Homeಕರ್ನಾಟಕ‘ಎದ್ದೇಳು ಕರ್ನಾಟಕ’ ತಂಡದ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ; ಆರೋಪ

‘ಎದ್ದೇಳು ಕರ್ನಾಟಕ’ ತಂಡದ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ; ಆರೋಪ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ಧ ಜಾಗೃತಿ ಮೂಡಿಸುತ್ತಾ, ಈ ಭಾರಿ ಸರ್ಕಾರವನ್ನು ಬದಲಿಸಿ ಎಂದು ಪ್ರಚಾರ ಮಾಡುತ್ತಿದ್ದ ‘ಎದ್ದೇಳು ಕರ್ನಾಟಕ’ ಜಾಗೃತ ತಂಡದ ಮೇಲೆ ಬಿಜೆಪಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆಂಬ ಆರೋಪ ಬಂದಿದೆ.

ಜಯಜನಗರ ಕ್ಷೇತ್ರದಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ಬಿಜೆಪಿ ಕಡೆಯವರು ಬಂದು ಹಲ್ಲೆ ನಡೆಸಿದ್ದಾರೆ, ಈ ಕುರಿತು ಯಾವುದೇ ಕ್ರಮವನ್ನು ಈವರೆಗೆ ಜರುಗಿಸಿಲ್ಲ ಎಂದು ಕ್ಷೇತ್ರದ ಶಾಸಕಿ ಸೌಮ್ಯಾ ರೆಡ್ಡಿ ದೂರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಎದ್ದೇಳು ಕರ್ನಾಟಕದ ಪ್ರಜ್ಞಾವಂತ ನಾಗರಿಕರು ಶಾಂತಿಯುತವಾಗಿ ಪ್ರಚಾರ ನಡೆಸುತ್ತಿದ್ದರು. ಆದರೆ ಜಯನಗರದ ಬಿಜೆಪಿ ಅಭ್ಯರ್ಥಿ (ಸಿ.ಕೆ.ರಾಮಮೂರ್ತಿ) ಮತ್ತು ಸಂಸದ ತೇಜಸ್ವಿಸೂರ್ಯ ಅವರ ನಿರ್ದೇಶನದ ಮೇರೆಗೆ ನಾಗರಿಕರ ಮೇಲೆ ಹಲ್ಲೆ ಮಾಡಲಾಗಿದೆ ಮತ್ತು ಅಶ್ಲೀಲ ಪದಗಳಿಂದ ನಿಂದಿಸಲಾಗಿದೆ” ಎಂದು ವಿಡಿಯೊ ಹಂಚಿಕೊಂಡಿದ್ದಾರೆ.

“ದೂರು ನೀಡಿದರೂ ಬೆಂಗಳೂರು ನಗರ ಪೊಲೀಸರಾಗಲಿ, ಜಯನಗರ ಪೊಲೀಸರಾಗಲೀ ಈ ಪುಂಡರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ. ಸಾಕು, ಸಾಕು. ಬಿಜೆಪಿಯ ಗೂಂಡಾ ಸಂಸ್ಕೃತಿಯನ್ನು ಕೊನೆಗಾಣಿಸಬೇಕಾಗಿದೆ. ಎದ್ದೇಳು ಕರ್ನಾಟಕ, ಎದ್ದೇಳು. ನಾವು ಮಹಿಳೆಯರು- ನಮಗೆ ರಕ್ಷಣೆ ಬೇಕಿದೆ. ಮತ್ತೆ ನಮ್ಮ ಬೆಂಗಳೂರು ಸುರಕ್ಷಿತ ನಗರವಾಗಬೇಕೆಂದು ನಾವು ಬಯಸುತ್ತೇವೆ” ಎಂದಿದ್ದಾರೆ.

ವಾರ್ಡ್ ನಂ.170ರ (ಅರಸು ಕಾಲೋನಿ) ಬಿಜೆಪಿ ಅಧ್ಯಕ್ಷ ಷಣ್ಮುಗಂ, ಆತನ ಮೈದುನ ಮಣಿಕಂಠ ಮತ್ತು ಸಹಚರರು ಹಲ್ಲೆ ಮಾಡಿದ್ದಾರೆಂದು ತಿಳಿದುಬಂದಿದೆ. ಕಾರ್ಮಲ್ ಕಾನ್ವೆಂಟ್ ಪೊಲಿಂಗ್ ಬೂತ್ ವ್ಯಾಪ್ತಿಯಲ್ಲಿ ಘಟನೆ ನಡೆದೆ. ಎದ್ದೇಳು ಕರ್ನಾಟಕದ 17 ಮಂದಿ ಸಾಮಾಜಿಕ ಕಾರ್ಯಕರ್ತರು ಸ್ಥಳದಲ್ಲಿ ಹಾಜರಿದ್ದರು.

