Homeಮುಖಪುಟವಾಟ್ಸಾಪ್‌ನಲ್ಲಿ ಬರಲಿದೆ ಎಡಿಟ್ ಮಾಡುವ ಅವಕಾಶ

ವಾಟ್ಸಾಪ್‌ನಲ್ಲಿ ಬರಲಿದೆ ಎಡಿಟ್ ಮಾಡುವ ಅವಕಾಶ

- Advertisement -
- Advertisement -

ಜನಪ್ರಿಯ ಮೆಸೇಂಜಿಂಗ್ ತಾಣವಾದ ವಾಟ್ಸಾಪ್ ತನ್ನ ಬಳಕೆದಾರರಿಗೆ ಹಲವು ವೈಶಿಷ್ಯಗಳನ್ನು ಪರಿಚಯಿಸುತ್ತಿದೆ. ವಿಶ್ವದಾದ್ಯಂತ 200 ಕೋಟಿಗೂ ಅಧಿಕ ಬಳಕೆದಾರರನ್ನು ಹೊಂದಿರುವ ಅದು ಸದ್ಯಕ್ಕೆ ಗುಂಪಿನ ಸದಸ್ಯರ ಮಿತಿಯನ್ನು 512 ರಿಂದ 1024 ಏರಿಸಿದ್ದು, ಮುಂದೆ ಎಡಿಟ್ ಅವಕಾಶ ನೀಡಲು ಮುಂದಾಗಿದೆ.

ಇದುವರೆಗೂ ವಾಟ್ಸಾಪ್ ಗುಂಪುಗಳಲ್ಲಿ 512 ಸದಸ್ಯರಿಗೆ ಮಾತ್ರ ಅವಕಾಶವಿತ್ತು. ಆದರೆ ಮತ್ತೊಂದು ಮೆಸೆಂಜಿಂಗ್ ತಾಣವಾದ ಟೆಲಿಗ್ರಾಂ 2 ಲಕ್ಷದವರೆಗೆ ಸದಸ್ಯರನ್ನು ಹೊಂದುವ ಅವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ವಾಟ್ಸಾಪ್ ಗುಂಪಿನ ಮಿತಿಯನ್ನು ಹೆಚ್ಚಿಸುವ ಬೇಡಿಕೆಯಿತ್ತು. ಅದನ್ನು ಪರಿಗಣಿಸಿರುವ ವಾಟ್ಸಾಪ್ ಸದ್ಯಕ್ಕೆ ಗುಂಪಿನ ಸದಸ್ಯರ ಮಿತಿಯನ್ನು 1024ಕ್ಕೆ ಏರಿಸಿದೆ.

ಮುಂದೆ ಬರಲಿದೆ ಎಡಿಟ್ ಆಯ್ಕೆ

ಫೇಸ್‌ಬುಕ್‌ನಲ್ಲಿ ನೀವು ಪೋಸ್ಟ್ ಮಾಡಿದ ಸಂದೇಶವನ್ನು ಮತ್ತೆ ಎಡಿಟ್ ಮಾಡುವ ಅವಕಾಶವಿದೆ. ಸದ್ಯ ವಾಟ್ಸಾಪಿನಲ್ಲಿ ಒಮ್ಮೆ ಸಂದೇಶ ಕಳುಹಿಸಿದರೆ ಅದನ್ನು ಮತ್ತೆ ತಿದ್ದುವ ಅವಕಾಶವಿಲ್ಲ. ಅದನ್ನು ಡಿಲೀಟ್ ಮಾಡಿ ಮತ್ತೆ ಬರೆಯಬೇಕಾದ ಅನಿವಾರ್ಯತೆಯಿದೆ. ಆ ಕಷ್ಟವನ್ನು ಅರ್ಥ ಮಾಡಿಕೊಂಡಿರುವ ವಾಟ್ಸಾಪ್ ಕಂಪನಿಯು ಎಡಿಟ್ ಮಾಡುವ ಅವಕಾಶ ನೀಡುವುದಾಗಿ ಘೋಷಿಸಿದ್ದು ಅದರ ಮೇಲೆ ಕೆಲಸ ಮಾಡುತ್ತಿದೆ. ಆ ಸೇವೆ ಜಾರಿಯಾದಲ್ಲಿ ಕಳುಹಿಸಿದ ಸಂದೇಶದಲ್ಲಿ ಏನಾದರೂ ಬದಲಾವಣೆ ಇದ್ದರೆ 15 ನಿಮಿಷದೊಳಗೆ ಎಡಿಟ್ ಮಾಡಬಹುದಾಗಿದೆ. ಇದೇ ರೀತಿಯ ಎಡಿಟ್ ಆಯ್ಕೆ ಟ್ವಿಟರ್‌ನಲ್ಲಿ ಸಹ ತರಲು ಕೆಲಸ ನಡೆಯುತ್ತಿದೆ ಎನ್ನಲಾಗಿದೆ.

