Homeಕರ್ನಾಟಕ‘ಎದ್ದೇಳು ಕರ್ನಾಟಕ’ ತಂಡದ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ; ಆರೋಪ

‘ಎದ್ದೇಳು ಕರ್ನಾಟಕ’ ತಂಡದ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ; ಆರೋಪ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ಧ ಜಾಗೃತಿ ಮೂಡಿಸುತ್ತಾ, ಈ ಭಾರಿ ಸರ್ಕಾರವನ್ನು ಬದಲಿಸಿ ಎಂದು ಪ್ರಚಾರ ಮಾಡುತ್ತಿದ್ದ ‘ಎದ್ದೇಳು ಕರ್ನಾಟಕ’ ಜಾಗೃತ ತಂಡದ ಮೇಲೆ ಬಿಜೆಪಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆಂಬ ಆರೋಪ ಬಂದಿದೆ.

ಜಯಜನಗರ ಕ್ಷೇತ್ರದಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ಬಿಜೆಪಿ ಕಡೆಯವರು ಬಂದು ಹಲ್ಲೆ ನಡೆಸಿದ್ದಾರೆ, ಈ ಕುರಿತು ಯಾವುದೇ ಕ್ರಮವನ್ನು ಈವರೆಗೆ ಜರುಗಿಸಿಲ್ಲ ಎಂದು ಕ್ಷೇತ್ರದ ಶಾಸಕಿ ಸೌಮ್ಯಾ ರೆಡ್ಡಿ ದೂರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಎದ್ದೇಳು ಕರ್ನಾಟಕದ ಪ್ರಜ್ಞಾವಂತ ನಾಗರಿಕರು ಶಾಂತಿಯುತವಾಗಿ ಪ್ರಚಾರ ನಡೆಸುತ್ತಿದ್ದರು. ಆದರೆ ಜಯನಗರದ ಬಿಜೆಪಿ ಅಭ್ಯರ್ಥಿ (ಸಿ.ಕೆ.ರಾಮಮೂರ್ತಿ) ಮತ್ತು ಸಂಸದ ತೇಜಸ್ವಿಸೂರ್ಯ ಅವರ ನಿರ್ದೇಶನದ ಮೇರೆಗೆ ನಾಗರಿಕರ ಮೇಲೆ ಹಲ್ಲೆ ಮಾಡಲಾಗಿದೆ ಮತ್ತು ಅಶ್ಲೀಲ ಪದಗಳಿಂದ ನಿಂದಿಸಲಾಗಿದೆ” ಎಂದು ವಿಡಿಯೊ ಹಂಚಿಕೊಂಡಿದ್ದಾರೆ.

“ದೂರು ನೀಡಿದರೂ ಬೆಂಗಳೂರು ನಗರ ಪೊಲೀಸರಾಗಲಿ, ಜಯನಗರ ಪೊಲೀಸರಾಗಲೀ ಈ ಪುಂಡರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ. ಸಾಕು, ಸಾಕು. ಬಿಜೆಪಿಯ ಗೂಂಡಾ ಸಂಸ್ಕೃತಿಯನ್ನು ಕೊನೆಗಾಣಿಸಬೇಕಾಗಿದೆ. ಎದ್ದೇಳು ಕರ್ನಾಟಕ, ಎದ್ದೇಳು. ನಾವು ಮಹಿಳೆಯರು- ನಮಗೆ ರಕ್ಷಣೆ ಬೇಕಿದೆ. ಮತ್ತೆ ನಮ್ಮ ಬೆಂಗಳೂರು ಸುರಕ್ಷಿತ ನಗರವಾಗಬೇಕೆಂದು ನಾವು ಬಯಸುತ್ತೇವೆ” ಎಂದಿದ್ದಾರೆ.

ವಾರ್ಡ್ ನಂ.170ರ (ಅರಸು ಕಾಲೋನಿ) ಬಿಜೆಪಿ ಅಧ್ಯಕ್ಷ ಷಣ್ಮುಗಂ, ಆತನ ಮೈದುನ ಮಣಿಕಂಠ ಮತ್ತು ಸಹಚರರು ಹಲ್ಲೆ ಮಾಡಿದ್ದಾರೆಂದು ತಿಳಿದುಬಂದಿದೆ. ಕಾರ್ಮಲ್ ಕಾನ್ವೆಂಟ್ ಪೊಲಿಂಗ್ ಬೂತ್ ವ್ಯಾಪ್ತಿಯಲ್ಲಿ ಘಟನೆ ನಡೆದೆ. ಎದ್ದೇಳು ಕರ್ನಾಟಕದ 17 ಮಂದಿ ಸಾಮಾಜಿಕ ಕಾರ್ಯಕರ್ತರು ಸ್ಥಳದಲ್ಲಿ ಹಾಜರಿದ್ದರು.

