Homeಮುಖಪುಟವಾಟ್ಸಾಪ್‌ನಲ್ಲಿ ಬರಲಿದೆ ಎಡಿಟ್ ಮಾಡುವ ಅವಕಾಶ

ವಾಟ್ಸಾಪ್‌ನಲ್ಲಿ ಬರಲಿದೆ ಎಡಿಟ್ ಮಾಡುವ ಅವಕಾಶ

- Advertisement -
- Advertisement -

ಜನಪ್ರಿಯ ಮೆಸೇಂಜಿಂಗ್ ತಾಣವಾದ ವಾಟ್ಸಾಪ್ ತನ್ನ ಬಳಕೆದಾರರಿಗೆ ಹಲವು ವೈಶಿಷ್ಯಗಳನ್ನು ಪರಿಚಯಿಸುತ್ತಿದೆ. ವಿಶ್ವದಾದ್ಯಂತ 200 ಕೋಟಿಗೂ ಅಧಿಕ ಬಳಕೆದಾರರನ್ನು ಹೊಂದಿರುವ ಅದು ಸದ್ಯಕ್ಕೆ ಗುಂಪಿನ ಸದಸ್ಯರ ಮಿತಿಯನ್ನು 512 ರಿಂದ 1024 ಏರಿಸಿದ್ದು, ಮುಂದೆ ಎಡಿಟ್ ಅವಕಾಶ ನೀಡಲು ಮುಂದಾಗಿದೆ.

ಇದುವರೆಗೂ ವಾಟ್ಸಾಪ್ ಗುಂಪುಗಳಲ್ಲಿ 512 ಸದಸ್ಯರಿಗೆ ಮಾತ್ರ ಅವಕಾಶವಿತ್ತು. ಆದರೆ ಮತ್ತೊಂದು ಮೆಸೆಂಜಿಂಗ್ ತಾಣವಾದ ಟೆಲಿಗ್ರಾಂ 2 ಲಕ್ಷದವರೆಗೆ ಸದಸ್ಯರನ್ನು ಹೊಂದುವ ಅವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ವಾಟ್ಸಾಪ್ ಗುಂಪಿನ ಮಿತಿಯನ್ನು ಹೆಚ್ಚಿಸುವ ಬೇಡಿಕೆಯಿತ್ತು. ಅದನ್ನು ಪರಿಗಣಿಸಿರುವ ವಾಟ್ಸಾಪ್ ಸದ್ಯಕ್ಕೆ ಗುಂಪಿನ ಸದಸ್ಯರ ಮಿತಿಯನ್ನು 1024ಕ್ಕೆ ಏರಿಸಿದೆ.

ಮುಂದೆ ಬರಲಿದೆ ಎಡಿಟ್ ಆಯ್ಕೆ

ಫೇಸ್‌ಬುಕ್‌ನಲ್ಲಿ ನೀವು ಪೋಸ್ಟ್ ಮಾಡಿದ ಸಂದೇಶವನ್ನು ಮತ್ತೆ ಎಡಿಟ್ ಮಾಡುವ ಅವಕಾಶವಿದೆ. ಸದ್ಯ ವಾಟ್ಸಾಪಿನಲ್ಲಿ ಒಮ್ಮೆ ಸಂದೇಶ ಕಳುಹಿಸಿದರೆ ಅದನ್ನು ಮತ್ತೆ ತಿದ್ದುವ ಅವಕಾಶವಿಲ್ಲ. ಅದನ್ನು ಡಿಲೀಟ್ ಮಾಡಿ ಮತ್ತೆ ಬರೆಯಬೇಕಾದ ಅನಿವಾರ್ಯತೆಯಿದೆ. ಆ ಕಷ್ಟವನ್ನು ಅರ್ಥ ಮಾಡಿಕೊಂಡಿರುವ ವಾಟ್ಸಾಪ್ ಕಂಪನಿಯು ಎಡಿಟ್ ಮಾಡುವ ಅವಕಾಶ ನೀಡುವುದಾಗಿ ಘೋಷಿಸಿದ್ದು ಅದರ ಮೇಲೆ ಕೆಲಸ ಮಾಡುತ್ತಿದೆ. ಆ ಸೇವೆ ಜಾರಿಯಾದಲ್ಲಿ ಕಳುಹಿಸಿದ ಸಂದೇಶದಲ್ಲಿ ಏನಾದರೂ ಬದಲಾವಣೆ ಇದ್ದರೆ 15 ನಿಮಿಷದೊಳಗೆ ಎಡಿಟ್ ಮಾಡಬಹುದಾಗಿದೆ. ಇದೇ ರೀತಿಯ ಎಡಿಟ್ ಆಯ್ಕೆ ಟ್ವಿಟರ್‌ನಲ್ಲಿ ಸಹ ತರಲು ಕೆಲಸ ನಡೆಯುತ್ತಿದೆ ಎನ್ನಲಾಗಿದೆ.