ನೀವು ಯಾವುದೇ ಕಾಗುಣಿತ ಅಥವಾ ವ್ಯಾಕರಣದ ತಪ್ಪುಗಳನ್ನು ಸರಿಪಡಿಸಲು ಅಥವಾ ಕೆಲವು ಮಾಹಿತಿಯನ್ನು ಸೇರಿಸಲು ಅಥವಾ ತೆಗೆದುಹಾಕಲು ಬಯಸಿದರೆ ಎಡಿಟ್ ಮಾಡಬಹುದಾಗಿದೆ. ಈ ಹೊಸ ಫಿಚರ್ ಅನ್ನು ಟೆಸ್ಟಿಂಗ್ ಪ್ರೋಗ್ರಾಂನಲ್ಲಿ ನೋಂದಾಯಿಸಿದವರಿಗೆ ನೀಡಲಾಗಿದೆ ಎಂದು ವರದಿಯಾಗಿದೆ.

Undo ಆಯ್ಕೆ ಇರುವುದನ್ನು ಗಮನಿಸಿದ್ದೀರಾ?

ವಾಟ್ಸಾಪ್‌ನಲ್ಲಿ ಯಾವುದೇ ಕಾರಣಕ್ಕಾಗಿ ಸಂದೇಶವನ್ನು ನೀವು ಡಿಲೀಟ್ ಮಾಡಿದ್ದಲ್ಲಿ Undo ಆಯ್ಕೆ ಮೂಲಕ ಅದನ್ನು ವಾಪಸ್ ಪಡೆಯುವ ಸೌಲಭ್ಯವಿದೆ. ನೀವು ಸಂದೇಶ ಕಳಿಸಲು ಟೈಪ್ ಮಾಡುತ್ತಿರುವಾಗ ಬೈ ಮಿಸ್ಟೇಕ್  ಅಳಿಸಿಬಿಟ್ಟರೆ Undo ಆಯ್ಕೆ ಮೂಲಕ ವಾಪಸ್ ಪಡೆಯಬಹುದು. ಆದರೆ ಇದಕ್ಕೆ ನಿರ್ಧಿಷ್ಟ ಕಾಲಮಿತಿ ಇರುತ್ತದೆ ಎಂದು ವಾಟ್ಸಾಪ್ ಹೇಳಿದೆ. ನೀವು ಅಳಿಸಿದ ಸಂದೇಶವನ್ನು ನಿಗಧಿತ ಸಮಯದೊಳಗೆ ಮಾತ್ರ ಪಡೆಯಬಹುದು. ಇಲ್ಲದಿದ್ದರೆ ಅದು ಕಣ್ಮರೆಯಾಗಲಿದೆ.

ಇವಿಷ್ಟು ಸದ್ಯಕ್ಕೆ ವಾಟ್ಸಾಪ್ ನೀಡಿರುವ ಕೊಡುಗೆಗಳಾಗಿದ್ದು, ಅದಕ್ಕೆ ಯಾವುದೇ ದರ ನಿಗಧಿ ಮಾಡಿಲ್ಲ. ಮೆಟಾ ಮಾಲಿಕತ್ವದ ವಾಟ್ಸಾಪ್ ತನ್ನ ಸೇವೆಗಳಿಗೆ ಮುಂದೆ ದರ ನಿಗಧಿ ಮಾಡಲಿದೆ ಎಂಬ ಚರ್ಚೆಗಳು ಸಹ ನಡೆಯುತ್ತಿವೆ.

ಇದನ್ನೂ ಓದಿ: ವಾಟ್ಸಾಪ್ ಪೋಲ್ ರಚಿಸಬಹುದು: ಹೇಗೆಂದು ಇಲ್ಲಿ ತಿಳಿಯಿರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...