‘ನಾನುಗೌರಿ.ಕಾಂ’ ಜೊತೆ ಮಾಡಿದ ಸಾಮಾಜಿಕ ಕಾರ್ಯಕರ್ತೆ ಗೌರಿಯವರು ಘಟನೆಯ ಕುರಿತು ವಿವರಿಸಿದರು. “ಎಂದಿನಂತೆ ನಾವು ಪ್ರಚಾರವನ್ನು ಮಾಡಿಕೊಂಡು ಹೋಗುತ್ತಿದ್ದೆವು. ಈ ವಾರ್ಡ್‌ನಲ್ಲಿ ಬಿಜೆಪಿ ಪ್ರಬಲವಾಗಿದೆ. ಕಳೆದ ಚುನಾವಣೆ ಸಂದರ್ಭದಲ್ಲಿ ಹೆಣ್ಣುಮಕ್ಕಳ ಮತದಾನ ಈ ಕ್ಷೇತ್ರದಲ್ಲಿ ಕುಸಿದಿತ್ತು. ಹೀಗಾಗಿ ಜಾಗೃತಿ ಮಾಡುತ್ತಿದ್ದೆವು. ಸಂವಿಧಾನವನ್ನು ಎತ್ತಿಹಿಡಿಯುವವರ ಪರವಾಗಿ, ಕೋಮುವಾದಿಗಳ ವಿರುದ್ಧ ಪ್ರಚಾರ ಮಾಡಲು ಹಕ್ಕು ನಮಗಿದೆ. ಆದರೆ ಇದನ್ನು ಬಿಜೆಪಿಯವರು ಸಹಿಸಲಿಲ್ಲ” ಎಂದು ವಿವರಿಸಿದರು.

ಇದನ್ನೂ ಓದಿರಿ: ಸಿದ್ದರಾಮಯ್ಯ ಹೆಸರಲ್ಲಿ ನಕಲಿಪತ್ರ; ಕ್ರಮ ಜರುಗಿಸಲು ಕಾಂಗ್ರೆಸ್ ಆಗ್ರಹ

“ಬಿಜೆಪಿಯವರು ಬಂದು ನಮಗೆ ತಡೆ ನೀಡಿದರು. ಬೆಲೆ ಏರಿಕೆ ಬಗ್ಗೆ ಮಾತನಾಡಬೇಡಿ, ಜಿಎಸ್‌ಟಿ ಕುರಿತು ಪ್ರಸ್ತಾಪಿಸಬೇಡಿ ಎಂದು ಧಮ್ಕಿ ಹಾಕಿದರು. ಜನರಿಗೆ ಈ ಸಮಸ್ಯೆಗಳು ಬಾಧಿಸುತ್ತಿವೆ ಎಂದು ನಾವು ತಿಳಿಸಿದೆವು. ನಾಗರಿಕರಾಗಿ ಮಾತನಾಡುವ ಹಕ್ಕು ನಮಗಿದೆ ಎಂದೆವು. ನಮ್ಮೆಲ್ಲರ ವಿರುದ್ಧ ಕೆಟ್ಟದ್ದಾಗಿ ಮಾತನಾಡಲು ಶುರು ಮಾಡಿದರು. ನೀವು ಕಾಂಗ್ರೆಸ್ ಏಜೆಂಟಾರಾಗಿದ್ದು, ದುಡ್ಡು ತೆಗೆದುಕೊಂಡು ಬಂದು ಪ್ರಚಾರ ಮಾಡುತ್ತಿದ್ದೀರಿ ಎಂದು ಆರೋಪಿಸಿದರು. ನರೇಂದ್ರ ಮೋದಿಯವರ ಬಗ್ಗೆ ಮಾತನಾಡುವ ಹಕ್ಕು ನಿಮಗಿಲ್ಲ ಎಂದರು. ಸಮಾಧಾನದಲ್ಲಿ ಚರ್ಚೆ ಮಾಡಲು ನಾವು ಕರೆದೆವು” ಎಂದು ತಿಳಿಸಿದರು.

“ಸಮಾಧಾನವಾಗಿಯೇ ನಾವು ಎಲ್ಲವನ್ನು ಹೇಳುತ್ತಿದ್ದೆವು. ನಮ್ಮ ಜೊತೆಯಲ್ಲಿದ್ದ ಗಂಡಸರನ್ನು ಟಾರ್ಗೆಟ್ ಮಾಡಲು ಮುಂದಾದರು. ನಾವು ಬೇರೆ ಜಾಗಕ್ಕೆ ತೆರಳಲು ಸಿದ್ಧವಾದೆವು. ಅಷ್ಟರಲ್ಲಿ ಒಂದಿಷ್ಟು ಜನರಿಗೆ ಸಂದೇಶ ಕಳುಹಿಸಿ ಕರೆಸಿಕೊಂಡಿದ್ದರು. ಮೂವತ್ತರಿಂದ ಐವತ್ತು ಮಂದಿ ಬಂದು, ನಮ್ಮನ್ನು ಸುತ್ತುವರಿದರು. ನಮ್ಮ ಕರಪತ್ರಗಳನ್ನು ಕಿತ್ತುಕೊಂಡರು. ನಾವೇನೂ ಮಾತನಾಡಲಿಲ್ಲ. ನಮಗೆ ಹೊಡೆಯಲು ಬಂದಿದ್ದಾರೆಂದು ತಿಳಿಯಿತು. ಆದರೆ ನಮ್ಮ ಇಬ್ಬರು ಕಾರ್ಯಕರ್ತರ ಮುಖಕ್ಕೆ ಹೊಡೆದೇಬಿಟ್ಟರು. ಜಾಗ ಬಿಟ್ಟು ಹೊರಹೋಗುವಂತೆ ಧಮ್ಕಿ ಹಾಕಿದರು. ನಾವು ಬೆಂಗಳೂರಿನವರೇ ಆಗಿದ್ದೇವೆ. ಹೊರಗಡೆಯಿಂದ ಬಂದಿಲ್ಲ ಎಂದು ತಿಳಿಸಿ ಅಲ್ಲಿಂದ ಹೊರಟುಬಂದೆವು” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...