ನೀವು ಯಾವುದೇ ಕಾಗುಣಿತ ಅಥವಾ ವ್ಯಾಕರಣದ ತಪ್ಪುಗಳನ್ನು ಸರಿಪಡಿಸಲು ಅಥವಾ ಕೆಲವು ಮಾಹಿತಿಯನ್ನು ಸೇರಿಸಲು ಅಥವಾ ತೆಗೆದುಹಾಕಲು ಬಯಸಿದರೆ ಎಡಿಟ್ ಮಾಡಬಹುದಾಗಿದೆ. ಈ ಹೊಸ ಫಿಚರ್ ಅನ್ನು ಟೆಸ್ಟಿಂಗ್ ಪ್ರೋಗ್ರಾಂನಲ್ಲಿ ನೋಂದಾಯಿಸಿದವರಿಗೆ ನೀಡಲಾಗಿದೆ ಎಂದು ವರದಿಯಾಗಿದೆ.

Undo ಆಯ್ಕೆ ಇರುವುದನ್ನು ಗಮನಿಸಿದ್ದೀರಾ?

ವಾಟ್ಸಾಪ್‌ನಲ್ಲಿ ಯಾವುದೇ ಕಾರಣಕ್ಕಾಗಿ ಸಂದೇಶವನ್ನು ನೀವು ಡಿಲೀಟ್ ಮಾಡಿದ್ದಲ್ಲಿ Undo ಆಯ್ಕೆ ಮೂಲಕ ಅದನ್ನು ವಾಪಸ್ ಪಡೆಯುವ ಸೌಲಭ್ಯವಿದೆ. ನೀವು ಸಂದೇಶ ಕಳಿಸಲು ಟೈಪ್ ಮಾಡುತ್ತಿರುವಾಗ ಬೈ ಮಿಸ್ಟೇಕ್  ಅಳಿಸಿಬಿಟ್ಟರೆ Undo ಆಯ್ಕೆ ಮೂಲಕ ವಾಪಸ್ ಪಡೆಯಬಹುದು. ಆದರೆ ಇದಕ್ಕೆ ನಿರ್ಧಿಷ್ಟ ಕಾಲಮಿತಿ ಇರುತ್ತದೆ ಎಂದು ವಾಟ್ಸಾಪ್ ಹೇಳಿದೆ. ನೀವು ಅಳಿಸಿದ ಸಂದೇಶವನ್ನು ನಿಗಧಿತ ಸಮಯದೊಳಗೆ ಮಾತ್ರ ಪಡೆಯಬಹುದು. ಇಲ್ಲದಿದ್ದರೆ ಅದು ಕಣ್ಮರೆಯಾಗಲಿದೆ.

ಇವಿಷ್ಟು ಸದ್ಯಕ್ಕೆ ವಾಟ್ಸಾಪ್ ನೀಡಿರುವ ಕೊಡುಗೆಗಳಾಗಿದ್ದು, ಅದಕ್ಕೆ ಯಾವುದೇ ದರ ನಿಗಧಿ ಮಾಡಿಲ್ಲ. ಮೆಟಾ ಮಾಲಿಕತ್ವದ ವಾಟ್ಸಾಪ್ ತನ್ನ ಸೇವೆಗಳಿಗೆ ಮುಂದೆ ದರ ನಿಗಧಿ ಮಾಡಲಿದೆ ಎಂಬ ಚರ್ಚೆಗಳು ಸಹ ನಡೆಯುತ್ತಿವೆ.

ಇದನ್ನೂ ಓದಿ: ವಾಟ್ಸಾಪ್ ಪೋಲ್ ರಚಿಸಬಹುದು: ಹೇಗೆಂದು ಇಲ್ಲಿ ತಿಳಿಯಿರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...