಲ” ಎಂದು ವಿವರಿಸಿದರು.

ಇದನ್ನೂ ಓದಿರಿ: ಸಿದ್ದರಾಮಯ್ಯ ಹೆಸರಲ್ಲಿ ನಕಲಿಪತ್ರ; ಕ್ರಮ ಜರುಗಿಸಲು ಕಾಂಗ್ರೆಸ್ ಆಗ್ರಹ

“ಬಿಜೆಪಿಯವರು ಬಂದು ನಮಗೆ ತಡೆ ನೀಡಿದರು. ಬೆಲೆ ಏರಿಕೆ ಬಗ್ಗೆ ಮಾತನಾಡಬೇಡಿ, ಜಿಎಸ್‌ಟಿ ಕುರಿತು ಪ್ರಸ್ತಾಪಿಸಬೇಡಿ ಎಂದು ಧಮ್ಕಿ ಹಾಕಿದರು. ಜನರಿಗೆ ಈ ಸಮಸ್ಯೆಗಳು ಬಾಧಿಸುತ್ತಿವೆ ಎಂದು ನಾವು ತಿಳಿಸಿದೆವು. ನಾಗರಿಕರಾಗಿ ಮಾತನಾಡುವ ಹಕ್ಕು ನಮಗಿದೆ ಎಂದೆವು. ನಮ್ಮೆಲ್ಲರ ವಿರುದ್ಧ ಕೆಟ್ಟದ್ದಾಗಿ ಮಾತನಾಡಲು ಶುರು ಮಾಡಿದರು. ನೀವು ಕಾಂಗ್ರೆಸ್ ಏಜೆಂಟಾರಾಗಿದ್ದು, ದುಡ್ಡು ತೆಗೆದುಕೊಂಡು ಬಂದು ಪ್ರಚಾರ ಮಾಡುತ್ತಿದ್ದೀರಿ ಎಂದು ಆರೋಪಿಸಿದರು. ನರೇಂದ್ರ ಮೋದಿಯವರ ಬಗ್ಗೆ ಮಾತನಾಡುವ ಹಕ್ಕು ನಿಮಗಿಲ್ಲ ಎಂದರು. ಸಮಾಧಾನದಲ್ಲಿ ಚರ್ಚೆ ಮಾಡಲು ನಾವು ಕರೆದೆವು” ಎಂದು ತಿಳಿಸಿದರು.

“ಸಮಾಧಾನವಾಗಿಯೇ ನಾವು ಎಲ್ಲವನ್ನು ಹೇಳುತ್ತಿದ್ದೆವು. ನಮ್ಮ ಜೊತೆಯಲ್ಲಿದ್ದ ಗಂಡಸರನ್ನು ಟಾರ್ಗೆಟ್ ಮಾಡಲು ಮುಂದಾದರು. ನಾವು ಬೇರೆ ಜಾಗಕ್ಕೆ ತೆರಳಲು ಸಿದ್ಧವಾದೆವು. ಅಷ್ಟರಲ್ಲಿ ಒಂದಿಷ್ಟು ಜನರಿಗೆ ಸಂದೇಶ ಕಳುಹಿಸಿ ಕರೆಸಿಕೊಂಡಿದ್ದರು. ಮೂವತ್ತರಿಂದ ಐವತ್ತು ಮಂದಿ ಬಂದು, ನಮ್ಮನ್ನು ಸುತ್ತುವರಿದರು. ನಮ್ಮ ಕರಪತ್ರಗಳನ್ನು ಕಿತ್ತುಕೊಂಡರು. ನಾವೇನೂ ಮಾತನಾಡಲಿಲ್ಲ. ನಮಗೆ ಹೊಡೆಯಲು ಬಂದಿದ್ದಾರೆಂದು ತಿಳಿಯಿತು. ಆದರೆ ನಮ್ಮ ಇಬ್ಬರು ಕಾರ್ಯಕರ್ತರ ಮುಖಕ್ಕೆ ಹೊಡೆದೇಬಿಟ್ಟರು. ಜಾಗ ಬಿಟ್ಟು ಹೊರಹೋಗುವಂತೆ ಧಮ್ಕಿ ಹಾಕಿದರು. ನಾವು ಬೆಂಗಳೂರಿನವರೇ ಆಗಿದ್ದೇವೆ. ಹೊರಗಡೆಯಿಂದ ಬಂದಿಲ್ಲ ಎಂದು ತಿಳಿಸಿ ಅಲ್ಲಿಂದ ಹೊರಟುಬಂದೆವು” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...