‘ನಾನುಗೌರಿ.ಕಾಂ’ ಜೊತೆ ಮಾಡಿದ ಸಾಮಾಜಿಕ ಕಾರ್ಯಕರ್ತೆ ಗೌರಿಯವರು ಘಟನೆಯ ಕುರಿತು ವಿವರಿಸಿದರು. “ಎಂದಿನಂತೆ ನಾವು ಪ್ರಚಾರವನ್ನು ಮಾಡಿಕೊಂಡು ಹೋಗುತ್ತಿದ್ದೆವು. ಈ ವಾರ್ಡ್‌ನಲ್ಲಿ ಬಿಜೆಪಿ ಪ್ರಬಲವಾಗಿದೆ. ಕಳೆದ ಚುನಾವಣೆ ಸಂದರ್ಭದಲ್ಲಿ ಹೆಣ್ಣುಮಕ್ಕಳ ಮತದಾನ ಈ ಕ್ಷೇತ್ರದಲ್ಲಿ ಕುಸಿದಿತ್ತು. ಹೀಗಾಗಿ ಜಾಗೃತಿ ಮಾಡುತ್ತಿದ್ದೆವು. ಸಂವಿಧಾನವನ್ನು ಎತ್ತಿಹಿಡಿಯುವವರ ಪರವಾಗಿ, ಕೋಮುವಾದಿಗಳ ವಿರುದ್ಧ ಪ್ರಚಾರ ಮಾಡಲು ಹಕ್ಕು ನಮಗಿದೆ. ಆದರೆ ಇದನ್ನು ಬಿಜೆಪಿಯವರು ಸಹಿಸಲಿಲ್ಲ” ಎಂದು ವಿವರಿಸಿದರು.

ಇದನ್ನೂ ಓದಿರಿ: ಸಿದ್ದರಾಮಯ್ಯ ಹೆಸರಲ್ಲಿ ನಕಲಿಪತ್ರ; ಕ್ರಮ ಜರುಗಿಸಲು ಕಾಂಗ್ರೆಸ್ ಆಗ್ರಹ

“ಬಿಜೆಪಿಯವರು ಬಂದು ನಮಗೆ ತಡೆ ನೀಡಿದರು. ಬೆಲೆ ಏರಿಕೆ ಬಗ್ಗೆ ಮಾತನಾಡಬೇಡಿ, ಜಿಎಸ್‌ಟಿ ಕುರಿತು ಪ್ರಸ್ತಾಪಿಸಬೇಡಿ ಎಂದು ಧಮ್ಕಿ ಹಾಕಿದರು. ಜನರಿಗೆ ಈ ಸಮಸ್ಯೆಗಳು ಬಾಧಿಸುತ್ತಿವೆ ಎಂದು ನಾವು ತಿಳಿಸಿದೆವು. ನಾಗರಿಕರಾಗಿ ಮಾತನಾಡುವ ಹಕ್ಕು ನಮಗಿದೆ ಎಂದೆವು. ನಮ್ಮೆಲ್ಲರ ವಿರುದ್ಧ ಕೆಟ್ಟದ್ದಾಗಿ ಮಾತನಾಡಲು ಶುರು ಮಾಡಿದರು. ನೀವು ಕಾಂಗ್ರೆಸ್ ಏಜೆಂಟಾರಾಗಿದ್ದು, ದುಡ್ಡು ತೆಗೆದುಕೊಂಡು ಬಂದು ಪ್ರಚಾರ ಮಾಡುತ್ತಿದ್ದೀರಿ ಎಂದು ಆರೋಪಿಸಿದರು. ನರೇಂದ್ರ ಮೋದಿಯವರ ಬಗ್ಗೆ ಮಾತನಾಡುವ ಹಕ್ಕು ನಿಮಗಿಲ್ಲ ಎಂದರು. ಸಮಾಧಾನದಲ್ಲಿ ಚರ್ಚೆ ಮಾಡಲು ನಾವು ಕರೆದೆವು” ಎಂದು ತಿಳಿಸಿದರು.

“ಸಮಾಧಾನವಾಗಿಯೇ ನಾವು ಎಲ್ಲವನ್ನು ಹೇಳುತ್ತಿದ್ದೆವು. ನಮ್ಮ ಜೊತೆಯಲ್ಲಿದ್ದ ಗಂಡಸರನ್ನು ಟಾರ್ಗೆಟ್ ಮಾಡಲು ಮುಂದಾದರು. ನಾವು ಬೇರೆ ಜಾಗಕ್ಕೆ ತೆರಳಲು ಸಿದ್ಧವಾದೆವು. ಅಷ್ಟರಲ್ಲಿ ಒಂದಿಷ್ಟು ಜನರಿಗೆ ಸಂದೇಶ ಕಳುಹಿಸಿ ಕರೆಸಿಕೊಂಡಿದ್ದರು. ಮೂವತ್ತರಿಂದ ಐವತ್ತು ಮಂದಿ ಬಂದು, ನಮ್ಮನ್ನು ಸುತ್ತುವರಿದರು. ನಮ್ಮ ಕರಪತ್ರಗಳನ್ನು ಕಿತ್ತುಕೊಂಡರು. ನಾವೇನೂ ಮಾತನಾಡಲಿಲ್ಲ. ನಮಗೆ ಹೊಡೆಯಲು ಬಂದಿದ್ದಾರೆಂದು ತಿಳಿಯಿತು. ಆದರೆ ನಮ್ಮ ಇಬ್ಬರು ಕಾರ್ಯಕರ್ತರ ಮುಖಕ್ಕೆ ಹೊಡೆದೇಬಿಟ್ಟರು. ಜಾಗ ಬಿಟ್ಟು ಹೊರಹೋಗುವಂತೆ ಧಮ್ಕಿ ಹಾಕಿದರು. ನಾವು ಬೆಂಗಳೂರಿನವರೇ ಆಗಿದ್ದೇವೆ. ಹೊರಗಡೆಯಿಂದ ಬಂದಿಲ್ಲ ಎಂದು ತಿಳಿಸಿ ಅಲ್ಲಿಂದ ಹೊರಟುಬಂದೆವು” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...